Homeಕರ್ನಾಟಕದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಹೆಸರಿನಲ್ಲಿ ಆಂಬುಲೆನ್ಸ್‌‌ ಸೇವೆ ಲೋಕಾರ್ಪಣೆ

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಹೆಸರಿನಲ್ಲಿ ಆಂಬುಲೆನ್ಸ್‌‌ ಸೇವೆ ಲೋಕಾರ್ಪಣೆ

- Advertisement -
- Advertisement -

ಅಖಿಲ ಭಾರತ ಶ್ರಮಿಕ ಸ್ವರಾಜ್ ಕೇಂದ್ರ – ಕರ್ನಾಟಕವು ಹುತಾತ್ಮ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌‌‌ ಅವರ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಅನುಕೂಲವಾಗಲೆಂದು ಉಚಿತ ಆಂಬುಲೆನ್ಸ್‌‌ ಒಂದನ್ನು ಶನಿವಾರ ಲೋಕಾರ್ಪಣೆ ಮಾಡಿದೆ. ಗೌರಿ ಲಂಕೇಶ್‌ ಹೆಸರಿನ ಆಂಬುಲೆನ್ಸ್‌ ಅನ್ನು ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್ ಅವರು ಉದ್ಘಾಟನೆ ಮಾಡಿದ್ದಾರೆ.

ಉತ್ತರ ಕರ್ನಾಟಕ ಮತ್ತು ಉತ್ತರ ಭಾರತದಿಂದ ಬೆಂಗಳೂರಿಗೆ ವಲಸೆ ಬಂದು ನೆಲೆ ಕಂಡುಕೊಂಡಿರುವ ಬಡ ವಲಸೆ ಕಾರ್ಮಿಕರಿಗೆ ಈ ಉಚಿತ ಆಂಬುಲೆನ್ಸ್ ಸೇವೆ ಒದಗಿಸಲಿದೆ.

ಇದನ್ನೂ ಓದಿ:ಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬುಲೆನ್ಸ್ ಸೇವೆ

ಕೋವಿಡ್ ಸಾಂಕ್ರಾಮಿಕದ ನಂತರ ಬಡಜನರಿಗೆ ಆರೋಗ್ಯ ಸೇವೆಗಳು ಸುಲಭಕ್ಕೆ ಸಿಗುತ್ತಿಲ್ಲ. ಬೆಂಗಳೂರಿನ ಮಹಾದೇವಪುರ ಸುತ್ತಾ-ಮುತ್ತಾ ಉತ್ತರ ಕರ್ನಾಟಕ ಮತ್ತು ಉತ್ತರ ಭಾರತದಿಂದ ಕೆಲಸ ಅರಸಿ ವಲಸೆ ಬಂದ ಸಾವಿರಾರು ಜನರು ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಕೋವಿಡ್ ಭಯವಿರುವುದರಿಂದ ಅವರಿಗೆ ಉಪಯೋಗವಾಗಲೆಂದು ಉಚಿತ ಆಂಬುಲೆನ್ಸ್ ಸೇವೆ ಒದಗಿಸುತ್ತಿದ್ದೇವೆ ಎಂದು ಅಖಿಲ ಭಾರತ ಶ್ರಮಿಕ ಸ್ವರಾಜ್‌ ಕೇಂದ್ರದ ಕಲೀಂ-ಉಲ್ಲಾ ಅವರು ತಿಳಿಸಿದ್ದರು.

ಆಂಬುಲೆನ್ಸ್‌ ಉದ್ಘಾಟನೆ ನಂತರ ನಾನುಗೌರಿ.ಕಾಂ ಜೊತೆ ಮಾತನಾಡಿದ ಕಲೀಂ ಉಲ್ಲಾ ಅವರು, “ಗೌರಿ ಲಂಕೇಶ್‌ ಅವರನ್ನು ಹತ್ಯೆ ಮಾಡಿದಾಗ ‘ನಾನು ಗೌರಿ-ನಾವೆಲ್ಲಾ ಗೌರಿ’ ಎಂದು ಹೇಳಿದ್ದೆವು. ಹಾಗಾಗಿಯೇ, ಬಡವರ ಪರವಾಗಿ ಹೋರಾಟ ನಡೆಸುತ್ತಿದ್ದ ಗೌರಿ ಲಂಕೇಶ್‌ ಅವರ ಹೆಸರಲ್ಲಿ ಇದನ್ನು ಮಾಡುತ್ತಿದ್ದೇವೆ. ಗೌರಿ ಅವರು ಇದ್ದರೆ ಏನು ಮಾಡುತ್ತಿದ್ದರೋ ಅದನ್ನೇ ನಾವು ಮಾಡುತ್ತಿದ್ದೇವೆ. ಪ್ರಸ್ತುತ ಈ ಸೇವೆ ಮಾಡುತ್ತಿರುವುದು ನಾವಲ್ಲ ಗೌರಿ ಲಂಕೇಶ್‌ ಅವರೇ ಆಗಿದ್ದಾರೆ” ಎಂದು ಹೇಳಿದರು.

“ಗೌರಿ ಲಂಕೇಶ್‌ ಹೆಸರಲ್ಲಿ ನಾವು ಮತ್ತಷ್ಟು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಾಳೆ ಸುಮಾರು 200 ಜನರು ಗೌರಿ ಲಂಕೇಶ್‌ ಹೆಸರಲ್ಲಿ ರಕ್ತದಾನ ಕೂಡಾ ಮಾಡಲಿದ್ದಾರೆ” ಎಂದು ಕಲೀಂ ಉಲ್ಲಾ ಅವರು ತಿಳಿಸಿದರು.

ಆಂಬುಲೆನ್ಸ್‌ ಉದ್ಘಾಟನಾ ಸಮಾರಂಭದಲ್ಲಿ ಕವಿತಾ ಲಂಕೇಶ್‌, ಕಲೀಂ ಮುಲ್ಲಾ, ಲಿಂಗತ್ವ ಅಲ್ಪಸಂಖ್ಯಾತ ಹೋರಾಟಗಾರರಾದ ಅಕ್ಕೈ ಪದ್ಮಶಾಲಿ, ಸಾಮಾಜಿಕ ಕಾರ್ಯಕರ್ತರಾದ ಚೇ ಬಾಲು, ರೈತ ಸಂಘಟನೆ ಮುಖಂಡರಾದ ವೀರಸಂಗಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ:ಸೆಪ್ಟೆಂಬರ್‌ 5 ‘ಗೌರಿ ಲಂಕೇಶ್‌ ದಿನ’ ಎಂದು ಘೋಷಿಸಿದ ಕೆನಡಾದ ಬರ್ನಾಬಿ ನಗರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...