Homeಚಳವಳಿಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಮರ್ಯಾದೆ ಹೀನ ಹತ್ಯೆ, ದಲಿತ- ದಮನಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಡಿದೆದ್ದ ಕೊಪ್ಪಳ ಚಲೋ ಹೋರಾಟ..

- Advertisement -
- Advertisement -

ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ನಡೆದ ಮಾರ್ಯಾದೆಗೇಡು ಹತ್ಯೆಗೆ ದಾನಪ್ಪ ಮಾತ್ರ ಸತ್ತಿಲ್ಲ, ನಾವೆಲ್ಲರೂ ಸತ್ತಿದ್ದೇವೆ, ಈ ದೇಶದ ಕಾನೂನು ಸತ್ತಿದೆ. ಈ ದೇಶದಲ್ಲಿ ಮನುವಾದಿಗಳಿಂದ ಪ್ರತಿದಿನವೂ ಅಂಬೇಡ್ಕರ್ ಬರೆದಿಟ್ಟ ಸಂವಿಧಾನ ಕೊಲೆಯಾಗುತ್ತಿದೆ ಎಂದು ಹೋರಾಟಗಾರ ಮತ್ತು ಚಿಂತಕ ಶಿವಸುಂದರ್ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಜಾತಿ ಕಾರಣಕ್ಕೆ ಸಂಭವಿಸಿದ ದಾನಪ್ಪ ಹಾಗೂ ರಾಘವೇಂದ್ರ ಕೊಲೆ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ದಲಿತ ದಮನಿತರ ಒಕ್ಕೂಟದ ವತಿಯಿಂದ ನಡೆದ ಬೃಹತ್ ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ‌ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ನಾವೆಲ್ಲರೂ ಪ್ರೀತಿ – ಮಮತೆಯಿಂದ ಬದುಕಬೇಕು, ಮನುಷ್ಯರ ಥರ ಬದುಕಬೇಕೆಂದು ಕನಸು ಕಂಡೆವು. ಆದರೆ ಜಾತಿ ಕಾರಣಕ್ಕೆ ಅದು ಪ್ರತಿದಿನ ಕೊಲೆಯಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹುಟ್ಟು ಯಾರ ಕೈಯಲ್ಲೂ ಇಲ್ಲ. ಹಾಗಾಗಿ ನಿಷ್ಕಲ್ಮಶವಾಗಿ ಒಂದು ಗಂಡು-ಹೆಣ್ಣು ಪ್ರೀತಿ ಮಾಡಿದರೆ ಅದನ್ನು ಗೌರವಿಸಬೇಕು. 18 ವರ್ಷ ತುಂಬಿದ ಎಲ್ಲರಿಗೂ ತಮಗಿಷ್ಟಬಂದವರನ್ನು ಪ್ರೀತಿಸುವ ಹಕ್ಕಿದೆ. 18 ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿರುವ ನಾವು ಪ್ರೀತಿಸುವ ಹಕ್ಕು ಕಿತ್ತುಕೊಳ್ಳುತ್ತಿರುವುದೇಕೆ ಎಂದು ಶಿವಸುಂದರ್ ಪ್ರಶ್ನಿಸಿದರು.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು


ಪ್ರೀತಿಯನ್ನು ಕೊಲ್ಲುವುದೇ ಮನುಸ್ಮೃತಿ. ಮನುಷ್ಯತ್ವ ಉಳಿಸುವುದು ಸಂವಿಧಾನ. ಸಂವಿಧಾನವನ್ನು ಉಳಿಸಲು ಸಾರ್ವಜನಿಕ ಸಂಸ್ಥೆಗಳನ್ನು ರಚಿಸಲಾಯ್ತು. ಆದರೆ ಪ್ರತಿ ನಿತ್ಯ ನ್ಯಾಯ ಉಳಿಸಬೇಕಾದ ಜನರು ಮನುಸ್ಮೃತಿ ರಕ್ಷಿಸುತ್ತ ಸಂವಿಧಾನ ದ್ರೋಹಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿಯೇ ದಲಿತ-ದಮನಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ದೂರಿದರು.

