Homeಚಳವಳಿಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಮರ್ಯಾದೆ ಹೀನ ಹತ್ಯೆ, ದಲಿತ- ದಮನಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಸಿಡಿದೆದ್ದ ಕೊಪ್ಪಳ ಚಲೋ ಹೋರಾಟ..

- Advertisement -
- Advertisement -

ಕೊಪ್ಪಳ ಜಿಲ್ಲೆಯ ಬರಗೂರಿನಲ್ಲಿ ನಡೆದ ಮಾರ್ಯಾದೆಗೇಡು ಹತ್ಯೆಗೆ ದಾನಪ್ಪ ಮಾತ್ರ ಸತ್ತಿಲ್ಲ, ನಾವೆಲ್ಲರೂ ಸತ್ತಿದ್ದೇವೆ, ಈ ದೇಶದ ಕಾನೂನು ಸತ್ತಿದೆ. ಈ ದೇಶದಲ್ಲಿ ಮನುವಾದಿಗಳಿಂದ ಪ್ರತಿದಿನವೂ ಅಂಬೇಡ್ಕರ್ ಬರೆದಿಟ್ಟ ಸಂವಿಧಾನ ಕೊಲೆಯಾಗುತ್ತಿದೆ ಎಂದು ಹೋರಾಟಗಾರ ಮತ್ತು ಚಿಂತಕ ಶಿವಸುಂದರ್ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಜಾತಿ ಕಾರಣಕ್ಕೆ ಸಂಭವಿಸಿದ ದಾನಪ್ಪ ಹಾಗೂ ರಾಘವೇಂದ್ರ ಕೊಲೆ ಪ್ರಕರಣಗಳ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ದಲಿತ ದಮನಿತರ ಒಕ್ಕೂಟದ ವತಿಯಿಂದ ನಡೆದ ಬೃಹತ್ ಕೊಪ್ಪಳ ಚಲೋ ಬೃಹತ್ ಪ್ರತಿಭಟನೆ‌ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ‘ನಾವೆಲ್ಲರೂ ಪ್ರೀತಿ – ಮಮತೆಯಿಂದ ಬದುಕಬೇಕು, ಮನುಷ್ಯರ ಥರ ಬದುಕಬೇಕೆಂದು ಕನಸು ಕಂಡೆವು. ಆದರೆ ಜಾತಿ ಕಾರಣಕ್ಕೆ ಅದು ಪ್ರತಿದಿನ ಕೊಲೆಯಾಗುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹುಟ್ಟು ಯಾರ ಕೈಯಲ್ಲೂ ಇಲ್ಲ. ಹಾಗಾಗಿ ನಿಷ್ಕಲ್ಮಶವಾಗಿ ಒಂದು ಗಂಡು-ಹೆಣ್ಣು ಪ್ರೀತಿ ಮಾಡಿದರೆ ಅದನ್ನು ಗೌರವಿಸಬೇಕು. 18 ವರ್ಷ ತುಂಬಿದ ಎಲ್ಲರಿಗೂ ತಮಗಿಷ್ಟಬಂದವರನ್ನು ಪ್ರೀತಿಸುವ ಹಕ್ಕಿದೆ. 18 ವರ್ಷ ತುಂಬಿದವರಿಗೆ ಮತದಾನದ ಹಕ್ಕು ನೀಡಿರುವ ನಾವು ಪ್ರೀತಿಸುವ ಹಕ್ಕು ಕಿತ್ತುಕೊಳ್ಳುತ್ತಿರುವುದೇಕೆ ಎಂದು ಶಿವಸುಂದರ್ ಪ್ರಶ್ನಿಸಿದರು.


ಇದನ್ನೂ ಓದಿ: ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು


ಪ್ರೀತಿಯನ್ನು ಕೊಲ್ಲುವುದೇ ಮನುಸ್ಮೃತಿ. ಮನುಷ್ಯತ್ವ ಉಳಿಸುವುದು ಸಂವಿಧಾನ. ಸಂವಿಧಾನವನ್ನು ಉಳಿಸಲು ಸಾರ್ವಜನಿಕ ಸಂಸ್ಥೆಗಳನ್ನು ರಚಿಸಲಾಯ್ತು. ಆದರೆ ಪ್ರತಿ ನಿತ್ಯ ನ್ಯಾಯ ಉಳಿಸಬೇಕಾದ ಜನರು ಮನುಸ್ಮೃತಿ ರಕ್ಷಿಸುತ್ತ ಸಂವಿಧಾನ ದ್ರೋಹಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿಯೇ ದಲಿತ-ದಮನಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ದೂರಿದರು.

