Homeಮುಖಪುಟಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ

ಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ

- Advertisement -
- Advertisement -

ರಾಜಕೀಯ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದರಿಂದ ಮತ್ತು ಜನರಿಗೆ ಏನು ಬೇಕು ಎಂದು ತಿಳಿದಿದ್ದರಿಂದ ಬಿ.ಆರ್. ಅಂಬೇಡ್ಕರ್ ಅವರು ಸಂಸ್ಕೃತವನ್ನು ಭಾರತದ “ಅಧಿಕೃತ ರಾಷ್ಟ್ರೀಯ ಭಾಷೆ” ಎಂದು ಪ್ರಸ್ತಾಪಿಸಿದ್ದರು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಬೊಬ್ಡೆ ಬುಧವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎಂಎನ್‌ಎಲ್‌ಯು) ಶೈಕ್ಷಣಿಕ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಿಜೆಐ ಬೊಬ್ಡೆ ಮಾತನಾಡುತ್ತಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕೇಂದ್ರ ಸಚಿವ ಮತ್ತು ನಾಗ್ಪುರ ಸಂಸದ ನಿತಿನ್ ಗಡ್ಕರಿ ಮತ್ತು ಇತರರು ಈ ಕಾರ್ಯಕ್ರಮದಲ್ಲಿ ಆನ್‌ಲೈನ್ ಮೂಲಕ ಭಾಗವಹಿಸಿದ್ದರು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಪ್ರಾಚೀನ ಭಾರತೀಯ ಪಠ್ಯವಾದ “ನ್ಯಾಯಶಾಸ್ತ್ರ”ವು ಅರಿಸ್ಟಾಟಲ್ ಮತ್ತು ಪರ್ಷಿಯನ್ ತರ್ಕ ವ್ಯವಸ್ಥೆಗಿಂತ ಕೆಳಮಟ್ಟದ್ದಲ್ಲ ಮತ್ತು “ನಮ್ಮ ಪೂರ್ವಜರ ಪ್ರತಿಭೆಳನ್ನು ಕಡೆಗಣಿಸಲು ಮತ್ತು ಅದರಿಂದ ಪ್ರಯೋಜನ ಪಡೆಯದಿರಲು ಯಾವುದೇ ಕಾರಣಗಳಿಲ್ಲ” ಎಂದು ಸಿಜೆಐ ಹೇಳಿದ್ದಾರೆ.

ಬಿ.ಆರ್.ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆಯನ್ನು ನೆನಪಿಸಿಕೊಂಡ ಸಿಜೆಐ, “ಇಂದು ಬೆಳಿಗ್ಗೆ, ನಾನು ಯಾವ ಭಾಷೆಯಲ್ಲಿ ಭಾಷಣ ಮಾಡಬೇಕೆಂಬುದರ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದೆ. ಇಂದು ಡಾ.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ್ದರಿಂದ ಮಾತನಾಡುವ ಭಾಷೆ ಮತ್ತು ಕೆಲಸ ಮಾಡುವ ಭಾಷೆಗಳ ನಡುವಿನ ಸಂಘರ್ಷ ತುಂಬಾ ಹಳೆಯದು ಎಂದು ನನಗೆ ನೆನಪಾಯಿತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ಕರಡನ್ನು ರಚಿಸಿದ್ದು ಬ್ರಾಹ್ಮಣರೇ ಹೊರತು ಅಂಬೇಡ್ಕರ್‌ ಅಲ್ಲ: ಗುಜರಾತ್‌ ಸ್ಪೀಕರ್‌ ವಿವಾದಾತ್ಮಕ ಹೇಳಿಕೆ

