Homeಚಳವಳಿಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಮರ್ಯಾದೆ ಹೀನ ಹತ್ಯೆ, ದಲಿತ- ದಮನಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಡಿದೆದ್ದ ಕೊಪ್ಪಳ ಚಲೋ ಹೋರಾಟ..

- Advertisement -
- Advertisement -

ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ನಡೆದ ಮಾರ್ಯಾದೆಗೇಡು ಹತ್ಯೆಗೆ ದಾನಪ್ಪ ಮಾತ್ರ ಸತ್ತಿಲ್ಲ, ನಾವೆಲ್ಲರೂ ಸತ್ತಿದ್ದೇವೆ, ಈ ದೇಶದ ಕಾನೂನು ಸತ್ತಿದೆ. ಈ ದೇಶದಲ್ಲಿ ಮನುವಾದಿಗಳಿಂದ ಪ್ರತಿದಿನವೂ ಅಂಬೇಡ್ಕರ್ ಬರೆದಿಟ್ಟ ಸಂವಿಧಾನ ಕೊಲೆಯಾಗುತ್ತಿದೆ ಎಂದು ಹೋರಾಟಗಾರ ಮತ್ತು ಚಿಂತಕ ಶಿವಸುಂದರ್ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಜಾತಿ ಕಾರಣಕ್ಕೆ ಸಂಭವಿಸಿದ ದಾನಪ್ಪ ಹಾಗೂ ರಾಘವೇಂದ್ರ ಕೊಲೆ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ದಲಿತ ದಮನಿತರ ಒಕ್ಕೂಟದ ವತಿಯಿಂದ ನಡೆದ ಬೃಹತ್ ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ‌ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ನಾವೆಲ್ಲರೂ ಪ್ರೀತಿ – ಮಮತೆಯಿಂದ ಬದುಕಬೇಕು, ಮನುಷ್ಯರ ಥರ ಬದುಕಬೇಕೆಂದು ಕನಸು ಕಂಡೆವು. ಆದರೆ ಜಾತಿ ಕಾರಣಕ್ಕೆ ಅದು ಪ್ರತಿದಿನ ಕೊಲೆಯಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹುಟ್ಟು ಯಾರ ಕೈಯಲ್ಲೂ ಇಲ್ಲ. ಹಾಗಾಗಿ ನಿಷ್ಕಲ್ಮಶವಾಗಿ ಒಂದು ಗಂಡು-ಹೆಣ್ಣು ಪ್ರೀತಿ ಮಾಡಿದರೆ ಅದನ್ನು ಗೌರವಿಸಬೇಕು. 18 ವರ್ಷ ತುಂಬಿದ ಎಲ್ಲರಿಗೂ ತಮಗಿಷ್ಟಬಂದವರನ್ನು ಪ್ರೀತಿಸುವ ಹಕ್ಕಿದೆ. 18 ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿರುವ ನಾವು ಪ್ರೀತಿಸುವ ಹಕ್ಕು ಕಿತ್ತುಕೊಳ್ಳುತ್ತಿರುವುದೇಕೆ ಎಂದು ಶಿವಸುಂದರ್ ಪ್ರಶ್ನಿಸಿದರು.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು


ಪ್ರೀತಿಯನ್ನು ಕೊಲ್ಲುವುದೇ ಮನುಸ್ಮೃತಿ. ಮನುಷ್ಯತ್ವ ಉಳಿಸುವುದು ಸಂವಿಧಾನ. ಸಂವಿಧಾನವನ್ನು ಉಳಿಸಲು ಸಾರ್ವಜನಿಕ ಸಂಸ್ಥೆಗಳನ್ನು ರಚಿಸಲಾಯ್ತು. ಆದರೆ ಪ್ರತಿ ನಿತ್ಯ ನ್ಯಾಯ ಉಳಿಸಬೇಕಾದ ಜನರು ಮನುಸ್ಮೃತಿ ರಕ್ಷಿಸುತ್ತ ಸಂವಿಧಾನ ದ್ರೋಹಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿಯೇ ದಲಿತ-ದಮನಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ದೂರಿದರು.