ಪ್ರೀತಿಯನ್ನು ಕೊಲೆ ಮಾಡುವ ಕೊಲೆಗಾರರ ಜೊತೆ ನ್ಯಾಯ ನೀಡುವವರು ಶಾಮೀಲಾಗಿದ್ದಾರೆ. ಎಸ್‌ಸಿ ಎಸ್ಟಿ ಅಟ್ರಾಸಿಟಿ ಕಾಯ್ದೆಯನ್ನು ದುರ್ಬಲಗೊಳಿಸಲು ಸರ್ಕಾರ, ನ್ಯಾಯಾಂಗ ಪ್ರಯತ್ನಿಸಿತು. ಇವತ್ತು ದಲಿತರು ದಾಖಲಿಸುವ ದೂರುಗಳಲ್ಲಿ ಕೇವಲ ಶೇ.2 ರಷ್ಟು ಜನರಿಗೆ ಮಾತ್ರ ಶಿಕ್ಷೆಯಾಗುತ್ತಿದೆ. ಎಫ್‌ಐಆರ್ ದಾಖಲಾಗುವಾಗಲೇ ಪ್ರಕರಣವನ್ನು ದುರ್ಬಲಗೊಳಿಸುತ್ತದೆ. ಈ ರೀತಿಯಾಗಿ ವ್ಯವಸ್ಥಿತಿವಾಗಿ ನ್ಯಾಯ ನಿರಾಕರಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಣ್ಣ ಪುಟ್ಟ ಕೇಸುಗಳಿಗೆ ದೇಶದೋಹದ ಹೆಸರಿನಲ್ಲಿ 10-15 ವರ್ಷ ಜೈಲು ಶಿಕ್ಷೆ ವಿಧಿಸುವ ಸರ್ಕಾರಗಳು ಜಾತಿ ದೌರ್ಜನ್ಯ, ಕೊಲೆಗಳಿಗೆ ಕೇವಲ 3 ತಿಂಗಳಲ್ಲಿ ಜಾಮೀನು ಸಿಗುವಂತೆ ವರ್ತಿಸುತ್ತವೆ. ನಾನು ಎಲ್ಲರಲ್ಲಿಯೂ ಇದ್ದೀನಿ ಅಂದುಕೊಳ್ಳುವ ಧರ್ಮ ಇದ್ದರೆ ಸಂವಿಧಾನ ಉಳಿಯುತ್ತೆ. ಮೇಲು – ಕೀಳು ಪ್ರತಿಪಾದಿಸುವ ಧರ್ಮ ಬಂದರೆ ಸಂವಿಧಾನ ಸಾಯುತ್ತೆ. ಈ ದೇಶದಲ್ಲಿ ಮನುಸ್ಮೃತಿಯನ್ನು ನಾಶಗೊಳಿಸಿ, ಸಂವಿಧಾನ ಉಳಿಸುವ ಪಣ ತೊಡೋಣ ಎಂದು ಶಿವಸುಂದರ್ ಕರೆ ನೀಡಿದರು.

ಹೈಕೋರ್ಟ್ ವಕೀಲೆ ಮೈತ್ರೇಯಿ ಮಾತನಾಡಿ, “ಈ ಜಾತಿ ವ್ಯವಸ್ಥೆ ಎಂಬುದು ಒಂದು ರೋಗವಾಗಿದೆ. ಅದು ಎಲ್ಲಿಯವರೆಗೂ ಇರುತ್ತೋ ಅಲ್ಲಿಯವರೆಗೂ ದೇಶ ಮುಂದುವರೆಯುವುದಿಲ್ಲ. ಪ್ರೀತಿಸಿದವರನ್ನು ಮರ್ಯಾದೆ ಹೆಸರಲ್ಲಿ ಕೊಂದರೆ ಅದರಲ್ಲಿ ಮರ್ಯಾದೆ ಇರುವುದಿಲ್ಲ. ಅದು ಹೀನ ಕೊಲೆ ಎಂದು ಸವೋರ್ಚ ನ್ಯಾಯಾಲಯ ಹೇಳಿದೆ” ಎಂದರು.

