Homeಮುಖಪುಟಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

- Advertisement -
- Advertisement -

ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಗುಂಪೊಂದು ತಾವು ಪ್ರದಶಿಸಿದ ಸ್ಕಿಟ್‌ನಲ್ಲಿ ”ಬಿಆರ್ ಅಂಬೇಡ್ಕರ್ ಅಲ್ಲ ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ದಲಿತರ ಬಗ್ಗೆಯೂ ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಸ್ಕಿಟ್‌ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

Jhatkaa.org ನಲ್ಲಿ ಪ್ರಕಟವಾದ ಅರ್ಜಿಯಲ್ಲಿ, ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ (CMS) ಕಾಲೇಜು ತಂಡ ಈ ಇವೆಂಟ್‌ನಲ್ಲಿ ಜಾತಿವಾದವನ್ನು ಎತ್ತಿ ತೋರಿಸುವ ಮತ್ತು ಕೆಲವು ಸಂವೇದನಾಶೀಲವಲ್ಲದ ಭಾಷೆಗಳನ್ನು ಬಳಸಿ ಸ್ಕಿಟ್ ಮಾಡಿದ್ದಾರೆ ಎಂದು ಹೇಳುತ್ತದೆ. ಈ ಅರ್ಜಿದಾರರು ಅನಾಮಧೇಯರಾಗಿ ಉಳಿಯಲು ಬಯಸಿದ್ದು, ಹಾಸ್ಯದ ಹೆಸರಿನಲ್ಲಿ ಜಾತಿ ತಾರತಮ್ಯವನ್ನು ಸಾಮಾನ್ಯ ಎನ್ನುವಂತೆ ಸ್ಕಿಟ್‌ನಲ್ಲಿ ಬಳಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ ಥಿಯೇಟರ್ ಗ್ರೂಪ್, ‘ದಿ ಡೆಲ್ರಾಯ್ಸ್ ಬಾಯ್ಸ್’, ‘ಮ್ಯಾಡ್-ಆಡ್ಸ್’ ನ ಭಾಗವಾಗಿ, ಫೆಸ್ಟ್‌ನಲ್ಲಿ ಹಾಸ್ಯ ಜೊತೆಗೆ ದಲಿತರನ್ನು ಗೇಲಿ ಮಾಡುತ್ತ ಈ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ”ಅವರು ಪ್ರದರ್ಶಿಸಿದ ಸ್ಕಿಟ್ ಕೆಳ ಜಾತಿಯ ಹಿನ್ನೆಲೆಯ ವ್ಯಕ್ತಿಯೊಬ್ಬ ಮೇಲ್ಜಾತಿ ಮಹಿಳೆಯೊಂದಿಗೆ ಡೇಟಿಂಗ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಪ್ರದರ್ಶಿಸಿತು. ಈ ವೇಳೆ ಆತ ತಾನು ದಲಿತ ಎಂದು ಹೇಳಿಕೊಂಡಾಗ ‘ಡೋಂಟ್ ಟಚ್ ಮಿ, ಟಚ್ ಮಿ’ ಅಂತ ಸಾಂಗ್ ಕೂಡ ಪ್ಲೇ ಮಾಡಲಾಗಿದೆ. ತಯಾರಕರು ಬಿಆರ್ ಅಂಬೇಡ್ಕರ್ ಅವರನ್ನು ‘ಬೀಯರ್ ಅಂಬೇಡ್ಕರ್’ ಆಗಿ ಪರಿವರ್ತಿಸಿದ್ದಾರೆ ಮತ್ತು ಹಾಸ್ಯವನ್ನು ಪ್ರಚೋದಿಸಲು ‘ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು’ ಎಂಬ ಹಲವಾರು ಇತರ ‍ವಿವಾದಾತ್ಮಕ ನುಡಿಗಟ್ಟುಗಳನ್ನು ಬಳಸಿದ್ದಾರೆ” ಎಂದು ಅರ್ಜಿದಾರರು ತಿಳಿಸಿದ್ದಾರೆ.

