Homeಕರ್ನಾಟಕಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

ಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

- Advertisement -
- Advertisement -

ರಾಯಚೂರಿನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಗಣರಾಜ್ಯೋತ್ಸವದಂದು  ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ತೆರವು ಮಾಡಿಸಿದ ವಿವಾದ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಹಿರಿಯ ಸಾಹಿತಿ ದೇವನೂರ ಮಹಾದೇವ ಮುಂದಾಗಿದ್ದಾರೆ.

“ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವದಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಯುವಂತೆ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಸೂಚಿಸಿದ ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರ ಮಹಾದೇವ ಅವರು ನಿರ್ಧಾರಿಸಿದ್ದಾರೆ” ಎಂದು ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ ಮಾಡಿದೆ.

“ರಾಯಚೂರಿನಲ್ಲಿ ನಡೆದ ಘಟನೆ ಸಂಬಂಧ ಹೈಕೋರ್ಟ್‌ನಲ್ಲಿ ವಕಾಲತ್ತು ಹಾಕಲು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವವರ್ಮ ಕುಮಾರ್‌ ಅವರ ಬಳಿ ಚರ್ಚೆ ನಡೆಸಿದ್ದೇನೆ. ಮತ್ತೆ ಯಾರಾದರೂ ವಕಾಲತ್ತು ಹಾಕುವವರಿದ್ದರೆ ಅವರನ್ನೂ ಸೇರಿಸಿಕೊಳ್ಳಿ ಎಂದು ಕೇಳಿಕೊಂಡಿದ್ದೇನೆ” ಎಂದು ದೇವನೂರರು ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.

ಅಂಬೇಡ್ಕರ್‌ ಫೋಟೋ ತೆರವು ವಿವಾದ ಭಾರಿ ಆಕ್ರೋಶಕ್ಕೆ ಕಾರಣವಾದ ಬಳಿಕ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪ್ರತಿಕ್ರಿಯೆ ನೀಡಿದ್ದರು. ’ಡಾ. ಬಿ.ಅರ್. ಅಂಬೇಡ್ಕರವರ ಫೋಟೋ ತೆಗೆದುಕೊಂಡು ಬಂದು ಇಟ್ಟಿದ್ದು, ವಾಪಸ್ ತೆಗೆದುಕೊಂಡು ಹೋಗಿರುವುದನ್ನು ನಾನು ನೋಡಿಲ್ಲ’ ಎಂದು ನ್ಯಾಯಾಧೀಶರು ಹೇಳಿದ್ದರು.

“ಅಂದು ಮುಂಜಾನೆ 8.15 ರ ಸುಮಾರಿಗೆ ನಮ್ಮ ಸಿಬ್ಬಂದಿಯವರು ನನ್ನ ಕೊಠಡಿಗೆ ಬಂದು ಕೆಲವು ವಕೀಲರು ಮಹಾತ್ಮ ಗಾಂಧಿಯವರ ಫೋಟೋ ಜೊತೆ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಸಹ ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕೆಂದು ಸರಕಾರದ ಸುತ್ತೋಲೆ ಇದೆ ಅಂತಾ ಹೇಳುತ್ತಿದ್ದಾರೆ ಅಂತಾ ತಿಳಿಸಿದರು. ಅನಂತರ ಕೆಲ ವಕೀಲರು ಬಂದು ನನಗೆ ಸರಕಾರದ ಸುತ್ತೋಲೆಯ ಪ್ರಕಾರ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕು ಅಂತಾ ಒತ್ತಾಯಿಸಿದರು. ಆಗ ನಾನು ಆ ಸುತ್ತೋಲೆಯನ್ನು ಘನ ಉಚ್ಚ ನ್ಯಾಯಾಲಯದ ಫು಼ಲ್ ಕೋರ್ಟ್ ಮುಂದೆ ಪರಿಗಣೆನೆಗೆ ಇರುವ ಕಾರಣ ನಾವು ಕಾಯಬೇಕು ‌ಎಂದು ಉಚ್ಚ ನ್ಯಾಯಾಲಯದ ವಿಲೇಖನಾಧಿಕಾರಿಗಳು ನಮ್ಮ ಲೀಡರ್ಸ್ ಗುಂಪಿನಲ್ಲಿ ತಿಳಿಸಿದ್ದಾರೆ. ಆದ ಕಾರಣ ಒತ್ತಾಯಿಸಬೇಡಿ ಎಂದು ವಿನಂತಿಸಿಕೊಂಡೆ” ಎಂದು ಹೇಳಿದ್ದರು.

ಗಾಂಧೀಜಿಯವರ ಫೋಟೋ ಜೊತೆಗೆ ಅಂಬೇಡ್ಕರ್‌ ಫೋಟೋ ಇಡಬಾರದೆಂದು ಎಲ್ಲಿಯೂ ಹೇಳಿಲ್ಲ ಎಂದು ನ್ಯಾಯಾಂಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. “ಗಣರಾಜ್ಯೋತ್ಸವ, ಸ್ವಾತಂತ್ರ್‍ಯ ದಿನಾಚರಣೆಯ ದಿನ ಯಾರ ಫೋಟೋವನ್ನು ಇಡಬಾರದು ಎಂಬ ಆದೇಶ ಎಲ್ಲಿಯೂ ಇಲ್ಲ. ಅಂತಹ ಸಂದರ್ಭದಲ್ಲಿ ಮಹಾತ್ಮ ಗಾಂಧೀಯವರ ಫೋಟೋ ಅವಕಾಶ ಇದ್ದರೆ, ಅಂಬೇಡ್ಕರ್‌ ಫೋಟೋ ಯಾಕೆ ಇಡಬಾರದು. ಬಿ.ಆರ್‌.ಅಂಬೇಡ್ಕರ್‌ ಅವರು ನಮ್ಮ ದೇಶದ ರಚನಾ ಸಭೆಯಲ್ಲಿ ಮಹತ್ತ್ರವಾದ ಪಾತ್ರವಹಿಸಿದ್ದಾರೆ” ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ ದಾಸ್ ಅಭಿಪ್ರಾಯಪಡುತ್ತಾರೆ.


ಇದನ್ನೂ ಓದಿರಿ: ಅಂಬೇಡ್ಕರವರ ಬಗ್ಗೆ ಅಪಾರ ಗೌರವ, ಅಭಿಮಾನ ಇದೆ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...