Homeಕರ್ನಾಟಕಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

- Advertisement -
- Advertisement -

“ಅಂಬೇಡ್ಕರ್ ಅವರನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಪ್ರೊಫೆಸರ್ ಆಫ್ ಪ್ರಾಕ್ಟೀಸ್‌ ಅನ್ನು ನೇಮಕ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು ಕೂಡಾ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆಯಾಗಿದೆ. ಅಂಬೇಡ್ಕರ್‌ ಅವನ್ನು ಮೊದಲನೇ ಪುಟದಲ್ಲಿ ಉಲ್ಲೇಖ ಮಾಡಿ, ಕೊನೆಯ ಪುಟದಲ್ಲಿ ಪ್ರೊಫೆಸರ್‌ ಆಫ್ ಪ್ರಾಕ್ಟೀಸ್ ಅನ್ನು ಜಾರಿಗೆ ತರುತ್ತೇವೆ ಎಂದರೆ ಎಂತಹ ಸಮಾನ ಶಿಕ್ಷಣ ಸಾಧ್ಯವಾಗುತ್ತದೆ ಎಂದು ಶಿಕ್ಷಣ ತಜ್ಞ ಶ್ರೀಪಾದ ಭಟ್ ಅವರು ಗುರುವಾರ ಕೇಳಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಮಾನ ಶಿಕ್ಷಣ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಗುರುವಾರ ಶ್ರೀಪಾದ ಭಟ್ ಅವರು ಮಾತನಾಡಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

“ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಎಂದರೆ ಕೈಗಾರಿಕೆ ಮತ್ತು ಕಾರ್ಪೋರೇಟ್‌ಗಳಲ್ಲಿ ಇರುವ ಪ್ರಮುಖ ವೃತ್ತಿಪರ ವ್ಯಕ್ತಿಗಳನ್ನು ಅಧ್ಯಾಪಕರನ್ನಾಗಿ ನೇಮಕ ಮಾಡುವುದಾಗಿದೆ. ಅವರು ಬಂದು ನಮ್ಮ ವಿದ್ಯಾರ್ಥಿಗಳಿಗೆ ಪಾಠ ಮಾಡುವ ವ್ಯವಸ್ಥೆ ಇದಾಗಿದೆ. ಸರ್ಕಾರ ಇದರಲ್ಲಿ ಮೀಸಲಾತಿಯಿದೆ ಎಂದು ಅದನ್ನು ಸಮರ್ಥನೆ ಮಾಡುತ್ತಿದೆ, ಆದರೆ ಯಾವ ಕೈಗಾರಿಕೆಯಲ್ಲಿ ಜನರಲ್ ಮ್ಯಾನೇಜರ್‌ ಸೇರಿದಂತೆ ದೊಡ್ಡ ಕಂಪನಿಯ ದೊಡ್ಡ ಹುದ್ದೆಗಳಲ್ಲಿ ದಲಿತರಿದ್ದಾರೆ” ಎಂದು ಅವರು ಕೇಳಿದರು

“ಸರ್ಕಾರಗಳು ಬಜೆಟ್ ಮಂಡಿಸಬೇಕಾದಾಗ ಪ್ರಾದೇಶಿಕ, ಸಾಮಾಜಿಕ ಅಸಮತೋಲನವನ್ನು ಗಮನಿಸಬೇಕಾಗಿತ್ತು. ಆದರೆ ಈ ಸರ್ಕಾರಗಳು ಅದನ್ನು ಮಾಡುತ್ತಿಲ್ಲ. ಈ ವರ್ಷದ ಬಜೆಟ್‌ನಲ್ಲಿ ಶಿಕ್ಷಣಕ್ಕೆ 45,800 ಕೋಟಿ ನೀಡಲಾಗಿದೆ ಎಂದು ಎಂದು ಹೇಳುತ್ತಿದ್ದಾರೆ. ಆದರೆ ಇದರಲ್ಲಿ ಉನ್ನತ ಮತ್ತು ಪ್ರಾಥಮಿಕ ಶಿಕ್ಷಣಕ್ಕೆ ಎಷ್ಟು ಎಂಬುವುದು ಅವರಿಗೇ ಗೊತ್ತಿಲ್ಲ. ಕಾಂಗ್ರೆಸ್ ಆಗಲಿ, ಇತರ ಯಾವುದೆ ಸರ್ಕಾರವಾಗಲಿ ಶಿಕ್ಷಣದ ವಿಚಾರದಲ್ಲಿ ಸಾರ್ವಜನಿಕ ಶಿಕ್ಷಣದಿಂದ ಹೊರಹೋಗುತ್ತಿವೆ.” ಎಂದು ಅವರು ಹೇಳಿದರು.

