Homeಚಳವಳಿಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಮರ್ಯಾದೆ ಹೀನ ಹತ್ಯೆ, ದಲಿತ- ದಮನಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಡಿದೆದ್ದ ಕೊಪ್ಪಳ ಚಲೋ ಹೋರಾಟ..

- Advertisement -
- Advertisement -

ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ನಡೆದ ಮಾರ್ಯಾದೆಗೇಡು ಹತ್ಯೆಗೆ ದಾನಪ್ಪ ಮಾತ್ರ ಸತ್ತಿಲ್ಲ, ನಾವೆಲ್ಲರೂ ಸತ್ತಿದ್ದೇವೆ, ಈ ದೇಶದ ಕಾನೂನು ಸತ್ತಿದೆ. ಈ ದೇಶದಲ್ಲಿ ಮನುವಾದಿಗಳಿಂದ ಪ್ರತಿದಿನವೂ ಅಂಬೇಡ್ಕರ್ ಬರೆದಿಟ್ಟ ಸಂವಿಧಾನ ಕೊಲೆಯಾಗುತ್ತಿದೆ ಎಂದು ಹೋರಾಟಗಾರ ಮತ್ತು ಚಿಂತಕ ಶಿವಸುಂದರ್ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಜಾತಿ ಕಾರಣಕ್ಕೆ ಸಂಭವಿಸಿದ ದಾನಪ್ಪ ಹಾಗೂ ರಾಘವೇಂದ್ರ ಕೊಲೆ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ದಲಿತ ದಮನಿತರ ಒಕ್ಕೂಟದ ವತಿಯಿಂದ ನಡೆದ ಬೃಹತ್ ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ‌ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ನಾವೆಲ್ಲರೂ ಪ್ರೀತಿ – ಮಮತೆಯಿಂದ ಬದುಕಬೇಕು, ಮನುಷ್ಯರ ಥರ ಬದುಕಬೇಕೆಂದು ಕನಸು ಕಂಡೆವು. ಆದರೆ ಜಾತಿ ಕಾರಣಕ್ಕೆ ಅದು ಪ್ರತಿದಿನ ಕೊಲೆಯಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹುಟ್ಟು ಯಾರ ಕೈಯಲ್ಲೂ ಇಲ್ಲ. ಹಾಗಾಗಿ ನಿಷ್ಕಲ್ಮಶವಾಗಿ ಒಂದು ಗಂಡು-ಹೆಣ್ಣು ಪ್ರೀತಿ ಮಾಡಿದರೆ ಅದನ್ನು ಗೌರವಿಸಬೇಕು. 18 ವರ್ಷ ತುಂಬಿದ ಎಲ್ಲರಿಗೂ ತಮಗಿಷ್ಟಬಂದವರನ್ನು ಪ್ರೀತಿಸುವ ಹಕ್ಕಿದೆ. 18 ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿರುವ ನಾವು ಪ್ರೀತಿಸುವ ಹಕ್ಕು ಕಿತ್ತುಕೊಳ್ಳುತ್ತಿರುವುದೇಕೆ ಎಂದು ಶಿವಸುಂದರ್ ಪ್ರಶ್ನಿಸಿದರು.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು


ಪ್ರೀತಿಯನ್ನು ಕೊಲ್ಲುವುದೇ ಮನುಸ್ಮೃತಿ. ಮನುಷ್ಯತ್ವ ಉಳಿಸುವುದು ಸಂವಿಧಾನ. ಸಂವಿಧಾನವನ್ನು ಉಳಿಸಲು ಸಾರ್ವಜನಿಕ ಸಂಸ್ಥೆಗಳನ್ನು ರಚಿಸಲಾಯ್ತು. ಆದರೆ ಪ್ರತಿ ನಿತ್ಯ ನ್ಯಾಯ ಉಳಿಸಬೇಕಾದ ಜನರು ಮನುಸ್ಮೃತಿ ರಕ್ಷಿಸುತ್ತ ಸಂವಿಧಾನ ದ್ರೋಹಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿಯೇ ದಲಿತ-ದಮನಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ದೂರಿದರು.