ನಮ್ಮ ದೇಶದಲ್ಲಿ ಪ್ರತಿದಿನ ಸರಾಸರಿ 10 ದಲಿತ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಷ್ಟು ವರ್ಷವಾದರೂ ಸಮಾನತೆಯ ಸಮಾಜ ಕಟ್ಟಲು ಸಾಧ್ಯವಾಗಿಲ್ಲ. ಸಮಾನತೆಗಾಗಿ, ಭಾತೃತ್ವಕ್ಕಾಗಿ, ಜಾತಿವಿನಾಶದ ಸಮಾಜದ ವಿರುದ್ಧ ಸರ್ಕಾರ ಕೆಲಸ ಮಾಡುತ್ತಿದೆ. ಜಾತಿ ವಿನಾಶ ಆಗದೇ ನಿಜವಾದ ಪ್ರಜಾಪ್ರಭುತ್ವ ಜಾರಿಗೆ ಬರಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕೊಪ್ಪಳ: ಅನ್ಯಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ಸಾಹಿತಿ, ಹೋರಾಟಗಾರ ಬಸವರಾಜ್ ಸೂಲಿಬಾವಿ ಮಾತನಾಡಿ, “ಮೀಸಲು ಕ್ಷೇತ್ರಗಳಲ್ಲಿಯೇ ಇಂದು ದಲಿತ-ದಮನಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿರುವುದು ದೊಡ್ಡ ದುರಂತವಾಗಿದೆ. ಈ ಕ್ಷೇತ್ರಗಳಲ್ಲಿ ದಲಿತರು-ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರು ರಕ್ಷಣೆಗಾಗಿ ಆ ಕ್ಷೇತ್ರಗಳನ್ನು ಮೀಸಲು ಎಂದು ಘೋಷಿಸಲಾಯ್ತು. ಆದರೆ ಅಲ್ಲಿನ ಜನಪ್ರತಿನಿಧಿಗಳು ಈ ಸಮುದಾಯದ ಜನರ ಹಿತ ಕಾಯಲು ವಿಫಲರಾಗಿ ಮೇಲ್ಜಾತಿ ಜನರ ಪ್ರತಿನಿಧಿಗಳಾಗಿ ಕೆಲಸ ಮಾಡುತ್ತಿರುವುದೇ ಇಂತಹ ದೌರ್ಜನ್ಯಗಳಿಗೆ ಕಾರಣ” ಎಂದು ವಿಷಾಧ ವ್ಯಕ್ತಪಡಿಸಿದರು.

ದಾನಪ್ಪ, ರಾಘವೇಂದ್ರ ಕೊಲೆ ಕುರಿತು ಹಾಲಿ ಶಾಸಕ ಬಸವರಾಜ್ ದಡೆಸಗೂರು, ಮಾಜಿ ಶಾಸಕ ಶಿವರಾಜ್ ತಂಗಡಗಿ ಏಕೆ ಮಾತನಾಡಿಲ್ಲ? ಅವರು ಯಾರನ್ನು ಪ್ರತಿನಿಧಿಸುತ್ತಿದ್ದಾರೆ, ಕೊಂದವರು ಮಾತ್ರವಲ್ಲದೆ ಜಾತಿ ವ್ಯವಸ್ಥೆಯನ್ನು ಸಮರ್ಥನೆ ಮಾಡುವ ಎಲ್ಲರೂ ಕೊಲೆಗಾರರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ಈ ಲಾಕ್‌ಡೌನ್‌ ಅವಧಿಯಲ್ಲಿ ಹತ್ತಾರು ಮರ್ಯಾದೆಹೀನ ಹತ್ಯೆಗಳು ಸಂಭವಿಸಿವೆ. ಬಿಜಾಪುರದ ದೇವರ ಹಿಪ್ಪರಗಿಯಲ್ಲಿ ಅಂತರ್ಜಾತಿ ಮದುವೆಯಾದ ದಂಪತಿಯನ್ನು ಇಂದು ಕೊಲ್ಲಲಾಗಿದೆ. ಮೈಸೂರಿನ ಪಿರಿಯಾಪಟ್ಟಣದಲ್ಲಿ ಕೊಲೆಯಾಗಿದೆ. ಬರಗೂರಿನಲ್ಲಿ ಹತ್ಯೆಯಾಗಿದೆ. ನಾಳೆ ಬೆಳಿಗ್ಗೆ ನಾವು ಯಾವ ಆಸ್ಪತ್ರೆಯಲ್ಲಿ ಕೋವಿಡ್ ಬಂದು ಸಾಯುತ್ತೇವೆ ಎಂಬುದು ಗೊತ್ತಿರಲಿಲ್ಲದಿದ್ದರೂ ಜನ ಜಾತಿಗಾಗಿ ಕೊಲೆ ಮಾಡುತ್ತಿದ್ದರೆ ಎಂದರೆ ಎಷ್ಟರ ಮಟ್ಟಿಗೆ ಜಾತಿ ವಿಷ ಜನರಲ್ಲಿ ಬೇರೂರಿದೆ” ಎಂದು ವಿ‍ಷಾಧ ವ್ಯಕ್ತಪಡಿಸಿದರು.

