Homeಮುಖಪುಟಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

- Advertisement -
- Advertisement -

ಕೊಡಗಿನ ಶನಿವಾರಸಂತೆಯಲ್ಲಿ ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಿರುಚಿ ಪ್ರಸಾರ ಮಾಡಿರುವುದು ಮುಸ್ಲಿಮರನ್ನು ದೇಶದ್ರೋಹಿಗಳನ್ನಾಗಿ ಚಿತ್ರಿಸುವ ಸಂಘೀ ಷಡ್ಯಂತ್ರದ ಮುಂದುವರಿದ ಭಾಗವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ಕಿಡಿಕಾರಿದ್ದಾರೆ.

ಶನಿವಾರಸಂತೆ ಪೊಲೀಸ್‌ ಠಾಣೆಯ ಮುಂದೆ ಬುರ್ಖಾಧಾರಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ‘ಅಂಬೇಡ್ಕರ್ ಝಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಆದರೆ ದುಷ್ಕರ್ಮಿಗಳು ಈ ವೀಡಿಯೋವನ್ನು ತಿರುಚಿ, ‘‘ಮುಸ್ಲಿಂ ಮಹಿಳೆಯರು ಪೊಲೀಸ್‌ ಠಾಣೆಯ ಮುಂದೆ ‘ಪಾಕಿಸ್ತಾನ್ ಝಿಂದಾಬಾದ್’ ಕೂಗಿದ್ದಾರೆ” ಎಂದು ವೈರಲ್ ಮಾಡಿದ್ದರು. ಇದೀಗ ಈ ವಿಡಿಯೊ ತಿರುಚಿದ್ದಾರೆ ಎನ್ನಲಾಗಿರುವ ಸ್ಥಳೀಯ ಬಿಜೆಪಿ ನಾಯಕ ಗಿರೀಶ್‌ ಸೇರಿದಂತೆ ಕನ್ನಡ ಪ್ರಭ ಪತ್ರಕರ್ತ ಹರೀಶ್‌ ಹಾಗೂ ಮತ್ತೊಬ್ಬ ಸ್ಥಳೀಯ ರಾಜಕೀಯ ನಾಯಕನ ರಘು ಎಂಬವರ ವಿರುದ್ದ ಶನಿವಾರಸಂತೆ ಠಾಣಾ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಹಿನ್ನಲೆ

ಈ ಹಿಂದೆ ಸಂಘಪರಿವಾರದಿಂದ ದಾಳಿಗೊಳಗಾದ ಮುಸ್ಲಿಮ್ ಯುವಕನ ಕುಟುಂಬವು ದೂರು ನೀಡಿದರೂ, ಪೊಲೀಸರು ಅದನ್ನು ದಾಖಲಿಸಿಲ್ಲ. ದೂರು ನೀಡಲು ತೆರಳಿದ ಮುಸ್ಲಿಮ್ ಮಹಿಳೆಯರನ್ನು ಸತಾಯಿಸಿದ್ದು ಮಾತ್ರವಲ್ಲ, ಪೊಲೀಸರು ದುಷ್ಕರ್ಮಿಗಳ ಪರವಾಗಿ ಮೃದು ಧೋರಣೆ ತಾಳಿದ್ದಾರೆ. ಪೊಲೀಸರ ಈ ತಾರತಮ್ಯ ನೀತಿಯನ್ನು ಖಂಡಿಸಿ ಮುಸ್ಲಿಮ್ ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಅಂಬೇಡ್ಕರ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಆದರೆ ಜಿಲ್ಲೆಯಲ್ಲಿ ಗಲಭೆ ಹರಡುವ ದುರುದ್ದೇಶದಿಂದ ಓರ್ವ ಪತ್ರಕರ್ತ ಸಹಿತ ಸಂಘಪರಿವಾರದ ಕಾರ್ಯಕರ್ತರು ಘೋಷಣೆಯನ್ನು ತಿರುಚಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಿದ್ದರು.

ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರು ಈ ಕಿಡಿಗೇಡಿ ಕೃತ್ಯ ನಡೆಸಿರುವುದು ಇದು ಮೊದಲೇನಲ್ಲ. ಉಜಿರೆಯಲ್ಲಿ ಎಸ್.ಡಿ.ಪಿ.ಐ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಿರುಚಿ ಬಿಜೆಪಿ ಕಾರ್ಯಕರ್ತರು ವಿಕೃತಿ ಮೆರೆದಿದ್ದರು. ಇದಕ್ಕೂ ಮೊದಲು ಸಿಂದಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿ ಅದನ್ನು ಮುಸ್ಲಿಮರ ತಲೆಗೆ ಕಟ್ಟಲಾಗಿತ್ತು. ಇಂತಹ ದುಷ್ಕೃತ್ಯಗಳ ಮೂಲಕ ಮುಸ್ಲಿಮರನ್ನು ದೇಶದ್ರೋಹಿಗಳನ್ನಾಗಿ ಚಿತ್ರೀಕರಿಸಲು ವ್ಯವಸ್ಥಿತ ಪಿತೂರಿಗಳನ್ನು ನಡೆಸಲಾಗುತ್ತಿದೆ ಎಂದು ಎ.ಕೆ.ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ, ಪೊಲೀಸರ ಪೂರ್ವಾಗ್ರಹಪೀಡಿತ ತನಿಖೆ ಮೂಲಕ ಹಲವು ಅಮಾಯಕ ಮುಸ್ಲಿಮ್ ಯುವಕರನ್ನು ವಿನಾಕಾರಣ ಬಂಧಿಸಿ ಜೈಲಿಗಟ್ಟಲಾಗಿತ್ತು. ಇದೀಗ ಮುಸ್ಲಿಮ್ ಸಂಘಟನೆಗಳ ಒತ್ತಡದ ಕಾರಣ ಪೊಲೀಸರು ನಿಷ್ಪಕ್ಷಪಾತ ಹಾಗೂ ಕೂಲಂಕಷ ತನಿಖೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸಲು ಸಾಧ್ಯವಾಗಿದೆ. ಪೊಲೀಸರು ಈ ರೀತಿಯ ಸೂಕ್ಷ್ಮ ಘಟನೆಗಳನ್ನು ಗಂಭೀರವಾಗಿ ಪರಿಶೀಲಿಸಿ ನೈಜ ಅಪರಾಧಿಗಳನ್ನು ಬಂಧಿಸಿ ಇಂತಹ ಘಟನೆಗಳು ಮರುಕಳಿಸದಂತೆ ಗಮನಹರಿಸಬೇಕು. ಶಾಂತಿ ಕದಡಿ ಗಲಭೆ ಹರಡುವ ದುಷ್ಕರ್ಮಿಗಳ ವಿರುದ್ಧ ಸರಕಾರವೂ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು. ಹಾಗೆಯೇ ಸಂತ್ರಸ್ತ ಕುಟುಂಬ ನೀಡಿದ ದೂರು ದಾಖಲಿಸದೇ ಕರ್ತವ್ಯಲೋಪ ಎಸಗಿದ ಪೊಲೀಸರನ್ನು ಕೂಡಲೇ ಅಮಾನತುಪಡಿಸಬೇಕೆಂದು ಎ.ಕೆ.ಅಶ್ರಫ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....