ಪ್ರೀತಿಯನ್ನು ಕೊಲೆ ಮಾಡುವ ಕೊಲೆಗಾರರ ಜೊತೆ ನ್ಯಾಯ ನೀಡುವವರು ಶಾಮೀಲಾಗಿದ್ದಾರೆ. ಎಸ್‌ಸಿ ಎಸ್ಟಿ ಅಟ್ರಾಸಿಟಿ ಕಾಯ್ದೆಯನ್ನು ದುರ್ಬಲಗೊಳಿಸಲು ಸರ್ಕಾರ, ನ್ಯಾಯಾಂಗ ಪ್ರಯತ್ನಿಸಿತು. ಇವತ್ತು ದಲಿತರು ದಾಖಲಿಸುವ ದೂರುಗಳಲ್ಲಿ ಕೇವಲ ಶೇ.2 ರಷ್ಟು ಜನರಿಗೆ ಮಾತ್ರ ಶಿಕ್ಷೆಯಾಗುತ್ತಿದೆ. ಎಫ್‌ಐಆರ್ ದಾಖಲಾಗುವಾಗಲೇ ಪ್ರಕರಣವನ್ನು ದುರ್ಬಲಗೊಳಿಸುತ್ತದೆ. ಈ ರೀತಿಯಾಗಿ ವ್ಯವಸ್ಥಿತಿವಾಗಿ ನ್ಯಾಯ ನಿರಾಕರಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಣ್ಣ ಪುಟ್ಟ ಕೇಸುಗಳಿಗೆ ದೇಶದೋಹದ ಹೆಸರಿನಲ್ಲಿ 10-15 ವರ್ಷ ಜೈಲು ಶಿಕ್ಷೆ ವಿಧಿಸುವ ಸರ್ಕಾರಗಳು ಜಾತಿ ದೌರ್ಜನ್ಯ, ಕೊಲೆಗಳಿಗೆ ಕೇವಲ 3 ತಿಂಗಳಲ್ಲಿ ಜಾಮೀನು ಸಿಗುವಂತೆ ವರ್ತಿಸುತ್ತವೆ. ನಾನು ಎಲ್ಲರಲ್ಲಿಯೂ ಇದ್ದೀನಿ ಅಂದುಕೊಳ್ಳುವ ಧರ್ಮ ಇದ್ದರೆ ಸಂವಿಧಾನ ಉಳಿಯುತ್ತೆ. ಮೇಲು – ಕೀಳು ಪ್ರತಿಪಾದಿಸುವ ಧರ್ಮ ಬಂದರೆ ಸಂವಿಧಾನ ಸಾಯುತ್ತೆ. ಈ ದೇಶದಲ್ಲಿ ಮನುಸ್ಮೃತಿಯನ್ನು ನಾಶಗೊಳಿಸಿ, ಸಂವಿಧಾನ ಉಳಿಸುವ ಪಣ ತೊಡೋಣ ಎಂದು ಶಿವಸುಂದರ್ ಕರೆ ನೀಡಿದರು.

ಹೈಕೋರ್ಟ್ ವಕೀಲೆ ಮೈತ್ರೇಯಿ ಮಾತನಾಡಿ, “ಈ ಜಾತಿ ವ್ಯವಸ್ಥೆ ಎಂಬುದು ಒಂದು ರೋಗವಾಗಿದೆ. ಅದು ಎಲ್ಲಿಯವರೆಗೂ ಇರುತ್ತೋ ಅಲ್ಲಿಯವರೆಗೂ ದೇಶ ಮುಂದುವರೆಯುವುದಿಲ್ಲ. ಪ್ರೀತಿಸಿದವರನ್ನು ಮರ್ಯಾದೆ ಹೆಸರಲ್ಲಿ ಕೊಂದರೆ ಅದರಲ್ಲಿ ಮರ್ಯಾದೆ ಇರುವುದಿಲ್ಲ. ಅದು ಹೀನ ಕೊಲೆ ಎಂದು ಸವೋರ್ಚ ನ್ಯಾಯಾಲಯ ಹೇಳಿದೆ” ಎಂದರು.

