Homeಕರ್ನಾಟಕಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

- Advertisement -
- Advertisement -

“ಅಂಬೇಡ್ಕರ್ ಅವರನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಪ್ರೊಫೆಸರ್ ಆಫ್ ಪ್ರಾಕ್ಟೀಸ್‌ ಅನ್ನು ನೇಮಕ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು ಕೂಡಾ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆಯಾಗಿದೆ. ಅಂಬೇಡ್ಕರ್‌ ಅವನ್ನು ಮೊದಲನೇ ಪುಟದಲ್ಲಿ ಉಲ್ಲೇಖ ಮಾಡಿ, ಕೊನೆಯ ಪುಟದಲ್ಲಿ ಪ್ರೊಫೆಸರ್‌ ಆಫ್ ಪ್ರಾಕ್ಟೀಸ್ ಅನ್ನು ಜಾರಿಗೆ ತರುತ್ತೇವೆ ಎಂದರೆ ಎಂತಹ ಸಮಾನ ಶಿಕ್ಷಣ ಸಾಧ್ಯವಾಗುತ್ತದೆ ಎಂದು ಶಿಕ್ಷಣ ತಜ್ಞ ಶ್ರೀಪಾದ ಭಟ್ ಅವರು ಗುರುವಾರ ಕೇಳಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಮಾನ ಶಿಕ್ಷಣ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಗುರುವಾರ ಶ್ರೀಪಾದ ಭಟ್ ಅವರು ಮಾತನಾಡಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

“ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಎಂದರೆ ಕೈಗಾರಿಕೆ ಮತ್ತು ಕಾರ್ಪೋರೇಟ್‌ಗಳಲ್ಲಿ ಇರುವ ಪ್ರಮುಖ ವೃತ್ತಿಪರ ವ್ಯಕ್ತಿಗಳನ್ನು ಅಧ್ಯಾಪಕರನ್ನಾಗಿ ನೇಮಕ ಮಾಡುವುದಾಗಿದೆ. ಅವರು ಬಂದು ನಮ್ಮ ವಿದ್ಯಾರ್ಥಿಗಳಿಗೆ ಪಾಠ ಮಾಡುವ ವ್ಯವಸ್ಥೆ ಇದಾಗಿದೆ. ಸರ್ಕಾರ ಇದರಲ್ಲಿ ಮೀಸಲಾತಿಯಿದೆ ಎಂದು ಅದನ್ನು ಸಮರ್ಥನೆ ಮಾಡುತ್ತಿದೆ, ಆದರೆ ಯಾವ ಕೈಗಾರಿಕೆಯಲ್ಲಿ ಜನರಲ್ ಮ್ಯಾನೇಜರ್‌ ಸೇರಿದಂತೆ ದೊಡ್ಡ ಕಂಪನಿಯ ದೊಡ್ಡ ಹುದ್ದೆಗಳಲ್ಲಿ ದಲಿತರಿದ್ದಾರೆ” ಎಂದು ಅವರು ಕೇಳಿದರು

“ಸರ್ಕಾರಗಳು ಬಜೆಟ್ ಮಂಡಿಸಬೇಕಾದಾಗ ಪ್ರಾದೇಶಿಕ, ಸಾಮಾಜಿಕ ಅಸಮತೋಲನವನ್ನು ಗಮನಿಸಬೇಕಾಗಿತ್ತು. ಆದರೆ ಈ ಸರ್ಕಾರಗಳು ಅದನ್ನು ಮಾಡುತ್ತಿಲ್ಲ. ಈ ವರ್ಷದ ಬಜೆಟ್‌ನಲ್ಲಿ ಶಿಕ್ಷಣಕ್ಕೆ 45,800 ಕೋಟಿ ನೀಡಲಾಗಿದೆ ಎಂದು ಎಂದು ಹೇಳುತ್ತಿದ್ದಾರೆ. ಆದರೆ ಇದರಲ್ಲಿ ಉನ್ನತ ಮತ್ತು ಪ್ರಾಥಮಿಕ ಶಿಕ್ಷಣಕ್ಕೆ ಎಷ್ಟು ಎಂಬುವುದು ಅವರಿಗೇ ಗೊತ್ತಿಲ್ಲ. ಕಾಂಗ್ರೆಸ್ ಆಗಲಿ, ಇತರ ಯಾವುದೆ ಸರ್ಕಾರವಾಗಲಿ ಶಿಕ್ಷಣದ ವಿಚಾರದಲ್ಲಿ ಸಾರ್ವಜನಿಕ ಶಿಕ್ಷಣದಿಂದ ಹೊರಹೋಗುತ್ತಿವೆ.” ಎಂದು ಅವರು ಹೇಳಿದರು.

