Homeಮುಖಪುಟಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

- Advertisement -
- Advertisement -

ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಗುಂಪೊಂದು ತಾವು ಪ್ರದಶಿಸಿದ ಸ್ಕಿಟ್‌ನಲ್ಲಿ ”ಬಿಆರ್ ಅಂಬೇಡ್ಕರ್ ಅಲ್ಲ ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ದಲಿತರ ಬಗ್ಗೆಯೂ ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಸ್ಕಿಟ್‌ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

Jhatkaa.org ನಲ್ಲಿ ಪ್ರಕಟವಾದ ಅರ್ಜಿಯಲ್ಲಿ, ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ (CMS) ಕಾಲೇಜು ತಂಡ ಈ ಇವೆಂಟ್‌ನಲ್ಲಿ ಜಾತಿವಾದವನ್ನು ಎತ್ತಿ ತೋರಿಸುವ ಮತ್ತು ಕೆಲವು ಸಂವೇದನಾಶೀಲವಲ್ಲದ ಭಾಷೆಗಳನ್ನು ಬಳಸಿ ಸ್ಕಿಟ್ ಮಾಡಿದ್ದಾರೆ ಎಂದು ಹೇಳುತ್ತದೆ. ಈ ಅರ್ಜಿದಾರರು ಅನಾಮಧೇಯರಾಗಿ ಉಳಿಯಲು ಬಯಸಿದ್ದು, ಹಾಸ್ಯದ ಹೆಸರಿನಲ್ಲಿ ಜಾತಿ ತಾರತಮ್ಯವನ್ನು ಸಾಮಾನ್ಯ ಎನ್ನುವಂತೆ ಸ್ಕಿಟ್‌ನಲ್ಲಿ ಬಳಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ ಥಿಯೇಟರ್ ಗ್ರೂಪ್, ‘ದಿ ಡೆಲ್ರಾಯ್ಸ್ ಬಾಯ್ಸ್’, ‘ಮ್ಯಾಡ್-ಆಡ್ಸ್’ ನ ಭಾಗವಾಗಿ, ಫೆಸ್ಟ್‌ನಲ್ಲಿ ಹಾಸ್ಯ ಜೊತೆಗೆ ದಲಿತರನ್ನು ಗೇಲಿ ಮಾಡುತ್ತ ಈ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ”ಅವರು ಪ್ರದರ್ಶಿಸಿದ ಸ್ಕಿಟ್ ಕೆಳ ಜಾತಿಯ ಹಿನ್ನೆಲೆಯ ವ್ಯಕ್ತಿಯೊಬ್ಬ ಮೇಲ್ಜಾತಿ ಮಹಿಳೆಯೊಂದಿಗೆ ಡೇಟಿಂಗ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಪ್ರದರ್ಶಿಸಿತು. ಈ ವೇಳೆ ಆತ ತಾನು ದಲಿತ ಎಂದು ಹೇಳಿಕೊಂಡಾಗ ‘ಡೋಂಟ್ ಟಚ್ ಮಿ, ಟಚ್ ಮಿ’ ಅಂತ ಸಾಂಗ್ ಕೂಡ ಪ್ಲೇ ಮಾಡಲಾಗಿದೆ. ತಯಾರಕರು ಬಿಆರ್ ಅಂಬೇಡ್ಕರ್ ಅವರನ್ನು ‘ಬೀಯರ್ ಅಂಬೇಡ್ಕರ್’ ಆಗಿ ಪರಿವರ್ತಿಸಿದ್ದಾರೆ ಮತ್ತು ಹಾಸ್ಯವನ್ನು ಪ್ರಚೋದಿಸಲು ‘ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು’ ಎಂಬ ಹಲವಾರು ಇತರ ‍ವಿವಾದಾತ್ಮಕ ನುಡಿಗಟ್ಟುಗಳನ್ನು ಬಳಸಿದ್ದಾರೆ” ಎಂದು ಅರ್ಜಿದಾರರು ತಿಳಿಸಿದ್ದಾರೆ.

