Homeಕರ್ನಾಟಕಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

- Advertisement -
- Advertisement -

“ಅಂಬೇಡ್ಕರ್ ಅವರನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಪ್ರೊಫೆಸರ್ ಆಫ್ ಪ್ರಾಕ್ಟೀಸ್‌ ಅನ್ನು ನೇಮಕ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು ಕೂಡಾ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆಯಾಗಿದೆ. ಅಂಬೇಡ್ಕರ್‌ ಅವನ್ನು ಮೊದಲನೇ ಪುಟದಲ್ಲಿ ಉಲ್ಲೇಖ ಮಾಡಿ, ಕೊನೆಯ ಪುಟದಲ್ಲಿ ಪ್ರೊಫೆಸರ್‌ ಆಫ್ ಪ್ರಾಕ್ಟೀಸ್ ಅನ್ನು ಜಾರಿಗೆ ತರುತ್ತೇವೆ ಎಂದರೆ ಎಂತಹ ಸಮಾನ ಶಿಕ್ಷಣ ಸಾಧ್ಯವಾಗುತ್ತದೆ ಎಂದು ಶಿಕ್ಷಣ ತಜ್ಞ ಶ್ರೀಪಾದ ಭಟ್ ಅವರು ಗುರುವಾರ ಕೇಳಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಮಾನ ಶಿಕ್ಷಣ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಗುರುವಾರ ಶ್ರೀಪಾದ ಭಟ್ ಅವರು ಮಾತನಾಡಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

“ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಎಂದರೆ ಕೈಗಾರಿಕೆ ಮತ್ತು ಕಾರ್ಪೋರೇಟ್‌ಗಳಲ್ಲಿ ಇರುವ ಪ್ರಮುಖ ವೃತ್ತಿಪರ ವ್ಯಕ್ತಿಗಳನ್ನು ಅಧ್ಯಾಪಕರನ್ನಾಗಿ ನೇಮಕ ಮಾಡುವುದಾಗಿದೆ. ಅವರು ಬಂದು ನಮ್ಮ ವಿದ್ಯಾರ್ಥಿಗಳಿಗೆ ಪಾಠ ಮಾಡುವ ವ್ಯವಸ್ಥೆ ಇದಾಗಿದೆ. ಸರ್ಕಾರ ಇದರಲ್ಲಿ ಮೀಸಲಾತಿಯಿದೆ ಎಂದು ಅದನ್ನು ಸಮರ್ಥನೆ ಮಾಡುತ್ತಿದೆ, ಆದರೆ ಯಾವ ಕೈಗಾರಿಕೆಯಲ್ಲಿ ಜನರಲ್ ಮ್ಯಾನೇಜರ್‌ ಸೇರಿದಂತೆ ದೊಡ್ಡ ಕಂಪನಿಯ ದೊಡ್ಡ ಹುದ್ದೆಗಳಲ್ಲಿ ದಲಿತರಿದ್ದಾರೆ” ಎಂದು ಅವರು ಕೇಳಿದರು

“ಸರ್ಕಾರಗಳು ಬಜೆಟ್ ಮಂಡಿಸಬೇಕಾದಾಗ ಪ್ರಾದೇಶಿಕ, ಸಾಮಾಜಿಕ ಅಸಮತೋಲನವನ್ನು ಗಮನಿಸಬೇಕಾಗಿತ್ತು. ಆದರೆ ಈ ಸರ್ಕಾರಗಳು ಅದನ್ನು ಮಾಡುತ್ತಿಲ್ಲ. ಈ ವರ್ಷದ ಬಜೆಟ್‌ನಲ್ಲಿ ಶಿಕ್ಷಣಕ್ಕೆ 45,800 ಕೋಟಿ ನೀಡಲಾಗಿದೆ ಎಂದು ಎಂದು ಹೇಳುತ್ತಿದ್ದಾರೆ. ಆದರೆ ಇದರಲ್ಲಿ ಉನ್ನತ ಮತ್ತು ಪ್ರಾಥಮಿಕ ಶಿಕ್ಷಣಕ್ಕೆ ಎಷ್ಟು ಎಂಬುವುದು ಅವರಿಗೇ ಗೊತ್ತಿಲ್ಲ. ಕಾಂಗ್ರೆಸ್ ಆಗಲಿ, ಇತರ ಯಾವುದೆ ಸರ್ಕಾರವಾಗಲಿ ಶಿಕ್ಷಣದ ವಿಚಾರದಲ್ಲಿ ಸಾರ್ವಜನಿಕ ಶಿಕ್ಷಣದಿಂದ ಹೊರಹೋಗುತ್ತಿವೆ.” ಎಂದು ಅವರು ಹೇಳಿದರು.

