Homeಚಳವಳಿಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಮರ್ಯಾದೆ ಹೀನ ಹತ್ಯೆ, ದಲಿತ- ದಮನಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಡಿದೆದ್ದ ಕೊಪ್ಪಳ ಚಲೋ ಹೋರಾಟ..

- Advertisement -
- Advertisement -

ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ನಡೆದ ಮಾರ್ಯಾದೆಗೇಡು ಹತ್ಯೆಗೆ ದಾನಪ್ಪ ಮಾತ್ರ ಸತ್ತಿಲ್ಲ, ನಾವೆಲ್ಲರೂ ಸತ್ತಿದ್ದೇವೆ, ಈ ದೇಶದ ಕಾನೂನು ಸತ್ತಿದೆ. ಈ ದೇಶದಲ್ಲಿ ಮನುವಾದಿಗಳಿಂದ ಪ್ರತಿದಿನವೂ ಅಂಬೇಡ್ಕರ್ ಬರೆದಿಟ್ಟ ಸಂವಿಧಾನ ಕೊಲೆಯಾಗುತ್ತಿದೆ ಎಂದು ಹೋರಾಟಗಾರ ಮತ್ತು ಚಿಂತಕ ಶಿವಸುಂದರ್ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಜಾತಿ ಕಾರಣಕ್ಕೆ ಸಂಭವಿಸಿದ ದಾನಪ್ಪ ಹಾಗೂ ರಾಘವೇಂದ್ರ ಕೊಲೆ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ದಲಿತ ದಮನಿತರ ಒಕ್ಕೂಟದ ವತಿಯಿಂದ ನಡೆದ ಬೃಹತ್ ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ‌ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ನಾವೆಲ್ಲರೂ ಪ್ರೀತಿ – ಮಮತೆಯಿಂದ ಬದುಕಬೇಕು, ಮನುಷ್ಯರ ಥರ ಬದುಕಬೇಕೆಂದು ಕನಸು ಕಂಡೆವು. ಆದರೆ ಜಾತಿ ಕಾರಣಕ್ಕೆ ಅದು ಪ್ರತಿದಿನ ಕೊಲೆಯಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹುಟ್ಟು ಯಾರ ಕೈಯಲ್ಲೂ ಇಲ್ಲ. ಹಾಗಾಗಿ ನಿಷ್ಕಲ್ಮಶವಾಗಿ ಒಂದು ಗಂಡು-ಹೆಣ್ಣು ಪ್ರೀತಿ ಮಾಡಿದರೆ ಅದನ್ನು ಗೌರವಿಸಬೇಕು. 18 ವರ್ಷ ತುಂಬಿದ ಎಲ್ಲರಿಗೂ ತಮಗಿಷ್ಟಬಂದವರನ್ನು ಪ್ರೀತಿಸುವ ಹಕ್ಕಿದೆ. 18 ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿರುವ ನಾವು ಪ್ರೀತಿಸುವ ಹಕ್ಕು ಕಿತ್ತುಕೊಳ್ಳುತ್ತಿರುವುದೇಕೆ ಎಂದು ಶಿವಸುಂದರ್ ಪ್ರಶ್ನಿಸಿದರು.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು


ಪ್ರೀತಿಯನ್ನು ಕೊಲ್ಲುವುದೇ ಮನುಸ್ಮೃತಿ. ಮನುಷ್ಯತ್ವ ಉಳಿಸುವುದು ಸಂವಿಧಾನ. ಸಂವಿಧಾನವನ್ನು ಉಳಿಸಲು ಸಾರ್ವಜನಿಕ ಸಂಸ್ಥೆಗಳನ್ನು ರಚಿಸಲಾಯ್ತು. ಆದರೆ ಪ್ರತಿ ನಿತ್ಯ ನ್ಯಾಯ ಉಳಿಸಬೇಕಾದ ಜನರು ಮನುಸ್ಮೃತಿ ರಕ್ಷಿಸುತ್ತ ಸಂವಿಧಾನ ದ್ರೋಹಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿಯೇ ದಲಿತ-ದಮನಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ದೂರಿದರು.

