Homeಮುಖಪುಟಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

- Advertisement -
- Advertisement -

ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಗುಂಪೊಂದು ತಾವು ಪ್ರದಶಿಸಿದ ಸ್ಕಿಟ್‌ನಲ್ಲಿ ”ಬಿಆರ್ ಅಂಬೇಡ್ಕರ್ ಅಲ್ಲ ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ದಲಿತರ ಬಗ್ಗೆಯೂ ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಸ್ಕಿಟ್‌ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

Jhatkaa.org ನಲ್ಲಿ ಪ್ರಕಟವಾದ ಅರ್ಜಿಯಲ್ಲಿ, ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ (CMS) ಕಾಲೇಜು ತಂಡ ಈ ಇವೆಂಟ್‌ನಲ್ಲಿ ಜಾತಿವಾದವನ್ನು ಎತ್ತಿ ತೋರಿಸುವ ಮತ್ತು ಕೆಲವು ಸಂವೇದನಾಶೀಲವಲ್ಲದ ಭಾಷೆಗಳನ್ನು ಬಳಸಿ ಸ್ಕಿಟ್ ಮಾಡಿದ್ದಾರೆ ಎಂದು ಹೇಳುತ್ತದೆ. ಈ ಅರ್ಜಿದಾರರು ಅನಾಮಧೇಯರಾಗಿ ಉಳಿಯಲು ಬಯಸಿದ್ದು, ಹಾಸ್ಯದ ಹೆಸರಿನಲ್ಲಿ ಜಾತಿ ತಾರತಮ್ಯವನ್ನು ಸಾಮಾನ್ಯ ಎನ್ನುವಂತೆ ಸ್ಕಿಟ್‌ನಲ್ಲಿ ಬಳಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ ಥಿಯೇಟರ್ ಗ್ರೂಪ್, ‘ದಿ ಡೆಲ್ರಾಯ್ಸ್ ಬಾಯ್ಸ್’, ‘ಮ್ಯಾಡ್-ಆಡ್ಸ್’ ನ ಭಾಗವಾಗಿ, ಫೆಸ್ಟ್‌ನಲ್ಲಿ ಹಾಸ್ಯ ಜೊತೆಗೆ ದಲಿತರನ್ನು ಗೇಲಿ ಮಾಡುತ್ತ ಈ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ”ಅವರು ಪ್ರದರ್ಶಿಸಿದ ಸ್ಕಿಟ್ ಕೆಳ ಜಾತಿಯ ಹಿನ್ನೆಲೆಯ ವ್ಯಕ್ತಿಯೊಬ್ಬ ಮೇಲ್ಜಾತಿ ಮಹಿಳೆಯೊಂದಿಗೆ ಡೇಟಿಂಗ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಪ್ರದರ್ಶಿಸಿತು. ಈ ವೇಳೆ ಆತ ತಾನು ದಲಿತ ಎಂದು ಹೇಳಿಕೊಂಡಾಗ ‘ಡೋಂಟ್ ಟಚ್ ಮಿ, ಟಚ್ ಮಿ’ ಅಂತ ಸಾಂಗ್ ಕೂಡ ಪ್ಲೇ ಮಾಡಲಾಗಿದೆ. ತಯಾರಕರು ಬಿಆರ್ ಅಂಬೇಡ್ಕರ್ ಅವರನ್ನು ‘ಬೀಯರ್ ಅಂಬೇಡ್ಕರ್’ ಆಗಿ ಪರಿವರ್ತಿಸಿದ್ದಾರೆ ಮತ್ತು ಹಾಸ್ಯವನ್ನು ಪ್ರಚೋದಿಸಲು ‘ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು’ ಎಂಬ ಹಲವಾರು ಇತರ ‍ವಿವಾದಾತ್ಮಕ ನುಡಿಗಟ್ಟುಗಳನ್ನು ಬಳಸಿದ್ದಾರೆ” ಎಂದು ಅರ್ಜಿದಾರರು ತಿಳಿಸಿದ್ದಾರೆ.

