Homeಚಳವಳಿಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಮರ್ಯಾದೆ ಹೀನ ಹತ್ಯೆ, ದಲಿತ- ದಮನಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಡಿದೆದ್ದ ಕೊಪ್ಪಳ ಚಲೋ ಹೋರಾಟ..

- Advertisement -
- Advertisement -

ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ನಡೆದ ಮಾರ್ಯಾದೆಗೇಡು ಹತ್ಯೆಗೆ ದಾನಪ್ಪ ಮಾತ್ರ ಸತ್ತಿಲ್ಲ, ನಾವೆಲ್ಲರೂ ಸತ್ತಿದ್ದೇವೆ, ಈ ದೇಶದ ಕಾನೂನು ಸತ್ತಿದೆ. ಈ ದೇಶದಲ್ಲಿ ಮನುವಾದಿಗಳಿಂದ ಪ್ರತಿದಿನವೂ ಅಂಬೇಡ್ಕರ್ ಬರೆದಿಟ್ಟ ಸಂವಿಧಾನ ಕೊಲೆಯಾಗುತ್ತಿದೆ ಎಂದು ಹೋರಾಟಗಾರ ಮತ್ತು ಚಿಂತಕ ಶಿವಸುಂದರ್ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಜಾತಿ ಕಾರಣಕ್ಕೆ ಸಂಭವಿಸಿದ ದಾನಪ್ಪ ಹಾಗೂ ರಾಘವೇಂದ್ರ ಕೊಲೆ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ದಲಿತ ದಮನಿತರ ಒಕ್ಕೂಟದ ವತಿಯಿಂದ ನಡೆದ ಬೃಹತ್ ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ‌ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ನಾವೆಲ್ಲರೂ ಪ್ರೀತಿ – ಮಮತೆಯಿಂದ ಬದುಕಬೇಕು, ಮನುಷ್ಯರ ಥರ ಬದುಕಬೇಕೆಂದು ಕನಸು ಕಂಡೆವು. ಆದರೆ ಜಾತಿ ಕಾರಣಕ್ಕೆ ಅದು ಪ್ರತಿದಿನ ಕೊಲೆಯಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹುಟ್ಟು ಯಾರ ಕೈಯಲ್ಲೂ ಇಲ್ಲ. ಹಾಗಾಗಿ ನಿಷ್ಕಲ್ಮಶವಾಗಿ ಒಂದು ಗಂಡು-ಹೆಣ್ಣು ಪ್ರೀತಿ ಮಾಡಿದರೆ ಅದನ್ನು ಗೌರವಿಸಬೇಕು. 18 ವರ್ಷ ತುಂಬಿದ ಎಲ್ಲರಿಗೂ ತಮಗಿಷ್ಟಬಂದವರನ್ನು ಪ್ರೀತಿಸುವ ಹಕ್ಕಿದೆ. 18 ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿರುವ ನಾವು ಪ್ರೀತಿಸುವ ಹಕ್ಕು ಕಿತ್ತುಕೊಳ್ಳುತ್ತಿರುವುದೇಕೆ ಎಂದು ಶಿವಸುಂದರ್ ಪ್ರಶ್ನಿಸಿದರು.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು


ಪ್ರೀತಿಯನ್ನು ಕೊಲ್ಲುವುದೇ ಮನುಸ್ಮೃತಿ. ಮನುಷ್ಯತ್ವ ಉಳಿಸುವುದು ಸಂವಿಧಾನ. ಸಂವಿಧಾನವನ್ನು ಉಳಿಸಲು ಸಾರ್ವಜನಿಕ ಸಂಸ್ಥೆಗಳನ್ನು ರಚಿಸಲಾಯ್ತು. ಆದರೆ ಪ್ರತಿ ನಿತ್ಯ ನ್ಯಾಯ ಉಳಿಸಬೇಕಾದ ಜನರು ಮನುಸ್ಮೃತಿ ರಕ್ಷಿಸುತ್ತ ಸಂವಿಧಾನ ದ್ರೋಹಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿಯೇ ದಲಿತ-ದಮನಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ದೂರಿದರು.

