Homeಚಳವಳಿಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಮರ್ಯಾದೆ ಹೀನ ಹತ್ಯೆ, ದಲಿತ- ದಮನಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಡಿದೆದ್ದ ಕೊಪ್ಪಳ ಚಲೋ ಹೋರಾಟ..

- Advertisement -
- Advertisement -

ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ನಡೆದ ಮಾರ್ಯಾದೆಗೇಡು ಹತ್ಯೆಗೆ ದಾನಪ್ಪ ಮಾತ್ರ ಸತ್ತಿಲ್ಲ, ನಾವೆಲ್ಲರೂ ಸತ್ತಿದ್ದೇವೆ, ಈ ದೇಶದ ಕಾನೂನು ಸತ್ತಿದೆ. ಈ ದೇಶದಲ್ಲಿ ಮನುವಾದಿಗಳಿಂದ ಪ್ರತಿದಿನವೂ ಅಂಬೇಡ್ಕರ್ ಬರೆದಿಟ್ಟ ಸಂವಿಧಾನ ಕೊಲೆಯಾಗುತ್ತಿದೆ ಎಂದು ಹೋರಾಟಗಾರ ಮತ್ತು ಚಿಂತಕ ಶಿವಸುಂದರ್ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಜಾತಿ ಕಾರಣಕ್ಕೆ ಸಂಭವಿಸಿದ ದಾನಪ್ಪ ಹಾಗೂ ರಾಘವೇಂದ್ರ ಕೊಲೆ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ದಲಿತ ದಮನಿತರ ಒಕ್ಕೂಟದ ವತಿಯಿಂದ ನಡೆದ ಬೃಹತ್ ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ‌ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ನಾವೆಲ್ಲರೂ ಪ್ರೀತಿ – ಮಮತೆಯಿಂದ ಬದುಕಬೇಕು, ಮನುಷ್ಯರ ಥರ ಬದುಕಬೇಕೆಂದು ಕನಸು ಕಂಡೆವು. ಆದರೆ ಜಾತಿ ಕಾರಣಕ್ಕೆ ಅದು ಪ್ರತಿದಿನ ಕೊಲೆಯಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹುಟ್ಟು ಯಾರ ಕೈಯಲ್ಲೂ ಇಲ್ಲ. ಹಾಗಾಗಿ ನಿಷ್ಕಲ್ಮಶವಾಗಿ ಒಂದು ಗಂಡು-ಹೆಣ್ಣು ಪ್ರೀತಿ ಮಾಡಿದರೆ ಅದನ್ನು ಗೌರವಿಸಬೇಕು. 18 ವರ್ಷ ತುಂಬಿದ ಎಲ್ಲರಿಗೂ ತಮಗಿಷ್ಟಬಂದವರನ್ನು ಪ್ರೀತಿಸುವ ಹಕ್ಕಿದೆ. 18 ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿರುವ ನಾವು ಪ್ರೀತಿಸುವ ಹಕ್ಕು ಕಿತ್ತುಕೊಳ್ಳುತ್ತಿರುವುದೇಕೆ ಎಂದು ಶಿವಸುಂದರ್ ಪ್ರಶ್ನಿಸಿದರು.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು


ಪ್ರೀತಿಯನ್ನು ಕೊಲ್ಲುವುದೇ ಮನುಸ್ಮೃತಿ. ಮನುಷ್ಯತ್ವ ಉಳಿಸುವುದು ಸಂವಿಧಾನ. ಸಂವಿಧಾನವನ್ನು ಉಳಿಸಲು ಸಾರ್ವಜನಿಕ ಸಂಸ್ಥೆಗಳನ್ನು ರಚಿಸಲಾಯ್ತು. ಆದರೆ ಪ್ರತಿ ನಿತ್ಯ ನ್ಯಾಯ ಉಳಿಸಬೇಕಾದ ಜನರು ಮನುಸ್ಮೃತಿ ರಕ್ಷಿಸುತ್ತ ಸಂವಿಧಾನ ದ್ರೋಹಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿಯೇ ದಲಿತ-ದಮನಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ದೂರಿದರು.

