Homeಮುಖಪುಟಅಂಬೇಡ್ಕರ್ ವಿವಿಯಲ್ಲಿ ವಿಶ್ವಕರ್ಮ ಪೂಜೆಗೆ ಆಕ್ಷೇಪ: ಎಬಿವಿಪಿ ಸದಸ್ಯರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಅಂಬೇಡ್ಕರ್ ವಿವಿಯಲ್ಲಿ ವಿಶ್ವಕರ್ಮ ಪೂಜೆಗೆ ಆಕ್ಷೇಪ: ಎಬಿವಿಪಿ ಸದಸ್ಯರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ

- Advertisement -
- Advertisement -

ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬಾಬಾ ಭೀಮರಾವ್ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ (ಬಿಬಿಎಯು) ಸೆಪ್ಟೆಂಬರ್ 17ರಂದು ಕ್ಯಾಂಪಸ್‌ನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಹಲವು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ನಂತರ ಉದ್ವಿಗ್ನತೆ ಸ್ಫೋಟಗೊಂಡಿದೆ.

ಎಬಿವಿಪಿ ಸದಸ್ಯರು ತರಗತಿಯೊಳಗೆ ವಿಶ್ವಕರ್ಮ ಪೂಜೆ ನಡೆಸಲು ಮುಂದಾದಾಗ, ವಿದ್ಯಾರ್ಥಿಗಳ ಗುಂಪೊಂದು ಅದನ್ನು ಆಕ್ಷೇಪಿಸಿತು. ಶೈಕ್ಷಣಿಕ ಸ್ಥಳಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಬಾರದು ಎಂದು ಪ್ರತಿಭಟಿಸಿದ ವಿದ್ಯಾರ್ಥಿಗಳು ವಾದಿಸಿದರು. ಆದರೆ, ಅವರ ಆಕ್ಷೇಪಗಳಿಗೆ ಹಿಂಸೆಯ ಮೂಲಕ ಪ್ರತಿಕ್ರಿಯೆ ದೊರೆಯಿತು ಎಂದು ವರದಿಯಾಗಿದೆ.

ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಈ ಹಲ್ಲೆಯು ಭಿನ್ನಮತವನ್ನು ಹತ್ತಿಕ್ಕುವ ಪ್ರಯತ್ನ ಎಂದು ಆರೋಪಿಸಿದ್ದಾರೆ. ಈ ಘಟನೆಯು ವಿದ್ಯಾರ್ಥಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜೊತೆಗೆ, ಕ್ಯಾಂಪಸ್ ಜಾತ್ಯತೀತ ಮತ್ತು ಸುರಕ್ಷಿತ ಸ್ಥಳವಾಗಿ ಉಳಿಯುವಂತೆ ನೋಡಿಕೊಳ್ಳಲು ವಿಶ್ವವಿದ್ಯಾಲಯ ಆಡಳಿತಕ್ಕೆ ಕರೆ ನೀಡಿದ್ದಾರೆ.

ಸಮಾಜವಾದಿ, ಪ್ರಜಾಸತ್ತಾತ್ಮಕ, ವಿದ್ಯಾರ್ಥಿ ನೇತೃತ್ವದ ಗುಂಪಾದ ದೀಕ್ಷಾ ಸ್ಟೂಡೆಂಟ್ಸ್ ಆರ್ಗನೈಸೇಶನ್‌ನೊಂದಿಗೆ ಸಂಬಂಧ ಹೊಂದಿರುವ ಸಂಶೋಧನಾ ವಿದ್ವಾಂಸ ಆಕಾಶ್ ಮಾತನಾಡಿ, “ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್ ಒಳಗೆ ಪೂಜೆ ಆಯೋಜಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಮೌಖಿಕ ವಾಗ್ವಾದ ಪ್ರಾರಂಭವಾಯಿತು, ಮತ್ತು ಬೇರೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ಆವರಣದೊಳಗೆ ನಡೆಯದಿದ್ದರೂ, ಎಬಿವಿಪಿ ಸದಸ್ಯರು ಪೂಜೆ ನಡೆಸಲು ಹಟ ಹಿಡಿದರು.

ನಾವು ಪ್ರೊಕ್ಟರ್ ಅವರನ್ನು ಸಂಪರ್ಕಿಸಿದಾಗ, ಆಡಳಿತ ಸಂಹಿತೆಯ ಪ್ರಕಾರ ಕಾರ್ಯಕ್ರಮಕ್ಕೆ ಸರಿಯಾದ ಅನುಮತಿಯನ್ನು ನೀಡಿಲ್ಲ ಎಂದು ನಮಗೆ ತಿಳಿಸಲಾಯಿತು. ಕಾಲೇಜು ಅಧಿಕಾರಿಗಳು ಮಧ್ಯಪ್ರವೇಶಿಸಿದಾಗ ಪೂಜೆಯನ್ನು ಅರ್ಧಕ್ಕೆ ನಿಲ್ಲಿಸಲಾಯಿತು ಎಂದು ಅವರು ಹೇಳಿದರು.

