Homeಮುಖಪುಟನೆಲಕ್ಕುರುಳಿದ ಅಂಬೇಡ್ಕರ್ ಪ್ರತಿಮೆಯ ತಲೆ: ಈ ನೆಲದ ಹುನ್ನಾರಗಳ ಅನಾವರಣ..

ನೆಲಕ್ಕುರುಳಿದ ಅಂಬೇಡ್ಕರ್ ಪ್ರತಿಮೆಯ ತಲೆ: ಈ ನೆಲದ ಹುನ್ನಾರಗಳ ಅನಾವರಣ..

- Advertisement -
- Advertisement -

ಆಕ್ಟಿವಿಸ್ಟ್, ಸಿನೆಮಾ ನಿರ್ದೇಶಕಿ, ಪತ್ರಕರ್ತೆ, ಬರಹಗಾರ್ತಿಯಾದ ರೇವತಿ ಸುನಾಮಿ ಪೀಡಿತ ಪ್ರದೇಶದ ಪರಿಹಾರ ಕೆಲಸಕ್ಕೆ ನಾಗಪಟ್ಟಣಂಗೆ ಹೋದರು. ಪರಿಹಾರ ಕಾರ್ಯದಲ್ಲೂ ಸ್ಪೃಶ್ಯರು ಮತ್ತು ಅಸ್ಪೃಶ್ಯರ ನಡುವಿನ ತಾರತಮ್ಯ ಕಂಡು ರೋಸಿ ಹೋಗಿ ಸಿನೆಮಾ ಮಾಡಿದರು. ಅಷ್ಟಕ್ಕೇ ಸುಮ್ಮನಾಗದೇ, ಶೋಷಿತ ಸಮುದಾಯದ ಮಕ್ಕಳಿಗೆಂದು ‘ವಾನವಿಲ್ (ಕಾಮನಬಿಲ್ಲು)’ ಎಂಬ ಶಾಲೆಯನ್ನು ತೆರೆದರು. ಇಂದು ಆ ಮಕ್ಕಳಿಗೆ ವಿಶಿಷ್ಟ ಲೋಕಜ್ಞಾನವನ್ನು ಕಲಿಸುತ್ತಿರುವ ವಾನವಿಲ್ ರೇವತಿಯ ಕ್ರಿಯಾಶೀಲತೆಗೆ ಸಾಕ್ಷಿ. ಎಲ್ಲ ಜನಪರ ಆಂದೋಲನಗಳ ಒಡನಾಡಿ ರೇವತಿಗೆ ಜಾತಿ ದೌರ್ಜನ್ಯ ಬಹುವಾಗಿ ಕಾಡುವ ವಿಚಾರವಾದ್ದರಿಂದ ಅದರ ಸುತ್ತಲೇ ತಮ್ಮ ಲೇಖನವನ್ನು ಕೇಂದ್ರೀಕರಿಸಿದ್ದಾರೆ. ಈ ಲೇಖನವನ್ನು ಕನ್ನಡಕ್ಕೆ ರಾಜಶೇಖರ್ ಅಕ್ಕಿಯವರು ಅನುವಾದಿಸಿದ್ದಾರೆ

