Homeಕರ್ನಾಟಕಪರಿಶಿಷ್ಠ ಪಂಗಡಕ್ಕೆ ಅಂಬಿಗ ಸಮುದಾಯ; ಕೇಂದ್ರಕ್ಕೆ ಶೀಘ್ರ ಸ್ಪಷ್ಟನೆ ನೀಡಲಾಗುವುದು; ಸಿಎಂ ಸಿದ್ದರಾಮಯ್ಯ

ಪರಿಶಿಷ್ಠ ಪಂಗಡಕ್ಕೆ ಅಂಬಿಗ ಸಮುದಾಯ; ಕೇಂದ್ರಕ್ಕೆ ಶೀಘ್ರ ಸ್ಪಷ್ಟನೆ ನೀಡಲಾಗುವುದು; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಅಂಬಿಗ ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸುವ ಕುರಿತು ಶೀಘ್ರದಲ್ಲೇ ಕೇಂದ್ರಕ್ಕೆ ಸ್ಪಷ್ಟನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಂಬಿಗ ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸುವ ಕುರಿತು ಈಗಾಗಲೇ ಎರಡು ಬಾರಿ ರಾಜ್ಯ ಸರಕಾರವೂ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ. ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದೆ. ಕೇಂದ್ರ ಸರಕಾರ ಕೇಳಿರುವ ಮರು ಸ್ಪಷ್ಟೀಕರಣವನ್ನು ಕೂಡಲೇ ಪರಿಶೀಲಿಸಿ ಸಲ್ಲಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

1996-97ರಲ್ಲಿಯೇ ದಿವಂಗತ ಶಾಸಕ ನಾರಾಯಣ ರಾವ್ ಅಂಬಿಗ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ಪ್ರಯತ್ನಿಸಿದ್ದ ಶ್ರಮವನ್ನು ಮರೆಯಬಾರದು. ದೋಣಿ ನಡೆಸುವುದು ಹಾಗೂ ಮೀನು ಹಿಡಿಯುವ ಕಾಯಕ ಅಂಬಿಗರದ್ದು. ಕಾಯಕದಲ್ಲಿ ಮೇಲು ಕೀಳು ಎಂಬುವುದಿಲ್ಲ. ಮನುಷ್ಯರ ನಡುವೆ ತಾರತಮ್ಯ ಇರಬಾರದು. ಕಾಯಕವನ್ನು ಆಧರಿಸಿ ಮೇಲು ಕೀಳು ಎಂದು ತಾರತಮ್ಯ ಮಾಡಿದ್ದರ ವಿರುದ್ಧ ಬಸವಾದಿ ಶರಣರು ಹೋರಾಟ ಮಾಡಿದರು. ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಹಿಂದೆ ನಮ್ಮ ಅವಧಿಯಲ್ಲಿಯೇ ಮಾಡಲಾಯಿತು. ಆರ್ಥಿಕ ಶಕ್ತಿ ಇಲ್ಲದ ಸಮಾಜ ಮುಖ್ಯ ವಾಹಿನಿಗೆ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಕಾಯಕದಲ್ಲಿ ಎಲ್ಲರೂ ತೊಡಗಿ ಉತ್ಪಾದನೆಯನ್ನು ಎಲ್ಲರೂ ಹಂಚಿಕೊಳ್ಳಬೇಕು ಎನ್ನುವುದು ಇದರ ಅರ್ಥ. ಇನ್ನೊಬ್ಬರ ಗಳಿಕೆಯನ್ನು ಕುಳಿತು ಅನುಭವಿಸಬಾರದು. ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲದಿರುವುದು ಆರ್ಥಿಕ, ಸಾಮಾಜಿಕ ಚಟುವಟಿಕೆ ಇಲ್ಲದಿರುವುದರಿಂದ, ಇದಕ್ಕೆ ಚಾಲನೆ ನೀಡಬೇಕೆಂದು ಬಸವಾದಿ ಶರಣರು ಹೇಳಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ಮಕ್ಕಳು ಯಾವ ಕಾರಣದಿಂದಲೂ ವಿದ್ಯೆಯಿಂದ ವಂಚಿತರಾಗಬಾರದು. ಸಮಾಜದ ಅಸಮಾನತೆಯನ್ನು ಹೋಗಲಾಡಿಸಬೇಕು. ಪಟ್ಟಭದ್ರ ಹಿತಾಸಕ್ತಿಯ ವಿರುದ್ಧ ನಿಲ್ಲಬೇಕಾಗುತ್ತದೆ. ಬದಲಾವಣೆ ಬಯಸದ ಜನ ಆಗಲೂ ಇದ್ದರು, ಈಗಲೂ ಇದ್ದಾರೆ. ಹಿಂದುಳಿದ ಸಮಾಜದ ಪರ ಸದಾ ನಾನು ಇರುವುದಾಗಿ ಸಿಎಂ ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.

ಇದನ್ನು ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಭಾರತದಲ್ಲಿ ಮುಸ್ಲಿಮ್‌ ವಿರೋಧಿ ಪ್ರಚಾರಕ್ಕೆ ಸಾಮಾಜಿಕ ಮಾದ್ಯಮವನ್ನು ಹೇಗೆ ಬಳಸಲಾಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...