Homeಮುಖಪುಟಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ

ಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ

- Advertisement -
- Advertisement -

ರಾಜಕೀಯ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದರಿಂದ ಮತ್ತು ಜನರಿಗೆ ಏನು ಬೇಕು ಎಂದು ತಿಳಿದಿದ್ದರಿಂದ ಬಿ.ಆರ್. ಅಂಬೇಡ್ಕರ್ ಅವರು ಸಂಸ್ಕೃತವನ್ನು ಭಾರತದ “ಅಧಿಕೃತ ರಾಷ್ಟ್ರೀಯ ಭಾಷೆ” ಎಂದು ಪ್ರಸ್ತಾಪಿಸಿದ್ದರು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಬೊಬ್ಡೆ ಬುಧವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎಂಎನ್‌ಎಲ್‌ಯು) ಶೈಕ್ಷಣಿಕ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಿಜೆಐ ಬೊಬ್ಡೆ ಮಾತನಾಡುತ್ತಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕೇಂದ್ರ ಸಚಿವ ಮತ್ತು ನಾಗ್ಪುರ ಸಂಸದ ನಿತಿನ್ ಗಡ್ಕರಿ ಮತ್ತು ಇತರರು ಈ ಕಾರ್ಯಕ್ರಮದಲ್ಲಿ ಆನ್‌ಲೈನ್ ಮೂಲಕ ಭಾಗವಹಿಸಿದ್ದರು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಪ್ರಾಚೀನ ಭಾರತೀಯ ಪಠ್ಯವಾದ “ನ್ಯಾಯಶಾಸ್ತ್ರ”ವು ಅರಿಸ್ಟಾಟಲ್ ಮತ್ತು ಪರ್ಷಿಯನ್ ತರ್ಕ ವ್ಯವಸ್ಥೆಗಿಂತ ಕೆಳಮಟ್ಟದ್ದಲ್ಲ ಮತ್ತು “ನಮ್ಮ ಪೂರ್ವಜರ ಪ್ರತಿಭೆಳನ್ನು ಕಡೆಗಣಿಸಲು ಮತ್ತು ಅದರಿಂದ ಪ್ರಯೋಜನ ಪಡೆಯದಿರಲು ಯಾವುದೇ ಕಾರಣಗಳಿಲ್ಲ” ಎಂದು ಸಿಜೆಐ ಹೇಳಿದ್ದಾರೆ.

ಬಿ.ಆರ್.ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆಯನ್ನು ನೆನಪಿಸಿಕೊಂಡ ಸಿಜೆಐ, “ಇಂದು ಬೆಳಿಗ್ಗೆ, ನಾನು ಯಾವ ಭಾಷೆಯಲ್ಲಿ ಭಾಷಣ ಮಾಡಬೇಕೆಂಬುದರ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದೆ. ಇಂದು ಡಾ.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ್ದರಿಂದ ಮಾತನಾಡುವ ಭಾಷೆ ಮತ್ತು ಕೆಲಸ ಮಾಡುವ ಭಾಷೆಗಳ ನಡುವಿನ ಸಂಘರ್ಷ ತುಂಬಾ ಹಳೆಯದು ಎಂದು ನನಗೆ ನೆನಪಾಯಿತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ಕರಡನ್ನು ರಚಿಸಿದ್ದು ಬ್ರಾಹ್ಮಣರೇ ಹೊರತು ಅಂಬೇಡ್ಕರ್‌ ಅಲ್ಲ: ಗುಜರಾತ್‌ ಸ್ಪೀಕರ್‌ ವಿವಾದಾತ್ಮಕ ಹೇಳಿಕೆ