ವಿದ್ಯಾರ್ಥಿಗಳು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗುತ್ತಿದ್ದಾಗ, ಎಬಿವಿಪಿ-ಸಂಬಂಧಿತ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದರು. ಮೃತುಂಜಯ್, ರಿತೇಶ್ ಮತ್ತು ಆದೇಶ್ ಎಂಬ ಮೂವರು ವಿದ್ಯಾರ್ಥಿಗಳು ಗಂಭೀರ ಗಾಯಗಳಿಗೆ ಒಳಗಾಗಿ ಲೋಕಬಂಧು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಹಲವು ಗಾಯಗಳನ್ನು ಅನುಭವಿಸಿದ ಮೃತುಂಜಯ್ ಮಾತನಾಡಿ, “ಎಬಿವಿಪಿ ಗೂಂಡಾಗಳು ನಮ್ಮನ್ನು ರಾಡ್‌ಗಳು ಮತ್ತು ಇತರ ಆಯುಧಗಳಿಂದ ಹೊಡೆಯುತ್ತಿರುವಾಗ, ಉಪಕುಲಪತಿಯವರ ಕಚೇರಿಯಿಂದ ಯಾರೊಬ್ಬರೂ ಅದರ ಪರಿಶೀಲನೆಗೆ ಬರಲಿಲ್ಲ. ಅದು ಹಲ್ಲೆಯ ಸ್ಥಳದಿಂದ ಕೇವಲ 50 ಮೀಟರ್ ದೂರದಲ್ಲಿದ್ದರೂ ಸಹ ಬರಲಿಲ್ಲವೆಂದು ಆರೋಪಿಸಿದರು.

ನಮ್ಮಲ್ಲಿ ಒಬ್ಬರು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಅವರು ನಮ್ಮ ಮೇಲೆ ಅತ್ಯಂತ ಕ್ರೂರ ನಿಂದನೆಗಳನ್ನು ಮಾಡುತ್ತಿದ್ದರು ಎಂದು ಅವರು ಆರೋಪಿಸಿದರು.

ಪೊಲೀಸ್ ಅಥವಾ ಕಾಲೇಜು ಅಧಿಕಾರಿಗಳು ಎಬಿವಿಪಿ ಸದಸ್ಯರ ವಿರುದ್ಧ ಯಾವುದೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಕ್ಯಾಂಪಸ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಮೃತುಂಜಯ್ ಹೇಳಿದ್ದಾರೆ.

ನಂತರ, ಎಬಿವಿಪಿ ಸದಸ್ಯರು, ಕಾಲೇಜು ಅಧಿಕಾರಿಗಳು ಮತ್ತು ಹಲ್ಲೆಗೊಳಗಾದ ವಿದ್ಯಾರ್ಥಿಗಳ ದೂರುಗಳ ಆಧಾರದ ಮೇಲೆ ಆಶಿಯಾನಾ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ.

ಎಬಿವಿಪಿ ಸದಸ್ಯರ ದೂರುಗಳ ಆಧಾರದ ಮೇಲೆ, ದೀಕ್ಷಾ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ 12 ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಯ ಸೆಕ್ಷನ್‌ಗಳಾದ 115(2) (ದುಷ್ಪ್ರೇರಣೆ), 191(2) (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 191(3) (ಮಾರಕ ಆಯುಧದೊಂದಿಗೆ ಗಲಭೆ), 299 (ಧಾರ್ಮಿಕ ಭಾವನೆಗಳಿಗೆ ಅವಮಾನ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 352 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), ಮತ್ತು 351(3) (ಅಪರಾಧದ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತನ್ನ ದೂರಿನಲ್ಲಿ, ಎಬಿವಿಪಿ ವಿದ್ಯಾರ್ಥಿಗಳು ವಿಶ್ವಕರ್ಮ ಪೂಜೆಗೆ ಅಡ್ಡಿಪಡಿಸಿದ್ದಾರೆ ಮತ್ತು ಹಿಂದೂ ದೇವತೆಗಳಿಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದೆ.

ಆದರೆ, ಅನುಶ್ರೀಶ್ ಎಂಬ ವಿದ್ಯಾರ್ಥಿ ಈ ಆರೋಪವನ್ನು ನಿರಾಕರಿಸಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಕ್ಯಾಂಪಸ್‌ನಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಹೇಳಿದ್ದಾರೆ.

ಅವರು ಮಕ್ತೂಬ್‌ಗೆ, “ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ಧ ಜಾಮೀನು ದೊರೆಯುವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಆದರೆ ಅವರೇ ಹಿಂಸಾಚಾರ ನಡೆಸಿ ಗದ್ದಲ ಸೃಷ್ಟಿಸಿದ್ದರು. ಗಾಯಗೊಂಡ ಮತ್ತು ಆಸ್ಪತ್ರೆಗೆ ದಾಖಲಾಗಿದ್ದವರ ವಿರುದ್ಧ ಕಠಿಣ ಮತ್ತು ಜಾಮೀನುರಹಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ.

