Homeಮುಖಪುಟಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

- Advertisement -
- Advertisement -

ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಗುಂಪೊಂದು ತಾವು ಪ್ರದಶಿಸಿದ ಸ್ಕಿಟ್‌ನಲ್ಲಿ ”ಬಿಆರ್ ಅಂಬೇಡ್ಕರ್ ಅಲ್ಲ ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ದಲಿತರ ಬಗ್ಗೆಯೂ ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಸ್ಕಿಟ್‌ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

Jhatkaa.org ನಲ್ಲಿ ಪ್ರಕಟವಾದ ಅರ್ಜಿಯಲ್ಲಿ, ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ (CMS) ಕಾಲೇಜು ತಂಡ ಈ ಇವೆಂಟ್‌ನಲ್ಲಿ ಜಾತಿವಾದವನ್ನು ಎತ್ತಿ ತೋರಿಸುವ ಮತ್ತು ಕೆಲವು ಸಂವೇದನಾಶೀಲವಲ್ಲದ ಭಾಷೆಗಳನ್ನು ಬಳಸಿ ಸ್ಕಿಟ್ ಮಾಡಿದ್ದಾರೆ ಎಂದು ಹೇಳುತ್ತದೆ. ಈ ಅರ್ಜಿದಾರರು ಅನಾಮಧೇಯರಾಗಿ ಉಳಿಯಲು ಬಯಸಿದ್ದು, ಹಾಸ್ಯದ ಹೆಸರಿನಲ್ಲಿ ಜಾತಿ ತಾರತಮ್ಯವನ್ನು ಸಾಮಾನ್ಯ ಎನ್ನುವಂತೆ ಸ್ಕಿಟ್‌ನಲ್ಲಿ ಬಳಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ ಥಿಯೇಟರ್ ಗ್ರೂಪ್, ‘ದಿ ಡೆಲ್ರಾಯ್ಸ್ ಬಾಯ್ಸ್’, ‘ಮ್ಯಾಡ್-ಆಡ್ಸ್’ ನ ಭಾಗವಾಗಿ, ಫೆಸ್ಟ್‌ನಲ್ಲಿ ಹಾಸ್ಯ ಜೊತೆಗೆ ದಲಿತರನ್ನು ಗೇಲಿ ಮಾಡುತ್ತ ಈ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ”ಅವರು ಪ್ರದರ್ಶಿಸಿದ ಸ್ಕಿಟ್ ಕೆಳ ಜಾತಿಯ ಹಿನ್ನೆಲೆಯ ವ್ಯಕ್ತಿಯೊಬ್ಬ ಮೇಲ್ಜಾತಿ ಮಹಿಳೆಯೊಂದಿಗೆ ಡೇಟಿಂಗ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಪ್ರದರ್ಶಿಸಿತು. ಈ ವೇಳೆ ಆತ ತಾನು ದಲಿತ ಎಂದು ಹೇಳಿಕೊಂಡಾಗ ‘ಡೋಂಟ್ ಟಚ್ ಮಿ, ಟಚ್ ಮಿ’ ಅಂತ ಸಾಂಗ್ ಕೂಡ ಪ್ಲೇ ಮಾಡಲಾಗಿದೆ. ತಯಾರಕರು ಬಿಆರ್ ಅಂಬೇಡ್ಕರ್ ಅವರನ್ನು ‘ಬೀಯರ್ ಅಂಬೇಡ್ಕರ್’ ಆಗಿ ಪರಿವರ್ತಿಸಿದ್ದಾರೆ ಮತ್ತು ಹಾಸ್ಯವನ್ನು ಪ್ರಚೋದಿಸಲು ‘ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು’ ಎಂಬ ಹಲವಾರು ಇತರ ‍ವಿವಾದಾತ್ಮಕ ನುಡಿಗಟ್ಟುಗಳನ್ನು ಬಳಸಿದ್ದಾರೆ” ಎಂದು ಅರ್ಜಿದಾರರು ತಿಳಿಸಿದ್ದಾರೆ.

ಈ ವೇದಿಕೆ ಮೇಲೆ ಇಂತಹ ಸ್ಕ್ರಿಪ್ಟ್ ಹೊಂದಿರುವ ಸ್ಕಿಟ್‌ನ್ನು ಹೇಗೆ ಪ್ರದರ್ಶನ ಮಾಡಿದರು ಎನ್ನುವುದು ಪ್ರಶ್ನೆಯಾಗಿದೆ. ಏಕೆಂದರೆ ವೇದಿಕೆಯ ಮೇಲೆ ಜಾರಿಗೊಳಿಸುವ ಮೊದಲು ಅನುಮೋದನೆ ಪಡೆಯಬೇಕಾಗುತ್ತದೆ, ಅದಕ್ಕೆ ಕೆಲವು ಸುತ್ತುಗಳು ಇರುತ್ತವೆ. ಅವೆಲ್ಲವನ್ನೂ ದಾಟಿಕೊಂಡು ಬಂದು ಈ ಸ್ಕಿಟ್ ಪ್ರದರ್ಶನಗೊಳ್ಳುತ್ತದೆ ಎಂದರೆ ಇದು ಸ್ವೀಕಾರಾರ್ಹವಲ್ಲ. ಬೆಂಗಳೂರಿನಲ್ಲಿ 25 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 5 ರಂದು ಕಾಲೇಜು ಫೆಸ್ಟ್‌ ನಡೆಸಿತ್ತಿ. ಈ ವೇಳೆ ಇಂತಹ ಸ್ಕಿಟ್ ಪ್ರದರ್ಶನಗೊಂಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಫೆಬ್ರವರಿ 9, ಗುರುವಾರದಂದು ಮಹಾರಾಷ್ಟ್ರದ ಪೊಲೀಸ್ ಅಧೀಕ್ಷಕರಿಗೆ ವಂಚಿತ್ ಬಹುಜನ ಯುವ ಆಗಡಿಯ ರಾಜ್ಯ ಸದಸ್ಯ ಅಕ್ಷಯ್ ಬನ್ಸೋಡೆ ಅವರು ಸೆಕ್ಷನ್ ಎಕ್ಸ್ (3) SC/ST ಕಾಯ್ದೆಯಡಿಯಲ್ಲಿ ದೂರು ಸಲ್ಲಿಸಿದ್ದಾರೆ. ಹಾಗೆಯೇ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 153A, 295, 499, 500, 503, 504, 506 ಮತ್ತು 34ರಲ್ಲಿ ದೂರು ದಾಖಲಾಗಿದೆ. ದೂರನ್ನು ಎಫ್‌ಐಆರ್ ಎಂದು ಪರಿಗಣಿಸಿ ಪ್ರದರ್ಶಕರು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಜಮೀನಿಗೆ ಹಸು ನುಗ್ಗಿತೆಂದು ದಲಿತ ಮಹಿಳೆಯ ಮೇಲೆ ಸವರ್ಣೀಯ ವ್ಯಕ್ತಿಯಿಂದ ಹಲ್ಲೆ