ಆಗಸ್ಟ್ 26ರಂದು ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ವೇದಾರಣ್ಯಮ್ ಎಂಬ ಊರಿನ ವೀಡಿಯೊ ಒಂದು ವೈರಲ್ ಆಗತೊಡಗಿತು. ಅಲ್ಲಿಯ ಪೊಲೀಸ್ ಸ್ಟೇಷನ್ ಎದುರಿಗಿರುವ ವೇದಾರಣ್ಯಮ್ ಬಸ್ ಸ್ಟ್ಯಾಂಡ್‍ನಲ್ಲಿ ಸ್ಥಾಪಿಸಲಾದ ಅಂಬೇಡ್ಕರ್ ಪ್ರತಿಮೆಯ ವೇದಿಕೆಗೆ ಒಬ್ಬ ಯುವಕ ಹತ್ತುವುದನ್ನು ಹಾಗೂ ಡಾ.ಅಂಬೇಡ್ಕರ್ ಅವರ ಸಿಮೆಂಟಿನ ಪ್ರತಿಮೆಯ ಶಿರಚ್ಛೇದ ಮಾಡಿದ್ದನ್ನು ಈ ವೀಡಿಯೊದಲ್ಲಿ ಕಾಣಬಹುದಾಗಿದೆ. ಅಲ್ಲಿ ಜನರ ಒಂದು ದೊಡ್ಡ ಗುಂಪು ಆ ವ್ಯಕ್ತಿಯನ್ನು ಕೇಕೆಹಾಕಿ ಹುರಿದುಂಬಿಸುವುದನ್ನೂ ಕಾಣಬಹುದು.

ಆ ವಿಡಿಯೋ ವೈರಲ್ ಆದ ನಂತರ ಎಲ್ಲೆಡೆಯಿಂದ ಖಂಡನೆಗಳು ಹರಿದುಬಂದವು. ವಿದುತಲೈ ಚಿರತೈಗಲ್ ಕಾಟ್ಚಿ, ತಮಿಳುನಾಡು ಅನ್‍ಟಚಬಿಲಿಟಿ ಇರ್ಯಾಡಿಕೇಷನ್ ಫ್ರಂಟ್ ಹಾಗೂ ಇತರ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಂಡವು. ಅವರು ದುಷ್ಕರ್ಮಿಗಳನ್ನು ಗೂಂಡಾ ಕಾಯಿದೆಯ ಅಡಿಯಲ್ಲಿ ಬಂಧಿಸಬೇಕು ಎಂದು ಆಗ್ರಹಿಸಿದರು. ಘಟನೆಯಾದ ಎರಡು ದಿನಗಳವರೆಗೆ ವೇದಾರಣ್ಯಮ್ ಪಟ್ಟಣವನ್ನು ಪೊಲೀಸ್ ಕಣ್ಗಾವಲಿನಲ್ಲಿ ಇಡಲಾಗಿತ್ತು ಹಾಗೂ ಪೊಲೀಸರು 37 ಜನರನ್ನು ಬಂಧಿಸಿದರು.

ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸಗೊಳಿಸಲು ಒಂದು ಚಿಕ್ಕ ಘಟನೆಯು ಕಾರಣವಾಗಿದೆ ಎಂದು ವರದಿ ಮಾಡಲಾಗಿದೆ. ಒಂದು ಚಿಕ್ಕ ಅಪಘಾತವು ಒಂದು ಚಿಕ್ಕ ಹಿಂದೂ ಸಂಘಟನೆಯ ಒಬ್ಬ ನಾಯಕ ಮತ್ತು ರಾಮಕೃಷ್ಣಪುರಮ್‍ನ ಒಬ್ಬ ದಲಿತ ಯುವಕನ ನಡುವೆ ಜಗಳಕ್ಕೆ ಕಾರಣವಾಯಿತು. ಆದರೆ ಅಲ್ಲಿಯ ಸಾಮಾಜಿಕ ಕಾರ್ಯಕರ್ತರು ಹೇಳುವುದೇನೆಂದರೆ, ಈ ಹಿಂದೂ ಜಾತಿವಾದಿ ಸಂಘಟನೆಯು ಅಲ್ಲಿರುವ ಅಂಬೇಡ್ಕರ್ ಪ್ರತಿಮೆಯನ್ನು ತೆಗೆದುಹಾಕಬೇಕೆಂದು ಅನೇಕ ವರ್ಷಗಳಿಂದ ಪ್ರಯತ್ನಿಸುತ್ತಿದ್ದಾರೆ ಹಾಗೂ ಈ ವಿಷಯದಲ್ಲಿ ಕಾನೂನಾತ್ಮಕ ಮಾರ್ಗವನ್ನೂ ಅಳವಡಿಸಿ ವಿಫಲವಾಗಿದ್ದಾರೆ.