“ಅಧೀನ ನ್ಯಾಯಾಲಯಗಳ ಭಾಷೆ ಹೇಗಿರಬೇಕು ಎಂಬುದರ ಕುರಿತು ಸುಪ್ರೀಂ ಕೋರ್ಟ್‌ಗೆ ಅನೇಕ ಪತ್ರಗಳು ಬರುತ್ತವೆ, ಆದರೆ ಈ ವಿಷಯದ ಬಗ್ಗೆ ಪರಾಮರ್ಶೆ ನಡೆಯುತ್ತಿಲ್ಲ ಎಂದೆನಿಸುತ್ತದೆ. ಡಾ. ಅಂಬೇಡ್ಕರ್ ಈ ಅಂಶವನ್ನು ನಿರೀಕ್ಷಿಸಿದ್ದರು ಮತ್ತು ಅವರು ಭಾರತದ ಒಕ್ಕೂಟದ ಅಧಿಕೃತ ಭಾಷೆ ಸಂಸ್ಕೃತವಾಗಿರಬೇಕು ಎಂಬ ಪ್ರಸ್ತಾಪವನ್ನು ಇಟ್ಟಿದ್ದರು” ಎಂದು ಬೋಬ್ಡೆ ಹೇಳಿದ್ದಾರೆ.

ಕೆಲವು ಮೌಲ್ವಿಗಳು, ಪಂಡಿತರು ಮತ್ತು ಪುರೋಹಿತರು, ಅಂಬೇಡ್ಕರ್‌ ​​ಅವರ ಸಹಿಯನ್ನು ಹೊಂದಿರುವ ಆ ಪ್ರಸ್ತಾಪವನ್ನು ಮಂಡಿಸಲಾಗಿದೆಯೆ ಎಂದು ನೆನಪಿಸಿಕೊಳ್ಳುವುದಿಲ್ಲ ಎಂದು ಸಿಜೆಐ ಹೇಳಿದ್ದಾರೆ.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

“ಉತ್ತರ ಭಾರತದಲ್ಲಿ ತಮಿಳು ಸ್ವೀಕಾರಾರ್ಹವಲ್ಲವಾದ್ದರಿಂದ ಅದನ್ನು ಅಲ್ಲಿ ವಿರೋಧಿಸಬಹುದು ಮತ್ತು ಅದೇ ರೀತಿ ದಕ್ಷಿಣ ಭಾರತದಲ್ಲಿ ಹಿಂದಿಯನ್ನು ವಿರೋಧಿಸಬಹುದು ಎಂಬುದು ಅಂಬೇಡ್ಕರ್ ಅವರ ಅಭಿಪ್ರಾಯವಾಗಿತ್ತು. ಆದರೆ, ಉತ್ತರ ಭಾರತ ಅಥವಾ ದಕ್ಷಿಣ ಭಾರತದಲ್ಲಿ ಸಂಸ್ಕೃತವನ್ನು ವಿರೋಧಿಸುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಅವರು ಈ ಪ್ರಸ್ತಾಪವನ್ನು ಇಟ್ಟಿದ್ದರು, ಆದರೆ ಅದು ಯಶಸ್ವಿಯಾಗಲಿಲ್ಲ” ಎಂದು ಸಿಜೆಐ ಬೊಬ್ಡೆ ಹೇಳಿದ್ದಾರೆ.

“ಅಂಬೇಡ್ಕರ್ ಅವರಿಗೆ ಕಾನೂನಿನ ಬಗ್ಗೆ ಮಾತ್ರವಲ್ಲದೆ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆಯೂ ಚೆನ್ನಾಗಿ ತಿಳಿದಿತ್ತು. ಜನರು, ದೇಶದ ಬಡವರು ಏನು ಬಯಸುತ್ತಾರೆಂದು ಅವರಿಗೆ ತಿಳಿದಿತ್ತು. ಈ ಎಲ್ಲ ಅಂಶಗಳ ಬಗ್ಗೆ ಅವರಿಗೆ ಸಂಪೂರ್ಣ ಜ್ಞಾನವಿತ್ತು ಮತ್ತು ಅದಕ್ಕಾಗಿಯೇ ಅವರು ಈ ಪ್ರಸ್ತಾಪವನ್ನು ಮಂಡಿಸಲು ಯೋಚಿಸಿದ್ದರು” ಎಂದು ಸಿಜೆಐ ಬೋಬ್ಡೆ ಹೇಳಿದ್ದಾರೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....