Homeಮುಖಪುಟಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

- Advertisement -
- Advertisement -

ಕೊಡಗಿನ ಶನಿವಾರಸಂತೆಯಲ್ಲಿ ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಿರುಚಿ ಪ್ರಸಾರ ಮಾಡಿರುವುದು ಮುಸ್ಲಿಮರನ್ನು ದೇಶದ್ರೋಹಿಗಳನ್ನಾಗಿ ಚಿತ್ರಿಸುವ ಸಂಘೀ ಷಡ್ಯಂತ್ರದ ಮುಂದುವರಿದ ಭಾಗವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ಕಿಡಿಕಾರಿದ್ದಾರೆ.

ಶನಿವಾರಸಂತೆ ಪೊಲೀಸ್‌ ಠಾಣೆಯ ಮುಂದೆ ಬುರ್ಖಾಧಾರಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ‘ಅಂಬೇಡ್ಕರ್ ಝಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಆದರೆ ದುಷ್ಕರ್ಮಿಗಳು ಈ ವೀಡಿಯೋವನ್ನು ತಿರುಚಿ, ‘‘ಮುಸ್ಲಿಂ ಮಹಿಳೆಯರು ಪೊಲೀಸ್‌ ಠಾಣೆಯ ಮುಂದೆ ‘ಪಾಕಿಸ್ತಾನ್ ಝಿಂದಾಬಾದ್’ ಕೂಗಿದ್ದಾರೆ” ಎಂದು ವೈರಲ್ ಮಾಡಿದ್ದರು. ಇದೀಗ ಈ ವಿಡಿಯೊ ತಿರುಚಿದ್ದಾರೆ ಎನ್ನಲಾಗಿರುವ ಸ್ಥಳೀಯ ಬಿಜೆಪಿ ನಾಯಕ ಗಿರೀಶ್‌ ಸೇರಿದಂತೆ ಕನ್ನಡ ಪ್ರಭ ಪತ್ರಕರ್ತ ಹರೀಶ್‌ ಹಾಗೂ ಮತ್ತೊಬ್ಬ ಸ್ಥಳೀಯ ರಾಜಕೀಯ ನಾಯಕನ ರಘು ಎಂಬವರ ವಿರುದ್ದ ಶನಿವಾರಸಂತೆ ಠಾಣಾ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ಘಟನೆಯ ಹಿನ್ನಲೆ

ಈ ಹಿಂದೆ ಸಂಘಪರಿವಾರದಿಂದ ದಾಳಿಗೊಳಗಾದ ಮುಸ್ಲಿಮ್ ಯುವಕನ ಕುಟುಂಬವು ದೂರು ನೀಡಿದರೂ, ಪೊಲೀಸರು ಅದನ್ನು ದಾಖಲಿಸಿಲ್ಲ. ದೂರು ನೀಡಲು ತೆರಳಿದ ಮುಸ್ಲಿಮ್ ಮಹಿಳೆಯರನ್ನು ಸತಾಯಿಸಿದ್ದು ಮಾತ್ರವಲ್ಲ, ಪೊಲೀಸರು ದುಷ್ಕರ್ಮಿಗಳ ಪರವಾಗಿ ಮೃದು ಧೋರಣೆ ತಾಳಿದ್ದಾರೆ. ಪೊಲೀಸರ ಈ ತಾರತಮ್ಯ ನೀತಿಯನ್ನು ಖಂಡಿಸಿ ಮುಸ್ಲಿಮ್ ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಅಂಬೇಡ್ಕರ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಆದರೆ ಜಿಲ್ಲೆಯಲ್ಲಿ ಗಲಭೆ ಹರಡುವ ದುರುದ್ದೇಶದಿಂದ ಓರ್ವ ಪತ್ರಕರ್ತ ಸಹಿತ ಸಂಘಪರಿವಾರದ ಕಾರ್ಯಕರ್ತರು ಘೋಷಣೆಯನ್ನು ತಿರುಚಿ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಿದ್ದರು.

ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರು ಈ ಕಿಡಿಗೇಡಿ ಕೃತ್ಯ ನಡೆಸಿರುವುದು ಇದು ಮೊದಲೇನಲ್ಲ. ಉಜಿರೆಯಲ್ಲಿ ಎಸ್.ಡಿ.ಪಿ.ಐ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಿರುಚಿ ಬಿಜೆಪಿ ಕಾರ್ಯಕರ್ತರು ವಿಕೃತಿ ಮೆರೆದಿದ್ದರು. ಇದಕ್ಕೂ ಮೊದಲು ಸಿಂದಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿ ಅದನ್ನು ಮುಸ್ಲಿಮರ ತಲೆಗೆ ಕಟ್ಟಲಾಗಿತ್ತು. ಇಂತಹ ದುಷ್ಕೃತ್ಯಗಳ ಮೂಲಕ ಮುಸ್ಲಿಮರನ್ನು ದೇಶದ್ರೋಹಿಗಳನ್ನಾಗಿ ಚಿತ್ರೀಕರಿಸಲು ವ್ಯವಸ್ಥಿತ ಪಿತೂರಿಗಳನ್ನು ನಡೆಸಲಾಗುತ್ತಿದೆ ಎಂದು ಎ.ಕೆ.ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ, ಪೊಲೀಸರ ಪೂರ್ವಾಗ್ರಹಪೀಡಿತ ತನಿಖೆ ಮೂಲಕ ಹಲವು ಅಮಾಯಕ ಮುಸ್ಲಿಮ್ ಯುವಕರನ್ನು ವಿನಾಕಾರಣ ಬಂಧಿಸಿ ಜೈಲಿಗಟ್ಟಲಾಗಿತ್ತು. ಇದೀಗ ಮುಸ್ಲಿಮ್ ಸಂಘಟನೆಗಳ ಒತ್ತಡದ ಕಾರಣ ಪೊಲೀಸರು ನಿಷ್ಪಕ್ಷಪಾತ ಹಾಗೂ ಕೂಲಂಕಷ ತನಿಖೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸಲು ಸಾಧ್ಯವಾಗಿದೆ. ಪೊಲೀಸರು ಈ ರೀತಿಯ ಸೂಕ್ಷ್ಮ ಘಟನೆಗಳನ್ನು ಗಂಭೀರವಾಗಿ ಪರಿಶೀಲಿಸಿ ನೈಜ ಅಪರಾಧಿಗಳನ್ನು ಬಂಧಿಸಿ ಇಂತಹ ಘಟನೆಗಳು ಮರುಕಳಿಸದಂತೆ ಗಮನಹರಿಸಬೇಕು. ಶಾಂತಿ ಕದಡಿ ಗಲಭೆ ಹರಡುವ ದುಷ್ಕರ್ಮಿಗಳ ವಿರುದ್ಧ ಸರಕಾರವೂ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು. ಹಾಗೆಯೇ ಸಂತ್ರಸ್ತ ಕುಟುಂಬ ನೀಡಿದ ದೂರು ದಾಖಲಿಸದೇ ಕರ್ತವ್ಯಲೋಪ ಎಸಗಿದ ಪೊಲೀಸರನ್ನು ಕೂಡಲೇ ಅಮಾನತುಪಡಿಸಬೇಕೆಂದು ಎ.ಕೆ.ಅಶ್ರಫ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...