ಪ್ರೀತಿಯನ್ನು ಕೊಲೆ ಮಾಡುವ ಕೊಲೆಗಾರರ ಜೊತೆ ನ್ಯಾಯ ನೀಡುವವರು ಶಾಮೀಲಾಗಿದ್ದಾರೆ. ಎಸ್‌ಸಿ ಎಸ್ಟಿ ಅಟ್ರಾಸಿಟಿ ಕಾಯ್ದೆಯನ್ನು ದುರ್ಬಲಗೊಳಿಸಲು ಸರ್ಕಾರ, ನ್ಯಾಯಾಂಗ ಪ್ರಯತ್ನಿಸಿತು. ಇವತ್ತು ದಲಿತರು ದಾಖಲಿಸುವ ದೂರುಗಳಲ್ಲಿ ಕೇವಲ ಶೇ.2 ರಷ್ಟು ಜನರಿಗೆ ಮಾತ್ರ ಶಿಕ್ಷೆಯಾಗುತ್ತಿದೆ. ಎಫ್‌ಐಆರ್ ದಾಖಲಾಗುವಾಗಲೇ ಪ್ರಕರಣವನ್ನು ದುರ್ಬಲಗೊಳಿಸುತ್ತದೆ. ಈ ರೀತಿಯಾಗಿ ವ್ಯವಸ್ಥಿತಿವಾಗಿ ನ್ಯಾಯ ನಿರಾಕರಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಣ್ಣ ಪುಟ್ಟ ಕೇಸುಗಳಿಗೆ ದೇಶದೋಹದ ಹೆಸರಿನಲ್ಲಿ 10-15 ವರ್ಷ ಜೈಲು ಶಿಕ್ಷೆ ವಿಧಿಸುವ ಸರ್ಕಾರಗಳು ಜಾತಿ ದೌರ್ಜನ್ಯ, ಕೊಲೆಗಳಿಗೆ ಕೇವಲ 3 ತಿಂಗಳಲ್ಲಿ ಜಾಮೀನು ಸಿಗುವಂತೆ ವರ್ತಿಸುತ್ತವೆ. ನಾನು ಎಲ್ಲರಲ್ಲಿಯೂ ಇದ್ದೀನಿ ಅಂದುಕೊಳ್ಳುವ ಧರ್ಮ ಇದ್ದರೆ ಸಂವಿಧಾನ ಉಳಿಯುತ್ತೆ. ಮೇಲು – ಕೀಳು ಪ್ರತಿಪಾದಿಸುವ ಧರ್ಮ ಬಂದರೆ ಸಂವಿಧಾನ ಸಾಯುತ್ತೆ. ಈ ದೇಶದಲ್ಲಿ ಮನುಸ್ಮೃತಿಯನ್ನು ನಾಶಗೊಳಿಸಿ, ಸಂವಿಧಾನ ಉಳಿಸುವ ಪಣ ತೊಡೋಣ ಎಂದು ಶಿವಸುಂದರ್ ಕರೆ ನೀಡಿದರು.

ಹೈಕೋರ್ಟ್ ವಕೀಲೆ ಮೈತ್ರೇಯಿ ಮಾತನಾಡಿ, “ಈ ಜಾತಿ ವ್ಯವಸ್ಥೆ ಎಂಬುದು ಒಂದು ರೋಗವಾಗಿದೆ. ಅದು ಎಲ್ಲಿಯವರೆಗೂ ಇರುತ್ತೋ ಅಲ್ಲಿಯವರೆಗೂ ದೇಶ ಮುಂದುವರೆಯುವುದಿಲ್ಲ. ಪ್ರೀತಿಸಿದವರನ್ನು ಮರ್ಯಾದೆ ಹೆಸರಲ್ಲಿ ಕೊಂದರೆ ಅದರಲ್ಲಿ ಮರ್ಯಾದೆ ಇರುವುದಿಲ್ಲ. ಅದು ಹೀನ ಕೊಲೆ ಎಂದು ಸವೋರ್ಚ ನ್ಯಾಯಾಲಯ ಹೇಳಿದೆ” ಎಂದರು.