“ಶಿಕ್ಷಣಗಳು ಕಾರ್ಪೋರೇಟ್‌ ಕೈಗಳಿಗೆ ಹೋಗುತ್ತಿವೆ. ಎನ್‌ಇಪಿ ಕೂಡಾ  ಅನಧೀಕೃತವಾಗಿ ತಯಾರಾಗಿದ್ದು ಅಜೀಂ ಪ್ರೇಮ್‌ಜಿ ಯುನಿವರ್ಸಿಟಿಯಲ್ಲಾಗಿದೆ. ಶಾಲೆಗಳನ್ನು ದಾನಿಗಳು ದತ್ತು ತೆಗೆದುಕೊಳ್ಳುತ್ತಿರುವುದು ಕೂಡಾ ಅಪಾಯಕಾರಿಯಾಗಿದೆ. ಇದರ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಜನೆ ಇಲ್ಲ. ಜೊತೆಗೆ ತರಗತಿಗಳನ್ನು ಕೂಡಾ ಎನ್‌ಜಿಒಗಳು ದತ್ತು ತೆಗೆದುಕೊಳ್ಳುತ್ತಿವೆ.” ಎಂದು ಅವರು ಹೇಳಿದರು.

ಎನ್‌ಇಪಿಯನ್ನು ಕರ್ನಾಟಕ ಜಾರಿ ಮಾಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಸಂಸತ್ತಿನಲ್ಲಿ ಹೇಳಿ ಮೂರು ದಿನವಾದರೂ, ಇದರ ಬಗ್ಗೆ ಕಾಂಗ್ರೆಸ್ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಶ್ರೀಪಾದ್ ಭಟ್ ಅವರು ಹೇಳಿದ್ದಾರೆ.

ಬಡವರಿಗೆ ಬೆಂಕಿಪೊಟ್ಟಣದ ರೀತಿಯ ಮನೆ ಕೊಟ್ಟರೆ ಸಾಕು ಎಂಬ ಭಾವನೆ ಸರ್ಕಾರಕ್ಕಿದೆ: ಹೋರಾಟಗಾರ ಕುಮಾರ್ ಸಮತಳ

ಜನ ಚಳವಳಿಗಳ ಅಧಿವೇಶನದಲ್ಲಿ ‘ವಸತಿ ಮತ್ತು ಬಜೆಟ್’ ವಿಚಾರದಲ್ಲಿ ಮಾತನಾಡಿದ ಹೋರಾಟಗಾರ ಕುಮಾರ್ ಸಮತಳ, “ವಸತಿ ಮತ್ತು ಭೂಮಿ ಕೊಡುವುದು ನಮ್ಮ ಆದ್ಯತೆ ಎಂದು ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕರ ಹೇಳಿತ್ತು. ಆದರೆ ಈಗಿನ ಬಜೆಟ್‌ನಲ್ಲಿ ಈ ಭಗ್ಗೆ ಯಾವುದೇ ಘೋಷಣೆಯಿಲ್ಲ. ಜೊತೆಗೆ, ಬಡವರಿಗೆ ನೀಡುವ ವಸತಿ ಎಂದರೆ ಬೆಂಕಿಪೊಟ್ಟಣದ ರೀತಿಯಲ್ಲಿ ಒಂದರ ಮೇಲೆ ಒಂದು ಮನೆ ಕೊಟ್ಟರೆ ಸಾಕು ಎಂಬ ಭಾವನೆಯಿದೆ. ಅವರಿಗೆ ಖಾಸಗಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ.” ಎಂದು ಹೇಳಿದರು.

“ವಸತಿ ಸಮಸ್ಯೆ ಒಂದು ಸಾಮಾಜಿಕ ಸಮಸ್ಯೆಯಾಗಿದೆ. ಪ್ರತಿ ಪಂಚಾಯತ್‌ನಲ್ಲೂ ಮುಂದಿನ 30 ವರುಷಕ್ಕೆ ವಸತಿಗೆ ಎಂದು ಭೂಮಿ ಮೀಸಲು ಇಡಬೇಕು. ಸರ್ಕಾರವು ಗೋಮಾಳದ ಮತ್ತು ಸರ್ಕಾರಿ ಭೂಮಿಯನ್ನು ಖಾಸಗಿಗೆ ಮತ್ತು ಮಠಗಳಿಗೆ ನೀಡುತ್ತದೆ. ಒಂದು ವೇಳೆ ಭೂಮಿ ಕೊಟ್ಟರೆ ಊರಿನ ಹೊರಗೆ ಕೊಡುತ್ತದೆ. ಅಲ್ಲಿ ವಾಸ ಮಾಡಲು ಕೂಡಾ ಸಾಧ್ಯವಿಲ್ಲ. ಬಡವರಿಗೆ ನೀಡುವ ಮನೆ 20/40 ಆದರೆ ಸಾಕು ಎನ್ನುವ ಸರ್ಕಾರದ ಶಾಸಕರು, ತಮ್ಮ ಮನೆಗಳನ್ನು ನಾಲ್ಕು ಎಕರೆಗಳಲ್ಲಿ ಕಟ್ಟಿಕೊಂಡಿರುತ್ತಾರೆ.” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...