Homeಕರ್ನಾಟಕಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

ಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

- Advertisement -
- Advertisement -

ರಾಯಚೂರಿನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಗಣರಾಜ್ಯೋತ್ಸವದಂದು  ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ತೆರವು ಮಾಡಿಸಿದ ವಿವಾದ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಹಿರಿಯ ಸಾಹಿತಿ ದೇವನೂರ ಮಹಾದೇವ ಮುಂದಾಗಿದ್ದಾರೆ.

“ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವದಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಯುವಂತೆ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಸೂಚಿಸಿದ ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರ ಮಹಾದೇವ ಅವರು ನಿರ್ಧಾರಿಸಿದ್ದಾರೆ” ಎಂದು ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ ಮಾಡಿದೆ.

“ರಾಯಚೂರಿನಲ್ಲಿ ನಡೆದ ಘಟನೆ ಸಂಬಂಧ ಹೈಕೋರ್ಟ್‌ನಲ್ಲಿ ವಕಾಲತ್ತು ಹಾಕಲು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವವರ್ಮ ಕುಮಾರ್‌ ಅವರ ಬಳಿ ಚರ್ಚೆ ನಡೆಸಿದ್ದೇನೆ. ಮತ್ತೆ ಯಾರಾದರೂ ವಕಾಲತ್ತು ಹಾಕುವವರಿದ್ದರೆ ಅವರನ್ನೂ ಸೇರಿಸಿಕೊಳ್ಳಿ ಎಂದು ಕೇಳಿಕೊಂಡಿದ್ದೇನೆ” ಎಂದು ದೇವನೂರರು ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.

ಅಂಬೇಡ್ಕರ್‌ ಫೋಟೋ ತೆರವು ವಿವಾದ ಭಾರಿ ಆಕ್ರೋಶಕ್ಕೆ ಕಾರಣವಾದ ಬಳಿಕ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪ್ರತಿಕ್ರಿಯೆ ನೀಡಿದ್ದರು. ’ಡಾ. ಬಿ.ಅರ್. ಅಂಬೇಡ್ಕರವರ ಫೋಟೋ ತೆಗೆದುಕೊಂಡು ಬಂದು ಇಟ್ಟಿದ್ದು, ವಾಪಸ್ ತೆಗೆದುಕೊಂಡು ಹೋಗಿರುವುದನ್ನು ನಾನು ನೋಡಿಲ್ಲ’ ಎಂದು ನ್ಯಾಯಾಧೀಶರು ಹೇಳಿದ್ದರು.

“ಅಂದು ಮುಂಜಾನೆ 8.15 ರ ಸುಮಾರಿಗೆ ನಮ್ಮ ಸಿಬ್ಬಂದಿಯವರು ನನ್ನ ಕೊಠಡಿಗೆ ಬಂದು ಕೆಲವು ವಕೀಲರು ಮಹಾತ್ಮ ಗಾಂಧಿಯವರ ಫೋಟೋ ಜೊತೆ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಸಹ ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕೆಂದು ಸರಕಾರದ ಸುತ್ತೋಲೆ ಇದೆ ಅಂತಾ ಹೇಳುತ್ತಿದ್ದಾರೆ ಅಂತಾ ತಿಳಿಸಿದರು. ಅನಂತರ ಕೆಲ ವಕೀಲರು ಬಂದು ನನಗೆ ಸರಕಾರದ ಸುತ್ತೋಲೆಯ ಪ್ರಕಾರ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕು ಅಂತಾ ಒತ್ತಾಯಿಸಿದರು. ಆಗ ನಾನು ಆ ಸುತ್ತೋಲೆಯನ್ನು ಘನ ಉಚ್ಚ ನ್ಯಾಯಾಲಯದ ಫು಼ಲ್ ಕೋರ್ಟ್ ಮುಂದೆ ಪರಿಗಣೆನೆಗೆ ಇರುವ ಕಾರಣ ನಾವು ಕಾಯಬೇಕು ‌ಎಂದು ಉಚ್ಚ ನ್ಯಾಯಾಲಯದ ವಿಲೇಖನಾಧಿಕಾರಿಗಳು ನಮ್ಮ ಲೀಡರ್ಸ್ ಗುಂಪಿನಲ್ಲಿ ತಿಳಿಸಿದ್ದಾರೆ. ಆದ ಕಾರಣ ಒತ್ತಾಯಿಸಬೇಡಿ ಎಂದು ವಿನಂತಿಸಿಕೊಂಡೆ” ಎಂದು ಹೇಳಿದ್ದರು.

ಗಾಂಧೀಜಿಯವರ ಫೋಟೋ ಜೊತೆಗೆ ಅಂಬೇಡ್ಕರ್‌ ಫೋಟೋ ಇಡಬಾರದೆಂದು ಎಲ್ಲಿಯೂ ಹೇಳಿಲ್ಲ ಎಂದು ನ್ಯಾಯಾಂಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. “ಗಣರಾಜ್ಯೋತ್ಸವ, ಸ್ವಾತಂತ್ರ್‍ಯ ದಿನಾಚರಣೆಯ ದಿನ ಯಾರ ಫೋಟೋವನ್ನು ಇಡಬಾರದು ಎಂಬ ಆದೇಶ ಎಲ್ಲಿಯೂ ಇಲ್ಲ. ಅಂತಹ ಸಂದರ್ಭದಲ್ಲಿ ಮಹಾತ್ಮ ಗಾಂಧೀಯವರ ಫೋಟೋ ಅವಕಾಶ ಇದ್ದರೆ, ಅಂಬೇಡ್ಕರ್‌ ಫೋಟೋ ಯಾಕೆ ಇಡಬಾರದು. ಬಿ.ಆರ್‌.ಅಂಬೇಡ್ಕರ್‌ ಅವರು ನಮ್ಮ ದೇಶದ ರಚನಾ ಸಭೆಯಲ್ಲಿ ಮಹತ್ತ್ರವಾದ ಪಾತ್ರವಹಿಸಿದ್ದಾರೆ” ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ ದಾಸ್ ಅಭಿಪ್ರಾಯಪಡುತ್ತಾರೆ.


ಇದನ್ನೂ ಓದಿರಿ: ಅಂಬೇಡ್ಕರವರ ಬಗ್ಗೆ ಅಪಾರ ಗೌರವ, ಅಭಿಮಾನ ಇದೆ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...