Homeಕರ್ನಾಟಕಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

ಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್

- Advertisement -
- Advertisement -

ಬೆಂಗಳೂರಿನ ಗವಿಪುರಂ ಕೊರೊನಾ ರೋಗಿಯೊಬ್ಬರು ತಮ್ಮ ಮನೆ ಮುಂದೆ ಆಂಬುಲೆನ್ಸ್‌ಗಾಗಿ ಸುಮಾರು ಎರಡು ಗಂಟೆಗಳ ಕಾಲ ಕಾದು, ಕೊನೆಗೆ ಅಲ್ಲೆ ಪ್ರಾಣ ಬಿಟ್ಟ ದುರ್ಘಟನೆಗೆ BBMP ಕಮಿಷನರ್ ಬಿ.ಎಚ್ ಅನಿಲ್ ಕುಮಾರ್ ಕೈಮುಗಿದ ಕ್ಷಮೆ ಕೇಳಿದ್ದಾರೆ.

55 ವರ್ಷದ ವ್ಯಕ್ತಿಯ ಶವವನ್ನು ಅವರ ಮನೆಯ ಹೊರಗಿನ ಬೀದಿಯಲ್ಲಿ ಮಲಗಿಸಿದ್ದು, ಅವರ ಸಂಬಂಧಿಕರು ಮೃತದೇಹದ ಪಕ್ಕದಲ್ಲಿ ನಿಂತಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿತ್ತು.

ಘಟನೆಯ ಹಿನ್ನೆಲೆ

ಹನುಮಂತನಗರ ಬಳಿಯ ಗವಿಪುರಂ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ವರದಿ ಬರುತ್ತಿದ್ದಂತಯೇ ಅವರ ಪತ್ನಿ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬುಲೆನ್ಸ್‌ಗಾಗಿ ಮನವಿ ಮಾಡಿದ್ದರು.

ಆದರೆ ಆಂಬ್ಯುಲೆನ್ಸ್ ಬರುವುದು ತಡವಾಗಿದೆ. ಅವರ ಕುಟುಂಬ ಸದಸ್ಯರು ಅವರನ್ನು ಆಟೋರಿಕ್ಷಾ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು. ಆದರೆ ಅವರು ಮನೆಯಿಂದ ಹೊರಬಂದ ಕೂಡಲೇ ಬೀದಿಯಲ್ಲಿ ಕುಸಿದುಬಿದ್ದಿದ್ದಾರೆ. ಅವರನ್ನು ಮಲಗಿಸಿ ಅವರ ಸಂಬಂಧಿಗಳು ಕಾಯುತ್ತಿರುವಾಗ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ. ಎರಡು ಗಂಟೆಗಳ ವಿಳಂಬದ ನಂತರ ಆಂಬ್ಯುಲೆನ್ಸ್ ಅಲ್ಲಿಗೆ ತಲುಪಿತು ಎನ್ನಲಾಗಿದೆ.

ವಿಷಯ ತಿಳಿದ ನಂತರ ಬೆಂಗಳೂರು BBMP ಕಮಿಷನರ್ ಬಿ.ಎಚ್ ಅನಿಲ್ ಕುಮಾರ್ ಅವರ ಮನಗೆ ತೆರಳಿ ಕೈ ಮುಗಿದ ಬೇಷರತ್ ಕ್ಷಮೆ ಕೇಳಿದ್ದಾರೆ. ಘಟನೆಯ ತನಿಖೆಗೆ ಆದೇಶಿಸಲಾಗುವುದು. ಆರೋಗ್ಯ ಸೇವೆಗಳ ಮೇಲೆ ಭಾರಿ ಒತ್ತಡವಿದ್ದರೂ ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಟ್ವೀಟ್ ಕೂಡ ಮಾಡಿದ್ದಾರೆ.

ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ ಅನಿಲ್ ಕುಮಾರ್‌ರವರ ಕಾರ್ಯಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಬಹಳಷ್ಟು ನೆಟ್ಟಿಗರು ಸರ್ಕಾರವೊಂದಕ್ಕೆ ಇರಬೇಕಾದ ಪ್ರಾಮಾಣಿಕತೆ ಇದು ಎಂದು ಬರೆದಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ “ಸಕಾಲದಲ್ಲಿ‌ ಅಂಬ್ಯುಲೆನ್ಸ್ ಬರದೆ ಸಾವನಪ್ಪಿದ್ದ ಕೊರೊನಾ ಸೋಂಕಿತರ ಮನೆಗೆ ತೆರಳಿ‌ ಕುಟುಂಬದ ಕ್ಷಮೆ ಕೇಳಿದ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್, ನಮ್ಮೆಲ್ಲ‌ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ, ಅವರಿಗೆ ಅಭಿನಂದನೆಗಳು. ಜನತೆ ಅಧಿಕಾರಿಗಳಿಂದ ನಿರೀಕ್ಷಿಸುವುದು ಇಂತಹ ಸೂಕ್ಷ್ಮ ಅಂತಕರಣದ ಮಾನವೀಯ ನಡವಳಿಕೆಯನ್ನು” ಎಂದಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಕೊರೊನಾ ನಿರ್ವಹಣೆ ಉಸ್ತುವಾರಿ, ಸಚಿವ ಆರ್.ಅಶೋಕ್, ಈ ದುರ್ಘಟನೆಗೆ ಕಾರಣರಾದವರ ​​ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ ಒಂದು ವಾರದಲ್ಲಿ ಹಲವು ಪಟ್ಟು ಹೆಚ್ಚಾಗಿದೆ. ಬಹಳಷ್ಟು ಜನರು ಬೆಂಗಳೂರು ತೊರೆದು ತಮ್ಮ ಊರುಗಳಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕವು ಶನಿವಾರ ಒಂದೇ ದಿನ 1,839 ಹೊಸ COVID-19 ಪ್ರಕರಣಗಳನ್ನು ವರದಿ ಮಾಡಿದೆ. ಅವುಗಳಲ್ಲಿ 1,172 ಪ್ರಕರಣಗಳು ಬೆಂಗಳೂರಿನಲ್ಲೇ ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕುಗಳ ಸಂಖ್ಯೆ 21,549 ಮತ್ತು ಸಾವುಗಳು 335 ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಆಂಬುಲೆನ್ಸ್‌ಗಾಗಿ 2 ಗಂಟೆ ಕಾಯುವಿಕೆ: ಮನೆ ಮುಂದೆ ಪ್ರಾಣಬಿಟ್ಟ ಬೆಂಗಳೂರಿನ ಕೊರೊನಾ ಸೋಂಕಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...