ಪ್ರೀತಿಯನ್ನು ಕೊಲೆ ಮಾಡುವ ಕೊಲೆಗಾರರ ಜೊತೆ ನ್ಯಾಯ ನೀಡುವವರು ಶಾಮೀಲಾಗಿದ್ದಾರೆ. ಎಸ್‌ಸಿ ಎಸ್ಟಿ ಅಟ್ರಾಸಿಟಿ ಕಾಯ್ದೆಯನ್ನು ದುರ್ಬಲಗೊಳಿಸಲು ಸರ್ಕಾರ, ನ್ಯಾಯಾಂಗ ಪ್ರಯತ್ನಿಸಿತು. ಇವತ್ತು ದಲಿತರು ದಾಖಲಿಸುವ ದೂರುಗಳಲ್ಲಿ ಕೇವಲ ಶೇ.2 ರಷ್ಟು ಜನರಿಗೆ ಮಾತ್ರ ಶಿಕ್ಷೆಯಾಗುತ್ತಿದೆ. ಎಫ್‌ಐಆರ್ ದಾಖಲಾಗುವಾಗಲೇ ಪ್ರಕರಣವನ್ನು ದುರ್ಬಲಗೊಳಿಸುತ್ತದೆ. ಈ ರೀತಿಯಾಗಿ ವ್ಯವಸ್ಥಿತಿವಾಗಿ ನ್ಯಾಯ ನಿರಾಕರಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಣ್ಣ ಪುಟ್ಟ ಕೇಸುಗಳಿಗೆ ದೇಶದೋಹದ ಹೆಸರಿನಲ್ಲಿ 10-15 ವರ್ಷ ಜೈಲು ಶಿಕ್ಷೆ ವಿಧಿಸುವ ಸರ್ಕಾರಗಳು ಜಾತಿ ದೌರ್ಜನ್ಯ, ಕೊಲೆಗಳಿಗೆ ಕೇವಲ 3 ತಿಂಗಳಲ್ಲಿ ಜಾಮೀನು ಸಿಗುವಂತೆ ವರ್ತಿಸುತ್ತವೆ. ನಾನು ಎಲ್ಲರಲ್ಲಿಯೂ ಇದ್ದೀನಿ ಅಂದುಕೊಳ್ಳುವ ಧರ್ಮ ಇದ್ದರೆ ಸಂವಿಧಾನ ಉಳಿಯುತ್ತೆ. ಮೇಲು – ಕೀಳು ಪ್ರತಿಪಾದಿಸುವ ಧರ್ಮ ಬಂದರೆ ಸಂವಿಧಾನ ಸಾಯುತ್ತೆ. ಈ ದೇಶದಲ್ಲಿ ಮನುಸ್ಮೃತಿಯನ್ನು ನಾಶಗೊಳಿಸಿ, ಸಂವಿಧಾನ ಉಳಿಸುವ ಪಣ ತೊಡೋಣ ಎಂದು ಶಿವಸುಂದರ್ ಕರೆ ನೀಡಿದರು.

ಹೈಕೋರ್ಟ್ ವಕೀಲೆ ಮೈತ್ರೇಯಿ ಮಾತನಾಡಿ, “ಈ ಜಾತಿ ವ್ಯವಸ್ಥೆ ಎಂಬುದು ಒಂದು ರೋಗವಾಗಿದೆ. ಅದು ಎಲ್ಲಿಯವರೆಗೂ ಇರುತ್ತೋ ಅಲ್ಲಿಯವರೆಗೂ ದೇಶ ಮುಂದುವರೆಯುವುದಿಲ್ಲ. ಪ್ರೀತಿಸಿದವರನ್ನು ಮರ್ಯಾದೆ ಹೆಸರಲ್ಲಿ ಕೊಂದರೆ ಅದರಲ್ಲಿ ಮರ್ಯಾದೆ ಇರುವುದಿಲ್ಲ. ಅದು ಹೀನ ಕೊಲೆ ಎಂದು ಸವೋರ್ಚ ನ್ಯಾಯಾಲಯ ಹೇಳಿದೆ” ಎಂದರು.