ನಮ್ಮ ದೇಶದಲ್ಲಿ ಪ್ರತಿದಿನ ಸರಾಸರಿ 10 ದಲಿತ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಷ್ಟು ವರ್ಷವಾದರೂ ಸಮಾನತೆಯ ಸಮಾಜ ಕಟ್ಟಲು ಸಾಧ್ಯವಾಗಿಲ್ಲ. ಸಮಾನತೆಗಾಗಿ, ಭಾತೃತ್ವಕ್ಕಾಗಿ, ಜಾತಿವಿನಾಶದ ಸಮಾಜದ ವಿರುದ್ಧ ಸರ್ಕಾರ ಕೆಲಸ ಮಾಡುತ್ತಿದೆ. ಜಾತಿ ವಿನಾಶ ಆಗದೇ ನಿಜವಾದ ಪ್ರಜಾಪ್ರಭುತ್ವ ಜಾರಿಗೆ ಬರಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಸಾಹಿತಿ, ಹೋರಾಟಗಾರ ಬಸವರಾಜ್ ಸೂಲಿಬಾವಿ ಮಾತನಾಡಿ, “ಮೀಸಲು ಕ್ಷೇತ್ರಗಳಲ್ಲಿಯೇ ಇಂದು ದಲಿತ-ದಮನಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿರುವುದು ದೊಡ್ಡ ದುರಂತವಾಗಿದೆ. ಈ ಕ್ಷೇತ್ರಗಳಲ್ಲಿ ದಲಿತರು-ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರು ರಕ್ಷಣೆಗಾಗಿ ಆ ಕ್ಷೇತ್ರಗಳನ್ನು ಮೀಸಲು ಎಂದು ಘೋಷಿಸಲಾಯ್ತು. ಆದರೆ ಅಲ್ಲಿನ ಜನಪ್ರತಿನಿಧಿಗಳು ಈ ಸಮುದಾಯದ ಜನರ ಹಿತ ಕಾಯಲು ವಿಫಲರಾಗಿ ಮೇಲ್ಜಾತಿ ಜನರ ಪ್ರತಿನಿಧಿಗಳಾಗಿ ಕೆಲಸ ಮಾಡುತ್ತಿರುವುದೇ ಇಂತಹ ದೌರ್ಜನ್ಯಗಳಿಗೆ ಕಾರಣ” ಎಂದು ವಿಷಾಧ ವ್ಯಕ್ತಪಡಿಸಿದರು.

ದಾನಪ್ಪ, ರಾಘವೇಂದ್ರ ಕೊಲೆ ಕುರಿತು ಹಾಲಿ ಶಾಸಕ ಬಸವರಾಜ್ ದಡೆಸಗೂರು, ಮಾಜಿ ಶಾಸಕ ಶಿವರಾಜ್ ತಂಗಡಗಿ ಏಕೆ ಮಾತನಾಡಿಲ್ಲ? ಅವರು ಯಾರನ್ನು ಪ್ರತಿನಿಧಿಸುತ್ತಿದ್ದಾರೆ, ಕೊಂದವರು ಮಾತ್ರವಲ್ಲದೆ ಜಾತಿ ವ್ಯವಸ್ಥೆಯನ್ನು ಸಮರ್ಥನೆ ಮಾಡುವ ಎಲ್ಲರೂ ಕೊಲೆಗಾರರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ಈ ಲಾಕ್‌ಡೌನ್‌ ಅವಧಿಯಲ್ಲಿ ಹತ್ತಾರು ಮರ್ಯಾದೆಹೀನ ಹತ್ಯೆಗಳು ಸಂಭವಿಸಿವೆ. ಬಿಜಾಪುರದ ದೇವರ ಹಿಪ್ಪರಗಿಯಲ್ಲಿ ಅಂತರ್ಜಾತಿ ಮದುವೆಯಾದ ದಂಪತಿಯನ್ನು ಇಂದು ಕೊಲ್ಲಲಾಗಿದೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಕೊಲೆಯಾಗಿದೆ. ಬರಗೂರಿನಲ್ಲಿ ಹತ್ಯೆಯಾಗಿದೆ. ನಾಳೆ ಬೆಳಿಗ್ಗೆ ನಾವು ಯಾವ ಆಸ್ಪತ್ರೆಯಲ್ಲಿ ಕೋವಿಡ್ ಬಂದು ಸಾಯುತ್ತೇವೆ ಎಂಬುದು ಗೊತ್ತಿರಲಿಲ್ಲದಿದ್ದರೂ ಜನ ಜಾತಿಗಾಗಿ ಕೊಲೆ ಮಾಡುತ್ತಿದ್ದರೆ ಎಂದರೆ ಎಷ್ಟರ ಮಟ್ಟಿಗೆ ಜಾತಿ ವಿಷ ಜನರಲ್ಲಿ ಬೇರೂರಿದೆ” ಎಂದು ವಿ‍ಷಾಧ ವ್ಯಕ್ತಪಡಿಸಿದರು.

