Homeಕರ್ನಾಟಕಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

- Advertisement -
- Advertisement -

“ಅಂಬೇಡ್ಕರ್ ಅವರನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಪ್ರೊಫೆಸರ್ ಆಫ್ ಪ್ರಾಕ್ಟೀಸ್‌ ಅನ್ನು ನೇಮಕ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು ಕೂಡಾ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆಯಾಗಿದೆ. ಅಂಬೇಡ್ಕರ್‌ ಅವನ್ನು ಮೊದಲನೇ ಪುಟದಲ್ಲಿ ಉಲ್ಲೇಖ ಮಾಡಿ, ಕೊನೆಯ ಪುಟದಲ್ಲಿ ಪ್ರೊಫೆಸರ್‌ ಆಫ್ ಪ್ರಾಕ್ಟೀಸ್ ಅನ್ನು ಜಾರಿಗೆ ತರುತ್ತೇವೆ ಎಂದರೆ ಎಂತಹ ಸಮಾನ ಶಿಕ್ಷಣ ಸಾಧ್ಯವಾಗುತ್ತದೆ ಎಂದು ಶಿಕ್ಷಣ ತಜ್ಞ ಶ್ರೀಪಾದ ಭಟ್ ಅವರು ಗುರುವಾರ ಕೇಳಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಮಾನ ಶಿಕ್ಷಣ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಗುರುವಾರ ಶ್ರೀಪಾದ ಭಟ್ ಅವರು ಮಾತನಾಡಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

“ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಎಂದರೆ ಕೈಗಾರಿಕೆ ಮತ್ತು ಕಾರ್ಪೋರೇಟ್‌ಗಳಲ್ಲಿ ಇರುವ ಪ್ರಮುಖ ವೃತ್ತಿಪರ ವ್ಯಕ್ತಿಗಳನ್ನು ಅಧ್ಯಾಪಕರನ್ನಾಗಿ ನೇಮಕ ಮಾಡುವುದಾಗಿದೆ. ಅವರು ಬಂದು ನಮ್ಮ ವಿದ್ಯಾರ್ಥಿಗಳಿಗೆ ಪಾಠ ಮಾಡುವ ವ್ಯವಸ್ಥೆ ಇದಾಗಿದೆ. ಸರ್ಕಾರ ಇದರಲ್ಲಿ ಮೀಸಲಾತಿಯಿದೆ ಎಂದು ಅದನ್ನು ಸಮರ್ಥನೆ ಮಾಡುತ್ತಿದೆ, ಆದರೆ ಯಾವ ಕೈಗಾರಿಕೆಯಲ್ಲಿ ಜನರಲ್ ಮ್ಯಾನೇಜರ್‌ ಸೇರಿದಂತೆ ದೊಡ್ಡ ಕಂಪನಿಯ ದೊಡ್ಡ ಹುದ್ದೆಗಳಲ್ಲಿ ದಲಿತರಿದ್ದಾರೆ” ಎಂದು ಅವರು ಕೇಳಿದರು

“ಸರ್ಕಾರಗಳು ಬಜೆಟ್ ಮಂಡಿಸಬೇಕಾದಾಗ ಪ್ರಾದೇಶಿಕ, ಸಾಮಾಜಿಕ ಅಸಮತೋಲನವನ್ನು ಗಮನಿಸಬೇಕಾಗಿತ್ತು. ಆದರೆ ಈ ಸರ್ಕಾರಗಳು ಅದನ್ನು ಮಾಡುತ್ತಿಲ್ಲ. ಈ ವರ್ಷದ ಬಜೆಟ್‌ನಲ್ಲಿ ಶಿಕ್ಷಣಕ್ಕೆ 45,800 ಕೋಟಿ ನೀಡಲಾಗಿದೆ ಎಂದು ಎಂದು ಹೇಳುತ್ತಿದ್ದಾರೆ. ಆದರೆ ಇದರಲ್ಲಿ ಉನ್ನತ ಮತ್ತು ಪ್ರಾಥಮಿಕ ಶಿಕ್ಷಣಕ್ಕೆ ಎಷ್ಟು ಎಂಬುವುದು ಅವರಿಗೇ ಗೊತ್ತಿಲ್ಲ. ಕಾಂಗ್ರೆಸ್ ಆಗಲಿ, ಇತರ ಯಾವುದೆ ಸರ್ಕಾರವಾಗಲಿ ಶಿಕ್ಷಣದ ವಿಚಾರದಲ್ಲಿ ಸಾರ್ವಜನಿಕ ಶಿಕ್ಷಣದಿಂದ ಹೊರಹೋಗುತ್ತಿವೆ.” ಎಂದು ಅವರು ಹೇಳಿದರು.

“ಶಿಕ್ಷಣಗಳು ಕಾರ್ಪೋರೇಟ್‌ ಕೈಗಳಿಗೆ ಹೋಗುತ್ತಿವೆ. ಎನ್‌ಇಪಿ ಕೂಡಾ  ಅನಧೀಕೃತವಾಗಿ ತಯಾರಾಗಿದ್ದು ಅಜೀಂ ಪ್ರೇಮ್‌ಜಿ ಯುನಿವರ್ಸಿಟಿಯಲ್ಲಾಗಿದೆ. ಶಾಲೆಗಳನ್ನು ದಾನಿಗಳು ದತ್ತು ತೆಗೆದುಕೊಳ್ಳುತ್ತಿರುವುದು ಕೂಡಾ ಅಪಾಯಕಾರಿಯಾಗಿದೆ. ಇದರ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಜನೆ ಇಲ್ಲ. ಜೊತೆಗೆ ತರಗತಿಗಳನ್ನು ಕೂಡಾ ಎನ್‌ಜಿಒಗಳು ದತ್ತು ತೆಗೆದುಕೊಳ್ಳುತ್ತಿವೆ.” ಎಂದು ಅವರು ಹೇಳಿದರು.

