Homeಕರ್ನಾಟಕಆಂಬ್ಯುಲೆನ್ಸ್ ಇಲ್ಲದೆ ತಂದೆಯ ಶವ ಬೈಕ್‌ನಲ್ಲೆ ಕೊಂಡೊಯ್ದ ಮಕ್ಕಳು | ಯುಪಿ ಅಲ್ಲ, ಕರ್ನಾಟಕ!

ಆಂಬ್ಯುಲೆನ್ಸ್ ಇಲ್ಲದೆ ತಂದೆಯ ಶವ ಬೈಕ್‌ನಲ್ಲೆ ಕೊಂಡೊಯ್ದ ಮಕ್ಕಳು | ಯುಪಿ ಅಲ್ಲ, ಕರ್ನಾಟಕ!

- Advertisement -
- Advertisement -

ಯಾವುದೆ ಆ್ಯಂಬುಲೆನ್ಸ್ ಸಿಗದ ಕಾರಣ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್‌ನಲ್ಲೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್ ಹೊಸಕೋಟೆಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಆಸ್ಪತ್ರೆಯ ಅಧಿಕಾರಿಗಳು ಆಂಬ್ಯುಲೆನ್ಸ್ ನಿರಾಕರಿಸಿದ ಕಾರಣ ಈ ಘಟನೆ ನಡೆದಿದೆ ಎಂದು TNIE ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಹೋದರರಾದ ಚಂದ್ರಣ್ಣ ಮತ್ತು ಗೋಪಾಲಪ್ಪ ಅವರು ಶವವನ್ನು ಸವಾರ ಮತ್ತು ಹಿಂಬದಿ ಸವಾರನ ನಡುವೆ ತಮ್ಮ ತಂದೆಯ ಮೃತದೇಹವನ್ನು ಇಟ್ಟಯ ಆಸ್ಪತ್ರೆಯಿಂದ ಸುಮಾರು 3-4 ಕಿಮೀ ದೂರದಲ್ಲಿರುವ ದಳವಾಯಿಹಳ್ಳಿ ಗ್ರಾಮಕ್ಕೆ ಸವಾರಿ ಮಾಡಿದ್ದಾರೆ.

ಇದನ್ನೂ ಓದಿ: ‘ರಾಹುಲ್ ಗಾಂಧಿ ಭಾರತೀಯರಲ್ಲ’ ಎಂಬ ಹೇಳಿಕೆ; ಕೇಂದ್ರ ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಹಿಂದೂ ಸೇನಾ ಮುಖ್ಯಸ್ಥ

ಅಸ್ವಸ್ಥರಾಗಿದ್ದ ತಮ್ಮ ತಂದೆ ಗುಡುಗುಳ್ಳ ಹೊನ್ನೂರಪ್ಪ (80) ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ.

ಇದರ ನಂತರ ಸಹೋದರರಿಬ್ಬರು ಮೃತದೇಹವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯಲು ಆಂಬ್ಯುಲೆನ್ಸ್ ಸೇವೆಯನ್ನು ಆಸ್ಪತ್ರೆಯ ಅಧಿಕಾರಿಗಳಿಗೆ ಕೋರಿದ್ದರು. ಆದರೆ ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದು ವರಿದಯಾಗಿದೆ. ಅಷ್ಟೆ ಅಲ್ಲದೆ, ಪಾವಗಡ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ಮಧ್ಯ ಪ್ರವೇಶಿಸಿದರೂ ಸಮಸ್ಯೆ ಇತ್ಯರ್ಥವಾಗಿಲ್ಲ ಎಂದು ಮೂಲಗಳು ತಿಳಿಸಿದ್ದಾರೆ ವರದಿಯಾಗಿದೆ.

ವಾಗ್ವಾದದ ನಂತರ, ಸಹೋದರರಿಬ್ಬರು ತಮ್ಮ ಬೈಕ್‌ನಲ್ಲಿ ಶವವನ್ನು ಸಾಗಿಸಲು ನಿರ್ಧರಿಸಿದ್ದಾರೆ. ಘಟನೆಯ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಎನ್.ಮಂಜುನಾಥ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂಓದಿ: ‘ತಿರುಪತಿ ಲಡ್ಡು ತಯಾರಿಕೆ ಪ್ರಾಣಿಗಳ ಕೊಬ್ಬು ಬಳಸಲಾಗಿದೆ’ ಎಂದ ಸಿಎಂ ನಾಯ್ಡು; ಆರೋಪ ನಿರಾಕರಿಸಿದ ವೈಎಸ್ಆರ್ ಕಾಂಗ್ರೆಸ್

ಆಸ್ಪತ್ರೆಯಲ್ಲಿ ಶವ ಸಾಗಿಸಲು ಯಾವುದೇ ವಾಹನದ ಸೌಲಭ್ಯಗಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಅನಾರೋಗ್ಯದ ವೇಳೆ ಕರೆತಂದಿದ್ದ 108 ಆ್ಯಂಬುಲೆನ್ಸ್‌ನಲ್ಲೇ ಊರಿಗೆ ಶವ ಸಾಗಿಸಲು ಸಿಬ್ಬಂದಿಗಳಲ್ಲಿ ಮಕ್ಕಳು ವಿನಂತಿಸಿದ್ದರು. ಆದರೆ, 108 ಆ್ಯಂಬುಲೆನ್ಸ್‌ನಲ್ಲಿ ಮೃತಪಟ್ಟ ಬಳಿಕ ಶವ ಸಾಗಿಸುವಂತಿಲ್ಲ ಎಂಬ ನಿಯಮ ಇರುವುದರಿಂದ ಶವ ಕೊಂಡೊಯ್ಯಲು ನಿರಾಕರಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಬೈಕಿನಲ್ಲಿ ಶವವನ್ನು ಸಾಗಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಗೃಹ ಸಚಿವರ ತವರು ಜಿಲ್ಲೆಯಲ್ಲೆ ಇಂತದ್ದೊಂದು ದಾರುಣ ಘಟನೆ ನಡೆದಿರುವುದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರೆ ಆದ ಸಾಮಾಜಿಕ ಹೋರಾಟಗಾರ ಅನಿಲ್ ಚಿಕ್ಕದಾಳವಟ್ಟ ಅವರು ಘಟನೆಗೆ ಪ್ರತಿಕ್ರಿಯಿಸಿ, “ಅತಿ ಹಿಂದುಳಿದ ತಾಲ್ಲೂಕುಗಳ ದುಸ್ಥಿತಿ ಇದು. ಈ ಜಿಲ್ಲೆಯಲ್ಲಿ ಇಬ್ಬರು ಸಚಿವರು ಇದ್ದಾರೆ. ಈ ಕ್ಷೇತ್ರದ ಶಾಸಕ ಮಾಜಿ ಸಚಿವರ ಮಗ. ಕನಿಷ್ಠ ಆರೋಗ್ಯ, ಶಿಕ್ಷಣದ ವ್ಯವಸ್ಥೆಯನ್ನಾದರೂ ಸರಿಪಡಿಸಿಕೊಳ್ಳಲಾರದ ದುಸ್ಥಿತಿ ನಮ್ಮದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...