ಈ ವೇದಿಕೆ ಮೇಲೆ ಇಂತಹ ಸ್ಕ್ರಿಪ್ಟ್ ಹೊಂದಿರುವ ಸ್ಕಿಟ್‌ನ್ನು ಹೇಗೆ ಪ್ರದರ್ಶನ ಮಾಡಿದರು ಎನ್ನುವುದು ಪ್ರಶ್ನೆಯಾಗಿದೆ. ಏಕೆಂದರೆ ವೇದಿಕೆಯ ಮೇಲೆ ಜಾರಿಗೊಳಿಸುವ ಮೊದಲು ಅನುಮೋದನೆ ಪಡೆಯಬೇಕಾಗುತ್ತದೆ, ಅದಕ್ಕೆ ಕೆಲವು ಸುತ್ತುಗಳು ಇರುತ್ತವೆ. ಅವೆಲ್ಲವನ್ನೂ ದಾಟಿಕೊಂಡು ಬಂದು ಈ ಸ್ಕಿಟ್ ಪ್ರದರ್ಶನಗೊಳ್ಳುತ್ತದೆ ಎಂದರೆ ಇದು ಸ್ವೀಕಾರಾರ್ಹವಲ್ಲ. ಬೆಂಗಳೂರಿನಲ್ಲಿ 25 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 5 ರಂದು ಕಾಲೇಜು ಫೆಸ್ಟ್‌ ನಡೆಸಿತ್ತಿ. ಈ ವೇಳೆ ಇಂತಹ ಸ್ಕಿಟ್ ಪ್ರದರ್ಶನಗೊಂಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಫೆಬ್ರವರಿ 9, ಗುರುವಾರದಂದು ಮಹಾರಾಷ್ಟ್ರದ ಪೊಲೀಸ್ ಅಧೀಕ್ಷಕರಿಗೆ ವಂಚಿತ್ ಬಹುಜನ ಯುವ ಆಗಡಿಯ ರಾಜ್ಯ ಸದಸ್ಯ ಅಕ್ಷಯ್ ಬನ್ಸೋಡೆ ಅವರು ಸೆಕ್ಷನ್ ಎಕ್ಸ್ (3) SC/ST ಕಾಯ್ದೆಯಡಿಯಲ್ಲಿ ದೂರು ಸಲ್ಲಿಸಿದ್ದಾರೆ. ಹಾಗೆಯೇ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 153A, 295, 499, 500, 503, 504, 506 ಮತ್ತು 34ರಲ್ಲಿ ದೂರು ದಾಖಲಾಗಿದೆ. ದೂರನ್ನು ಎಫ್‌ಐಆರ್ ಎಂದು ಪರಿಗಣಿಸಿ ಪ್ರದರ್ಶಕರು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಜಮೀನಿಗೆ ಹಸು ನುಗ್ಗಿತೆಂದು ದಲಿತ ಮಹಿಳೆಯ ಮೇಲೆ ಸವರ್ಣೀಯ ವ್ಯಕ್ತಿಯಿಂದ ಹಲ್ಲೆ

ಅರ್ಜಿದಾರರಲ್ಲಿ ಒಬ್ಬರು, ”ಅವರು ಈಗ ಮೂರು ವಿಭಿನ್ನ ಸ್ಥಳಗಳಲ್ಲಿ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ನಾವು ಇಲ್ಲಿ ಬೆಂಗಳೂರಿನಲ್ಲಿ ಸ್ಕಿಟ್ ವೀಕ್ಷಿಸಿದಾಗ, ಅದರ ವಿರುದ್ದ ತಕ್ಷಣ ಧ್ವನಿ ಎತ್ತಿದ್ದೇವೆ ಎಂದಿದ್ದಾರೆ. ಆದರೆ ಸ್ಕಿಟ್ ಉತ್ತಮ ಹಾಸ್ಯದಲ್ಲಿದೆ ಎಂದು ಸಂಘಟಕರು ಭಾವಿಸಿದ್ದಾರೆ ಎಂದು Jhatkaa.org ನಲ್ಲಿ ಹಿರಿಯ ಎಂಗೇಜ್‌ಮೆಂಟ್ಸ್ ಅಸೋಸಿಯೇಟ್ ದೃಷ್ಟದ್ಯುಮ್ನ್ ಹೇಳಿದ್ದಾರೆ. ”ಸ್ಕಿಟ್‌ನ ಕೊನೆಯಲ್ಲಿ 20-30 ಸೆಕೆಂಡುಗಳಲ್ಲಿ ಕೀಳಾಗಿ ನೋಡುವ ಸಂಭಾಷಣೆಗಳು ಹಾಗೂ ಕೆರಳಿಸುವ ಉದ್ದೇಶದಿಂದ ಮೇಲ್ವರ್ಗದ ತಮಾಷೆಯ ಮಾತುಗಳನ್ನು ಮಾತನಾಡಿದ್ದಾರೆ. ಸ್ಕಿಟ್‌ನ ಬಹುಪಾಲು ಜಾತಿಯನ್ನು ಅವಹೇಳನ ಮಾಡುವಂತಹ ದೃಶ್ಯಗಳೇ ತುಂಬಿದೆ” ಎಂದು ಹೇಳಿಲಾಗಿದೆ.

ಈ ಸ್ಕಿಟ್‌ ಪ್ರದರ್ಶನ ಮಾಡಿದ ‘ದಿ ಡೆಲ್ರಾಯ್ಸ್ ಬಾಯ್ಸ್’ ಅವರು ಕ್ಷಮೆಯಾಚಿಸುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ”ಒಂದು ತಂಡವಾಗಿ ನಾವು ಕೆಟ್ಟದಾಗಿ ಮಾತನಾಡಿರುವುದಕ್ಕೆ ಪ್ರತಿಯೊಬ್ಬರಲ್ಲೂ ಕ್ಷಮೆ ಕೇಳಲು ಬಯಸುತ್ತೇವೆ, ನಮ್ಮ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಸಾಮಾಜಿಕ ಸಂದೇಶವನ್ನು ತರುವುದು ನಮ್ಮ ಉದ್ದೇಶವಾಗಿತ್ತು ಆದರೆ ನಮ್ಮಿಂದ ತಪ್ಪಾಗಿದೆ ಎಂದು ಅವರು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಸಾರ್ವಜನಿಕ ಕ್ಷಮೆಯಾಚನೆಯನ್ನು ಸಹ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...