ನಮ್ಮ ದೇಶದಲ್ಲಿ ಪ್ರತಿದಿನ ಸರಾಸರಿ 10 ದಲಿತ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಷ್ಟು ವರ್ಷವಾದರೂ ಸಮಾನತೆಯ ಸಮಾಜ ಕಟ್ಟಲು ಸಾಧ್ಯವಾಗಿಲ್ಲ. ಸಮಾನತೆಗಾಗಿ, ಭಾತೃತ್ವಕ್ಕಾಗಿ, ಜಾತಿವಿನಾಶದ ಸಮಾಜದ ವಿರುದ್ಧ ಸರ್ಕಾರ ಕೆಲಸ ಮಾಡುತ್ತಿದೆ. ಜಾತಿ ವಿನಾಶ ಆಗದೇ ನಿಜವಾದ ಪ್ರಜಾಪ್ರಭುತ್ವ ಜಾರಿಗೆ ಬರಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಸಾಹಿತಿ, ಹೋರಾಟಗಾರ ಬಸವರಾಜ್ ಸೂಲಿಬಾವಿ ಮಾತನಾಡಿ, “ಮೀಸಲು ಕ್ಷೇತ್ರಗಳಲ್ಲಿಯೇ ಇಂದು ದಲಿತ-ದಮನಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿರುವುದು ದೊಡ್ಡ ದುರಂತವಾಗಿದೆ. ಈ ಕ್ಷೇತ್ರಗಳಲ್ಲಿ ದಲಿತರು-ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರು ರಕ್ಷಣೆಗಾಗಿ ಆ ಕ್ಷೇತ್ರಗಳನ್ನು ಮೀಸಲು ಎಂದು ಘೋಷಿಸಲಾಯ್ತು. ಆದರೆ ಅಲ್ಲಿನ ಜನಪ್ರತಿನಿಧಿಗಳು ಈ ಸಮುದಾಯದ ಜನರ ಹಿತ ಕಾಯಲು ವಿಫಲರಾಗಿ ಮೇಲ್ಜಾತಿ ಜನರ ಪ್ರತಿನಿಧಿಗಳಾಗಿ ಕೆಲಸ ಮಾಡುತ್ತಿರುವುದೇ ಇಂತಹ ದೌರ್ಜನ್ಯಗಳಿಗೆ ಕಾರಣ” ಎಂದು ವಿಷಾಧ ವ್ಯಕ್ತಪಡಿಸಿದರು.

ದಾನಪ್ಪ, ರಾಘವೇಂದ್ರ ಕೊಲೆ ಕುರಿತು ಹಾಲಿ ಶಾಸಕ ಬಸವರಾಜ್ ದಡೆಸಗೂರು, ಮಾಜಿ ಶಾಸಕ ಶಿವರಾಜ್ ತಂಗಡಗಿ ಏಕೆ ಮಾತನಾಡಿಲ್ಲ? ಅವರು ಯಾರನ್ನು ಪ್ರತಿನಿಧಿಸುತ್ತಿದ್ದಾರೆ, ಕೊಂದವರು ಮಾತ್ರವಲ್ಲದೆ ಜಾತಿ ವ್ಯವಸ್ಥೆಯನ್ನು ಸಮರ್ಥನೆ ಮಾಡುವ ಎಲ್ಲರೂ ಕೊಲೆಗಾರರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ಈ ಲಾಕ್‌ಡೌನ್‌ ಅವಧಿಯಲ್ಲಿ ಹತ್ತಾರು ಮರ್ಯಾದೆಹೀನ ಹತ್ಯೆಗಳು ಸಂಭವಿಸಿವೆ. ಬಿಜಾಪುರದ ದೇವರ ಹಿಪ್ಪರಗಿಯಲ್ಲಿ ಅಂತರ್ಜಾತಿ ಮದುವೆಯಾದ ದಂಪತಿಯನ್ನು ಇಂದು ಕೊಲ್ಲಲಾಗಿದೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಕೊಲೆಯಾಗಿದೆ. ಬರಗೂರಿನಲ್ಲಿ ಹತ್ಯೆಯಾಗಿದೆ. ನಾಳೆ ಬೆಳಿಗ್ಗೆ ನಾವು ಯಾವ ಆಸ್ಪತ್ರೆಯಲ್ಲಿ ಕೋವಿಡ್ ಬಂದು ಸಾಯುತ್ತೇವೆ ಎಂಬುದು ಗೊತ್ತಿರಲಿಲ್ಲದಿದ್ದರೂ ಜನ ಜಾತಿಗಾಗಿ ಕೊಲೆ ಮಾಡುತ್ತಿದ್ದರೆ ಎಂದರೆ ಎಷ್ಟರ ಮಟ್ಟಿಗೆ ಜಾತಿ ವಿಷ ಜನರಲ್ಲಿ ಬೇರೂರಿದೆ” ಎಂದು ವಿ‍ಷಾಧ ವ್ಯಕ್ತಪಡಿಸಿದರು.

