Homeಮುಖಪುಟಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ

ಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ

- Advertisement -
- Advertisement -

ರಾಜಕೀಯ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದರಿಂದ ಮತ್ತು ಜನರಿಗೆ ಏನು ಬೇಕು ಎಂದು ತಿಳಿದಿದ್ದರಿಂದ ಬಿ.ಆರ್. ಅಂಬೇಡ್ಕರ್ ಅವರು ಸಂಸ್ಕೃತವನ್ನು ಭಾರತದ “ಅಧಿಕೃತ ರಾಷ್ಟ್ರೀಯ ಭಾಷೆ” ಎಂದು ಪ್ರಸ್ತಾಪಿಸಿದ್ದರು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಬೊಬ್ಡೆ ಬುಧವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎಂಎನ್‌ಎಲ್‌ಯು) ಶೈಕ್ಷಣಿಕ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಿಜೆಐ ಬೊಬ್ಡೆ ಮಾತನಾಡುತ್ತಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕೇಂದ್ರ ಸಚಿವ ಮತ್ತು ನಾಗ್ಪುರ ಸಂಸದ ನಿತಿನ್ ಗಡ್ಕರಿ ಮತ್ತು ಇತರರು ಈ ಕಾರ್ಯಕ್ರಮದಲ್ಲಿ ಆನ್‌ಲೈನ್ ಮೂಲಕ ಭಾಗವಹಿಸಿದ್ದರು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಪ್ರಾಚೀನ ಭಾರತೀಯ ಪಠ್ಯವಾದ “ನ್ಯಾಯಶಾಸ್ತ್ರ”ವು ಅರಿಸ್ಟಾಟಲ್ ಮತ್ತು ಪರ್ಷಿಯನ್ ತರ್ಕ ವ್ಯವಸ್ಥೆಗಿಂತ ಕೆಳಮಟ್ಟದ್ದಲ್ಲ ಮತ್ತು “ನಮ್ಮ ಪೂರ್ವಜರ ಪ್ರತಿಭೆಳನ್ನು ಕಡೆಗಣಿಸಲು ಮತ್ತು ಅದರಿಂದ ಪ್ರಯೋಜನ ಪಡೆಯದಿರಲು ಯಾವುದೇ ಕಾರಣಗಳಿಲ್ಲ” ಎಂದು ಸಿಜೆಐ ಹೇಳಿದ್ದಾರೆ.

ಬಿ.ಆರ್.ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆಯನ್ನು ನೆನಪಿಸಿಕೊಂಡ ಸಿಜೆಐ, “ಇಂದು ಬೆಳಿಗ್ಗೆ, ನಾನು ಯಾವ ಭಾಷೆಯಲ್ಲಿ ಭಾಷಣ ಮಾಡಬೇಕೆಂಬುದರ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದೆ. ಇಂದು ಡಾ.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ್ದರಿಂದ ಮಾತನಾಡುವ ಭಾಷೆ ಮತ್ತು ಕೆಲಸ ಮಾಡುವ ಭಾಷೆಗಳ ನಡುವಿನ ಸಂಘರ್ಷ ತುಂಬಾ ಹಳೆಯದು ಎಂದು ನನಗೆ ನೆನಪಾಯಿತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ಕರಡನ್ನು ರಚಿಸಿದ್ದು ಬ್ರಾಹ್ಮಣರೇ ಹೊರತು ಅಂಬೇಡ್ಕರ್‌ ಅಲ್ಲ: ಗುಜರಾತ್‌ ಸ್ಪೀಕರ್‌ ವಿವಾದಾತ್ಮಕ ಹೇಳಿಕೆ

