Homeಮುಖಪುಟಪ್ರಧಾನಿ ಮೋದಿ ರೋಡ್ ಶೋನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕ್ರಮಕ್ಕೆ ದಲಿತ ಮುಖಂಡರ ಆಗ್ರಹ

ಪ್ರಧಾನಿ ಮೋದಿ ರೋಡ್ ಶೋನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕ್ರಮಕ್ಕೆ ದಲಿತ ಮುಖಂಡರ ಆಗ್ರಹ

- Advertisement -
- Advertisement -

ಇಂದು ಪ್ರಧಾನಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸುವ ವೇಳೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಅಂಬೇಡ್ಕರ್ ಫ್ಲೆಕ್ಸ್ ಹರಿದು ಅವಮಾನ ಮಾಡಲಾಗಿದೆ ಎಂದು ದಲಿತ ಮುಖಂಡರ ಆರೋಪಿಸಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

ದಲಿತ ಮುಖಂಡ ಚಿಕ್ಕರಾಮುರವರು ಮಾತನಾಡಿ, “ಪ್ರಪಂಚಾದ್ಯಂತ ಮನ್ನಣೆ ಪಡೆದಿರುವ ಡಾ.ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರವನ್ನು ಇಂದಿನ ಪ್ರಧಾನಿಗಳ ರ್ಯಾಲಿಗೆ ಬಳಸಿಕೊಳ್ಳಲಾಗಿದೆ. ಆದರೆ ಯಾರೋ ಕಿಡಿಗೇಡಿಗಳು ದುರುದ್ದೇಶದಿಂದ ಡಾ. ಅಂಬೇಡ್ಕರ್‌ರವರ ಭಾವಚಿತ್ರ ಇರುವ ಫ್ಲೆಕ್ಸ್ ಅನ್ನು ಹರಿಯುವ ಮೂಲಕ ವಿಕೃತಿ ಮೆರೆದಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಇಂದು ಕೆಎಚ್‌ಬಿ ಕಾಲೋನಿಯಿಂದ ನವರಂಗ್ ಥಿಯೇಟರ್‌ವರೆಗೂ ಬಿಜೆಪಿ ರ್ಯಾಲಿ ಇತ್ತು. ಆ ಪ್ರಯುಕ್ತ ಶಂಕರಮಠ ಸರ್ಕಲ್‌ನಲ್ಲಿ ಅಂಬೇಡ್ಕರ್‌ರವರ ಭಾವಚಿತ್ರವನ್ನು ಬಳಸಿಕೊಂಡು ಆ ನಂತರ ಜಾತಿವಾದಿಗಳು ಅದನ್ನು ವಿರೂಪಗೊಳಿಸಲಾಗಿದೆ. ಇದರಲ್ಲಿ ಬಿಜೆಪಿಯ ಬೇಜವಬ್ದಾರಿತನವೂ ಇದೆ” ಎಂದು ಕಿಡಿಕಾರಿದರು.

ಅಂಬೇಡ್ಕರ್‌ರವರು ಇಡೀ ಪ್ರಪಂಚದ ಆಸ್ತಿಯಾಗಿದ್ದಾರೆ. ಅವರ ಭಾವಚಿತ್ರಗಳನ್ನು ಬಳಸಿಕೊಳ್ಳುವ ರಾಜಕೀಯ ಪಕ್ಷಗಳಿಗೆ ಆ ಭಾವಚಿತ್ರಗಳಿಗೆ ಗೌರವ ಕೊಡಬೇಕು, ಅದನ್ನು ಸಂರಕ್ಷಿಸಬೇಕು ಎನ್ನುವ ಜವಾಬ್ದಾರಿ ಇರಬೇಕು. ಅದು ಬಿಟ್ಟು ಈ ರೀತಿ ಬಳಸಿ ಬಿಸಾಕುವುದು ಸರಿಯಲ್ಲ. ನಾವು ಏನು ಮಾಡಿದರೂ ಹೇಳುವವರು-ಕೇಳುವವರು ಯಾರು ಇಲ್ಲ ಎನ್ನುವ ಅಹಂಕಾರದಿಂದ ಇಂದಿನ ಘಟನೆ ಜರುಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ಈ ಕೃತ್ಯದಿಂದ ಸಮಾಜದಲ್ಲಿ ಅಶಾಂತಿ, ದಳ್ಳೂರಿ ಉದ್ಭವಿಸುವ ಅಪಾಯವಿದೆ. ಹಾಗಾಗಿ ಪೊಲೀಸ್ ಇಲಾಖೆ ಕೂಡಲೇ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನವೆಸಗಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಇಂದು ದಲಿತ ಒಕ್ಕೂಟದ ಕಾರ್ಯಕರ್ತರು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: EWS ಮೀಸಲಾತಿ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Ee su makkalu eke Ambedkar photo annu chunavanege balasikollabeku.Adu hakiruvudu shankara mata ( chaddi)dalli yake hakabeku.Namma Ambedkar avrige. Vishvave gowrava koduttade ee nicha janaru kottarestu bittrestu.Vazra yavahottu vajra ve ivara hage maanina hente galalla.

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು ಮತ್ತು ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ಶುಕ್ರವಾರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...