ಕೋವಿಡ್‌ಗಿಂತಲೂ ದೊಡ್ಡ ಕೊಲೆಗಡುಕ ವೈರಸ್ ಎಂದರೆ ಅದು ಜಾತಿ ವೈರಸ್ ಆಗಿದೆ. ಈ ಹಿಂದೆಯೂ ಮರ್ಯಾದೆಗೇಡು ಹತ್ಯೆಗಳು, ಜಾತಿ ದೌರ್ಜನ್ಯಗಳು ನಡೆಯುತ್ತಿದ್ದವು. ಆದರೆ ಇಂದು ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಈ ಕೊಲೆಗಳಿಗೆ ಕಾನೂನಿನ ಮಾನ್ಯತೆ ನೀಡುವ ಕೆಲಸ ಮಾಡುತ್ತಿವೆ. ಗೋಹತ್ಯೆ ನಿಷೇಧ ಕಾಯ್ದೆಯ ಹೆಸರಿನಲ್ಲಿ ದಲಿತ ದಮನಿತರ ಶೋಷಣೆಗೆ ರಹದಾರಿ ನೀಡಿವೆ. ಈ ಮತೀಯವಾದಿ ಸರ್ಕಾರ, ಮನುವಾದ ಸರ್ಕಾರ ಕೊಲೆಗಡುಕರನ್ನು ರಕ್ಷಣೆ ಮಾಡುವಲ್ಲಿ ನಿರತವಾಗಿದೆ. ಇದರ ವಿರುದ್ಧ ನಿರಂತರವಾಗಿ ದನಿಯೆತ್ತಬೇಕಾಗಿದೆ ಎಂದರು.

ಹೋರಾಟದಲ್ಲಿ “ದಲಿತ-ದಮನಿತರ ಮೇಲಿನ ಕೊಲೆ ದೌರ್ಜನ್ಯಗಳು ನಿಲ್ಲಲೇಬೇಕು. ದಾನಪ್ಪ – ರಾಘವೇಂದ್ರರ ಕೊಲೆಯ ಪ್ರಕರಣಗಳ ನ್ಯಾಯಾಂಗ ತನಿಖೆಯಾಗಲೇಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜಿಲ್ಲೆಯಲ್ಲಿ ದೌರ್ಜನ್ಯಗಳನ್ನು ತಡೆಗಟ್ಟದ ಜಿಲ್ಲಾಡಳಿತದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂಬ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಹೋರಾಟಗಾರರಾದ ಡಿ.ಎಚ್ ಪೂಜಾರ್, ಕರಿಯಪ್ಪ ಗುಡಿಮನಿ, ಭಾರದ್ವಾಜ್ ಸೇರಿದಂತೆ ಇತರರು ಮಾತನಾಡಿದರು.


ಇದನ್ನೂ ಓದಿ: ಕೊಪ್ಪಳದಲ್ಲಿ ಕ್ರೌರ್ಯ: ಕ್ಷೌರಕ್ಕೆ ಬಂದ ದಲಿತ ಯುವಕರ ಮೇಲೆ ಹಲ್ಲೆ – ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಯುವಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....