Homeಮುಖಪುಟಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ

ಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ

- Advertisement -
- Advertisement -

ರಾಜಕೀಯ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದರಿಂದ ಮತ್ತು ಜನರಿಗೆ ಏನು ಬೇಕು ಎಂದು ತಿಳಿದಿದ್ದರಿಂದ ಬಿ.ಆರ್. ಅಂಬೇಡ್ಕರ್ ಅವರು ಸಂಸ್ಕೃತವನ್ನು ಭಾರತದ “ಅಧಿಕೃತ ರಾಷ್ಟ್ರೀಯ ಭಾಷೆ” ಎಂದು ಪ್ರಸ್ತಾಪಿಸಿದ್ದರು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಬೊಬ್ಡೆ ಬುಧವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎಂಎನ್‌ಎಲ್‌ಯು) ಶೈಕ್ಷಣಿಕ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಿಜೆಐ ಬೊಬ್ಡೆ ಮಾತನಾಡುತ್ತಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕೇಂದ್ರ ಸಚಿವ ಮತ್ತು ನಾಗ್ಪುರ ಸಂಸದ ನಿತಿನ್ ಗಡ್ಕರಿ ಮತ್ತು ಇತರರು ಈ ಕಾರ್ಯಕ್ರಮದಲ್ಲಿ ಆನ್‌ಲೈನ್ ಮೂಲಕ ಭಾಗವಹಿಸಿದ್ದರು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಪ್ರಾಚೀನ ಭಾರತೀಯ ಪಠ್ಯವಾದ “ನ್ಯಾಯಶಾಸ್ತ್ರ”ವು ಅರಿಸ್ಟಾಟಲ್ ಮತ್ತು ಪರ್ಷಿಯನ್ ತರ್ಕ ವ್ಯವಸ್ಥೆಗಿಂತ ಕೆಳಮಟ್ಟದ್ದಲ್ಲ ಮತ್ತು “ನಮ್ಮ ಪೂರ್ವಜರ ಪ್ರತಿಭೆಳನ್ನು ಕಡೆಗಣಿಸಲು ಮತ್ತು ಅದರಿಂದ ಪ್ರಯೋಜನ ಪಡೆಯದಿರಲು ಯಾವುದೇ ಕಾರಣಗಳಿಲ್ಲ” ಎಂದು ಸಿಜೆಐ ಹೇಳಿದ್ದಾರೆ.

ಬಿ.ಆರ್.ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆಯನ್ನು ನೆನಪಿಸಿಕೊಂಡ ಸಿಜೆಐ, “ಇಂದು ಬೆಳಿಗ್ಗೆ, ನಾನು ಯಾವ ಭಾಷೆಯಲ್ಲಿ ಭಾಷಣ ಮಾಡಬೇಕೆಂಬುದರ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದೆ. ಇಂದು ಡಾ.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ್ದರಿಂದ ಮಾತನಾಡುವ ಭಾಷೆ ಮತ್ತು ಕೆಲಸ ಮಾಡುವ ಭಾಷೆಗಳ ನಡುವಿನ ಸಂಘರ್ಷ ತುಂಬಾ ಹಳೆಯದು ಎಂದು ನನಗೆ ನೆನಪಾಯಿತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ಕರಡನ್ನು ರಚಿಸಿದ್ದು ಬ್ರಾಹ್ಮಣರೇ ಹೊರತು ಅಂಬೇಡ್ಕರ್‌ ಅಲ್ಲ: ಗುಜರಾತ್‌ ಸ್ಪೀಕರ್‌ ವಿವಾದಾತ್ಮಕ ಹೇಳಿಕೆ