ಕೋವಿಡ್‌ಗಿಂತಲೂ ದೊಡ್ಡ ಕೊಲೆಗಡುಕ ವೈರಸ್ ಎಂದರೆ ಅದು ಜಾತಿ ವೈರಸ್ ಆಗಿದೆ. ಈ ಹಿಂದೆಯೂ ಮರ್ಯಾದೆಗೇಡು ಹತ್ಯೆಗಳು, ಜಾತಿ ದೌರ್ಜನ್ಯಗಳು ನಡೆಯುತ್ತಿದ್ದವು. ಆದರೆ ಇಂದು ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಈ ಕೊಲೆಗಳಿಗೆ ಕಾನೂನಿನ ಮಾನ್ಯತೆ ನೀಡುವ ಕೆಲಸ ಮಾಡುತ್ತಿವೆ. ಗೋಹತ್ಯೆ ನಿಷೇಧ ಕಾಯ್ದೆಯ ಹೆಸರಿನಲ್ಲಿ ದಲಿತ ದಮನಿತರ ಶೋಷಣೆಗೆ ರಹದಾರಿ ನೀಡಿವೆ. ಈ ಮತೀಯವಾದಿ ಸರ್ಕಾರ, ಮನುವಾದ ಸರ್ಕಾರ ಕೊಲೆಗಡುಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದೆ. ಇದರ ವಿರುದ್ಧ ನಿರಂತರವಾಗಿ ದನಿಯೆತ್ತಬೇಕಾಗಿದೆ ಎಂದರು.

ಹೋರಾಟದಲ್ಲಿ “ದಲಿತ-ದಮನಿತರ ಮೇಲಿನ ಕೊಲೆ ದೌರ್ಜನ್ಯಗಳು ನಿಲ್ಲಲೇಬೇಕು. ದಾನಪ್ಪ – ರಾಘವೇಂದ್ರರ ಕೊಲೆಯ ಪ್ರಕರಣಗಳ ನ್ಯಾಯಾಂಗ ತನಿಖೆಯಾಗಲೇಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜಿಲ್ಲೆಯಲ್ಲಿ ದೌರ್ಜನ್ಯಗಳನ್ನು ತಡೆಗಟ್ಟದ ಜಿಲ್ಲಾಡಳಿತದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂಬ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಹೋರಾಟಗಾರರಾದ ಡಿ.ಎಚ್ ಪೂಜಾರ್, ಕರಿಯಪ್ಪ ಗುಡಿಮನಿ, ಭಾರದ್ವಾಜ್ ಸೇರಿದಂತೆ ಇತರರು ಮಾತನಾಡಿದರು.


ಇದನ್ನೂ ಓದಿ: ಕೊಪ್ಪಳದಲ್ಲಿ ಕ್ರೌರ್ಯ: ಕ್ಷೌರಕ್ಕೆ ಬಂದ ದಲಿತ ಯುವಕರ ಮೇಲೆ ಹಲ್ಲೆ – ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಯುವಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...