ಎನ್‌ಇಪಿಯನ್ನು ಕರ್ನಾಟಕ ಜಾರಿ ಮಾಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಸಂಸತ್ತಿನಲ್ಲಿ ಹೇಳಿ ಮೂರು ದಿನವಾದರೂ, ಇದರ ಬಗ್ಗೆ ಕಾಂಗ್ರೆಸ್ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಶ್ರೀಪಾದ್ ಭಟ್ ಅವರು ಹೇಳಿದ್ದಾರೆ.

ಬಡವರಿಗೆ ಬೆಂಕಿಪೊಟ್ಟಣದ ರೀತಿಯ ಮನೆ ಕೊಟ್ಟರೆ ಸಾಕು ಎಂಬ ಭಾವನೆ ಸರ್ಕಾರಕ್ಕಿದೆ: ಹೋರಾಟಗಾರ ಕುಮಾರ್ ಸಮತಳ

ಜನ ಚಳವಳಿಗಳ ಅಧಿವೇಶನದಲ್ಲಿ ‘ವಸತಿ ಮತ್ತು ಬಜೆಟ್’ ವಿಚಾರದಲ್ಲಿ ಮಾತನಾಡಿದ ಹೋರಾಟಗಾರ ಕುಮಾರ್ ಸಮತಳ, “ವಸತಿ ಮತ್ತು ಭೂಮಿ ಕೊಡುವುದು ನಮ್ಮ ಆದ್ಯತೆ ಎಂದು ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕರ ಹೇಳಿತ್ತು. ಆದರೆ ಈಗಿನ ಬಜೆಟ್‌ನಲ್ಲಿ ಈ ಭಗ್ಗೆ ಯಾವುದೇ ಘೋಷಣೆಯಿಲ್ಲ. ಜೊತೆಗೆ, ಬಡವರಿಗೆ ನೀಡುವ ವಸತಿ ಎಂದರೆ ಬೆಂಕಿಪೊಟ್ಟಣದ ರೀತಿಯಲ್ಲಿ ಒಂದರ ಮೇಲೆ ಒಂದು ಮನೆ ಕೊಟ್ಟರೆ ಸಾಕು ಎಂಬ ಭಾವನೆಯಿದೆ. ಅವರಿಗೆ ಖಾಸಗಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ.” ಎಂದು ಹೇಳಿದರು.

“ವಸತಿ ಸಮಸ್ಯೆ ಒಂದು ಸಾಮಾಜಿಕ ಸಮಸ್ಯೆಯಾಗಿದೆ. ಪ್ರತಿ ಪಂಚಾಯತ್‌ನಲ್ಲೂ ಮುಂದಿನ 30 ವರುಷಕ್ಕೆ ವಸತಿಗೆ ಎಂದು ಭೂಮಿ ಮೀಸಲು ಇಡಬೇಕು. ಸರ್ಕಾರವು ಗೋಮಾಳದ ಮತ್ತು ಸರ್ಕಾರಿ ಭೂಮಿಯನ್ನು ಖಾಸಗಿಗೆ ಮತ್ತು ಮಠಗಳಿಗೆ ನೀಡುತ್ತದೆ. ಒಂದು ವೇಳೆ ಭೂಮಿ ಕೊಟ್ಟರೆ ಊರಿನ ಹೊರಗೆ ಕೊಡುತ್ತದೆ. ಅಲ್ಲಿ ವಾಸ ಮಾಡಲು ಕೂಡಾ ಸಾಧ್ಯವಿಲ್ಲ. ಬಡವರಿಗೆ ನೀಡುವ ಮನೆ 20/40 ಆದರೆ ಸಾಕು ಎನ್ನುವ ಸರ್ಕಾರದ ಶಾಸಕರು, ತಮ್ಮ ಮನೆಗಳನ್ನು ನಾಲ್ಕು ಎಕರೆಗಳಲ್ಲಿ ಕಟ್ಟಿಕೊಂಡಿರುತ್ತಾರೆ.” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ.  ಅಬಕಾರಿ ನೀತಿ...

ಉತ್ತರ ಪ್ರದೇಶ: ಅಂಬೇಡ್ಕರ್ ಜಯಂತಿಯಂದು ಪ್ರತಿಮೆ ಸ್ಥಾಪನೆಗೆ ವಿರೋಧ: ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಘರ್ಷಣೆ 

ಸರ್ಕಾರಿ ಭೂಮಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ವಿವಾದವು ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದ ನಂತರ ಮಂಗಳವಾರ ಸಂಜೆ ಮೈಲಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಬಂಕೆಗಂಜ್...

‘ನಮಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ..’; ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಯ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ

2011 ರ ಜನಗಣತಿಯ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 27 ರಷ್ಟಿರುವ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮುಸ್ಲಿಂ ಸಮುದಾಯದ ಮತಗಳನ್ನು ಕೇಳುವ ಅಗತ್ಯವಿಲ್ಲ ಎಂದು ಬಂಗಾಳ...

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್ ಆರೋಪ : ಪವನ್ ಖೇರಾ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ಬುಧವಾರ (ಏ.15) ತಡೆ ನೀಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ...

ಒಡಿಶಾ ಬುಡಕಟ್ಟು ಶಾಲೆಯಲ್ಲಿ ಊಟ ಸೇವಿಸಿ 5ನೇ ತರಗತಿ ವಿದ್ಯಾರ್ಥಿನಿ ಸಾವು, 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 5 ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕಾಕಬಂಧ ​​ಆಶ್ರಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ...

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...