ನಮ್ಮ ದೇಶದಲ್ಲಿ ಪ್ರತಿದಿನ ಸರಾಸರಿ 10 ದಲಿತ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಷ್ಟು ವರ್ಷವಾದರೂ ಸಮಾನತೆಯ ಸಮಾಜ ಕಟ್ಟಲು ಸಾಧ್ಯವಾಗಿಲ್ಲ. ಸಮಾನತೆಗಾಗಿ, ಭಾತೃತ್ವಕ್ಕಾಗಿ, ಜಾತಿವಿನಾಶದ ಸಮಾಜದ ವಿರುದ್ಧ ಸರ್ಕಾರ ಕೆಲಸ ಮಾಡುತ್ತಿದೆ. ಜಾತಿ ವಿನಾಶ ಆಗದೇ ನಿಜವಾದ ಪ್ರಜಾಪ್ರಭುತ್ವ ಜಾರಿಗೆ ಬರಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಸಾಹಿತಿ, ಹೋರಾಟಗಾರ ಬಸವರಾಜ್ ಸೂಲಿಬಾವಿ ಮಾತನಾಡಿ, “ಮೀಸಲು ಕ್ಷೇತ್ರಗಳಲ್ಲಿಯೇ ಇಂದು ದಲಿತ-ದಮನಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿರುವುದು ದೊಡ್ಡ ದುರಂತವಾಗಿದೆ. ಈ ಕ್ಷೇತ್ರಗಳಲ್ಲಿ ದಲಿತರು-ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರು ರಕ್ಷಣೆಗಾಗಿ ಆ ಕ್ಷೇತ್ರಗಳನ್ನು ಮೀಸಲು ಎಂದು ಘೋಷಿಸಲಾಯ್ತು. ಆದರೆ ಅಲ್ಲಿನ ಜನಪ್ರತಿನಿಧಿಗಳು ಈ ಸಮುದಾಯದ ಜನರ ಹಿತ ಕಾಯಲು ವಿಫಲರಾಗಿ ಮೇಲ್ಜಾತಿ ಜನರ ಪ್ರತಿನಿಧಿಗಳಾಗಿ ಕೆಲಸ ಮಾಡುತ್ತಿರುವುದೇ ಇಂತಹ ದೌರ್ಜನ್ಯಗಳಿಗೆ ಕಾರಣ” ಎಂದು ವಿಷಾಧ ವ್ಯಕ್ತಪಡಿಸಿದರು.

ದಾನಪ್ಪ, ರಾಘವೇಂದ್ರ ಕೊಲೆ ಕುರಿತು ಹಾಲಿ ಶಾಸಕ ಬಸವರಾಜ್ ದಡೆಸಗೂರು, ಮಾಜಿ ಶಾಸಕ ಶಿವರಾಜ್ ತಂಗಡಗಿ ಏಕೆ ಮಾತನಾಡಿಲ್ಲ? ಅವರು ಯಾರನ್ನು ಪ್ರತಿನಿಧಿಸುತ್ತಿದ್ದಾರೆ, ಕೊಂದವರು ಮಾತ್ರವಲ್ಲದೆ ಜಾತಿ ವ್ಯವಸ್ಥೆಯನ್ನು ಸಮರ್ಥನೆ ಮಾಡುವ ಎಲ್ಲರೂ ಕೊಲೆಗಾರರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ಈ ಲಾಕ್‌ಡೌನ್‌ ಅವಧಿಯಲ್ಲಿ ಹತ್ತಾರು ಮರ್ಯಾದೆಹೀನ ಹತ್ಯೆಗಳು ಸಂಭವಿಸಿವೆ. ಬಿಜಾಪುರದ ದೇವರ ಹಿಪ್ಪರಗಿಯಲ್ಲಿ ಅಂತರ್ಜಾತಿ ಮದುವೆಯಾದ ದಂಪತಿಯನ್ನು ಇಂದು ಕೊಲ್ಲಲಾಗಿದೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಕೊಲೆಯಾಗಿದೆ. ಬರಗೂರಿನಲ್ಲಿ ಹತ್ಯೆಯಾಗಿದೆ. ನಾಳೆ ಬೆಳಿಗ್ಗೆ ನಾವು ಯಾವ ಆಸ್ಪತ್ರೆಯಲ್ಲಿ ಕೋವಿಡ್ ಬಂದು ಸಾಯುತ್ತೇವೆ ಎಂಬುದು ಗೊತ್ತಿರಲಿಲ್ಲದಿದ್ದರೂ ಜನ ಜಾತಿಗಾಗಿ ಕೊಲೆ ಮಾಡುತ್ತಿದ್ದರೆ ಎಂದರೆ ಎಷ್ಟರ ಮಟ್ಟಿಗೆ ಜಾತಿ ವಿಷ ಜನರಲ್ಲಿ ಬೇರೂರಿದೆ” ಎಂದು ವಿ‍ಷಾಧ ವ್ಯಕ್ತಪಡಿಸಿದರು.