“ಶಿಕ್ಷಣಗಳು ಕಾರ್ಪೋರೇಟ್‌ ಕೈಗಳಿಗೆ ಹೋಗುತ್ತಿವೆ. ಎನ್‌ಇಪಿ ಕೂಡಾ  ಅನಧೀಕೃತವಾಗಿ ತಯಾರಾಗಿದ್ದು ಅಜೀಂ ಪ್ರೇಮ್‌ಜಿ ಯುನಿವರ್ಸಿಟಿಯಲ್ಲಾಗಿದೆ. ಶಾಲೆಗಳನ್ನು ದಾನಿಗಳು ದತ್ತು ತೆಗೆದುಕೊಳ್ಳುತ್ತಿರುವುದು ಕೂಡಾ ಅಪಾಯಕಾರಿಯಾಗಿದೆ. ಇದರ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಜನೆ ಇಲ್ಲ. ಜೊತೆಗೆ ತರಗತಿಗಳನ್ನು ಕೂಡಾ ಎನ್‌ಜಿಒಗಳು ದತ್ತು ತೆಗೆದುಕೊಳ್ಳುತ್ತಿವೆ.” ಎಂದು ಅವರು ಹೇಳಿದರು.

ಎನ್‌ಇಪಿಯನ್ನು ಕರ್ನಾಟಕ ಜಾರಿ ಮಾಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಸಂಸತ್ತಿನಲ್ಲಿ ಹೇಳಿ ಮೂರು ದಿನವಾದರೂ, ಇದರ ಬಗ್ಗೆ ಕಾಂಗ್ರೆಸ್ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಶ್ರೀಪಾದ್ ಭಟ್ ಅವರು ಹೇಳಿದ್ದಾರೆ.

ಬಡವರಿಗೆ ಬೆಂಕಿಪೊಟ್ಟಣದ ರೀತಿಯ ಮನೆ ಕೊಟ್ಟರೆ ಸಾಕು ಎಂಬ ಭಾವನೆ ಸರ್ಕಾರಕ್ಕಿದೆ: ಹೋರಾಟಗಾರ ಕುಮಾರ್ ಸಮತಳ

ಜನ ಚಳವಳಿಗಳ ಅಧಿವೇಶನದಲ್ಲಿ ‘ವಸತಿ ಮತ್ತು ಬಜೆಟ್’ ವಿಚಾರದಲ್ಲಿ ಮಾತನಾಡಿದ ಹೋರಾಟಗಾರ ಕುಮಾರ್ ಸಮತಳ, “ವಸತಿ ಮತ್ತು ಭೂಮಿ ಕೊಡುವುದು ನಮ್ಮ ಆದ್ಯತೆ ಎಂದು ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕರ ಹೇಳಿತ್ತು. ಆದರೆ ಈಗಿನ ಬಜೆಟ್‌ನಲ್ಲಿ ಈ ಭಗ್ಗೆ ಯಾವುದೇ ಘೋಷಣೆಯಿಲ್ಲ. ಜೊತೆಗೆ, ಬಡವರಿಗೆ ನೀಡುವ ವಸತಿ ಎಂದರೆ ಬೆಂಕಿಪೊಟ್ಟಣದ ರೀತಿಯಲ್ಲಿ ಒಂದರ ಮೇಲೆ ಒಂದು ಮನೆ ಕೊಟ್ಟರೆ ಸಾಕು ಎಂಬ ಭಾವನೆಯಿದೆ. ಅವರಿಗೆ ಖಾಸಗಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ.” ಎಂದು ಹೇಳಿದರು.

“ವಸತಿ ಸಮಸ್ಯೆ ಒಂದು ಸಾಮಾಜಿಕ ಸಮಸ್ಯೆಯಾಗಿದೆ. ಪ್ರತಿ ಪಂಚಾಯತ್‌ನಲ್ಲೂ ಮುಂದಿನ 30 ವರುಷಕ್ಕೆ ವಸತಿಗೆ ಎಂದು ಭೂಮಿ ಮೀಸಲು ಇಡಬೇಕು. ಸರ್ಕಾರವು ಗೋಮಾಳದ ಮತ್ತು ಸರ್ಕಾರಿ ಭೂಮಿಯನ್ನು ಖಾಸಗಿಗೆ ಮತ್ತು ಮಠಗಳಿಗೆ ನೀಡುತ್ತದೆ. ಒಂದು ವೇಳೆ ಭೂಮಿ ಕೊಟ್ಟರೆ ಊರಿನ ಹೊರಗೆ ಕೊಡುತ್ತದೆ. ಅಲ್ಲಿ ವಾಸ ಮಾಡಲು ಕೂಡಾ ಸಾಧ್ಯವಿಲ್ಲ. ಬಡವರಿಗೆ ನೀಡುವ ಮನೆ 20/40 ಆದರೆ ಸಾಕು ಎನ್ನುವ ಸರ್ಕಾರದ ಶಾಸಕರು, ತಮ್ಮ ಮನೆಗಳನ್ನು ನಾಲ್ಕು ಎಕರೆಗಳಲ್ಲಿ ಕಟ್ಟಿಕೊಂಡಿರುತ್ತಾರೆ.” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...