ಪ್ರೀತಿಯನ್ನು ಕೊಲೆ ಮಾಡುವ ಕೊಲೆಗಾರರ ಜೊತೆ ನ್ಯಾಯ ನೀಡುವವರು ಶಾಮೀಲಾಗಿದ್ದಾರೆ. ಎಸ್‌ಸಿ ಎಸ್ಟಿ ಅಟ್ರಾಸಿಟಿ ಕಾಯ್ದೆಯನ್ನು ದುರ್ಬಲಗೊಳಿಸಲು ಸರ್ಕಾರ, ನ್ಯಾಯಾಂಗ ಪ್ರಯತ್ನಿಸಿತು. ಇವತ್ತು ದಲಿತರು ದಾಖಲಿಸುವ ದೂರುಗಳಲ್ಲಿ ಕೇವಲ ಶೇ.2 ರಷ್ಟು ಜನರಿಗೆ ಮಾತ್ರ ಶಿಕ್ಷೆಯಾಗುತ್ತಿದೆ. ಎಫ್‌ಐಆರ್ ದಾಖಲಾಗುವಾಗಲೇ ಪ್ರಕರಣವನ್ನು ದುರ್ಬಲಗೊಳಿಸುತ್ತದೆ. ಈ ರೀತಿಯಾಗಿ ವ್ಯವಸ್ಥಿತಿವಾಗಿ ನ್ಯಾಯ ನಿರಾಕರಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಣ್ಣ ಪುಟ್ಟ ಕೇಸುಗಳಿಗೆ ದೇಶದೋಹದ ಹೆಸರಿನಲ್ಲಿ 10-15 ವರ್ಷ ಜೈಲು ಶಿಕ್ಷೆ ವಿಧಿಸುವ ಸರ್ಕಾರಗಳು ಜಾತಿ ದೌರ್ಜನ್ಯ, ಕೊಲೆಗಳಿಗೆ ಕೇವಲ 3 ತಿಂಗಳಲ್ಲಿ ಜಾಮೀನು ಸಿಗುವಂತೆ ವರ್ತಿಸುತ್ತವೆ. ನಾನು ಎಲ್ಲರಲ್ಲಿಯೂ ಇದ್ದೀನಿ ಅಂದುಕೊಳ್ಳುವ ಧರ್ಮ ಇದ್ದರೆ ಸಂವಿಧಾನ ಉಳಿಯುತ್ತೆ. ಮೇಲು – ಕೀಳು ಪ್ರತಿಪಾದಿಸುವ ಧರ್ಮ ಬಂದರೆ ಸಂವಿಧಾನ ಸಾಯುತ್ತೆ. ಈ ದೇಶದಲ್ಲಿ ಮನುಸ್ಮೃತಿಯನ್ನು ನಾಶಗೊಳಿಸಿ, ಸಂವಿಧಾನ ಉಳಿಸುವ ಪಣ ತೊಡೋಣ ಎಂದು ಶಿವಸುಂದರ್ ಕರೆ ನೀಡಿದರು.

ಹೈಕೋರ್ಟ್ ವಕೀಲೆ ಮೈತ್ರೇಯಿ ಮಾತನಾಡಿ, “ಈ ಜಾತಿ ವ್ಯವಸ್ಥೆ ಎಂಬುದು ಒಂದು ರೋಗವಾಗಿದೆ. ಅದು ಎಲ್ಲಿಯವರೆಗೂ ಇರುತ್ತೋ ಅಲ್ಲಿಯವರೆಗೂ ದೇಶ ಮುಂದುವರೆಯುವುದಿಲ್ಲ. ಪ್ರೀತಿಸಿದವರನ್ನು ಮರ್ಯಾದೆ ಹೆಸರಲ್ಲಿ ಕೊಂದರೆ ಅದರಲ್ಲಿ ಮರ್ಯಾದೆ ಇರುವುದಿಲ್ಲ. ಅದು ಹೀನ ಕೊಲೆ ಎಂದು ಸವೋರ್ಚ ನ್ಯಾಯಾಲಯ ಹೇಳಿದೆ” ಎಂದರು.