“ಅಧೀನ ನ್ಯಾಯಾಲಯಗಳ ಭಾಷೆ ಹೇಗಿರಬೇಕು ಎಂಬುದರ ಕುರಿತು ಸುಪ್ರೀಂ ಕೋರ್ಟ್‌ಗೆ ಅನೇಕ ಪತ್ರಗಳು ಬರುತ್ತವೆ, ಆದರೆ ಈ ವಿಷಯದ ಬಗ್ಗೆ ಪರಾಮರ್ಶೆ ನಡೆಯುತ್ತಿಲ್ಲ ಎಂದೆನಿಸುತ್ತದೆ. ಡಾ. ಅಂಬೇಡ್ಕರ್ ಈ ಅಂಶವನ್ನು ನಿರೀಕ್ಷಿಸಿದ್ದರು ಮತ್ತು ಅವರು ಭಾರತದ ಒಕ್ಕೂಟದ ಅಧಿಕೃತ ಭಾಷೆ ಸಂಸ್ಕೃತವಾಗಿರಬೇಕು ಎಂಬ ಪ್ರಸ್ತಾಪವನ್ನು ಇಟ್ಟಿದ್ದರು” ಎಂದು ಬೋಬ್ಡೆ ಹೇಳಿದ್ದಾರೆ.

ಕೆಲವು ಮೌಲ್ವಿಗಳು, ಪಂಡಿತರು ಮತ್ತು ಪುರೋಹಿತರು, ಅಂಬೇಡ್ಕರ್‌ ​​ಅವರ ಸಹಿಯನ್ನು ಹೊಂದಿರುವ ಆ ಪ್ರಸ್ತಾಪವನ್ನು ಮಂಡಿಸಲಾಗಿದೆಯೆ ಎಂದು ನೆನಪಿಸಿಕೊಳ್ಳುವುದಿಲ್ಲ ಎಂದು ಸಿಜೆಐ ಹೇಳಿದ್ದಾರೆ.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

“ಉತ್ತರ ಭಾರತದಲ್ಲಿ ತಮಿಳು ಸ್ವೀಕಾರಾರ್ಹವಲ್ಲವಾದ್ದರಿಂದ ಅದನ್ನು ಅಲ್ಲಿ ವಿರೋಧಿಸಬಹುದು ಮತ್ತು ಅದೇ ರೀತಿ ದಕ್ಷಿಣ ಭಾರತದಲ್ಲಿ ಹಿಂದಿಯನ್ನು ವಿರೋಧಿಸಬಹುದು ಎಂಬುದು ಅಂಬೇಡ್ಕರ್ ಅವರ ಅಭಿಪ್ರಾಯವಾಗಿತ್ತು. ಆದರೆ, ಉತ್ತರ ಭಾರತ ಅಥವಾ ದಕ್ಷಿಣ ಭಾರತದಲ್ಲಿ ಸಂಸ್ಕೃತವನ್ನು ವಿರೋಧಿಸುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಅವರು ಈ ಪ್ರಸ್ತಾಪವನ್ನು ಇಟ್ಟಿದ್ದರು, ಆದರೆ ಅದು ಯಶಸ್ವಿಯಾಗಲಿಲ್ಲ” ಎಂದು ಸಿಜೆಐ ಬೊಬ್ಡೆ ಹೇಳಿದ್ದಾರೆ.

“ಅಂಬೇಡ್ಕರ್ ಅವರಿಗೆ ಕಾನೂನಿನ ಬಗ್ಗೆ ಮಾತ್ರವಲ್ಲದೆ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆಯೂ ಚೆನ್ನಾಗಿ ತಿಳಿದಿತ್ತು. ಜನರು, ದೇಶದ ಬಡವರು ಏನು ಬಯಸುತ್ತಾರೆಂದು ಅವರಿಗೆ ತಿಳಿದಿತ್ತು. ಈ ಎಲ್ಲ ಅಂಶಗಳ ಬಗ್ಗೆ ಅವರಿಗೆ ಸಂಪೂರ್ಣ ಜ್ಞಾನವಿತ್ತು ಮತ್ತು ಅದಕ್ಕಾಗಿಯೇ ಅವರು ಈ ಪ್ರಸ್ತಾಪವನ್ನು ಮಂಡಿಸಲು ಯೋಚಿಸಿದ್ದರು” ಎಂದು ಸಿಜೆಐ ಬೋಬ್ಡೆ ಹೇಳಿದ್ದಾರೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...