ಪ್ರೀತಿಯನ್ನು ಕೊಲೆ ಮಾಡುವ ಕೊಲೆಗಾರರ ಜೊತೆ ನ್ಯಾಯ ನೀಡುವವರು ಶಾಮೀಲಾಗಿದ್ದಾರೆ. ಎಸ್‌ಸಿ ಎಸ್ಟಿ ಅಟ್ರಾಸಿಟಿ ಕಾಯ್ದೆಯನ್ನು ದುರ್ಬಲಗೊಳಿಸಲು ಸರ್ಕಾರ, ನ್ಯಾಯಾಂಗ ಪ್ರಯತ್ನಿಸಿತು. ಇವತ್ತು ದಲಿತರು ದಾಖಲಿಸುವ ದೂರುಗಳಲ್ಲಿ ಕೇವಲ ಶೇ.2 ರಷ್ಟು ಜನರಿಗೆ ಮಾತ್ರ ಶಿಕ್ಷೆಯಾಗುತ್ತಿದೆ. ಎಫ್‌ಐಆರ್ ದಾಖಲಾಗುವಾಗಲೇ ಪ್ರಕರಣವನ್ನು ದುರ್ಬಲಗೊಳಿಸುತ್ತದೆ. ಈ ರೀತಿಯಾಗಿ ವ್ಯವಸ್ಥಿತಿವಾಗಿ ನ್ಯಾಯ ನಿರಾಕರಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಣ್ಣ ಪುಟ್ಟ ಕೇಸುಗಳಿಗೆ ದೇಶದೋಹದ ಹೆಸರಿನಲ್ಲಿ 10-15 ವರ್ಷ ಜೈಲು ಶಿಕ್ಷೆ ವಿಧಿಸುವ ಸರ್ಕಾರಗಳು ಜಾತಿ ದೌರ್ಜನ್ಯ, ಕೊಲೆಗಳಿಗೆ ಕೇವಲ 3 ತಿಂಗಳಲ್ಲಿ ಜಾಮೀನು ಸಿಗುವಂತೆ ವರ್ತಿಸುತ್ತವೆ. ನಾನು ಎಲ್ಲರಲ್ಲಿಯೂ ಇದ್ದೀನಿ ಅಂದುಕೊಳ್ಳುವ ಧರ್ಮ ಇದ್ದರೆ ಸಂವಿಧಾನ ಉಳಿಯುತ್ತೆ. ಮೇಲು – ಕೀಳು ಪ್ರತಿಪಾದಿಸುವ ಧರ್ಮ ಬಂದರೆ ಸಂವಿಧಾನ ಸಾಯುತ್ತೆ. ಈ ದೇಶದಲ್ಲಿ ಮನುಸ್ಮೃತಿಯನ್ನು ನಾಶಗೊಳಿಸಿ, ಸಂವಿಧಾನ ಉಳಿಸುವ ಪಣ ತೊಡೋಣ ಎಂದು ಶಿವಸುಂದರ್ ಕರೆ ನೀಡಿದರು.

ಹೈಕೋರ್ಟ್ ವಕೀಲೆ ಮೈತ್ರೇಯಿ ಮಾತನಾಡಿ, “ಈ ಜಾತಿ ವ್ಯವಸ್ಥೆ ಎಂಬುದು ಒಂದು ರೋಗವಾಗಿದೆ. ಅದು ಎಲ್ಲಿಯವರೆಗೂ ಇರುತ್ತೋ ಅಲ್ಲಿಯವರೆಗೂ ದೇಶ ಮುಂದುವರೆಯುವುದಿಲ್ಲ. ಪ್ರೀತಿಸಿದವರನ್ನು ಮರ್ಯಾದೆ ಹೆಸರಲ್ಲಿ ಕೊಂದರೆ ಅದರಲ್ಲಿ ಮರ್ಯಾದೆ ಇರುವುದಿಲ್ಲ. ಅದು ಹೀನ ಕೊಲೆ ಎಂದು ಸವೋರ್ಚ ನ್ಯಾಯಾಲಯ ಹೇಳಿದೆ” ಎಂದರು.

