Homeಚಳವಳಿಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಮರ್ಯಾದೆ ಹೀನ ಹತ್ಯೆ, ದಲಿತ- ದಮನಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಡಿದೆದ್ದ ಕೊಪ್ಪಳ ಚಲೋ ಹೋರಾಟ..

- Advertisement -
- Advertisement -

ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ನಡೆದ ಮಾರ್ಯಾದೆಗೇಡು ಹತ್ಯೆಗೆ ದಾನಪ್ಪ ಮಾತ್ರ ಸತ್ತಿಲ್ಲ, ನಾವೆಲ್ಲರೂ ಸತ್ತಿದ್ದೇವೆ, ಈ ದೇಶದ ಕಾನೂನು ಸತ್ತಿದೆ. ಈ ದೇಶದಲ್ಲಿ ಮನುವಾದಿಗಳಿಂದ ಪ್ರತಿದಿನವೂ ಅಂಬೇಡ್ಕರ್ ಬರೆದಿಟ್ಟ ಸಂವಿಧಾನ ಕೊಲೆಯಾಗುತ್ತಿದೆ ಎಂದು ಹೋರಾಟಗಾರ ಮತ್ತು ಚಿಂತಕ ಶಿವಸುಂದರ್ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಜಾತಿ ಕಾರಣಕ್ಕೆ ಸಂಭವಿಸಿದ ದಾನಪ್ಪ ಹಾಗೂ ರಾಘವೇಂದ್ರ ಕೊಲೆ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ದಲಿತ ದಮನಿತರ ಒಕ್ಕೂಟದ ವತಿಯಿಂದ ನಡೆದ ಬೃಹತ್ ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ‌ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ನಾವೆಲ್ಲರೂ ಪ್ರೀತಿ – ಮಮತೆಯಿಂದ ಬದುಕಬೇಕು, ಮನುಷ್ಯರ ಥರ ಬದುಕಬೇಕೆಂದು ಕನಸು ಕಂಡೆವು. ಆದರೆ ಜಾತಿ ಕಾರಣಕ್ಕೆ ಅದು ಪ್ರತಿದಿನ ಕೊಲೆಯಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹುಟ್ಟು ಯಾರ ಕೈಯಲ್ಲೂ ಇಲ್ಲ. ಹಾಗಾಗಿ ನಿಷ್ಕಲ್ಮಶವಾಗಿ ಒಂದು ಗಂಡು-ಹೆಣ್ಣು ಪ್ರೀತಿ ಮಾಡಿದರೆ ಅದನ್ನು ಗೌರವಿಸಬೇಕು. 18 ವರ್ಷ ತುಂಬಿದ ಎಲ್ಲರಿಗೂ ತಮಗಿಷ್ಟಬಂದವರನ್ನು ಪ್ರೀತಿಸುವ ಹಕ್ಕಿದೆ. 18 ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿರುವ ನಾವು ಪ್ರೀತಿಸುವ ಹಕ್ಕು ಕಿತ್ತುಕೊಳ್ಳುತ್ತಿರುವುದೇಕೆ ಎಂದು ಶಿವಸುಂದರ್ ಪ್ರಶ್ನಿಸಿದರು.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು


ಪ್ರೀತಿಯನ್ನು ಕೊಲ್ಲುವುದೇ ಮನುಸ್ಮೃತಿ. ಮನುಷ್ಯತ್ವ ಉಳಿಸುವುದು ಸಂವಿಧಾನ. ಸಂವಿಧಾನವನ್ನು ಉಳಿಸಲು ಸಾರ್ವಜನಿಕ ಸಂಸ್ಥೆಗಳನ್ನು ರಚಿಸಲಾಯ್ತು. ಆದರೆ ಪ್ರತಿ ನಿತ್ಯ ನ್ಯಾಯ ಉಳಿಸಬೇಕಾದ ಜನರು ಮನುಸ್ಮೃತಿ ರಕ್ಷಿಸುತ್ತ ಸಂವಿಧಾನ ದ್ರೋಹಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿಯೇ ದಲಿತ-ದಮನಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ದೂರಿದರು.