ನಮ್ಮ ದೇಶದಲ್ಲಿ ಪ್ರತಿದಿನ ಸರಾಸರಿ 10 ದಲಿತ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಷ್ಟು ವರ್ಷವಾದರೂ ಸಮಾನತೆಯ ಸಮಾಜ ಕಟ್ಟಲು ಸಾಧ್ಯವಾಗಿಲ್ಲ. ಸಮಾನತೆಗಾಗಿ, ಭಾತೃತ್ವಕ್ಕಾಗಿ, ಜಾತಿವಿನಾಶದ ಸಮಾಜದ ವಿರುದ್ಧ ಸರ್ಕಾರ ಕೆಲಸ ಮಾಡುತ್ತಿದೆ. ಜಾತಿ ವಿನಾಶ ಆಗದೇ ನಿಜವಾದ ಪ್ರಜಾಪ್ರಭುತ್ವ ಜಾರಿಗೆ ಬರಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಸಾಹಿತಿ, ಹೋರಾಟಗಾರ ಬಸವರಾಜ್ ಸೂಲಿಬಾವಿ ಮಾತನಾಡಿ, “ಮೀಸಲು ಕ್ಷೇತ್ರಗಳಲ್ಲಿಯೇ ಇಂದು ದಲಿತ-ದಮನಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿರುವುದು ದೊಡ್ಡ ದುರಂತವಾಗಿದೆ. ಈ ಕ್ಷೇತ್ರಗಳಲ್ಲಿ ದಲಿತರು-ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರು ರಕ್ಷಣೆಗಾಗಿ ಆ ಕ್ಷೇತ್ರಗಳನ್ನು ಮೀಸಲು ಎಂದು ಘೋಷಿಸಲಾಯ್ತು. ಆದರೆ ಅಲ್ಲಿನ ಜನಪ್ರತಿನಿಧಿಗಳು ಈ ಸಮುದಾಯದ ಜನರ ಹಿತ ಕಾಯಲು ವಿಫಲರಾಗಿ ಮೇಲ್ಜಾತಿ ಜನರ ಪ್ರತಿನಿಧಿಗಳಾಗಿ ಕೆಲಸ ಮಾಡುತ್ತಿರುವುದೇ ಇಂತಹ ದೌರ್ಜನ್ಯಗಳಿಗೆ ಕಾರಣ” ಎಂದು ವಿಷಾಧ ವ್ಯಕ್ತಪಡಿಸಿದರು.

ದಾನಪ್ಪ, ರಾಘವೇಂದ್ರ ಕೊಲೆ ಕುರಿತು ಹಾಲಿ ಶಾಸಕ ಬಸವರಾಜ್ ದಡೆಸಗೂರು, ಮಾಜಿ ಶಾಸಕ ಶಿವರಾಜ್ ತಂಗಡಗಿ ಏಕೆ ಮಾತನಾಡಿಲ್ಲ? ಅವರು ಯಾರನ್ನು ಪ್ರತಿನಿಧಿಸುತ್ತಿದ್ದಾರೆ, ಕೊಂದವರು ಮಾತ್ರವಲ್ಲದೆ ಜಾತಿ ವ್ಯವಸ್ಥೆಯನ್ನು ಸಮರ್ಥನೆ ಮಾಡುವ ಎಲ್ಲರೂ ಕೊಲೆಗಾರರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ಈ ಲಾಕ್‌ಡೌನ್‌ ಅವಧಿಯಲ್ಲಿ ಹತ್ತಾರು ಮರ್ಯಾದೆಹೀನ ಹತ್ಯೆಗಳು ಸಂಭವಿಸಿವೆ. ಬಿಜಾಪುರದ ದೇವರ ಹಿಪ್ಪರಗಿಯಲ್ಲಿ ಅಂತರ್ಜಾತಿ ಮದುವೆಯಾದ ದಂಪತಿಯನ್ನು ಇಂದು ಕೊಲ್ಲಲಾಗಿದೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಕೊಲೆಯಾಗಿದೆ. ಬರಗೂರಿನಲ್ಲಿ ಹತ್ಯೆಯಾಗಿದೆ. ನಾಳೆ ಬೆಳಿಗ್ಗೆ ನಾವು ಯಾವ ಆಸ್ಪತ್ರೆಯಲ್ಲಿ ಕೋವಿಡ್ ಬಂದು ಸಾಯುತ್ತೇವೆ ಎಂಬುದು ಗೊತ್ತಿರಲಿಲ್ಲದಿದ್ದರೂ ಜನ ಜಾತಿಗಾಗಿ ಕೊಲೆ ಮಾಡುತ್ತಿದ್ದರೆ ಎಂದರೆ ಎಷ್ಟರ ಮಟ್ಟಿಗೆ ಜಾತಿ ವಿಷ ಜನರಲ್ಲಿ ಬೇರೂರಿದೆ” ಎಂದು ವಿ‍ಷಾಧ ವ್ಯಕ್ತಪಡಿಸಿದರು.