ಪ್ರೀತಿಯನ್ನು ಕೊಲೆ ಮಾಡುವ ಕೊಲೆಗಾರರ ಜೊತೆ ನ್ಯಾಯ ನೀಡುವವರು ಶಾಮೀಲಾಗಿದ್ದಾರೆ. ಎಸ್‌ಸಿ ಎಸ್ಟಿ ಅಟ್ರಾಸಿಟಿ ಕಾಯ್ದೆಯನ್ನು ದುರ್ಬಲಗೊಳಿಸಲು ಸರ್ಕಾರ, ನ್ಯಾಯಾಂಗ ಪ್ರಯತ್ನಿಸಿತು. ಇವತ್ತು ದಲಿತರು ದಾಖಲಿಸುವ ದೂರುಗಳಲ್ಲಿ ಕೇವಲ ಶೇ.2 ರಷ್ಟು ಜನರಿಗೆ ಮಾತ್ರ ಶಿಕ್ಷೆಯಾಗುತ್ತಿದೆ. ಎಫ್‌ಐಆರ್ ದಾಖಲಾಗುವಾಗಲೇ ಪ್ರಕರಣವನ್ನು ದುರ್ಬಲಗೊಳಿಸುತ್ತದೆ. ಈ ರೀತಿಯಾಗಿ ವ್ಯವಸ್ಥಿತಿವಾಗಿ ನ್ಯಾಯ ನಿರಾಕರಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಣ್ಣ ಪುಟ್ಟ ಕೇಸುಗಳಿಗೆ ದೇಶದೋಹದ ಹೆಸರಿನಲ್ಲಿ 10-15 ವರ್ಷ ಜೈಲು ಶಿಕ್ಷೆ ವಿಧಿಸುವ ಸರ್ಕಾರಗಳು ಜಾತಿ ದೌರ್ಜನ್ಯ, ಕೊಲೆಗಳಿಗೆ ಕೇವಲ 3 ತಿಂಗಳಲ್ಲಿ ಜಾಮೀನು ಸಿಗುವಂತೆ ವರ್ತಿಸುತ್ತವೆ. ನಾನು ಎಲ್ಲರಲ್ಲಿಯೂ ಇದ್ದೀನಿ ಅಂದುಕೊಳ್ಳುವ ಧರ್ಮ ಇದ್ದರೆ ಸಂವಿಧಾನ ಉಳಿಯುತ್ತೆ. ಮೇಲು – ಕೀಳು ಪ್ರತಿಪಾದಿಸುವ ಧರ್ಮ ಬಂದರೆ ಸಂವಿಧಾನ ಸಾಯುತ್ತೆ. ಈ ದೇಶದಲ್ಲಿ ಮನುಸ್ಮೃತಿಯನ್ನು ನಾಶಗೊಳಿಸಿ, ಸಂವಿಧಾನ ಉಳಿಸುವ ಪಣ ತೊಡೋಣ ಎಂದು ಶಿವಸುಂದರ್ ಕರೆ ನೀಡಿದರು.

ಹೈಕೋರ್ಟ್ ವಕೀಲೆ ಮೈತ್ರೇಯಿ ಮಾತನಾಡಿ, “ಈ ಜಾತಿ ವ್ಯವಸ್ಥೆ ಎಂಬುದು ಒಂದು ರೋಗವಾಗಿದೆ. ಅದು ಎಲ್ಲಿಯವರೆಗೂ ಇರುತ್ತೋ ಅಲ್ಲಿಯವರೆಗೂ ದೇಶ ಮುಂದುವರೆಯುವುದಿಲ್ಲ. ಪ್ರೀತಿಸಿದವರನ್ನು ಮರ್ಯಾದೆ ಹೆಸರಲ್ಲಿ ಕೊಂದರೆ ಅದರಲ್ಲಿ ಮರ್ಯಾದೆ ಇರುವುದಿಲ್ಲ. ಅದು ಹೀನ ಕೊಲೆ ಎಂದು ಸವೋರ್ಚ ನ್ಯಾಯಾಲಯ ಹೇಳಿದೆ” ಎಂದರು.