ಭಾರತ ಸಂವಿಧಾನದ ಪಿತಾಮಹನ ಪ್ರತಿಮೆಯನ್ನು ಅಲ್ಲಿಂದ ತೆಗೆಯಲು ಇವರು ನೀಡಿರುವ ಕಾರಣ, ಈ ಪ್ರತಿಮೆ ವರ್ಷಕ್ಕೊಂದು ಸಲ ಆಗುವ ದೇವಸ್ಥಾನದ ಮೆರವಣಿಗೆಗೆ ಅಡ್ಡಿಯಾಗುತ್ತದೆ ಎಂಬುದು. ಆದರೆ ಈ ಪ್ರತಿಮೆ ಅದೇ ಸ್ಥಳದಲ್ಲಿ ಅನೇಕ ದಶಕಗಳಿಂದ ಇದೆ ಹಾಗೂ ಇಲ್ಲಿಯವರೆಗೆ ಯಾವ ಮೆರವಣಿಗೆಗೂ ಅಡ್ಡಿಯಾಗಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ನ್ಯಾಯಾಲಯವು ಈ ಅರ್ಜಿಯನ್ನು ತಳ್ಳಿಹಾಕಿತು. ಹಾಗೂ ಈ ಜಾತಿಸಂಘಟನೆಯು ತಮಿಳುನಾಡಿನಲ್ಲಿ ಕಳೆದ ಕೆಲವು ವರ್ಷಗಳಿಂದ ಸಕ್ರಿಯವಾಗಿರುವ ತೀವ್ರಗಾಮಿ ಹಿಂದೂ ಸಂಘಟನೆಗಳಲ್ಲಿ ಒಂದಾಗಿದ್ದು, ಇವುಗಳು ತಮ್ಮ ಗುರಿ ಸಾಧಿಸಲು ಉದ್ವಿಗ್ನತೆಯನ್ನು ಸೃಷ್ಟಿಸುವ ಪರ್ಯಾಯ ದಾರಿಯನ್ನು ಹಿಡಿದಿವೆ.

ಈ ಹಿನ್ನೆಲೆಯಲ್ಲಿ ದಾಳಿ ಮಾಡಿದ ಸಮಯದಲ್ಲಿ ಆದ ಒಂದು ಸಾಮಾನ್ಯ ಜಗಳವನ್ನು ಒಂದು ದೊಡ್ಡ ಘಟನೆಯನ್ನಾಗಿ ಬಿಂಬಿಸಲಾಗಿದೆ. ಆ ಘಟನೆಯಿಂದ ಸಿಟ್ಟಿಗೆದ್ದ ಆ ಗ್ರಾಮದ ದಲಿತರು ಹಿಂದೂ ಜಾತಿವಾದಿ ನಾಯಕ ಪಾಂಡಿಯಾನ್‍ನ ವಾಹನಕ್ಕೆ ಬೆಂಕಿ ಹಚ್ಚಿದರು ಹಾಗೂ ಇದೇ ಕಾರಣವನ್ನಿಟ್ಟುಕೊಂಡು ಆ ಜಾತಿಸಂಘಟನೆಯ ಜನರು ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸಗೊಳಿಸಿದರು.

ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಳ್ಳಬಹುದು ಎನ್ನುವ ಆತಂಕದಿಂದ ಹಾಗೂ ಖಂಡನೆಯ ಗಟ್ಟಿ ಧ್ವನಿ ಎತ್ತಿದ ವಿರೋಧಪಕ್ಷವನ್ನು ತಣಿಸುವ ಪ್ರಯತ್ನದಲ್ಲಿ ತಮಿಳುನಾಡು ಸರಕಾರವು ಹೊಸದೊಂದು ಪ್ರತಿಮೆಯನ್ನು ರಾತ್ರೋರಾತ್ರಿ ತಂದು ಪ್ರತಿಷ್ಠಾಪನೆ ಮಾಡಿದರು. ಜೊತೆಗೆ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು.

