Homeಕರ್ನಾಟಕಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

- Advertisement -
- Advertisement -

“ಅಂಬೇಡ್ಕರ್ ಅವರನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಪ್ರೊಫೆಸರ್ ಆಫ್ ಪ್ರಾಕ್ಟೀಸ್‌ ಅನ್ನು ನೇಮಕ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು ಕೂಡಾ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆಯಾಗಿದೆ. ಅಂಬೇಡ್ಕರ್‌ ಅವನ್ನು ಮೊದಲನೇ ಪುಟದಲ್ಲಿ ಉಲ್ಲೇಖ ಮಾಡಿ, ಕೊನೆಯ ಪುಟದಲ್ಲಿ ಪ್ರೊಫೆಸರ್‌ ಆಫ್ ಪ್ರಾಕ್ಟೀಸ್ ಅನ್ನು ಜಾರಿಗೆ ತರುತ್ತೇವೆ ಎಂದರೆ ಎಂತಹ ಸಮಾನ ಶಿಕ್ಷಣ ಸಾಧ್ಯವಾಗುತ್ತದೆ ಎಂದು ಶಿಕ್ಷಣ ತಜ್ಞ ಶ್ರೀಪಾದ ಭಟ್ ಅವರು ಗುರುವಾರ ಕೇಳಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಮಾನ ಶಿಕ್ಷಣ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಗುರುವಾರ ಶ್ರೀಪಾದ ಭಟ್ ಅವರು ಮಾತನಾಡಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

“ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಎಂದರೆ ಕೈಗಾರಿಕೆ ಮತ್ತು ಕಾರ್ಪೋರೇಟ್‌ಗಳಲ್ಲಿ ಇರುವ ಪ್ರಮುಖ ವೃತ್ತಿಪರ ವ್ಯಕ್ತಿಗಳನ್ನು ಅಧ್ಯಾಪಕರನ್ನಾಗಿ ನೇಮಕ ಮಾಡುವುದಾಗಿದೆ. ಅವರು ಬಂದು ನಮ್ಮ ವಿದ್ಯಾರ್ಥಿಗಳಿಗೆ ಪಾಠ ಮಾಡುವ ವ್ಯವಸ್ಥೆ ಇದಾಗಿದೆ. ಸರ್ಕಾರ ಇದರಲ್ಲಿ ಮೀಸಲಾತಿಯಿದೆ ಎಂದು ಅದನ್ನು ಸಮರ್ಥನೆ ಮಾಡುತ್ತಿದೆ, ಆದರೆ ಯಾವ ಕೈಗಾರಿಕೆಯಲ್ಲಿ ಜನರಲ್ ಮ್ಯಾನೇಜರ್‌ ಸೇರಿದಂತೆ ದೊಡ್ಡ ಕಂಪನಿಯ ದೊಡ್ಡ ಹುದ್ದೆಗಳಲ್ಲಿ ದಲಿತರಿದ್ದಾರೆ” ಎಂದು ಅವರು ಕೇಳಿದರು

“ಸರ್ಕಾರಗಳು ಬಜೆಟ್ ಮಂಡಿಸಬೇಕಾದಾಗ ಪ್ರಾದೇಶಿಕ, ಸಾಮಾಜಿಕ ಅಸಮತೋಲನವನ್ನು ಗಮನಿಸಬೇಕಾಗಿತ್ತು. ಆದರೆ ಈ ಸರ್ಕಾರಗಳು ಅದನ್ನು ಮಾಡುತ್ತಿಲ್ಲ. ಈ ವರ್ಷದ ಬಜೆಟ್‌ನಲ್ಲಿ ಶಿಕ್ಷಣಕ್ಕೆ 45,800 ಕೋಟಿ ನೀಡಲಾಗಿದೆ ಎಂದು ಎಂದು ಹೇಳುತ್ತಿದ್ದಾರೆ. ಆದರೆ ಇದರಲ್ಲಿ ಉನ್ನತ ಮತ್ತು ಪ್ರಾಥಮಿಕ ಶಿಕ್ಷಣಕ್ಕೆ ಎಷ್ಟು ಎಂಬುವುದು ಅವರಿಗೇ ಗೊತ್ತಿಲ್ಲ. ಕಾಂಗ್ರೆಸ್ ಆಗಲಿ, ಇತರ ಯಾವುದೆ ಸರ್ಕಾರವಾಗಲಿ ಶಿಕ್ಷಣದ ವಿಚಾರದಲ್ಲಿ ಸಾರ್ವಜನಿಕ ಶಿಕ್ಷಣದಿಂದ ಹೊರಹೋಗುತ್ತಿವೆ.” ಎಂದು ಅವರು ಹೇಳಿದರು.