“ಅಧೀನ ನ್ಯಾಯಾಲಯಗಳ ಭಾಷೆ ಹೇಗಿರಬೇಕು ಎಂಬುದರ ಕುರಿತು ಸುಪ್ರೀಂ ಕೋರ್ಟ್‌ಗೆ ಅನೇಕ ಪತ್ರಗಳು ಬರುತ್ತವೆ, ಆದರೆ ಈ ವಿಷಯದ ಬಗ್ಗೆ ಪರಾಮರ್ಶೆ ನಡೆಯುತ್ತಿಲ್ಲ ಎಂದೆನಿಸುತ್ತದೆ. ಡಾ. ಅಂಬೇಡ್ಕರ್ ಈ ಅಂಶವನ್ನು ನಿರೀಕ್ಷಿಸಿದ್ದರು ಮತ್ತು ಅವರು ಭಾರತದ ಒಕ್ಕೂಟದ ಅಧಿಕೃತ ಭಾಷೆ ಸಂಸ್ಕೃತವಾಗಿರಬೇಕು ಎಂಬ ಪ್ರಸ್ತಾಪವನ್ನು ಇಟ್ಟಿದ್ದರು” ಎಂದು ಬೋಬ್ಡೆ ಹೇಳಿದ್ದಾರೆ.

ಕೆಲವು ಮೌಲ್ವಿಗಳು, ಪಂಡಿತರು ಮತ್ತು ಪುರೋಹಿತರು, ಅಂಬೇಡ್ಕರ್‌ ​​ಅವರ ಸಹಿಯನ್ನು ಹೊಂದಿರುವ ಆ ಪ್ರಸ್ತಾಪವನ್ನು ಮಂಡಿಸಲಾಗಿದೆಯೆ ಎಂದು ನೆನಪಿಸಿಕೊಳ್ಳುವುದಿಲ್ಲ ಎಂದು ಸಿಜೆಐ ಹೇಳಿದ್ದಾರೆ.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

“ಉತ್ತರ ಭಾರತದಲ್ಲಿ ತಮಿಳು ಸ್ವೀಕಾರಾರ್ಹವಲ್ಲವಾದ್ದರಿಂದ ಅದನ್ನು ಅಲ್ಲಿ ವಿರೋಧಿಸಬಹುದು ಮತ್ತು ಅದೇ ರೀತಿ ದಕ್ಷಿಣ ಭಾರತದಲ್ಲಿ ಹಿಂದಿಯನ್ನು ವಿರೋಧಿಸಬಹುದು ಎಂಬುದು ಅಂಬೇಡ್ಕರ್ ಅವರ ಅಭಿಪ್ರಾಯವಾಗಿತ್ತು. ಆದರೆ, ಉತ್ತರ ಭಾರತ ಅಥವಾ ದಕ್ಷಿಣ ಭಾರತದಲ್ಲಿ ಸಂಸ್ಕೃತವನ್ನು ವಿರೋಧಿಸುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಅವರು ಈ ಪ್ರಸ್ತಾಪವನ್ನು ಇಟ್ಟಿದ್ದರು, ಆದರೆ ಅದು ಯಶಸ್ವಿಯಾಗಲಿಲ್ಲ” ಎಂದು ಸಿಜೆಐ ಬೊಬ್ಡೆ ಹೇಳಿದ್ದಾರೆ.

“ಅಂಬೇಡ್ಕರ್ ಅವರಿಗೆ ಕಾನೂನಿನ ಬಗ್ಗೆ ಮಾತ್ರವಲ್ಲದೆ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆಯೂ ಚೆನ್ನಾಗಿ ತಿಳಿದಿತ್ತು. ಜನರು, ದೇಶದ ಬಡವರು ಏನು ಬಯಸುತ್ತಾರೆಂದು ಅವರಿಗೆ ತಿಳಿದಿತ್ತು. ಈ ಎಲ್ಲ ಅಂಶಗಳ ಬಗ್ಗೆ ಅವರಿಗೆ ಸಂಪೂರ್ಣ ಜ್ಞಾನವಿತ್ತು ಮತ್ತು ಅದಕ್ಕಾಗಿಯೇ ಅವರು ಈ ಪ್ರಸ್ತಾಪವನ್ನು ಮಂಡಿಸಲು ಯೋಚಿಸಿದ್ದರು” ಎಂದು ಸಿಜೆಐ ಬೋಬ್ಡೆ ಹೇಳಿದ್ದಾರೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...