ಆದರೆ ಸೆಪ್ಟೆಂಬರ್ 19 ರಂದು ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿತು. ಅಂದು ತಮಿಳುನಾಡು ಪೊಲೀಸರು 11 ಜನರ ವಿರುದ್ಧ ಗೂಂಡಾ ಕಾಯಿದೆಯನ್ನು ಹಾಕಿದರು; ಆ 11 ಜನರಲ್ಲಿ 6 ಜನರು ದಲಿತರಾಗಿದ್ದರು.

“ಡಾ. ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸುವ ಮತ್ತು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ತತ್ವಗಳನ್ನು ಮತ್ತು ದಲಿತರನ್ನು ದಾಳಿ ಮಾಡಲು ಪ್ರಯತ್ನಿಸುತ್ತಿರುವ ಜಾತಿವಾದಿ ಹಿಂದೂ ಶಕ್ತಿಗಳಿಗೆ ಒಂದು ಬಲವಾದ ಸಂದೇಶ ನೀಡುವ ಬದಲಿಗೆ, ಈ ಘಟನೆಯಲ್ಲಿ ದಲಿತರ ಮೇಲೆ ದೋಷಾರೋಪ ಹೊರಿಸುವ ಮೂಲಕ ತಮಿಳುನಾಡು ಸರಕಾರವು ತನ್ನ ಜಾತಿವಾದಿ ಮನಸ್ಥಿತಿಯನ್ನು ಸ್ಪಷ್ಟವಾಗಿ ಪ್ರದರ್ಶಿಸಿದೆ” ಎಂದು ಟಿಎನ್‍ಯುಎಎಫ್‍ನ ಸಾಮ್ಯುವೆಲ್ ರಾಜ್ ಹೇಳಿದ್ದಾರೆ.

ಇದೇ ಅಂಶವನ್ನು ಹೇಳುತ್ತ ವೇದಾರಣ್ಯಮ್‍ನ ಸಾಮಾಜಿಕ ಕಾರ್ಯಕರ್ತ ಬಿರ್ಲಾ ತಂಗದುರೈ ಅವರು “ಸುಮಾರು 500 ಜನರ ದೊಡ್ಡ ಗುಂಪು ಪ್ರತಿಮೆಯನ್ನು ಉರುಳಿಸುವುದನ್ನು ಒಂದು ಸಾರ್ವಜನಿಕ ಉನ್ಮಾದದ ಸಮಾರಂಭದಂತೆ ಆಯೋಜಿಸಿತ್ತು, ಆದರೆ ಆ ವಿಡಿಯೋದಲ್ಲಿ ಅನೇಕರನ್ನು ಸ್ಪಷ್ಟವಾಗಿ ಗುರುತಿಸಬಹುದಾದರೂ ಪೊಲೀಸರು ಆ ಕಡೆಯಿಂದ ಹೆಚ್ಚು ಜನರನ್ನು ಬಂಧಿಸಿಲ್ಲ. ಅದರ ಬದಲಿಗೆ ರಾಮಕೃಷ್ಣಪುರಂನ ನಿರಪರಾಧಿ ಕಟ್ಟಡ ಕಾರ್ಮಿಕರನ್ನು ತಡರಾತ್ರಿ ಬಂಧಿಸಲಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸುವುದು ಸಾರ್ವಜನಿಕ ಆಸ್ತಿಯನ್ನು ನಾಶಪಡಿಸುವ ಮತ್ತು ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುವ ಅಪರಾಧವಾಗಿದೆ. ಆದರೆ, ಈ ಸೆಕ್ಷನ್‍ಗಳ ಅಡಿಯಲ್ಲಿ ದಲಿತರನ್ನು ಏಕೆ ಬಂಧಿಸಲಾಗುತ್ತಿದೆ? ಒಂದು ಖಾಸಗಿ ವಾಹನವನ್ನು ಒಡೆದುಹಾಕಿದ್ದಷ್ಟೆ ಅವರು ಮಾಡಿದ್ದು” ಎಂದು ವಾದಿಸಿದರು.

