Homeಕರ್ನಾಟಕಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

ಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

- Advertisement -
- Advertisement -

ರಾಯಚೂರಿನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಗಣರಾಜ್ಯೋತ್ಸವದಂದು  ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ತೆರವು ಮಾಡಿಸಿದ ವಿವಾದ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಹಿರಿಯ ಸಾಹಿತಿ ದೇವನೂರ ಮಹಾದೇವ ಮುಂದಾಗಿದ್ದಾರೆ.

“ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವದಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಯುವಂತೆ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಸೂಚಿಸಿದ ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರ ಮಹಾದೇವ ಅವರು ನಿರ್ಧಾರಿಸಿದ್ದಾರೆ” ಎಂದು ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ ಮಾಡಿದೆ.

“ರಾಯಚೂರಿನಲ್ಲಿ ನಡೆದ ಘಟನೆ ಸಂಬಂಧ ಹೈಕೋರ್ಟ್‌ನಲ್ಲಿ ವಕಾಲತ್ತು ಹಾಕಲು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವವರ್ಮ ಕುಮಾರ್‌ ಅವರ ಬಳಿ ಚರ್ಚೆ ನಡೆಸಿದ್ದೇನೆ. ಮತ್ತೆ ಯಾರಾದರೂ ವಕಾಲತ್ತು ಹಾಕುವವರಿದ್ದರೆ ಅವರನ್ನೂ ಸೇರಿಸಿಕೊಳ್ಳಿ ಎಂದು ಕೇಳಿಕೊಂಡಿದ್ದೇನೆ” ಎಂದು ದೇವನೂರರು ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.

ಅಂಬೇಡ್ಕರ್‌ ಫೋಟೋ ತೆರವು ವಿವಾದ ಭಾರಿ ಆಕ್ರೋಶಕ್ಕೆ ಕಾರಣವಾದ ಬಳಿಕ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪ್ರತಿಕ್ರಿಯೆ ನೀಡಿದ್ದರು. ’ಡಾ. ಬಿ.ಅರ್. ಅಂಬೇಡ್ಕರವರ ಫೋಟೋ ತೆಗೆದುಕೊಂಡು ಬಂದು ಇಟ್ಟಿದ್ದು, ವಾಪಸ್ ತೆಗೆದುಕೊಂಡು ಹೋಗಿರುವುದನ್ನು ನಾನು ನೋಡಿಲ್ಲ’ ಎಂದು ನ್ಯಾಯಾಧೀಶರು ಹೇಳಿದ್ದರು.

“ಅಂದು ಮುಂಜಾನೆ 8.15 ರ ಸುಮಾರಿಗೆ ನಮ್ಮ ಸಿಬ್ಬಂದಿಯವರು ನನ್ನ ಕೊಠಡಿಗೆ ಬಂದು ಕೆಲವು ವಕೀಲರು ಮಹಾತ್ಮ ಗಾಂಧಿಯವರ ಫೋಟೋ ಜೊತೆ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಸಹ ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕೆಂದು ಸರಕಾರದ ಸುತ್ತೋಲೆ ಇದೆ ಅಂತಾ ಹೇಳುತ್ತಿದ್ದಾರೆ ಅಂತಾ ತಿಳಿಸಿದರು. ಅನಂತರ ಕೆಲ ವಕೀಲರು ಬಂದು ನನಗೆ ಸರಕಾರದ ಸುತ್ತೋಲೆಯ ಪ್ರಕಾರ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕು ಅಂತಾ ಒತ್ತಾಯಿಸಿದರು. ಆಗ ನಾನು ಆ ಸುತ್ತೋಲೆಯನ್ನು ಘನ ಉಚ್ಚ ನ್ಯಾಯಾಲಯದ ಫು಼ಲ್ ಕೋರ್ಟ್ ಮುಂದೆ ಪರಿಗಣೆನೆಗೆ ಇರುವ ಕಾರಣ ನಾವು ಕಾಯಬೇಕು ‌ಎಂದು ಉಚ್ಚ ನ್ಯಾಯಾಲಯದ ವಿಲೇಖನಾಧಿಕಾರಿಗಳು ನಮ್ಮ ಲೀಡರ್ಸ್ ಗುಂಪಿನಲ್ಲಿ ತಿಳಿಸಿದ್ದಾರೆ. ಆದ ಕಾರಣ ಒತ್ತಾಯಿಸಬೇಡಿ ಎಂದು ವಿನಂತಿಸಿಕೊಂಡೆ” ಎಂದು ಹೇಳಿದ್ದರು.

ಗಾಂಧೀಜಿಯವರ ಫೋಟೋ ಜೊತೆಗೆ ಅಂಬೇಡ್ಕರ್‌ ಫೋಟೋ ಇಡಬಾರದೆಂದು ಎಲ್ಲಿಯೂ ಹೇಳಿಲ್ಲ ಎಂದು ನ್ಯಾಯಾಂಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. “ಗಣರಾಜ್ಯೋತ್ಸವ, ಸ್ವಾತಂತ್ರ್‍ಯ ದಿನಾಚರಣೆಯ ದಿನ ಯಾರ ಫೋಟೋವನ್ನು ಇಡಬಾರದು ಎಂಬ ಆದೇಶ ಎಲ್ಲಿಯೂ ಇಲ್ಲ. ಅಂತಹ ಸಂದರ್ಭದಲ್ಲಿ ಮಹಾತ್ಮ ಗಾಂಧೀಯವರ ಫೋಟೋ ಅವಕಾಶ ಇದ್ದರೆ, ಅಂಬೇಡ್ಕರ್‌ ಫೋಟೋ ಯಾಕೆ ಇಡಬಾರದು. ಬಿ.ಆರ್‌.ಅಂಬೇಡ್ಕರ್‌ ಅವರು ನಮ್ಮ ದೇಶದ ರಚನಾ ಸಭೆಯಲ್ಲಿ ಮಹತ್ತ್ರವಾದ ಪಾತ್ರವಹಿಸಿದ್ದಾರೆ” ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ ದಾಸ್ ಅಭಿಪ್ರಾಯಪಡುತ್ತಾರೆ.


ಇದನ್ನೂ ಓದಿರಿ: ಅಂಬೇಡ್ಕರವರ ಬಗ್ಗೆ ಅಪಾರ ಗೌರವ, ಅಭಿಮಾನ ಇದೆ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...