“ಶಿಕ್ಷಣಗಳು ಕಾರ್ಪೋರೇಟ್‌ ಕೈಗಳಿಗೆ ಹೋಗುತ್ತಿವೆ. ಎನ್‌ಇಪಿ ಕೂಡಾ  ಅನಧೀಕೃತವಾಗಿ ತಯಾರಾಗಿದ್ದು ಅಜೀಂ ಪ್ರೇಮ್‌ಜಿ ಯುನಿವರ್ಸಿಟಿಯಲ್ಲಾಗಿದೆ. ಶಾಲೆಗಳನ್ನು ದಾನಿಗಳು ದತ್ತು ತೆಗೆದುಕೊಳ್ಳುತ್ತಿರುವುದು ಕೂಡಾ ಅಪಾಯಕಾರಿಯಾಗಿದೆ. ಇದರ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಜನೆ ಇಲ್ಲ. ಜೊತೆಗೆ ತರಗತಿಗಳನ್ನು ಕೂಡಾ ಎನ್‌ಜಿಒಗಳು ದತ್ತು ತೆಗೆದುಕೊಳ್ಳುತ್ತಿವೆ.” ಎಂದು ಅವರು ಹೇಳಿದರು.

ಎನ್‌ಇಪಿಯನ್ನು ಕರ್ನಾಟಕ ಜಾರಿ ಮಾಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಸಂಸತ್ತಿನಲ್ಲಿ ಹೇಳಿ ಮೂರು ದಿನವಾದರೂ, ಇದರ ಬಗ್ಗೆ ಕಾಂಗ್ರೆಸ್ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಶ್ರೀಪಾದ್ ಭಟ್ ಅವರು ಹೇಳಿದ್ದಾರೆ.

ಬಡವರಿಗೆ ಬೆಂಕಿಪೊಟ್ಟಣದ ರೀತಿಯ ಮನೆ ಕೊಟ್ಟರೆ ಸಾಕು ಎಂಬ ಭಾವನೆ ಸರ್ಕಾರಕ್ಕಿದೆ: ಹೋರಾಟಗಾರ ಕುಮಾರ್ ಸಮತಳ

ಜನ ಚಳವಳಿಗಳ ಅಧಿವೇಶನದಲ್ಲಿ ‘ವಸತಿ ಮತ್ತು ಬಜೆಟ್’ ವಿಚಾರದಲ್ಲಿ ಮಾತನಾಡಿದ ಹೋರಾಟಗಾರ ಕುಮಾರ್ ಸಮತಳ, “ವಸತಿ ಮತ್ತು ಭೂಮಿ ಕೊಡುವುದು ನಮ್ಮ ಆದ್ಯತೆ ಎಂದು ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕರ ಹೇಳಿತ್ತು. ಆದರೆ ಈಗಿನ ಬಜೆಟ್‌ನಲ್ಲಿ ಈ ಭಗ್ಗೆ ಯಾವುದೇ ಘೋಷಣೆಯಿಲ್ಲ. ಜೊತೆಗೆ, ಬಡವರಿಗೆ ನೀಡುವ ವಸತಿ ಎಂದರೆ ಬೆಂಕಿಪೊಟ್ಟಣದ ರೀತಿಯಲ್ಲಿ ಒಂದರ ಮೇಲೆ ಒಂದು ಮನೆ ಕೊಟ್ಟರೆ ಸಾಕು ಎಂಬ ಭಾವನೆಯಿದೆ. ಅವರಿಗೆ ಖಾಸಗಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ.” ಎಂದು ಹೇಳಿದರು.

“ವಸತಿ ಸಮಸ್ಯೆ ಒಂದು ಸಾಮಾಜಿಕ ಸಮಸ್ಯೆಯಾಗಿದೆ. ಪ್ರತಿ ಪಂಚಾಯತ್‌ನಲ್ಲೂ ಮುಂದಿನ 30 ವರುಷಕ್ಕೆ ವಸತಿಗೆ ಎಂದು ಭೂಮಿ ಮೀಸಲು ಇಡಬೇಕು. ಸರ್ಕಾರವು ಗೋಮಾಳದ ಮತ್ತು ಸರ್ಕಾರಿ ಭೂಮಿಯನ್ನು ಖಾಸಗಿಗೆ ಮತ್ತು ಮಠಗಳಿಗೆ ನೀಡುತ್ತದೆ. ಒಂದು ವೇಳೆ ಭೂಮಿ ಕೊಟ್ಟರೆ ಊರಿನ ಹೊರಗೆ ಕೊಡುತ್ತದೆ. ಅಲ್ಲಿ ವಾಸ ಮಾಡಲು ಕೂಡಾ ಸಾಧ್ಯವಿಲ್ಲ. ಬಡವರಿಗೆ ನೀಡುವ ಮನೆ 20/40 ಆದರೆ ಸಾಕು ಎನ್ನುವ ಸರ್ಕಾರದ ಶಾಸಕರು, ತಮ್ಮ ಮನೆಗಳನ್ನು ನಾಲ್ಕು ಎಕರೆಗಳಲ್ಲಿ ಕಟ್ಟಿಕೊಂಡಿರುತ್ತಾರೆ.” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...