Homeಕರ್ನಾಟಕಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

ಅಂಬೇಡ್ಕರ್‌ರನ್ನು ಉಲ್ಲೇಖಿಸುವ ಸಿಎಂ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆ ತರುತ್ತಿದ್ದಾರೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

- Advertisement -
- Advertisement -

“ಅಂಬೇಡ್ಕರ್ ಅವರನ್ನು ಉಲ್ಲೇಖಿಸುವ ಮುಖ್ಯಮಂತ್ರಿ ಪ್ರೊಫೆಸರ್ ಆಫ್ ಪ್ರಾಕ್ಟೀಸ್‌ ಅನ್ನು ನೇಮಕ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದು ಕೂಡಾ ಲ್ಯಾಟರಲ್‌ ಎಂಟ್ರಿ ಮಾದರಿಯ ವ್ಯವಸ್ಥೆಯಾಗಿದೆ. ಅಂಬೇಡ್ಕರ್‌ ಅವನ್ನು ಮೊದಲನೇ ಪುಟದಲ್ಲಿ ಉಲ್ಲೇಖ ಮಾಡಿ, ಕೊನೆಯ ಪುಟದಲ್ಲಿ ಪ್ರೊಫೆಸರ್‌ ಆಫ್ ಪ್ರಾಕ್ಟೀಸ್ ಅನ್ನು ಜಾರಿಗೆ ತರುತ್ತೇವೆ ಎಂದರೆ ಎಂತಹ ಸಮಾನ ಶಿಕ್ಷಣ ಸಾಧ್ಯವಾಗುತ್ತದೆ ಎಂದು ಶಿಕ್ಷಣ ತಜ್ಞ ಶ್ರೀಪಾದ ಭಟ್ ಅವರು ಗುರುವಾರ ಕೇಳಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಮಾನ ಶಿಕ್ಷಣ ಮತ್ತು ಬಜೆಟ್’ ಎಂಬ ವಿಚಾರದ ಬಗ್ಗೆ ಗುರುವಾರ ಶ್ರೀಪಾದ ಭಟ್ ಅವರು ಮಾತನಾಡಿದರು. ಅಂಬೇಡ್ಕರ್‌ರನ್ನು ಉಲ್ಲೇಖಿಸುವ

“ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಎಂದರೆ ಕೈಗಾರಿಕೆ ಮತ್ತು ಕಾರ್ಪೋರೇಟ್‌ಗಳಲ್ಲಿ ಇರುವ ಪ್ರಮುಖ ವೃತ್ತಿಪರ ವ್ಯಕ್ತಿಗಳನ್ನು ಅಧ್ಯಾಪಕರನ್ನಾಗಿ ನೇಮಕ ಮಾಡುವುದಾಗಿದೆ. ಅವರು ಬಂದು ನಮ್ಮ ವಿದ್ಯಾರ್ಥಿಗಳಿಗೆ ಪಾಠ ಮಾಡುವ ವ್ಯವಸ್ಥೆ ಇದಾಗಿದೆ. ಸರ್ಕಾರ ಇದರಲ್ಲಿ ಮೀಸಲಾತಿಯಿದೆ ಎಂದು ಅದನ್ನು ಸಮರ್ಥನೆ ಮಾಡುತ್ತಿದೆ, ಆದರೆ ಯಾವ ಕೈಗಾರಿಕೆಯಲ್ಲಿ ಜನರಲ್ ಮ್ಯಾನೇಜರ್‌ ಸೇರಿದಂತೆ ದೊಡ್ಡ ಕಂಪನಿಯ ದೊಡ್ಡ ಹುದ್ದೆಗಳಲ್ಲಿ ದಲಿತರಿದ್ದಾರೆ” ಎಂದು ಅವರು ಕೇಳಿದರು

“ಸರ್ಕಾರಗಳು ಬಜೆಟ್ ಮಂಡಿಸಬೇಕಾದಾಗ ಪ್ರಾದೇಶಿಕ, ಸಾಮಾಜಿಕ ಅಸಮತೋಲನವನ್ನು ಗಮನಿಸಬೇಕಾಗಿತ್ತು. ಆದರೆ ಈ ಸರ್ಕಾರಗಳು ಅದನ್ನು ಮಾಡುತ್ತಿಲ್ಲ. ಈ ವರ್ಷದ ಬಜೆಟ್‌ನಲ್ಲಿ ಶಿಕ್ಷಣಕ್ಕೆ 45,800 ಕೋಟಿ ನೀಡಲಾಗಿದೆ ಎಂದು ಎಂದು ಹೇಳುತ್ತಿದ್ದಾರೆ. ಆದರೆ ಇದರಲ್ಲಿ ಉನ್ನತ ಮತ್ತು ಪ್ರಾಥಮಿಕ ಶಿಕ್ಷಣಕ್ಕೆ ಎಷ್ಟು ಎಂಬುವುದು ಅವರಿಗೇ ಗೊತ್ತಿಲ್ಲ. ಕಾಂಗ್ರೆಸ್ ಆಗಲಿ, ಇತರ ಯಾವುದೆ ಸರ್ಕಾರವಾಗಲಿ ಶಿಕ್ಷಣದ ವಿಚಾರದಲ್ಲಿ ಸಾರ್ವಜನಿಕ ಶಿಕ್ಷಣದಿಂದ ಹೊರಹೋಗುತ್ತಿವೆ.” ಎಂದು ಅವರು ಹೇಳಿದರು.

