Homeಕರ್ನಾಟಕಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

- Advertisement -
- Advertisement -

“ಅಂಬೇಡ್ಕರ್ ಅವರನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಪ್ರೊಫೆಸರ್ ಆಫ್ ಪ್ರಾಕ್ಟೀಸ್‌ ಅನ್ನು ನೇಮಕ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು ಕೂಡಾ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆಯಾಗಿದೆ. ಅಂಬೇಡ್ಕರ್‌ ಅವನ್ನು ಮೊದಲನೇ ಪುಟದಲ್ಲಿ ಉಲ್ಲೇಖ ಮಾಡಿ, ಕೊನೆಯ ಪುಟದಲ್ಲಿ ಪ್ರೊಫೆಸರ್‌ ಆಫ್ ಪ್ರಾಕ್ಟೀಸ್ ಅನ್ನು ಜಾರಿಗೆ ತರುತ್ತೇವೆ ಎಂದರೆ ಎಂತಹ ಸಮಾನ ಶಿಕ್ಷಣ ಸಾಧ್ಯವಾಗುತ್ತದೆ ಎಂದು ಶಿಕ್ಷಣ ತಜ್ಞ ಶ್ರೀಪಾದ ಭಟ್ ಅವರು ಗುರುವಾರ ಕೇಳಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಮಾನ ಶಿಕ್ಷಣ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಗುರುವಾರ ಶ್ರೀಪಾದ ಭಟ್ ಅವರು ಮಾತನಾಡಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

“ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಎಂದರೆ ಕೈಗಾರಿಕೆ ಮತ್ತು ಕಾರ್ಪೋರೇಟ್‌ಗಳಲ್ಲಿ ಇರುವ ಪ್ರಮುಖ ವೃತ್ತಿಪರ ವ್ಯಕ್ತಿಗಳನ್ನು ಅಧ್ಯಾಪಕರನ್ನಾಗಿ ನೇಮಕ ಮಾಡುವುದಾಗಿದೆ. ಅವರು ಬಂದು ನಮ್ಮ ವಿದ್ಯಾರ್ಥಿಗಳಿಗೆ ಪಾಠ ಮಾಡುವ ವ್ಯವಸ್ಥೆ ಇದಾಗಿದೆ. ಸರ್ಕಾರ ಇದರಲ್ಲಿ ಮೀಸಲಾತಿಯಿದೆ ಎಂದು ಅದನ್ನು ಸಮರ್ಥನೆ ಮಾಡುತ್ತಿದೆ, ಆದರೆ ಯಾವ ಕೈಗಾರಿಕೆಯಲ್ಲಿ ಜನರಲ್ ಮ್ಯಾನೇಜರ್‌ ಸೇರಿದಂತೆ ದೊಡ್ಡ ಕಂಪನಿಯ ದೊಡ್ಡ ಹುದ್ದೆಗಳಲ್ಲಿ ದಲಿತರಿದ್ದಾರೆ” ಎಂದು ಅವರು ಕೇಳಿದರು

“ಸರ್ಕಾರಗಳು ಬಜೆಟ್ ಮಂಡಿಸಬೇಕಾದಾಗ ಪ್ರಾದೇಶಿಕ, ಸಾಮಾಜಿಕ ಅಸಮತೋಲನವನ್ನು ಗಮನಿಸಬೇಕಾಗಿತ್ತು. ಆದರೆ ಈ ಸರ್ಕಾರಗಳು ಅದನ್ನು ಮಾಡುತ್ತಿಲ್ಲ. ಈ ವರ್ಷದ ಬಜೆಟ್‌ನಲ್ಲಿ ಶಿಕ್ಷಣಕ್ಕೆ 45,800 ಕೋಟಿ ನೀಡಲಾಗಿದೆ ಎಂದು ಎಂದು ಹೇಳುತ್ತಿದ್ದಾರೆ. ಆದರೆ ಇದರಲ್ಲಿ ಉನ್ನತ ಮತ್ತು ಪ್ರಾಥಮಿಕ ಶಿಕ್ಷಣಕ್ಕೆ ಎಷ್ಟು ಎಂಬುವುದು ಅವರಿಗೇ ಗೊತ್ತಿಲ್ಲ. ಕಾಂಗ್ರೆಸ್ ಆಗಲಿ, ಇತರ ಯಾವುದೆ ಸರ್ಕಾರವಾಗಲಿ ಶಿಕ್ಷಣದ ವಿಚಾರದಲ್ಲಿ ಸಾರ್ವಜನಿಕ ಶಿಕ್ಷಣದಿಂದ ಹೊರಹೋಗುತ್ತಿವೆ.” ಎಂದು ಅವರು ಹೇಳಿದರು.