ನಮ್ಮ ದೇಶದಲ್ಲಿ ಪ್ರತಿದಿನ ಸರಾಸರಿ 10 ದಲಿತ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಷ್ಟು ವರ್ಷವಾದರೂ ಸಮಾನತೆಯ ಸಮಾಜ ಕಟ್ಟಲು ಸಾಧ್ಯವಾಗಿಲ್ಲ. ಸಮಾನತೆಗಾಗಿ, ಭಾತೃತ್ವಕ್ಕಾಗಿ, ಜಾತಿವಿನಾಶದ ಸಮಾಜದ ವಿರುದ್ಧ ಸರ್ಕಾರ ಕೆಲಸ ಮಾಡುತ್ತಿದೆ. ಜಾತಿ ವಿನಾಶ ಆಗದೇ ನಿಜವಾದ ಪ್ರಜಾಪ್ರಭುತ್ವ ಜಾರಿಗೆ ಬರಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಸಾಹಿತಿ, ಹೋರಾಟಗಾರ ಬಸವರಾಜ್ ಸೂಲಿಬಾವಿ ಮಾತನಾಡಿ, “ಮೀಸಲು ಕ್ಷೇತ್ರಗಳಲ್ಲಿಯೇ ಇಂದು ದಲಿತ-ದಮನಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿರುವುದು ದೊಡ್ಡ ದುರಂತವಾಗಿದೆ. ಈ ಕ್ಷೇತ್ರಗಳಲ್ಲಿ ದಲಿತರು-ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರು ರಕ್ಷಣೆಗಾಗಿ ಆ ಕ್ಷೇತ್ರಗಳನ್ನು ಮೀಸಲು ಎಂದು ಘೋಷಿಸಲಾಯ್ತು. ಆದರೆ ಅಲ್ಲಿನ ಜನಪ್ರತಿನಿಧಿಗಳು ಈ ಸಮುದಾಯದ ಜನರ ಹಿತ ಕಾಯಲು ವಿಫಲರಾಗಿ ಮೇಲ್ಜಾತಿ ಜನರ ಪ್ರತಿನಿಧಿಗಳಾಗಿ ಕೆಲಸ ಮಾಡುತ್ತಿರುವುದೇ ಇಂತಹ ದೌರ್ಜನ್ಯಗಳಿಗೆ ಕಾರಣ” ಎಂದು ವಿಷಾಧ ವ್ಯಕ್ತಪಡಿಸಿದರು.

ದಾನಪ್ಪ, ರಾಘವೇಂದ್ರ ಕೊಲೆ ಕುರಿತು ಹಾಲಿ ಶಾಸಕ ಬಸವರಾಜ್ ದಡೆಸಗೂರು, ಮಾಜಿ ಶಾಸಕ ಶಿವರಾಜ್ ತಂಗಡಗಿ ಏಕೆ ಮಾತನಾಡಿಲ್ಲ? ಅವರು ಯಾರನ್ನು ಪ್ರತಿನಿಧಿಸುತ್ತಿದ್ದಾರೆ, ಕೊಂದವರು ಮಾತ್ರವಲ್ಲದೆ ಜಾತಿ ವ್ಯವಸ್ಥೆಯನ್ನು ಸಮರ್ಥನೆ ಮಾಡುವ ಎಲ್ಲರೂ ಕೊಲೆಗಾರರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ಈ ಲಾಕ್‌ಡೌನ್‌ ಅವಧಿಯಲ್ಲಿ ಹತ್ತಾರು ಮರ್ಯಾದೆಹೀನ ಹತ್ಯೆಗಳು ಸಂಭವಿಸಿವೆ. ಬಿಜಾಪುರದ ದೇವರ ಹಿಪ್ಪರಗಿಯಲ್ಲಿ ಅಂತರ್ಜಾತಿ ಮದುವೆಯಾದ ದಂಪತಿಯನ್ನು ಇಂದು ಕೊಲ್ಲಲಾಗಿದೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಕೊಲೆಯಾಗಿದೆ. ಬರಗೂರಿನಲ್ಲಿ ಹತ್ಯೆಯಾಗಿದೆ. ನಾಳೆ ಬೆಳಿಗ್ಗೆ ನಾವು ಯಾವ ಆಸ್ಪತ್ರೆಯಲ್ಲಿ ಕೋವಿಡ್ ಬಂದು ಸಾಯುತ್ತೇವೆ ಎಂಬುದು ಗೊತ್ತಿರಲಿಲ್ಲದಿದ್ದರೂ ಜನ ಜಾತಿಗಾಗಿ ಕೊಲೆ ಮಾಡುತ್ತಿದ್ದರೆ ಎಂದರೆ ಎಷ್ಟರ ಮಟ್ಟಿಗೆ ಜಾತಿ ವಿಷ ಜನರಲ್ಲಿ ಬೇರೂರಿದೆ” ಎಂದು ವಿ‍ಷಾಧ ವ್ಯಕ್ತಪಡಿಸಿದರು.

