Homeಮುಖಪುಟಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

- Advertisement -
- Advertisement -

ಕೊಡಗಿನ ಶನಿವಾರಸಂತೆಯಲ್ಲಿ ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಿರುಚಿ ಪ್ರಸಾರ ಮಾಡಿರುವುದು ಮುಸ್ಲಿಮರನ್ನು ದೇಶದ್ರೋಹಿಗಳನ್ನಾಗಿ ಚಿತ್ರಿಸುವ ಸಂಘೀ ಷಡ್ಯಂತ್ರದ ಮುಂದುವರಿದ ಭಾಗವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ಕಿಡಿಕಾರಿದ್ದಾರೆ.

ಶನಿವಾರಸಂತೆ ಪೊಲೀಸ್‌ ಠಾಣೆಯ ಮುಂದೆ ಬುರ್ಖಾಧಾರಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ‘ಅಂಬೇಡ್ಕರ್ ಝಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಆದರೆ ದುಷ್ಕರ್ಮಿಗಳು ಈ ವೀಡಿಯೋವನ್ನು ತಿರುಚಿ, ‘‘ಮುಸ್ಲಿಂ ಮಹಿಳೆಯರು ಪೊಲೀಸ್‌ ಠಾಣೆಯ ಮುಂದೆ ‘ಪಾಕಿಸ್ತಾನ್ ಝಿಂದಾಬಾದ್’ ಕೂಗಿದ್ದಾರೆ” ಎಂದು ವೈರಲ್ ಮಾಡಿದ್ದರು. ಇದೀಗ ಈ ವಿಡಿಯೊ ತಿರುಚಿದ್ದಾರೆ ಎನ್ನಲಾಗಿರುವ ಸ್ಥಳೀಯ ಬಿಜೆಪಿ ನಾಯಕ ಗಿರೀಶ್‌ ಸೇರಿದಂತೆ ಕನ್ನಡ ಪ್ರಭ ಪತ್ರಕರ್ತ ಹರೀಶ್‌ ಹಾಗೂ ಮತ್ತೊಬ್ಬ ಸ್ಥಳೀಯ ರಾಜಕೀಯ ನಾಯಕನ ರಘು ಎಂಬವರ ವಿರುದ್ದ ಶನಿವಾರಸಂತೆ ಠಾಣಾ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಹಿನ್ನಲೆ

ಈ ಹಿಂದೆ ಸಂಘಪರಿವಾರದಿಂದ ದಾಳಿಗೊಳಗಾದ ಮುಸ್ಲಿಮ್ ಯುವಕನ ಕುಟುಂಬವು ದೂರು ನೀಡಿದರೂ, ಪೊಲೀಸರು ಅದನ್ನು ದಾಖಲಿಸಿಲ್ಲ. ದೂರು ನೀಡಲು ತೆರಳಿದ ಮುಸ್ಲಿಮ್ ಮಹಿಳೆಯರನ್ನು ಸತಾಯಿಸಿದ್ದು ಮಾತ್ರವಲ್ಲ, ಪೊಲೀಸರು ದುಷ್ಕರ್ಮಿಗಳ ಪರವಾಗಿ ಮೃದು ಧೋರಣೆ ತಾಳಿದ್ದಾರೆ. ಪೊಲೀಸರ ಈ ತಾರತಮ್ಯ ನೀತಿಯನ್ನು ಖಂಡಿಸಿ ಮುಸ್ಲಿಮ್ ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಅಂಬೇಡ್ಕರ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಆದರೆ ಜಿಲ್ಲೆಯಲ್ಲಿ ಗಲಭೆ ಹರಡುವ ದುರುದ್ದೇಶದಿಂದ ಓರ್ವ ಪತ್ರಕರ್ತ ಸಹಿತ ಸಂಘಪರಿವಾರದ ಕಾರ್ಯಕರ್ತರು ಘೋಷಣೆಯನ್ನು ತಿರುಚಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಿದ್ದರು.

ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರು ಈ ಕಿಡಿಗೇಡಿ ಕೃತ್ಯ ನಡೆಸಿರುವುದು ಇದು ಮೊದಲೇನಲ್ಲ. ಉಜಿರೆಯಲ್ಲಿ ಎಸ್.ಡಿ.ಪಿ.ಐ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಿರುಚಿ ಬಿಜೆಪಿ ಕಾರ್ಯಕರ್ತರು ವಿಕೃತಿ ಮೆರೆದಿದ್ದರು. ಇದಕ್ಕೂ ಮೊದಲು ಸಿಂದಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿ ಅದನ್ನು ಮುಸ್ಲಿಮರ ತಲೆಗೆ ಕಟ್ಟಲಾಗಿತ್ತು. ಇಂತಹ ದುಷ್ಕೃತ್ಯಗಳ ಮೂಲಕ ಮುಸ್ಲಿಮರನ್ನು ದೇಶದ್ರೋಹಿಗಳನ್ನಾಗಿ ಚಿತ್ರೀಕರಿಸಲು ವ್ಯವಸ್ಥಿತ ಪಿತೂರಿಗಳನ್ನು ನಡೆಸಲಾಗುತ್ತಿದೆ ಎಂದು ಎ.ಕೆ.ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ, ಪೊಲೀಸರ ಪೂರ್ವಾಗ್ರಹಪೀಡಿತ ತನಿಖೆ ಮೂಲಕ ಹಲವು ಅಮಾಯಕ ಮುಸ್ಲಿಮ್ ಯುವಕರನ್ನು ವಿನಾಕಾರಣ ಬಂಧಿಸಿ ಜೈಲಿಗಟ್ಟಲಾಗಿತ್ತು. ಇದೀಗ ಮುಸ್ಲಿಮ್ ಸಂಘಟನೆಗಳ ಒತ್ತಡದ ಕಾರಣ ಪೊಲೀಸರು ನಿಷ್ಪಕ್ಷಪಾತ ಹಾಗೂ ಕೂಲಂಕಷ ತನಿಖೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸಲು ಸಾಧ್ಯವಾಗಿದೆ. ಪೊಲೀಸರು ಈ ರೀತಿಯ ಸೂಕ್ಷ್ಮ ಘಟನೆಗಳನ್ನು ಗಂಭೀರವಾಗಿ ಪರಿಶೀಲಿಸಿ ನೈಜ ಅಪರಾಧಿಗಳನ್ನು ಬಂಧಿಸಿ ಇಂತಹ ಘಟನೆಗಳು ಮರುಕಳಿಸದಂತೆ ಗಮನಹರಿಸಬೇಕು. ಶಾಂತಿ ಕದಡಿ ಗಲಭೆ ಹರಡುವ ದುಷ್ಕರ್ಮಿಗಳ ವಿರುದ್ಧ ಸರಕಾರವೂ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು. ಹಾಗೆಯೇ ಸಂತ್ರಸ್ತ ಕುಟುಂಬ ನೀಡಿದ ದೂರು ದಾಖಲಿಸದೇ ಕರ್ತವ್ಯಲೋಪ ಎಸಗಿದ ಪೊಲೀಸರನ್ನು ಕೂಡಲೇ ಅಮಾನತುಪಡಿಸಬೇಕೆಂದು ಎ.ಕೆ.ಅಶ್ರಫ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...