ಎಬಿವಿಪಿಯಿಂದ ಹಲ್ಲೆಗೊಳಗಾದ ವಿದ್ಯಾರ್ಥಿಗಳ ದೂರಿನ ಆಧಾರದ ಮೇಲೆ ಪೊಲೀಸರು ಬಿಎನ್‌ಎಸ್‌ನ ಸೆಕ್ಷನ್‌ಗಳಾದ 115(2), 191(2) (ಗಲಭೆ), 115(2) (ದುಷ್ಪ್ರೇರಣೆ), 191(3) (ಸುಳ್ಳು ಸಾಕ್ಷ್ಯ), 303(2) (ಕಳ್ಳತನ), 309(4) (ದರೋಡೆ), ಮತ್ತು 351(3) (ಅಪರಾಧದ ಬೆದರಿಕೆ) ಅಡಿಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಿಸಿದ್ದಾರೆ.

ಪಟನಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮತ್ತು ದೀಕ್ಷಾದ ರಾಷ್ಟ್ರೀಯ ಹುದ್ದೆದಾರರಾದ ವರುಣಿ ಪೂರ್ವಾ, “ಪೂಜೆಯನ್ನು ಆಕ್ಷೇಪಿಸಿದ ವಿದ್ಯಾರ್ಥಿಗಳು ಹಿಂದೂ ದೇವರು ಮತ್ತು ದೇವತೆಗಳಿಗೆ ಅವಮಾನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಮೂಲಕ ಎಬಿವಿಪಿ ಈಗ ಈ ಸಮಸ್ಯೆಯನ್ನು ಕೋಮು ಸಮಸ್ಯೆಯಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

“ಯಾವುದೇ ಧಾರ್ಮಿಕ ಕಾರ್ಯಕ್ರಮವನ್ನು ಯಾವುದೇ ಶೈಕ್ಷಣಿಕ ಸಂಸ್ಥೆಯೊಳಗೆ ನಡೆಸಬಾರದು ಎಂಬುದು ದೀಕ್ಷಾದ ಏಕೈಕ ಕಾಳಜಿಯಾಗಿದೆ, ಇದು ವಿಶ್ವವಿದ್ಯಾಲಯದ ಆಡಳಿತ ಸಂಹಿತೆಗೂ ವಿರುದ್ಧವಾಗಿದೆ. ಈ ರೀತಿ ಏನಾದರೂ ಪ್ರಾರಂಭವಾದರೆ, ಪ್ರತಿ ಧರ್ಮವೂ ತಮ್ಮ ಆಚರಣೆಗಳನ್ನು ಪ್ರಾರಂಭಿಸುತ್ತದೆ – ಮತ್ತು ಅದನ್ನು ಆಕ್ಷೇಪಿಸುವ ಮೊದಲ ಸಂಘಟನೆ ಎಬಿವಿಪಿ ಆಗಿರುತ್ತದೆ” ಎಂದು ಅವರು ಹೇಳಿದರು.

“ಅದಕ್ಕೂ ಮೀರಿದ ವಿಷಯವೆಂದರೆ, ಈ ನೆಪದಲ್ಲಿ ಹಿಂಸಾಚಾರ ನಡೆಯುತ್ತಿದೆ, ಇದು ನಿಜಕ್ಕೂ ದುರದೃಷ್ಟಕರ. ಕ್ಯಾಂಪಸ್‌ಗಳು ಯಾವುದೇ ಬಲಪಂಥೀಯ ಅಥವಾ ಕೋಮು ಮನಸ್ಸಿನ ವ್ಯಕ್ತಿಗಳಿಗೆ ಕಾಲೇಜುಗಳಲ್ಲಿ ಜಾಗ ನೀಡದಂತೆ ನೋಡಿಕೊಳ್ಳಬೇಕು, ಏಕೆಂದರೆ ಅವರ ಏಕೈಕ ಉದ್ದೇಶ ಕೋಮು ಸೌಹಾರ್ದತೆಯನ್ನು ಭಂಗಗೊಳಿಸುವುದು ಮತ್ತು ಹಿಂಸೆಯನ್ನು ಉತ್ತೇಜಿಸುವುದು” ಎಂದು ಪೂರ್ವಾ ಹೇಳಿದರು.

ವಿಶ್ವವಿದ್ಯಾಲಯ ಅಥವಾ ಪೊಲೀಸ್ ಆಡಳಿತ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ವಿದ್ಯಾರ್ಥಿಗಳು ಸೋಮವಾರದೊಳಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.

ಚನ್ನರಾಯಪಟ್ಟಣ ಭೂಸ್ವಾಧೀನ ರದ್ದತಿ: ಅಧಿಕೃತ ಆದೇಶಕ್ಕಾಗಿ ರೈತರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...