ಕೋವಿಡ್‌ಗಿಂತಲೂ ದೊಡ್ಡ ಕೊಲೆಗಡುಕ ವೈರಸ್ ಎಂದರೆ ಅದು ಜಾತಿ ವೈರಸ್ ಆಗಿದೆ. ಈ ಹಿಂದೆಯೂ ಮರ್ಯಾದೆಗೇಡು ಹತ್ಯೆಗಳು, ಜಾತಿ ದೌರ್ಜನ್ಯಗಳು ನಡೆಯುತ್ತಿದ್ದವು. ಆದರೆ ಇಂದು ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಈ ಕೊಲೆಗಳಿಗೆ ಕಾನೂನಿನ ಮಾನ್ಯತೆ ನೀಡುವ ಕೆಲಸ ಮಾಡುತ್ತಿವೆ. ಗೋಹತ್ಯೆ ನಿಷೇಧ ಕಾಯ್ದೆಯ ಹೆಸರಿನಲ್ಲಿ ದಲಿತ ದಮನಿತರ ಶೋಷಣೆಗೆ ರಹದಾರಿ ನೀಡಿವೆ. ಈ ಮತೀಯವಾದಿ ಸರ್ಕಾರ, ಮನುವಾದ ಸರ್ಕಾರ ಕೊಲೆಗಡುಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದೆ. ಇದರ ವಿರುದ್ಧ ನಿರಂತರವಾಗಿ ದನಿಯೆತ್ತಬೇಕಾಗಿದೆ ಎಂದರು.

ಹೋರಾಟದಲ್ಲಿ “ದಲಿತ-ದಮನಿತರ ಮೇಲಿನ ಕೊಲೆ ದೌರ್ಜನ್ಯಗಳು ನಿಲ್ಲಲೇಬೇಕು. ದಾನಪ್ಪ – ರಾಘವೇಂದ್ರರ ಕೊಲೆಯ ಪ್ರಕರಣಗಳ ನ್ಯಾಯಾಂಗ ತನಿಖೆಯಾಗಲೇಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜಿಲ್ಲೆಯಲ್ಲಿ ದೌರ್ಜನ್ಯಗಳನ್ನು ತಡೆಗಟ್ಟದ ಜಿಲ್ಲಾಡಳಿತದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂಬ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಹೋರಾಟಗಾರರಾದ ಡಿ.ಎಚ್ ಪೂಜಾರ್, ಕರಿಯಪ್ಪ ಗುಡಿಮನಿ, ಭಾರದ್ವಾಜ್ ಸೇರಿದಂತೆ ಇತರರು ಮಾತನಾಡಿದರು.


ಇದನ್ನೂ ಓದಿ: ಕೊಪ್ಪಳದಲ್ಲಿ ಕ್ರೌರ್ಯ: ಕ್ಷೌರಕ್ಕೆ ಬಂದ ದಲಿತ ಯುವಕರ ಮೇಲೆ ಹಲ್ಲೆ – ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಯುವಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...