“ಶಿಕ್ಷಣಗಳು ಕಾರ್ಪೋರೇಟ್‌ ಕೈಗಳಿಗೆ ಹೋಗುತ್ತಿವೆ. ಎನ್‌ಇಪಿ ಕೂಡಾ  ಅನಧೀಕೃತವಾಗಿ ತಯಾರಾಗಿದ್ದು ಅಜೀಂ ಪ್ರೇಮ್‌ಜಿ ಯುನಿವರ್ಸಿಟಿಯಲ್ಲಾಗಿದೆ. ಶಾಲೆಗಳನ್ನು ದಾನಿಗಳು ದತ್ತು ತೆಗೆದುಕೊಳ್ಳುತ್ತಿರುವುದು ಕೂಡಾ ಅಪಾಯಕಾರಿಯಾಗಿದೆ. ಇದರ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಜನೆ ಇಲ್ಲ. ಜೊತೆಗೆ ತರಗತಿಗಳನ್ನು ಕೂಡಾ ಎನ್‌ಜಿಒಗಳು ದತ್ತು ತೆಗೆದುಕೊಳ್ಳುತ್ತಿವೆ.” ಎಂದು ಅವರು ಹೇಳಿದರು.

ಎನ್‌ಇಪಿಯನ್ನು ಕರ್ನಾಟಕ ಜಾರಿ ಮಾಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಸಂಸತ್ತಿನಲ್ಲಿ ಹೇಳಿ ಮೂರು ದಿನವಾದರೂ, ಇದರ ಬಗ್ಗೆ ಕಾಂಗ್ರೆಸ್ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಶ್ರೀಪಾದ್ ಭಟ್ ಅವರು ಹೇಳಿದ್ದಾರೆ.

ಬಡವರಿಗೆ ಬೆಂಕಿಪೊಟ್ಟಣದ ರೀತಿಯ ಮನೆ ಕೊಟ್ಟರೆ ಸಾಕು ಎಂಬ ಭಾವನೆ ಸರ್ಕಾರಕ್ಕಿದೆ: ಹೋರಾಟಗಾರ ಕುಮಾರ್ ಸಮತಳ

ಜನ ಚಳವಳಿಗಳ ಅಧಿವೇಶನದಲ್ಲಿ ‘ವಸತಿ ಮತ್ತು ಬಜೆಟ್’ ವಿಚಾರದಲ್ಲಿ ಮಾತನಾಡಿದ ಹೋರಾಟಗಾರ ಕುಮಾರ್ ಸಮತಳ, “ವಸತಿ ಮತ್ತು ಭೂಮಿ ಕೊಡುವುದು ನಮ್ಮ ಆದ್ಯತೆ ಎಂದು ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕರ ಹೇಳಿತ್ತು. ಆದರೆ ಈಗಿನ ಬಜೆಟ್‌ನಲ್ಲಿ ಈ ಭಗ್ಗೆ ಯಾವುದೇ ಘೋಷಣೆಯಿಲ್ಲ. ಜೊತೆಗೆ, ಬಡವರಿಗೆ ನೀಡುವ ವಸತಿ ಎಂದರೆ ಬೆಂಕಿಪೊಟ್ಟಣದ ರೀತಿಯಲ್ಲಿ ಒಂದರ ಮೇಲೆ ಒಂದು ಮನೆ ಕೊಟ್ಟರೆ ಸಾಕು ಎಂಬ ಭಾವನೆಯಿದೆ. ಅವರಿಗೆ ಖಾಸಗಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ.” ಎಂದು ಹೇಳಿದರು.

“ವಸತಿ ಸಮಸ್ಯೆ ಒಂದು ಸಾಮಾಜಿಕ ಸಮಸ್ಯೆಯಾಗಿದೆ. ಪ್ರತಿ ಪಂಚಾಯತ್‌ನಲ್ಲೂ ಮುಂದಿನ 30 ವರುಷಕ್ಕೆ ವಸತಿಗೆ ಎಂದು ಭೂಮಿ ಮೀಸಲು ಇಡಬೇಕು. ಸರ್ಕಾರವು ಗೋಮಾಳದ ಮತ್ತು ಸರ್ಕಾರಿ ಭೂಮಿಯನ್ನು ಖಾಸಗಿಗೆ ಮತ್ತು ಮಠಗಳಿಗೆ ನೀಡುತ್ತದೆ. ಒಂದು ವೇಳೆ ಭೂಮಿ ಕೊಟ್ಟರೆ ಊರಿನ ಹೊರಗೆ ಕೊಡುತ್ತದೆ. ಅಲ್ಲಿ ವಾಸ ಮಾಡಲು ಕೂಡಾ ಸಾಧ್ಯವಿಲ್ಲ. ಬಡವರಿಗೆ ನೀಡುವ ಮನೆ 20/40 ಆದರೆ ಸಾಕು ಎನ್ನುವ ಸರ್ಕಾರದ ಶಾಸಕರು, ತಮ್ಮ ಮನೆಗಳನ್ನು ನಾಲ್ಕು ಎಕರೆಗಳಲ್ಲಿ ಕಟ್ಟಿಕೊಂಡಿರುತ್ತಾರೆ.” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...