“ಶಿಕ್ಷಣಗಳು ಕಾರ್ಪೋರೇಟ್‌ ಕೈಗಳಿಗೆ ಹೋಗುತ್ತಿವೆ. ಎನ್‌ಇಪಿ ಕೂಡಾ  ಅನಧೀಕೃತವಾಗಿ ತಯಾರಾಗಿದ್ದು ಅಜೀಂ ಪ್ರೇಮ್‌ಜಿ ಯುನಿವರ್ಸಿಟಿಯಲ್ಲಾಗಿದೆ. ಶಾಲೆಗಳನ್ನು ದಾನಿಗಳು ದತ್ತು ತೆಗೆದುಕೊಳ್ಳುತ್ತಿರುವುದು ಕೂಡಾ ಅಪಾಯಕಾರಿಯಾಗಿದೆ. ಇದರ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಜನೆ ಇಲ್ಲ. ಜೊತೆಗೆ ತರಗತಿಗಳನ್ನು ಕೂಡಾ ಎನ್‌ಜಿಒಗಳು ದತ್ತು ತೆಗೆದುಕೊಳ್ಳುತ್ತಿವೆ.” ಎಂದು ಅವರು ಹೇಳಿದರು.

ಎನ್‌ಇಪಿಯನ್ನು ಕರ್ನಾಟಕ ಜಾರಿ ಮಾಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಸಂಸತ್ತಿನಲ್ಲಿ ಹೇಳಿ ಮೂರು ದಿನವಾದರೂ, ಇದರ ಬಗ್ಗೆ ಕಾಂಗ್ರೆಸ್ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಶ್ರೀಪಾದ್ ಭಟ್ ಅವರು ಹೇಳಿದ್ದಾರೆ.

ಬಡವರಿಗೆ ಬೆಂಕಿಪೊಟ್ಟಣದ ರೀತಿಯ ಮನೆ ಕೊಟ್ಟರೆ ಸಾಕು ಎಂಬ ಭಾವನೆ ಸರ್ಕಾರಕ್ಕಿದೆ: ಹೋರಾಟಗಾರ ಕುಮಾರ್ ಸಮತಳ

ಜನ ಚಳವಳಿಗಳ ಅಧಿವೇಶನದಲ್ಲಿ ‘ವಸತಿ ಮತ್ತು ಬಜೆಟ್’ ವಿಚಾರದಲ್ಲಿ ಮಾತನಾಡಿದ ಹೋರಾಟಗಾರ ಕುಮಾರ್ ಸಮತಳ, “ವಸತಿ ಮತ್ತು ಭೂಮಿ ಕೊಡುವುದು ನಮ್ಮ ಆದ್ಯತೆ ಎಂದು ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕರ ಹೇಳಿತ್ತು. ಆದರೆ ಈಗಿನ ಬಜೆಟ್‌ನಲ್ಲಿ ಈ ಭಗ್ಗೆ ಯಾವುದೇ ಘೋಷಣೆಯಿಲ್ಲ. ಜೊತೆಗೆ, ಬಡವರಿಗೆ ನೀಡುವ ವಸತಿ ಎಂದರೆ ಬೆಂಕಿಪೊಟ್ಟಣದ ರೀತಿಯಲ್ಲಿ ಒಂದರ ಮೇಲೆ ಒಂದು ಮನೆ ಕೊಟ್ಟರೆ ಸಾಕು ಎಂಬ ಭಾವನೆಯಿದೆ. ಅವರಿಗೆ ಖಾಸಗಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ.” ಎಂದು ಹೇಳಿದರು.

“ವಸತಿ ಸಮಸ್ಯೆ ಒಂದು ಸಾಮಾಜಿಕ ಸಮಸ್ಯೆಯಾಗಿದೆ. ಪ್ರತಿ ಪಂಚಾಯತ್‌ನಲ್ಲೂ ಮುಂದಿನ 30 ವರುಷಕ್ಕೆ ವಸತಿಗೆ ಎಂದು ಭೂಮಿ ಮೀಸಲು ಇಡಬೇಕು. ಸರ್ಕಾರವು ಗೋಮಾಳದ ಮತ್ತು ಸರ್ಕಾರಿ ಭೂಮಿಯನ್ನು ಖಾಸಗಿಗೆ ಮತ್ತು ಮಠಗಳಿಗೆ ನೀಡುತ್ತದೆ. ಒಂದು ವೇಳೆ ಭೂಮಿ ಕೊಟ್ಟರೆ ಊರಿನ ಹೊರಗೆ ಕೊಡುತ್ತದೆ. ಅಲ್ಲಿ ವಾಸ ಮಾಡಲು ಕೂಡಾ ಸಾಧ್ಯವಿಲ್ಲ. ಬಡವರಿಗೆ ನೀಡುವ ಮನೆ 20/40 ಆದರೆ ಸಾಕು ಎನ್ನುವ ಸರ್ಕಾರದ ಶಾಸಕರು, ತಮ್ಮ ಮನೆಗಳನ್ನು ನಾಲ್ಕು ಎಕರೆಗಳಲ್ಲಿ ಕಟ್ಟಿಕೊಂಡಿರುತ್ತಾರೆ.” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...