ಪ್ರೀತಿಯನ್ನು ಕೊಲೆ ಮಾಡುವ ಕೊಲೆಗಾರರ ಜೊತೆ ನ್ಯಾಯ ನೀಡುವವರು ಶಾಮೀಲಾಗಿದ್ದಾರೆ. ಎಸ್‌ಸಿ ಎಸ್ಟಿ ಅಟ್ರಾಸಿಟಿ ಕಾಯ್ದೆಯನ್ನು ದುರ್ಬಲಗೊಳಿಸಲು ಸರ್ಕಾರ, ನ್ಯಾಯಾಂಗ ಪ್ರಯತ್ನಿಸಿತು. ಇವತ್ತು ದಲಿತರು ದಾಖಲಿಸುವ ದೂರುಗಳಲ್ಲಿ ಕೇವಲ ಶೇ.2 ರಷ್ಟು ಜನರಿಗೆ ಮಾತ್ರ ಶಿಕ್ಷೆಯಾಗುತ್ತಿದೆ. ಎಫ್‌ಐಆರ್ ದಾಖಲಾಗುವಾಗಲೇ ಪ್ರಕರಣವನ್ನು ದುರ್ಬಲಗೊಳಿಸುತ್ತದೆ. ಈ ರೀತಿಯಾಗಿ ವ್ಯವಸ್ಥಿತಿವಾಗಿ ನ್ಯಾಯ ನಿರಾಕರಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಣ್ಣ ಪುಟ್ಟ ಕೇಸುಗಳಿಗೆ ದೇಶದೋಹದ ಹೆಸರಿನಲ್ಲಿ 10-15 ವರ್ಷ ಜೈಲು ಶಿಕ್ಷೆ ವಿಧಿಸುವ ಸರ್ಕಾರಗಳು ಜಾತಿ ದೌರ್ಜನ್ಯ, ಕೊಲೆಗಳಿಗೆ ಕೇವಲ 3 ತಿಂಗಳಲ್ಲಿ ಜಾಮೀನು ಸಿಗುವಂತೆ ವರ್ತಿಸುತ್ತವೆ. ನಾನು ಎಲ್ಲರಲ್ಲಿಯೂ ಇದ್ದೀನಿ ಅಂದುಕೊಳ್ಳುವ ಧರ್ಮ ಇದ್ದರೆ ಸಂವಿಧಾನ ಉಳಿಯುತ್ತೆ. ಮೇಲು – ಕೀಳು ಪ್ರತಿಪಾದಿಸುವ ಧರ್ಮ ಬಂದರೆ ಸಂವಿಧಾನ ಸಾಯುತ್ತೆ. ಈ ದೇಶದಲ್ಲಿ ಮನುಸ್ಮೃತಿಯನ್ನು ನಾಶಗೊಳಿಸಿ, ಸಂವಿಧಾನ ಉಳಿಸುವ ಪಣ ತೊಡೋಣ ಎಂದು ಶಿವಸುಂದರ್ ಕರೆ ನೀಡಿದರು.

ಹೈಕೋರ್ಟ್ ವಕೀಲೆ ಮೈತ್ರೇಯಿ ಮಾತನಾಡಿ, “ಈ ಜಾತಿ ವ್ಯವಸ್ಥೆ ಎಂಬುದು ಒಂದು ರೋಗವಾಗಿದೆ. ಅದು ಎಲ್ಲಿಯವರೆಗೂ ಇರುತ್ತೋ ಅಲ್ಲಿಯವರೆಗೂ ದೇಶ ಮುಂದುವರೆಯುವುದಿಲ್ಲ. ಪ್ರೀತಿಸಿದವರನ್ನು ಮರ್ಯಾದೆ ಹೆಸರಲ್ಲಿ ಕೊಂದರೆ ಅದರಲ್ಲಿ ಮರ್ಯಾದೆ ಇರುವುದಿಲ್ಲ. ಅದು ಹೀನ ಕೊಲೆ ಎಂದು ಸವೋರ್ಚ ನ್ಯಾಯಾಲಯ ಹೇಳಿದೆ” ಎಂದರು.

