Homeಕರ್ನಾಟಕಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

ಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

- Advertisement -
- Advertisement -

ಬೆಂಗಳೂರಿನ ಗವಿಪುರಂ ಕೊರೊನಾ ರೋಗಿಯೊಬ್ಬರು ತಮ್ಮ ಮನೆ ಮುಂದೆ ಆಂಬುಲೆನ್ಸ್‌ಗಾಗಿ ಸುಮಾರು ಎರಡು ಗಂಟೆಗಳ ಕಾಲ ಕಾದು, ಕೊನೆಗೆ ಅಲ್ಲೆ ಪ್ರಾಣ ಬಿಟ್ಟ ದುರ್ಘಟನೆಗೆ BBMP ಕಮಿಷನರ್ ಬಿ.ಎಚ್ ಅನಿಲ್ ಕುಮಾರ್ ಕೈಮುಗಿದ ಕ್ಷಮೆ ಕೇಳಿದ್ದಾರೆ.

55 ವರ್ಷದ ವ್ಯಕ್ತಿಯ ಶವವನ್ನು ಅವರ ಮನೆಯ ಹೊರಗಿನ ಬೀದಿಯಲ್ಲಿ ಮಲಗಿಸಿದ್ದು, ಅವರ ಸಂಬಂಧಿಕರು ಮೃತದೇಹದ ಪಕ್ಕದಲ್ಲಿ ನಿಂತಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿತ್ತು.

ಘಟನೆಯ ಹಿನ್ನೆಲೆ

ಹನುಮಂತನಗರ ಬಳಿಯ ಗವಿಪುರಂ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ವರದಿ ಬರುತ್ತಿದ್ದಂತಯೇ ಅವರ ಪತ್ನಿ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬುಲೆನ್ಸ್‌ಗಾಗಿ ಮನವಿ ಮಾಡಿದ್ದರು.

ಆದರೆ ಆಂಬ್ಯುಲೆನ್ಸ್ ಬರುವುದು ತಡವಾಗಿದೆ. ಅವರ ಕುಟುಂಬ ಸದಸ್ಯರು ಅವರನ್ನು ಆಟೋರಿಕ್ಷಾ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು. ಆದರೆ ಅವರು ಮನೆಯಿಂದ ಹೊರಬಂದ ಕೂಡಲೇ ಬೀದಿಯಲ್ಲಿ ಕುಸಿದುಬಿದ್ದಿದ್ದಾರೆ. ಅವರನ್ನು ಮಲಗಿಸಿ ಅವರ ಸಂಬಂಧಿಗಳು ಕಾಯುತ್ತಿರುವಾಗ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ. ಎರಡು ಗಂಟೆಗಳ ವಿಳಂಬದ ನಂತರ ಆಂಬ್ಯುಲೆನ್ಸ್ ಅಲ್ಲಿಗೆ ತಲುಪಿತು ಎನ್ನಲಾಗಿದೆ.

ವಿಷಯ ತಿಳಿದ ನಂತರ ಬೆಂಗಳೂರು BBMP ಕಮಿಷನರ್ ಬಿ.ಎಚ್ ಅನಿಲ್ ಕುಮಾರ್ ಅವರ ಮನಗೆ ತೆರಳಿ ಕೈ ಮುಗಿದ ಬೇಷರತ್ ಕ್ಷಮೆ ಕೇಳಿದ್ದಾರೆ. ಘಟನೆಯ ತನಿಖೆಗೆ ಆದೇಶಿಸಲಾಗುವುದು. ಆರೋಗ್ಯ ಸೇವೆಗಳ ಮೇಲೆ ಭಾರಿ ಒತ್ತಡವಿದ್ದರೂ ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಟ್ವೀಟ್ ಕೂಡ ಮಾಡಿದ್ದಾರೆ.

ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ ಅನಿಲ್ ಕುಮಾರ್‌ರವರ ಕಾರ್ಯಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಬಹಳಷ್ಟು ನೆಟ್ಟಿಗರು ಸರ್ಕಾರವೊಂದಕ್ಕೆ ಇರಬೇಕಾದ ಪ್ರಾಮಾಣಿಕತೆ ಇದು ಎಂದು ಬರೆದಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ “ಸಕಾಲದಲ್ಲಿ‌ ಅಂಬ್ಯುಲೆನ್ಸ್ ಬರದೆ ಸಾವನಪ್ಪಿದ್ದ ಕೊರೊನಾ ಸೋಂಕಿತರ ಮನೆಗೆ ತೆರಳಿ‌ ಕುಟುಂಬದ ಕ್ಷಮೆ ಕೇಳಿದ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್, ನಮ್ಮೆಲ್ಲ‌ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ, ಅವರಿಗೆ ಅಭಿನಂದನೆಗಳು. ಜನತೆ ಅಧಿಕಾರಿಗಳಿಂದ ನಿರೀಕ್ಷಿಸುವುದು ಇಂತಹ ಸೂಕ್ಷ್ಮ ಅಂತಕರಣದ ಮಾನವೀಯ ನಡವಳಿಕೆಯನ್ನು” ಎಂದಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಕೊರೊನಾ ನಿರ್ವಹಣೆ ಉಸ್ತುವಾರಿ, ಸಚಿವ ಆರ್.ಅಶೋಕ್, ಈ ದುರ್ಘಟನೆಗೆ ಕಾರಣರಾದವರ ​​ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ ಒಂದು ವಾರದಲ್ಲಿ ಹಲವು ಪಟ್ಟು ಹೆಚ್ಚಾಗಿದೆ. ಬಹಳಷ್ಟು ಜನರು ಬೆಂಗಳೂರು ತೊರೆದು ತಮ್ಮ ಊರುಗಳಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕವು ಶನಿವಾರ ಒಂದೇ ದಿನ 1,839 ಹೊಸ COVID-19 ಪ್ರಕರಣಗಳನ್ನು ವರದಿ ಮಾಡಿದೆ. ಅವುಗಳಲ್ಲಿ 1,172 ಪ್ರಕರಣಗಳು ಬೆಂಗಳೂರಿನಲ್ಲೇ ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕುಗಳ ಸಂಖ್ಯೆ 21,549 ಮತ್ತು ಸಾವುಗಳು 335 ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಆಂಬುಲೆನ್ಸ್‌ಗಾಗಿ 2 ಗಂಟೆ ಕಾಯುವಿಕೆ: ಮನೆ ಮುಂದೆ ಪ್ರಾಣಬಿಟ್ಟ ಬೆಂಗಳೂರಿನ ಕೊರೊನಾ ಸೋಂಕಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...