“ಅಧೀನ ನ್ಯಾಯಾಲಯಗಳ ಭಾಷೆ ಹೇಗಿರಬೇಕು ಎಂಬುದರ ಕುರಿತು ಸುಪ್ರೀಂ ಕೋರ್ಟ್‌ಗೆ ಅನೇಕ ಪತ್ರಗಳು ಬರುತ್ತವೆ, ಆದರೆ ಈ ವಿಷಯದ ಬಗ್ಗೆ ಪರಾಮರ್ಶೆ ನಡೆಯುತ್ತಿಲ್ಲ ಎಂದೆನಿಸುತ್ತದೆ. ಡಾ. ಅಂಬೇಡ್ಕರ್ ಈ ಅಂಶವನ್ನು ನಿರೀಕ್ಷಿಸಿದ್ದರು ಮತ್ತು ಅವರು ಭಾರತದ ಒಕ್ಕೂಟದ ಅಧಿಕೃತ ಭಾಷೆ ಸಂಸ್ಕೃತವಾಗಿರಬೇಕು ಎಂಬ ಪ್ರಸ್ತಾಪವನ್ನು ಇಟ್ಟಿದ್ದರು” ಎಂದು ಬೋಬ್ಡೆ ಹೇಳಿದ್ದಾರೆ.

ಕೆಲವು ಮೌಲ್ವಿಗಳು, ಪಂಡಿತರು ಮತ್ತು ಪುರೋಹಿತರು, ಅಂಬೇಡ್ಕರ್‌ ​​ಅವರ ಸಹಿಯನ್ನು ಹೊಂದಿರುವ ಆ ಪ್ರಸ್ತಾಪವನ್ನು ಮಂಡಿಸಲಾಗಿದೆಯೆ ಎಂದು ನೆನಪಿಸಿಕೊಳ್ಳುವುದಿಲ್ಲ ಎಂದು ಸಿಜೆಐ ಹೇಳಿದ್ದಾರೆ.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

“ಉತ್ತರ ಭಾರತದಲ್ಲಿ ತಮಿಳು ಸ್ವೀಕಾರಾರ್ಹವಲ್ಲವಾದ್ದರಿಂದ ಅದನ್ನು ಅಲ್ಲಿ ವಿರೋಧಿಸಬಹುದು ಮತ್ತು ಅದೇ ರೀತಿ ದಕ್ಷಿಣ ಭಾರತದಲ್ಲಿ ಹಿಂದಿಯನ್ನು ವಿರೋಧಿಸಬಹುದು ಎಂಬುದು ಅಂಬೇಡ್ಕರ್ ಅವರ ಅಭಿಪ್ರಾಯವಾಗಿತ್ತು. ಆದರೆ, ಉತ್ತರ ಭಾರತ ಅಥವಾ ದಕ್ಷಿಣ ಭಾರತದಲ್ಲಿ ಸಂಸ್ಕೃತವನ್ನು ವಿರೋಧಿಸುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಅವರು ಈ ಪ್ರಸ್ತಾಪವನ್ನು ಇಟ್ಟಿದ್ದರು, ಆದರೆ ಅದು ಯಶಸ್ವಿಯಾಗಲಿಲ್ಲ” ಎಂದು ಸಿಜೆಐ ಬೊಬ್ಡೆ ಹೇಳಿದ್ದಾರೆ.

“ಅಂಬೇಡ್ಕರ್ ಅವರಿಗೆ ಕಾನೂನಿನ ಬಗ್ಗೆ ಮಾತ್ರವಲ್ಲದೆ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆಯೂ ಚೆನ್ನಾಗಿ ತಿಳಿದಿತ್ತು. ಜನರು, ದೇಶದ ಬಡವರು ಏನು ಬಯಸುತ್ತಾರೆಂದು ಅವರಿಗೆ ತಿಳಿದಿತ್ತು. ಈ ಎಲ್ಲ ಅಂಶಗಳ ಬಗ್ಗೆ ಅವರಿಗೆ ಸಂಪೂರ್ಣ ಜ್ಞಾನವಿತ್ತು ಮತ್ತು ಅದಕ್ಕಾಗಿಯೇ ಅವರು ಈ ಪ್ರಸ್ತಾಪವನ್ನು ಮಂಡಿಸಲು ಯೋಚಿಸಿದ್ದರು” ಎಂದು ಸಿಜೆಐ ಬೋಬ್ಡೆ ಹೇಳಿದ್ದಾರೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...