ನಮ್ಮ ದೇಶದಲ್ಲಿ ಪ್ರತಿದಿನ ಸರಾಸರಿ 10 ದಲಿತ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಷ್ಟು ವರ್ಷವಾದರೂ ಸಮಾನತೆಯ ಸಮಾಜ ಕಟ್ಟಲು ಸಾಧ್ಯವಾಗಿಲ್ಲ. ಸಮಾನತೆಗಾಗಿ, ಭಾತೃತ್ವಕ್ಕಾಗಿ, ಜಾತಿವಿನಾಶದ ಸಮಾಜದ ವಿರುದ್ಧ ಸರ್ಕಾರ ಕೆಲಸ ಮಾಡುತ್ತಿದೆ. ಜಾತಿ ವಿನಾಶ ಆಗದೇ ನಿಜವಾದ ಪ್ರಜಾಪ್ರಭುತ್ವ ಜಾರಿಗೆ ಬರಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಸಾಹಿತಿ, ಹೋರಾಟಗಾರ ಬಸವರಾಜ್ ಸೂಲಿಬಾವಿ ಮಾತನಾಡಿ, “ಮೀಸಲು ಕ್ಷೇತ್ರಗಳಲ್ಲಿಯೇ ಇಂದು ದಲಿತ-ದಮನಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿರುವುದು ದೊಡ್ಡ ದುರಂತವಾಗಿದೆ. ಈ ಕ್ಷೇತ್ರಗಳಲ್ಲಿ ದಲಿತರು-ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರು ರಕ್ಷಣೆಗಾಗಿ ಆ ಕ್ಷೇತ್ರಗಳನ್ನು ಮೀಸಲು ಎಂದು ಘೋಷಿಸಲಾಯ್ತು. ಆದರೆ ಅಲ್ಲಿನ ಜನಪ್ರತಿನಿಧಿಗಳು ಈ ಸಮುದಾಯದ ಜನರ ಹಿತ ಕಾಯಲು ವಿಫಲರಾಗಿ ಮೇಲ್ಜಾತಿ ಜನರ ಪ್ರತಿನಿಧಿಗಳಾಗಿ ಕೆಲಸ ಮಾಡುತ್ತಿರುವುದೇ ಇಂತಹ ದೌರ್ಜನ್ಯಗಳಿಗೆ ಕಾರಣ” ಎಂದು ವಿಷಾಧ ವ್ಯಕ್ತಪಡಿಸಿದರು.

ದಾನಪ್ಪ, ರಾಘವೇಂದ್ರ ಕೊಲೆ ಕುರಿತು ಹಾಲಿ ಶಾಸಕ ಬಸವರಾಜ್ ದಡೆಸಗೂರು, ಮಾಜಿ ಶಾಸಕ ಶಿವರಾಜ್ ತಂಗಡಗಿ ಏಕೆ ಮಾತನಾಡಿಲ್ಲ? ಅವರು ಯಾರನ್ನು ಪ್ರತಿನಿಧಿಸುತ್ತಿದ್ದಾರೆ, ಕೊಂದವರು ಮಾತ್ರವಲ್ಲದೆ ಜಾತಿ ವ್ಯವಸ್ಥೆಯನ್ನು ಸಮರ್ಥನೆ ಮಾಡುವ ಎಲ್ಲರೂ ಕೊಲೆಗಾರರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ಈ ಲಾಕ್‌ಡೌನ್‌ ಅವಧಿಯಲ್ಲಿ ಹತ್ತಾರು ಮರ್ಯಾದೆಹೀನ ಹತ್ಯೆಗಳು ಸಂಭವಿಸಿವೆ. ಬಿಜಾಪುರದ ದೇವರ ಹಿಪ್ಪರಗಿಯಲ್ಲಿ ಅಂತರ್ಜಾತಿ ಮದುವೆಯಾದ ದಂಪತಿಯನ್ನು ಇಂದು ಕೊಲ್ಲಲಾಗಿದೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಕೊಲೆಯಾಗಿದೆ. ಬರಗೂರಿನಲ್ಲಿ ಹತ್ಯೆಯಾಗಿದೆ. ನಾಳೆ ಬೆಳಿಗ್ಗೆ ನಾವು ಯಾವ ಆಸ್ಪತ್ರೆಯಲ್ಲಿ ಕೋವಿಡ್ ಬಂದು ಸಾಯುತ್ತೇವೆ ಎಂಬುದು ಗೊತ್ತಿರಲಿಲ್ಲದಿದ್ದರೂ ಜನ ಜಾತಿಗಾಗಿ ಕೊಲೆ ಮಾಡುತ್ತಿದ್ದರೆ ಎಂದರೆ ಎಷ್ಟರ ಮಟ್ಟಿಗೆ ಜಾತಿ ವಿಷ ಜನರಲ್ಲಿ ಬೇರೂರಿದೆ” ಎಂದು ವಿ‍ಷಾಧ ವ್ಯಕ್ತಪಡಿಸಿದರು.