ಈ ವೇದಿಕೆ ಮೇಲೆ ಇಂತಹ ಸ್ಕ್ರಿಪ್ಟ್ ಹೊಂದಿರುವ ಸ್ಕಿಟ್‌ನ್ನು ಹೇಗೆ ಪ್ರದರ್ಶನ ಮಾಡಿದರು ಎನ್ನುವುದು ಪ್ರಶ್ನೆಯಾಗಿದೆ. ಏಕೆಂದರೆ ವೇದಿಕೆಯ ಮೇಲೆ ಜಾರಿಗೊಳಿಸುವ ಮೊದಲು ಅನುಮೋದನೆ ಪಡೆಯಬೇಕಾಗುತ್ತದೆ, ಅದಕ್ಕೆ ಕೆಲವು ಸುತ್ತುಗಳು ಇರುತ್ತವೆ. ಅವೆಲ್ಲವನ್ನೂ ದಾಟಿಕೊಂಡು ಬಂದು ಈ ಸ್ಕಿಟ್ ಪ್ರದರ್ಶನಗೊಳ್ಳುತ್ತದೆ ಎಂದರೆ ಇದು ಸ್ವೀಕಾರಾರ್ಹವಲ್ಲ. ಬೆಂಗಳೂರಿನಲ್ಲಿ 25 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 5 ರಂದು ಕಾಲೇಜು ಫೆಸ್ಟ್‌ ನಡೆಸಿತ್ತಿ. ಈ ವೇಳೆ ಇಂತಹ ಸ್ಕಿಟ್ ಪ್ರದರ್ಶನಗೊಂಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಫೆಬ್ರವರಿ 9, ಗುರುವಾರದಂದು ಮಹಾರಾಷ್ಟ್ರದ ಪೊಲೀಸ್ ಅಧೀಕ್ಷಕರಿಗೆ ವಂಚಿತ್ ಬಹುಜನ ಯುವ ಆಗಡಿಯ ರಾಜ್ಯ ಸದಸ್ಯ ಅಕ್ಷಯ್ ಬನ್ಸೋಡೆ ಅವರು ಸೆಕ್ಷನ್ ಎಕ್ಸ್ (3) SC/ST ಕಾಯ್ದೆಯಡಿಯಲ್ಲಿ ದೂರು ಸಲ್ಲಿಸಿದ್ದಾರೆ. ಹಾಗೆಯೇ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 153A, 295, 499, 500, 503, 504, 506 ಮತ್ತು 34ರಲ್ಲಿ ದೂರು ದಾಖಲಾಗಿದೆ. ದೂರನ್ನು ಎಫ್‌ಐಆರ್ ಎಂದು ಪರಿಗಣಿಸಿ ಪ್ರದರ್ಶಕರು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಜಮೀನಿಗೆ ಹಸು ನುಗ್ಗಿತೆಂದು ದಲಿತ ಮಹಿಳೆಯ ಮೇಲೆ ಸವರ್ಣೀಯ ವ್ಯಕ್ತಿಯಿಂದ ಹಲ್ಲೆ

ಅರ್ಜಿದಾರರಲ್ಲಿ ಒಬ್ಬರು, ”ಅವರು ಈಗ ಮೂರು ವಿಭಿನ್ನ ಸ್ಥಳಗಳಲ್ಲಿ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ನಾವು ಇಲ್ಲಿ ಬೆಂಗಳೂರಿನಲ್ಲಿ ಸ್ಕಿಟ್ ವೀಕ್ಷಿಸಿದಾಗ, ಅದರ ವಿರುದ್ದ ತಕ್ಷಣ ಧ್ವನಿ ಎತ್ತಿದ್ದೇವೆ ಎಂದಿದ್ದಾರೆ. ಆದರೆ ಸ್ಕಿಟ್ ಉತ್ತಮ ಹಾಸ್ಯದಲ್ಲಿದೆ ಎಂದು ಸಂಘಟಕರು ಭಾವಿಸಿದ್ದಾರೆ ಎಂದು Jhatkaa.org ನಲ್ಲಿ ಹಿರಿಯ ಎಂಗೇಜ್‌ಮೆಂಟ್ಸ್ ಅಸೋಸಿಯೇಟ್ ದೃಷ್ಟದ್ಯುಮ್ನ್ ಹೇಳಿದ್ದಾರೆ. ”ಸ್ಕಿಟ್‌ನ ಕೊನೆಯಲ್ಲಿ 20-30 ಸೆಕೆಂಡುಗಳಲ್ಲಿ ಕೀಳಾಗಿ ನೋಡುವ ಸಂಭಾಷಣೆಗಳು ಹಾಗೂ ಕೆರಳಿಸುವ ಉದ್ದೇಶದಿಂದ ಮೇಲ್ವರ್ಗದ ತಮಾಷೆಯ ಮಾತುಗಳನ್ನು ಮಾತನಾಡಿದ್ದಾರೆ. ಸ್ಕಿಟ್‌ನ ಬಹುಪಾಲು ಜಾತಿಯನ್ನು ಅವಹೇಳನ ಮಾಡುವಂತಹ ದೃಶ್ಯಗಳೇ ತುಂಬಿದೆ” ಎಂದು ಹೇಳಿಲಾಗಿದೆ.

ಈ ಸ್ಕಿಟ್‌ ಪ್ರದರ್ಶನ ಮಾಡಿದ ‘ದಿ ಡೆಲ್ರಾಯ್ಸ್ ಬಾಯ್ಸ್’ ಅವರು ಕ್ಷಮೆಯಾಚಿಸುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ”ಒಂದು ತಂಡವಾಗಿ ನಾವು ಕೆಟ್ಟದಾಗಿ ಮಾತನಾಡಿರುವುದಕ್ಕೆ ಪ್ರತಿಯೊಬ್ಬರಲ್ಲೂ ಕ್ಷಮೆ ಕೇಳಲು ಬಯಸುತ್ತೇವೆ, ನಮ್ಮ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಸಾಮಾಜಿಕ ಸಂದೇಶವನ್ನು ತರುವುದು ನಮ್ಮ ಉದ್ದೇಶವಾಗಿತ್ತು ಆದರೆ ನಮ್ಮಿಂದ ತಪ್ಪಾಗಿದೆ ಎಂದು ಅವರು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಸಾರ್ವಜನಿಕ ಕ್ಷಮೆಯಾಚನೆಯನ್ನು ಸಹ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...