ರಾತ್ರೋರಾತ್ರಿ ಪ್ರತಿಮೆಯನ್ನು ಸ್ಥಾಪಿಸಿ, ಒಂದೆಡೆ ಜಾತಿವಾದಿ ಹಿಂದೂ ಸಂಘಟನೆಯ ನಾಯಕನ್ನು ಬಂಧಿಸಿ ಇನ್ನೊಂದೆಡೆ ಅದಕ್ಕಿಂತ ಹೆಚ್ಚು ಸಂಖ್ಯೆಯ ದಲಿತರನ್ನು ಬಂಧಿಸಿ, ಅವರ ಮೇಲೆ ಗೂಂಡಾ ಕಾಯಿದೆಯನ್ನು ಹೊರಿಸಿರುವುದು ತಮಿಳುನಾಡು ಸರಕಾರದ ಒಂದು ಪ್ರವೃತ್ತಿಯನ್ನು ತೋರಿಸುತ್ತದೆ. ಅವಶ್ಯಕತೆ ಇದ್ದಾಗ ಅಂಬೇಡ್ಕರ್ ಅವರ ಪ್ರಶಂಸೆ ಮಾಡುವುದು ಹಾಗೂ ಅದೇ ಸಮಯದಲ್ಲಿ ಜಾತಿವಾದಿ ಹಿಂದೂ ಸಂಘಟನೆಗಳಿಗೆ ಅಭಯಹಸ್ತ ನೀಡುವುದೇ ಈ ಸರಕಾರದ ನಿಲುವಾಗಿದೆ.

ದ್ರಾವಿಡ ಚಳವಳಿಯ ತವರೂ, ಇಂದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೊಡ್ಡ ತಡೆಯೆಂದೂ ಭಾವಿಸಲಾದ ತಮಿಳುನಾಡಿನಲ್ಲಿ ಈ ಪರಿಸ್ಥಿತಿ ಇದೆ. ಕೋಮುವಾದವು ಹುಲುಸಾಗಿ ಬೆಳೆಯಲು ಜಾತಿವ್ಯವಸ್ಥೆಯು ತಳಹದಿಯಾಗಿರುವುದೇ ನಿಜವಾದಲ್ಲಿ ತಮಿಳುನಾಡು ‘ಅಭೇದ್ಯ ಕೋಟೆ’ಯಾಗಿ ಉಳಿಯುವುದೇ? ದಲಿತರ ಮೇಲೆ ದೌರ್ಜನ್ಯವೆಸಗುವಲ್ಲಿ ಎಲ್ಲಾ ಪಕ್ಷಗಳೂ ಶಾಮೀಲಾಗುತ್ತವೆ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿರುವಾಗ ಪ್ರಜಾತಂತ್ರವಾದಿಗಳ ಮುಂದೆ ಇರುವ ದಾರಿಯೇನು? ಇವು ಎಲ್ಲರೂ ಯೋಚಿಸಬೇಕಾದ ಪ್ರಶ್ನೆಗಳಾಗಿವೆ.
ದೇಶಾದ್ಯಂತ ವೈರಲ್ ಆದ ವಿಡಿಯೋ ಹಿಂದೆ ಒಂದು ‘ನಿರ್ಜೀವ’ ಪ್ರತಿಮೆ ಧ್ವಂಸವಾಗಿದ್ದಷ್ಟೇ ಅಲ್ಲ ಎಂಬುದನ್ನು ತಿಳಿಸಲು ಇಷ್ಟೆಲ್ಲಾ ವಿವರಗಳನ್ನು ಒದಗಿಸಬೇಕಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...