“ಶಿಕ್ಷಣಗಳು ಕಾರ್ಪೋರೇಟ್‌ ಕೈಗಳಿಗೆ ಹೋಗುತ್ತಿವೆ. ಎನ್‌ಇಪಿ ಕೂಡಾ  ಅನಧೀಕೃತವಾಗಿ ತಯಾರಾಗಿದ್ದು ಅಜೀಂ ಪ್ರೇಮ್‌ಜಿ ಯುನಿವರ್ಸಿಟಿಯಲ್ಲಾಗಿದೆ. ಶಾಲೆಗಳನ್ನು ದಾನಿಗಳು ದತ್ತು ತೆಗೆದುಕೊಳ್ಳುತ್ತಿರುವುದು ಕೂಡಾ ಅಪಾಯಕಾರಿಯಾಗಿದೆ. ಇದರ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಜನೆ ಇಲ್ಲ. ಜೊತೆಗೆ ತರಗತಿಗಳನ್ನು ಕೂಡಾ ಎನ್‌ಜಿಒಗಳು ದತ್ತು ತೆಗೆದುಕೊಳ್ಳುತ್ತಿವೆ.” ಎಂದು ಅವರು ಹೇಳಿದರು.

ಎನ್‌ಇಪಿಯನ್ನು ಕರ್ನಾಟಕ ಜಾರಿ ಮಾಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಸಂಸತ್ತಿನಲ್ಲಿ ಹೇಳಿ ಮೂರು ದಿನವಾದರೂ, ಇದರ ಬಗ್ಗೆ ಕಾಂಗ್ರೆಸ್ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಶ್ರೀಪಾದ್ ಭಟ್ ಅವರು ಹೇಳಿದ್ದಾರೆ.

ಬಡವರಿಗೆ ಬೆಂಕಿಪೊಟ್ಟಣದ ರೀತಿಯ ಮನೆ ಕೊಟ್ಟರೆ ಸಾಕು ಎಂಬ ಭಾವನೆ ಸರ್ಕಾರಕ್ಕಿದೆ: ಹೋರಾಟಗಾರ ಕುಮಾರ್ ಸಮತಳ

ಜನ ಚಳವಳಿಗಳ ಅಧಿವೇಶನದಲ್ಲಿ ‘ವಸತಿ ಮತ್ತು ಬಜೆಟ್’ ವಿಚಾರದಲ್ಲಿ ಮಾತನಾಡಿದ ಹೋರಾಟಗಾರ ಕುಮಾರ್ ಸಮತಳ, “ವಸತಿ ಮತ್ತು ಭೂಮಿ ಕೊಡುವುದು ನಮ್ಮ ಆದ್ಯತೆ ಎಂದು ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕರ ಹೇಳಿತ್ತು. ಆದರೆ ಈಗಿನ ಬಜೆಟ್‌ನಲ್ಲಿ ಈ ಭಗ್ಗೆ ಯಾವುದೇ ಘೋಷಣೆಯಿಲ್ಲ. ಜೊತೆಗೆ, ಬಡವರಿಗೆ ನೀಡುವ ವಸತಿ ಎಂದರೆ ಬೆಂಕಿಪೊಟ್ಟಣದ ರೀತಿಯಲ್ಲಿ ಒಂದರ ಮೇಲೆ ಒಂದು ಮನೆ ಕೊಟ್ಟರೆ ಸಾಕು ಎಂಬ ಭಾವನೆಯಿದೆ. ಅವರಿಗೆ ಖಾಸಗಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ.” ಎಂದು ಹೇಳಿದರು.

“ವಸತಿ ಸಮಸ್ಯೆ ಒಂದು ಸಾಮಾಜಿಕ ಸಮಸ್ಯೆಯಾಗಿದೆ. ಪ್ರತಿ ಪಂಚಾಯತ್‌ನಲ್ಲೂ ಮುಂದಿನ 30 ವರುಷಕ್ಕೆ ವಸತಿಗೆ ಎಂದು ಭೂಮಿ ಮೀಸಲು ಇಡಬೇಕು. ಸರ್ಕಾರವು ಗೋಮಾಳದ ಮತ್ತು ಸರ್ಕಾರಿ ಭೂಮಿಯನ್ನು ಖಾಸಗಿಗೆ ಮತ್ತು ಮಠಗಳಿಗೆ ನೀಡುತ್ತದೆ. ಒಂದು ವೇಳೆ ಭೂಮಿ ಕೊಟ್ಟರೆ ಊರಿನ ಹೊರಗೆ ಕೊಡುತ್ತದೆ. ಅಲ್ಲಿ ವಾಸ ಮಾಡಲು ಕೂಡಾ ಸಾಧ್ಯವಿಲ್ಲ. ಬಡವರಿಗೆ ನೀಡುವ ಮನೆ 20/40 ಆದರೆ ಸಾಕು ಎನ್ನುವ ಸರ್ಕಾರದ ಶಾಸಕರು, ತಮ್ಮ ಮನೆಗಳನ್ನು ನಾಲ್ಕು ಎಕರೆಗಳಲ್ಲಿ ಕಟ್ಟಿಕೊಂಡಿರುತ್ತಾರೆ.” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...