ಕೋವಿಡ್‌ಗಿಂತಲೂ ದೊಡ್ಡ ಕೊಲೆಗಡುಕ ವೈರಸ್ ಎಂದರೆ ಅದು ಜಾತಿ ವೈರಸ್ ಆಗಿದೆ. ಈ ಹಿಂದೆಯೂ ಮರ್ಯಾದೆಗೇಡು ಹತ್ಯೆಗಳು, ಜಾತಿ ದೌರ್ಜನ್ಯಗಳು ನಡೆಯುತ್ತಿದ್ದವು. ಆದರೆ ಇಂದು ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಈ ಕೊಲೆಗಳಿಗೆ ಕಾನೂನಿನ ಮಾನ್ಯತೆ ನೀಡುವ ಕೆಲಸ ಮಾಡುತ್ತಿವೆ. ಗೋಹತ್ಯೆ ನಿಷೇಧ ಕಾಯ್ದೆಯ ಹೆಸರಿನಲ್ಲಿ ದಲಿತ ದಮನಿತರ ಶೋಷಣೆಗೆ ರಹದಾರಿ ನೀಡಿವೆ. ಈ ಮತೀಯವಾದಿ ಸರ್ಕಾರ, ಮನುವಾದ ಸರ್ಕಾರ ಕೊಲೆಗಡುಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದೆ. ಇದರ ವಿರುದ್ಧ ನಿರಂತರವಾಗಿ ದನಿಯೆತ್ತಬೇಕಾಗಿದೆ ಎಂದರು.

ಹೋರಾಟದಲ್ಲಿ “ದಲಿತ-ದಮನಿತರ ಮೇಲಿನ ಕೊಲೆ ದೌರ್ಜನ್ಯಗಳು ನಿಲ್ಲಲೇಬೇಕು. ದಾನಪ್ಪ – ರಾಘವೇಂದ್ರರ ಕೊಲೆಯ ಪ್ರಕರಣಗಳ ನ್ಯಾಯಾಂಗ ತನಿಖೆಯಾಗಲೇಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜಿಲ್ಲೆಯಲ್ಲಿ ದೌರ್ಜನ್ಯಗಳನ್ನು ತಡೆಗಟ್ಟದ ಜಿಲ್ಲಾಡಳಿತದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂಬ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಹೋರಾಟಗಾರರಾದ ಡಿ.ಎಚ್ ಪೂಜಾರ್, ಕರಿಯಪ್ಪ ಗುಡಿಮನಿ, ಭಾರದ್ವಾಜ್ ಸೇರಿದಂತೆ ಇತರರು ಮಾತನಾಡಿದರು.


ಇದನ್ನೂ ಓದಿ: ಕೊಪ್ಪಳದಲ್ಲಿ ಕ್ರೌರ್ಯ: ಕ್ಷೌರಕ್ಕೆ ಬಂದ ದಲಿತ ಯುವಕರ ಮೇಲೆ ಹಲ್ಲೆ – ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಯುವಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...