ಕೋವಿಡ್‌ಗಿಂತಲೂ ದೊಡ್ಡ ಕೊಲೆಗಡುಕ ವೈರಸ್ ಎಂದರೆ ಅದು ಜಾತಿ ವೈರಸ್ ಆಗಿದೆ. ಈ ಹಿಂದೆಯೂ ಮರ್ಯಾದೆಗೇಡು ಹತ್ಯೆಗಳು, ಜಾತಿ ದೌರ್ಜನ್ಯಗಳು ನಡೆಯುತ್ತಿದ್ದವು. ಆದರೆ ಇಂದು ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಈ ಕೊಲೆಗಳಿಗೆ ಕಾನೂನಿನ ಮಾನ್ಯತೆ ನೀಡುವ ಕೆಲಸ ಮಾಡುತ್ತಿವೆ. ಗೋಹತ್ಯೆ ನಿಷೇಧ ಕಾಯ್ದೆಯ ಹೆಸರಿನಲ್ಲಿ ದಲಿತ ದಮನಿತರ ಶೋಷಣೆಗೆ ರಹದಾರಿ ನೀಡಿವೆ. ಈ ಮತೀಯವಾದಿ ಸರ್ಕಾರ, ಮನುವಾದ ಸರ್ಕಾರ ಕೊಲೆಗಡುಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದೆ. ಇದರ ವಿರುದ್ಧ ನಿರಂತರವಾಗಿ ದನಿಯೆತ್ತಬೇಕಾಗಿದೆ ಎಂದರು.

ಹೋರಾಟದಲ್ಲಿ “ದಲಿತ-ದಮನಿತರ ಮೇಲಿನ ಕೊಲೆ ದೌರ್ಜನ್ಯಗಳು ನಿಲ್ಲಲೇಬೇಕು. ದಾನಪ್ಪ – ರಾಘವೇಂದ್ರರ ಕೊಲೆಯ ಪ್ರಕರಣಗಳ ನ್ಯಾಯಾಂಗ ತನಿಖೆಯಾಗಲೇಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜಿಲ್ಲೆಯಲ್ಲಿ ದೌರ್ಜನ್ಯಗಳನ್ನು ತಡೆಗಟ್ಟದ ಜಿಲ್ಲಾಡಳಿತದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂಬ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಹೋರಾಟಗಾರರಾದ ಡಿ.ಎಚ್ ಪೂಜಾರ್, ಕರಿಯಪ್ಪ ಗುಡಿಮನಿ, ಭಾರದ್ವಾಜ್ ಸೇರಿದಂತೆ ಇತರರು ಮಾತನಾಡಿದರು.


ಇದನ್ನೂ ಓದಿ: ಕೊಪ್ಪಳದಲ್ಲಿ ಕ್ರೌರ್ಯ: ಕ್ಷೌರಕ್ಕೆ ಬಂದ ದಲಿತ ಯುವಕರ ಮೇಲೆ ಹಲ್ಲೆ – ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಯುವಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...