ಕೋವಿಡ್‌ಗಿಂತಲೂ ದೊಡ್ಡ ಕೊಲೆಗಡುಕ ವೈರಸ್ ಎಂದರೆ ಅದು ಜಾತಿ ವೈರಸ್ ಆಗಿದೆ. ಈ ಹಿಂದೆಯೂ ಮರ್ಯಾದೆಗೇಡು ಹತ್ಯೆಗಳು, ಜಾತಿ ದೌರ್ಜನ್ಯಗಳು ನಡೆಯುತ್ತಿದ್ದವು. ಆದರೆ ಇಂದು ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಈ ಕೊಲೆಗಳಿಗೆ ಕಾನೂನಿನ ಮಾನ್ಯತೆ ನೀಡುವ ಕೆಲಸ ಮಾಡುತ್ತಿವೆ. ಗೋಹತ್ಯೆ ನಿಷೇಧ ಕಾಯ್ದೆಯ ಹೆಸರಿನಲ್ಲಿ ದಲಿತ ದಮನಿತರ ಶೋಷಣೆಗೆ ರಹದಾರಿ ನೀಡಿವೆ. ಈ ಮತೀಯವಾದಿ ಸರ್ಕಾರ, ಮನುವಾದ ಸರ್ಕಾರ ಕೊಲೆಗಡುಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದೆ. ಇದರ ವಿರುದ್ಧ ನಿರಂತರವಾಗಿ ದನಿಯೆತ್ತಬೇಕಾಗಿದೆ ಎಂದರು.

ಹೋರಾಟದಲ್ಲಿ “ದಲಿತ-ದಮನಿತರ ಮೇಲಿನ ಕೊಲೆ ದೌರ್ಜನ್ಯಗಳು ನಿಲ್ಲಲೇಬೇಕು. ದಾನಪ್ಪ – ರಾಘವೇಂದ್ರರ ಕೊಲೆಯ ಪ್ರಕರಣಗಳ ನ್ಯಾಯಾಂಗ ತನಿಖೆಯಾಗಲೇಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜಿಲ್ಲೆಯಲ್ಲಿ ದೌರ್ಜನ್ಯಗಳನ್ನು ತಡೆಗಟ್ಟದ ಜಿಲ್ಲಾಡಳಿತದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂಬ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಹೋರಾಟಗಾರರಾದ ಡಿ.ಎಚ್ ಪೂಜಾರ್, ಕರಿಯಪ್ಪ ಗುಡಿಮನಿ, ಭಾರದ್ವಾಜ್ ಸೇರಿದಂತೆ ಇತರರು ಮಾತನಾಡಿದರು.


ಇದನ್ನೂ ಓದಿ: ಕೊಪ್ಪಳದಲ್ಲಿ ಕ್ರೌರ್ಯ: ಕ್ಷೌರಕ್ಕೆ ಬಂದ ದಲಿತ ಯುವಕರ ಮೇಲೆ ಹಲ್ಲೆ – ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಯುವಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...