ನಮ್ಮ ದೇಶದಲ್ಲಿ ಪ್ರತಿದಿನ ಸರಾಸರಿ 10 ದಲಿತ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಷ್ಟು ವರ್ಷವಾದರೂ ಸಮಾನತೆಯ ಸಮಾಜ ಕಟ್ಟಲು ಸಾಧ್ಯವಾಗಿಲ್ಲ. ಸಮಾನತೆಗಾಗಿ, ಭಾತೃತ್ವಕ್ಕಾಗಿ, ಜಾತಿವಿನಾಶದ ಸಮಾಜದ ವಿರುದ್ಧ ಸರ್ಕಾರ ಕೆಲಸ ಮಾಡುತ್ತಿದೆ. ಜಾತಿ ವಿನಾಶ ಆಗದೇ ನಿಜವಾದ ಪ್ರಜಾಪ್ರಭುತ್ವ ಜಾರಿಗೆ ಬರಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಸಾಹಿತಿ, ಹೋರಾಟಗಾರ ಬಸವರಾಜ್ ಸೂಲಿಬಾವಿ ಮಾತನಾಡಿ, “ಮೀಸಲು ಕ್ಷೇತ್ರಗಳಲ್ಲಿಯೇ ಇಂದು ದಲಿತ-ದಮನಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿರುವುದು ದೊಡ್ಡ ದುರಂತವಾಗಿದೆ. ಈ ಕ್ಷೇತ್ರಗಳಲ್ಲಿ ದಲಿತರು-ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರು ರಕ್ಷಣೆಗಾಗಿ ಆ ಕ್ಷೇತ್ರಗಳನ್ನು ಮೀಸಲು ಎಂದು ಘೋಷಿಸಲಾಯ್ತು. ಆದರೆ ಅಲ್ಲಿನ ಜನಪ್ರತಿನಿಧಿಗಳು ಈ ಸಮುದಾಯದ ಜನರ ಹಿತ ಕಾಯಲು ವಿಫಲರಾಗಿ ಮೇಲ್ಜಾತಿ ಜನರ ಪ್ರತಿನಿಧಿಗಳಾಗಿ ಕೆಲಸ ಮಾಡುತ್ತಿರುವುದೇ ಇಂತಹ ದೌರ್ಜನ್ಯಗಳಿಗೆ ಕಾರಣ” ಎಂದು ವಿಷಾಧ ವ್ಯಕ್ತಪಡಿಸಿದರು.

ದಾನಪ್ಪ, ರಾಘವೇಂದ್ರ ಕೊಲೆ ಕುರಿತು ಹಾಲಿ ಶಾಸಕ ಬಸವರಾಜ್ ದಡೆಸಗೂರು, ಮಾಜಿ ಶಾಸಕ ಶಿವರಾಜ್ ತಂಗಡಗಿ ಏಕೆ ಮಾತನಾಡಿಲ್ಲ? ಅವರು ಯಾರನ್ನು ಪ್ರತಿನಿಧಿಸುತ್ತಿದ್ದಾರೆ, ಕೊಂದವರು ಮಾತ್ರವಲ್ಲದೆ ಜಾತಿ ವ್ಯವಸ್ಥೆಯನ್ನು ಸಮರ್ಥನೆ ಮಾಡುವ ಎಲ್ಲರೂ ಕೊಲೆಗಾರರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ಈ ಲಾಕ್‌ಡೌನ್‌ ಅವಧಿಯಲ್ಲಿ ಹತ್ತಾರು ಮರ್ಯಾದೆಹೀನ ಹತ್ಯೆಗಳು ಸಂಭವಿಸಿವೆ. ಬಿಜಾಪುರದ ದೇವರ ಹಿಪ್ಪರಗಿಯಲ್ಲಿ ಅಂತರ್ಜಾತಿ ಮದುವೆಯಾದ ದಂಪತಿಯನ್ನು ಇಂದು ಕೊಲ್ಲಲಾಗಿದೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಕೊಲೆಯಾಗಿದೆ. ಬರಗೂರಿನಲ್ಲಿ ಹತ್ಯೆಯಾಗಿದೆ. ನಾಳೆ ಬೆಳಿಗ್ಗೆ ನಾವು ಯಾವ ಆಸ್ಪತ್ರೆಯಲ್ಲಿ ಕೋವಿಡ್ ಬಂದು ಸಾಯುತ್ತೇವೆ ಎಂಬುದು ಗೊತ್ತಿರಲಿಲ್ಲದಿದ್ದರೂ ಜನ ಜಾತಿಗಾಗಿ ಕೊಲೆ ಮಾಡುತ್ತಿದ್ದರೆ ಎಂದರೆ ಎಷ್ಟರ ಮಟ್ಟಿಗೆ ಜಾತಿ ವಿಷ ಜನರಲ್ಲಿ ಬೇರೂರಿದೆ” ಎಂದು ವಿ‍ಷಾಧ ವ್ಯಕ್ತಪಡಿಸಿದರು.

