Homeಕರ್ನಾಟಕಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

ಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

- Advertisement -
- Advertisement -

ಬೆಂಗಳೂರಿನ ಗವಿಪುರಂ ಕೊರೊನಾ ರೋಗಿಯೊಬ್ಬರು ತಮ್ಮ ಮನೆ ಮುಂದೆ ಆಂಬುಲೆನ್ಸ್‌ಗಾಗಿ ಸುಮಾರು ಎರಡು ಗಂಟೆಗಳ ಕಾಲ ಕಾದು, ಕೊನೆಗೆ ಅಲ್ಲೆ ಪ್ರಾಣ ಬಿಟ್ಟ ದುರ್ಘಟನೆಗೆ BBMP ಕಮಿಷನರ್ ಬಿ.ಎಚ್ ಅನಿಲ್ ಕುಮಾರ್ ಕೈಮುಗಿದ ಕ್ಷಮೆ ಕೇಳಿದ್ದಾರೆ.

55 ವರ್ಷದ ವ್ಯಕ್ತಿಯ ಶವವನ್ನು ಅವರ ಮನೆಯ ಹೊರಗಿನ ಬೀದಿಯಲ್ಲಿ ಮಲಗಿಸಿದ್ದು, ಅವರ ಸಂಬಂಧಿಕರು ಮೃತದೇಹದ ಪಕ್ಕದಲ್ಲಿ ನಿಂತಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿತ್ತು.

ಘಟನೆಯ ಹಿನ್ನೆಲೆ

ಹನುಮಂತನಗರ ಬಳಿಯ ಗವಿಪುರಂ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ವರದಿ ಬರುತ್ತಿದ್ದಂತಯೇ ಅವರ ಪತ್ನಿ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬುಲೆನ್ಸ್‌ಗಾಗಿ ಮನವಿ ಮಾಡಿದ್ದರು.

ಆದರೆ ಆಂಬ್ಯುಲೆನ್ಸ್ ಬರುವುದು ತಡವಾಗಿದೆ. ಅವರ ಕುಟುಂಬ ಸದಸ್ಯರು ಅವರನ್ನು ಆಟೋರಿಕ್ಷಾ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು. ಆದರೆ ಅವರು ಮನೆಯಿಂದ ಹೊರಬಂದ ಕೂಡಲೇ ಬೀದಿಯಲ್ಲಿ ಕುಸಿದುಬಿದ್ದಿದ್ದಾರೆ. ಅವರನ್ನು ಮಲಗಿಸಿ ಅವರ ಸಂಬಂಧಿಗಳು ಕಾಯುತ್ತಿರುವಾಗ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ. ಎರಡು ಗಂಟೆಗಳ ವಿಳಂಬದ ನಂತರ ಆಂಬ್ಯುಲೆನ್ಸ್ ಅಲ್ಲಿಗೆ ತಲುಪಿತು ಎನ್ನಲಾಗಿದೆ.

ವಿಷಯ ತಿಳಿದ ನಂತರ ಬೆಂಗಳೂರು BBMP ಕಮಿಷನರ್ ಬಿ.ಎಚ್ ಅನಿಲ್ ಕುಮಾರ್ ಅವರ ಮನಗೆ ತೆರಳಿ ಕೈ ಮುಗಿದ ಬೇಷರತ್ ಕ್ಷಮೆ ಕೇಳಿದ್ದಾರೆ. ಘಟನೆಯ ತನಿಖೆಗೆ ಆದೇಶಿಸಲಾಗುವುದು. ಆರೋಗ್ಯ ಸೇವೆಗಳ ಮೇಲೆ ಭಾರಿ ಒತ್ತಡವಿದ್ದರೂ ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಟ್ವೀಟ್ ಕೂಡ ಮಾಡಿದ್ದಾರೆ.

ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ ಅನಿಲ್ ಕುಮಾರ್‌ರವರ ಕಾರ್ಯಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಬಹಳಷ್ಟು ನೆಟ್ಟಿಗರು ಸರ್ಕಾರವೊಂದಕ್ಕೆ ಇರಬೇಕಾದ ಪ್ರಾಮಾಣಿಕತೆ ಇದು ಎಂದು ಬರೆದಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ “ಸಕಾಲದಲ್ಲಿ‌ ಅಂಬ್ಯುಲೆನ್ಸ್ ಬರದೆ ಸಾವನಪ್ಪಿದ್ದ ಕೊರೊನಾ ಸೋಂಕಿತರ ಮನೆಗೆ ತೆರಳಿ‌ ಕುಟುಂಬದ ಕ್ಷಮೆ ಕೇಳಿದ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್, ನಮ್ಮೆಲ್ಲ‌ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ, ಅವರಿಗೆ ಅಭಿನಂದನೆಗಳು. ಜನತೆ ಅಧಿಕಾರಿಗಳಿಂದ ನಿರೀಕ್ಷಿಸುವುದು ಇಂತಹ ಸೂಕ್ಷ್ಮ ಅಂತಕರಣದ ಮಾನವೀಯ ನಡವಳಿಕೆಯನ್ನು” ಎಂದಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಕೊರೊನಾ ನಿರ್ವಹಣೆ ಉಸ್ತುವಾರಿ, ಸಚಿವ ಆರ್.ಅಶೋಕ್, ಈ ದುರ್ಘಟನೆಗೆ ಕಾರಣರಾದವರ ​​ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ ಒಂದು ವಾರದಲ್ಲಿ ಹಲವು ಪಟ್ಟು ಹೆಚ್ಚಾಗಿದೆ. ಬಹಳಷ್ಟು ಜನರು ಬೆಂಗಳೂರು ತೊರೆದು ತಮ್ಮ ಊರುಗಳಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕವು ಶನಿವಾರ ಒಂದೇ ದಿನ 1,839 ಹೊಸ COVID-19 ಪ್ರಕರಣಗಳನ್ನು ವರದಿ ಮಾಡಿದೆ. ಅವುಗಳಲ್ಲಿ 1,172 ಪ್ರಕರಣಗಳು ಬೆಂಗಳೂರಿನಲ್ಲೇ ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕುಗಳ ಸಂಖ್ಯೆ 21,549 ಮತ್ತು ಸಾವುಗಳು 335 ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಆಂಬುಲೆನ್ಸ್‌ಗಾಗಿ 2 ಗಂಟೆ ಕಾಯುವಿಕೆ: ಮನೆ ಮುಂದೆ ಪ್ರಾಣಬಿಟ್ಟ ಬೆಂಗಳೂರಿನ ಕೊರೊನಾ ಸೋಂಕಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...