ಈ ವೇದಿಕೆ ಮೇಲೆ ಇಂತಹ ಸ್ಕ್ರಿಪ್ಟ್ ಹೊಂದಿರುವ ಸ್ಕಿಟ್‌ನ್ನು ಹೇಗೆ ಪ್ರದರ್ಶನ ಮಾಡಿದರು ಎನ್ನುವುದು ಪ್ರಶ್ನೆಯಾಗಿದೆ. ಏಕೆಂದರೆ ವೇದಿಕೆಯ ಮೇಲೆ ಜಾರಿಗೊಳಿಸುವ ಮೊದಲು ಅನುಮೋದನೆ ಪಡೆಯಬೇಕಾಗುತ್ತದೆ, ಅದಕ್ಕೆ ಕೆಲವು ಸುತ್ತುಗಳು ಇರುತ್ತವೆ. ಅವೆಲ್ಲವನ್ನೂ ದಾಟಿಕೊಂಡು ಬಂದು ಈ ಸ್ಕಿಟ್ ಪ್ರದರ್ಶನಗೊಳ್ಳುತ್ತದೆ ಎಂದರೆ ಇದು ಸ್ವೀಕಾರಾರ್ಹವಲ್ಲ. ಬೆಂಗಳೂರಿನಲ್ಲಿ 25 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 5 ರಂದು ಕಾಲೇಜು ಫೆಸ್ಟ್‌ ನಡೆಸಿತ್ತಿ. ಈ ವೇಳೆ ಇಂತಹ ಸ್ಕಿಟ್ ಪ್ರದರ್ಶನಗೊಂಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಫೆಬ್ರವರಿ 9, ಗುರುವಾರದಂದು ಮಹಾರಾಷ್ಟ್ರದ ಪೊಲೀಸ್ ಅಧೀಕ್ಷಕರಿಗೆ ವಂಚಿತ್ ಬಹುಜನ ಯುವ ಆಗಡಿಯ ರಾಜ್ಯ ಸದಸ್ಯ ಅಕ್ಷಯ್ ಬನ್ಸೋಡೆ ಅವರು ಸೆಕ್ಷನ್ ಎಕ್ಸ್ (3) SC/ST ಕಾಯ್ದೆಯಡಿಯಲ್ಲಿ ದೂರು ಸಲ್ಲಿಸಿದ್ದಾರೆ. ಹಾಗೆಯೇ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 153A, 295, 499, 500, 503, 504, 506 ಮತ್ತು 34ರಲ್ಲಿ ದೂರು ದಾಖಲಾಗಿದೆ. ದೂರನ್ನು ಎಫ್‌ಐಆರ್ ಎಂದು ಪರಿಗಣಿಸಿ ಪ್ರದರ್ಶಕರು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಜಮೀನಿಗೆ ಹಸು ನುಗ್ಗಿತೆಂದು ದಲಿತ ಮಹಿಳೆಯ ಮೇಲೆ ಸವರ್ಣೀಯ ವ್ಯಕ್ತಿಯಿಂದ ಹಲ್ಲೆ

ಅರ್ಜಿದಾರರಲ್ಲಿ ಒಬ್ಬರು, ”ಅವರು ಈಗ ಮೂರು ವಿಭಿನ್ನ ಸ್ಥಳಗಳಲ್ಲಿ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ನಾವು ಇಲ್ಲಿ ಬೆಂಗಳೂರಿನಲ್ಲಿ ಸ್ಕಿಟ್ ವೀಕ್ಷಿಸಿದಾಗ, ಅದರ ವಿರುದ್ದ ತಕ್ಷಣ ಧ್ವನಿ ಎತ್ತಿದ್ದೇವೆ ಎಂದಿದ್ದಾರೆ. ಆದರೆ ಸ್ಕಿಟ್ ಉತ್ತಮ ಹಾಸ್ಯದಲ್ಲಿದೆ ಎಂದು ಸಂಘಟಕರು ಭಾವಿಸಿದ್ದಾರೆ ಎಂದು Jhatkaa.org ನಲ್ಲಿ ಹಿರಿಯ ಎಂಗೇಜ್‌ಮೆಂಟ್ಸ್ ಅಸೋಸಿಯೇಟ್ ದೃಷ್ಟದ್ಯುಮ್ನ್ ಹೇಳಿದ್ದಾರೆ. ”ಸ್ಕಿಟ್‌ನ ಕೊನೆಯಲ್ಲಿ 20-30 ಸೆಕೆಂಡುಗಳಲ್ಲಿ ಕೀಳಾಗಿ ನೋಡುವ ಸಂಭಾಷಣೆಗಳು ಹಾಗೂ ಕೆರಳಿಸುವ ಉದ್ದೇಶದಿಂದ ಮೇಲ್ವರ್ಗದ ತಮಾಷೆಯ ಮಾತುಗಳನ್ನು ಮಾತನಾಡಿದ್ದಾರೆ. ಸ್ಕಿಟ್‌ನ ಬಹುಪಾಲು ಜಾತಿಯನ್ನು ಅವಹೇಳನ ಮಾಡುವಂತಹ ದೃಶ್ಯಗಳೇ ತುಂಬಿದೆ” ಎಂದು ಹೇಳಿಲಾಗಿದೆ.

ಈ ಸ್ಕಿಟ್‌ ಪ್ರದರ್ಶನ ಮಾಡಿದ ‘ದಿ ಡೆಲ್ರಾಯ್ಸ್ ಬಾಯ್ಸ್’ ಅವರು ಕ್ಷಮೆಯಾಚಿಸುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ”ಒಂದು ತಂಡವಾಗಿ ನಾವು ಕೆಟ್ಟದಾಗಿ ಮಾತನಾಡಿರುವುದಕ್ಕೆ ಪ್ರತಿಯೊಬ್ಬರಲ್ಲೂ ಕ್ಷಮೆ ಕೇಳಲು ಬಯಸುತ್ತೇವೆ, ನಮ್ಮ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಸಾಮಾಜಿಕ ಸಂದೇಶವನ್ನು ತರುವುದು ನಮ್ಮ ಉದ್ದೇಶವಾಗಿತ್ತು ಆದರೆ ನಮ್ಮಿಂದ ತಪ್ಪಾಗಿದೆ ಎಂದು ಅವರು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಸಾರ್ವಜನಿಕ ಕ್ಷಮೆಯಾಚನೆಯನ್ನು ಸಹ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...