ಕೋವಿಡ್‌ಗಿಂತಲೂ ದೊಡ್ಡ ಕೊಲೆಗಡುಕ ವೈರಸ್ ಎಂದರೆ ಅದು ಜಾತಿ ವೈರಸ್ ಆಗಿದೆ. ಈ ಹಿಂದೆಯೂ ಮರ್ಯಾದೆಗೇಡು ಹತ್ಯೆಗಳು, ಜಾತಿ ದೌರ್ಜನ್ಯಗಳು ನಡೆಯುತ್ತಿದ್ದವು. ಆದರೆ ಇಂದು ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಈ ಕೊಲೆಗಳಿಗೆ ಕಾನೂನಿನ ಮಾನ್ಯತೆ ನೀಡುವ ಕೆಲಸ ಮಾಡುತ್ತಿವೆ. ಗೋಹತ್ಯೆ ನಿಷೇಧ ಕಾಯ್ದೆಯ ಹೆಸರಿನಲ್ಲಿ ದಲಿತ ದಮನಿತರ ಶೋಷಣೆಗೆ ರಹದಾರಿ ನೀಡಿವೆ. ಈ ಮತೀಯವಾದಿ ಸರ್ಕಾರ, ಮನುವಾದ ಸರ್ಕಾರ ಕೊಲೆಗಡುಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದೆ. ಇದರ ವಿರುದ್ಧ ನಿರಂತರವಾಗಿ ದನಿಯೆತ್ತಬೇಕಾಗಿದೆ ಎಂದರು.

ಹೋರಾಟದಲ್ಲಿ “ದಲಿತ-ದಮನಿತರ ಮೇಲಿನ ಕೊಲೆ ದೌರ್ಜನ್ಯಗಳು ನಿಲ್ಲಲೇಬೇಕು. ದಾನಪ್ಪ – ರಾಘವೇಂದ್ರರ ಕೊಲೆಯ ಪ್ರಕರಣಗಳ ನ್ಯಾಯಾಂಗ ತನಿಖೆಯಾಗಲೇಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜಿಲ್ಲೆಯಲ್ಲಿ ದೌರ್ಜನ್ಯಗಳನ್ನು ತಡೆಗಟ್ಟದ ಜಿಲ್ಲಾಡಳಿತದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂಬ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಹೋರಾಟಗಾರರಾದ ಡಿ.ಎಚ್ ಪೂಜಾರ್, ಕರಿಯಪ್ಪ ಗುಡಿಮನಿ, ಭಾರದ್ವಾಜ್ ಸೇರಿದಂತೆ ಇತರರು ಮಾತನಾಡಿದರು.


ಇದನ್ನೂ ಓದಿ: ಕೊಪ್ಪಳದಲ್ಲಿ ಕ್ರೌರ್ಯ: ಕ್ಷೌರಕ್ಕೆ ಬಂದ ದಲಿತ ಯುವಕರ ಮೇಲೆ ಹಲ್ಲೆ – ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಯುವಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...