ಕೋವಿಡ್‌ಗಿಂತಲೂ ದೊಡ್ಡ ಕೊಲೆಗಡುಕ ವೈರಸ್ ಎಂದರೆ ಅದು ಜಾತಿ ವೈರಸ್ ಆಗಿದೆ. ಈ ಹಿಂದೆಯೂ ಮರ್ಯಾದೆಗೇಡು ಹತ್ಯೆಗಳು, ಜಾತಿ ದೌರ್ಜನ್ಯಗಳು ನಡೆಯುತ್ತಿದ್ದವು. ಆದರೆ ಇಂದು ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಈ ಕೊಲೆಗಳಿಗೆ ಕಾನೂನಿನ ಮಾನ್ಯತೆ ನೀಡುವ ಕೆಲಸ ಮಾಡುತ್ತಿವೆ. ಗೋಹತ್ಯೆ ನಿಷೇಧ ಕಾಯ್ದೆಯ ಹೆಸರಿನಲ್ಲಿ ದಲಿತ ದಮನಿತರ ಶೋಷಣೆಗೆ ರಹದಾರಿ ನೀಡಿವೆ. ಈ ಮತೀಯವಾದಿ ಸರ್ಕಾರ, ಮನುವಾದ ಸರ್ಕಾರ ಕೊಲೆಗಡುಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದೆ. ಇದರ ವಿರುದ್ಧ ನಿರಂತರವಾಗಿ ದನಿಯೆತ್ತಬೇಕಾಗಿದೆ ಎಂದರು.

ಹೋರಾಟದಲ್ಲಿ “ದಲಿತ-ದಮನಿತರ ಮೇಲಿನ ಕೊಲೆ ದೌರ್ಜನ್ಯಗಳು ನಿಲ್ಲಲೇಬೇಕು. ದಾನಪ್ಪ – ರಾಘವೇಂದ್ರರ ಕೊಲೆಯ ಪ್ರಕರಣಗಳ ನ್ಯಾಯಾಂಗ ತನಿಖೆಯಾಗಲೇಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜಿಲ್ಲೆಯಲ್ಲಿ ದೌರ್ಜನ್ಯಗಳನ್ನು ತಡೆಗಟ್ಟದ ಜಿಲ್ಲಾಡಳಿತದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂಬ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಹೋರಾಟಗಾರರಾದ ಡಿ.ಎಚ್ ಪೂಜಾರ್, ಕರಿಯಪ್ಪ ಗುಡಿಮನಿ, ಭಾರದ್ವಾಜ್ ಸೇರಿದಂತೆ ಇತರರು ಮಾತನಾಡಿದರು.


ಇದನ್ನೂ ಓದಿ: ಕೊಪ್ಪಳದಲ್ಲಿ ಕ್ರೌರ್ಯ: ಕ್ಷೌರಕ್ಕೆ ಬಂದ ದಲಿತ ಯುವಕರ ಮೇಲೆ ಹಲ್ಲೆ – ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಯುವಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...