ಅರ್ಜಿದಾರರಲ್ಲಿ ಒಬ್ಬರು, ”ಅವರು ಈಗ ಮೂರು ವಿಭಿನ್ನ ಸ್ಥಳಗಳಲ್ಲಿ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ನಾವು ಇಲ್ಲಿ ಬೆಂಗಳೂರಿನಲ್ಲಿ ಸ್ಕಿಟ್ ವೀಕ್ಷಿಸಿದಾಗ, ಅದರ ವಿರುದ್ದ ತಕ್ಷಣ ಧ್ವನಿ ಎತ್ತಿದ್ದೇವೆ ಎಂದಿದ್ದಾರೆ. ಆದರೆ ಸ್ಕಿಟ್ ಉತ್ತಮ ಹಾಸ್ಯದಲ್ಲಿದೆ ಎಂದು ಸಂಘಟಕರು ಭಾವಿಸಿದ್ದಾರೆ ಎಂದು Jhatkaa.org ನಲ್ಲಿ ಹಿರಿಯ ಎಂಗೇಜ್‌ಮೆಂಟ್ಸ್ ಅಸೋಸಿಯೇಟ್ ದೃಷ್ಟದ್ಯುಮ್ನ್ ಹೇಳಿದ್ದಾರೆ. ”ಸ್ಕಿಟ್‌ನ ಕೊನೆಯಲ್ಲಿ 20-30 ಸೆಕೆಂಡುಗಳಲ್ಲಿ ಕೀಳಾಗಿ ನೋಡುವ ಸಂಭಾಷಣೆಗಳು ಹಾಗೂ ಕೆರಳಿಸುವ ಉದ್ದೇಶದಿಂದ ಮೇಲ್ವರ್ಗದ ತಮಾಷೆಯ ಮಾತುಗಳನ್ನು ಮಾತನಾಡಿದ್ದಾರೆ. ಸ್ಕಿಟ್‌ನ ಬಹುಪಾಲು ಜಾತಿಯನ್ನು ಅವಹೇಳನ ಮಾಡುವಂತಹ ದೃಶ್ಯಗಳೇ ತುಂಬಿದೆ” ಎಂದು ಹೇಳಿಲಾಗಿದೆ.

ಈ ಸ್ಕಿಟ್‌ ಪ್ರದರ್ಶನ ಮಾಡಿದ ‘ದಿ ಡೆಲ್ರಾಯ್ಸ್ ಬಾಯ್ಸ್’ ಅವರು ಕ್ಷಮೆಯಾಚಿಸುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ”ಒಂದು ತಂಡವಾಗಿ ನಾವು ಕೆಟ್ಟದಾಗಿ ಮಾತನಾಡಿರುವುದಕ್ಕೆ ಪ್ರತಿಯೊಬ್ಬರಲ್ಲೂ ಕ್ಷಮೆ ಕೇಳಲು ಬಯಸುತ್ತೇವೆ, ನಮ್ಮ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಸಾಮಾಜಿಕ ಸಂದೇಶವನ್ನು ತರುವುದು ನಮ್ಮ ಉದ್ದೇಶವಾಗಿತ್ತು ಆದರೆ ನಮ್ಮಿಂದ ತಪ್ಪಾಗಿದೆ ಎಂದು ಅವರು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಸಾರ್ವಜನಿಕ ಕ್ಷಮೆಯಾಚನೆಯನ್ನು ಸಹ ಪೋಸ್ಟ್ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಿಎಎ ಅಡಿ ಪೌರತ್ವ ನೀಡಿದ ಕೇಂದ್ರ ಸರ್ಕಾರ: ಸುಪ್ರೀಂ ಮೆಟ್ಟಿಲೇರಲು ನಿರ್ಧರಿಸಿದ ಮುಸ್ಲಿಂ ಲೀಗ್

0
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಯನ್ನು ಕೇಂದ್ರ ಗೃಹ ಇಲಾಖೆ ಪ್ರಾರಂಭಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ 300ಕ್ಕೂ ಅಧಿಕ...