Homeಕರ್ನಾಟಕಅತ್ಯಾಚಾರ ಸಂತ್ರಸ್ತೆಯನ್ನು ಮಹಿಳಾ ವೈದ್ಯರೇ ಪರೀಕ್ಷಿಸುವಂತೆ ಕಾನೂನಿಗೆ ತಿದ್ದುಪಡಿ ತನ್ನಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಅತ್ಯಾಚಾರ ಸಂತ್ರಸ್ತೆಯನ್ನು ಮಹಿಳಾ ವೈದ್ಯರೇ ಪರೀಕ್ಷಿಸುವಂತೆ ಕಾನೂನಿಗೆ ತಿದ್ದುಪಡಿ ತನ್ನಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಯಸ್ಕ ಸಂತ್ರಸ್ತೆಯರ ಖಾಸಗಿತನದ ಹಕ್ಕನ್ನು ರಕ್ಷಿಸುವ ಸಲುವಾಗಿ ಅವರ ಆರೋಗ್ಯ ತಪಾಸಣೆಯನ್ನು ಮಹಿಳಾ ವೈದ್ಯರೇ ನಡೆಸಲು ಅವಕಾಶ ಕಲ್ಪಿಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಗೆ (ಬಿಎನ್‌ಎಸ್‌ಎಸ್‌) ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಬಿಹಾರ ಮೂಲದ ಅಜಯ್‌ ಕುಮಾರ್‌ ಬೆಹೆರಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸುವ ವೇಳೆ ನ್ಯಾಯಮೂರ್ತಿ ಎಂ ಜಿ ಉಮಾ ಅವರ ಏಕಸದಸ್ಯ ಪೀಠ ಕೇಂದ್ರ ಸರ್ಕಾರಕ್ಕೆ ಕೆಲ ಸೂಚನೆಗಳನ್ನು ನೀಡಿದೆ.

ಬಿಎನ್‌ಎಸ್‌ಎಸ್‌ನ ಸೆಕ್ಷನ್‌ 184ಕ್ಕೆ ಸೂಕ್ತ ತಿದ್ದುಪಡಿ ಮಾಡುವವರೆಗೆ ಅತ್ಯಾಚಾರ ಸಂತ್ರಸ್ತೆಯರ ವೈದ್ಯಕೀಯ ಪರೀಕ್ಷೆಯನ್ನು ನೋಂದಾಯಿತ ಮಹಿಳಾ ವೈದ್ಯಾಧಿಕಾರಿ ಮಾಡುವುದನ್ನು ಖಾತರಿಪರಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನ್ಯಾಯಾಲಯ ನಿರ್ದೇಶಿಸಿದೆ.

ಬಿಎನ್‌ಎಸ್‌ಎಸ್‌ ಸೆಕ್ಷನ್‌ 184 ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಯಸ್ಕ ಮಹಿಳೆಯರ ವೈದ್ಯಕೀಯ ಪರೀಕ್ಷೆಗೆ ಸಂಬಂಧಿಸಿದ್ದು, ಈಗ ಹಿಂಪಡೆಯಲಾಗಿರುವ ಸಿಆರ್‌ಪಿಸಿಯ 164ಎ ಅನ್ನು ಅಕ್ಷರಶಃ ನಕಲು ಮಾಡಲಾಗಿದೆ ಎಂದು ಪೀಠ ಹೇಳಿದೆ. ಹೊಸ ಮತ್ತು ಹಳೆಯ ಎರಡೂ ಸೆಕ್ಷನ್‌ಗಳಲ್ಲಿ ಸಂತ್ರಸ್ತೆಯ ಪರೀಕ್ಷೆಯನ್ನು ಮಹಿಳೆ ಅಥವಾ ಪುರುಷ ವೈದ್ಯಾಧಿಕಾರಿ ಮಾಡಬೇಕು ಎಂದು ಹೇಳಲಾಗಿದೆ ಎಂದು ನ್ಯಾಯಾಲಯ ವಿವರಿಸಿದೆ.

ಬಿಎನ್‌ಎಸ್‌ಎಸ್‌ ಮತ್ತು ಸಿಆರ್‌ಪಿಸಿಯ ಎರಡೂ ಸೆಕ್ಷನ್‌ಗಳು ಪೋಕ್ಸೊ ಕಾಯ್ದೆಯೆ ನಿಬಂಧನೆಗಳಿಗೆ ತದ್ವಿರುದ್ದವಾಗಿದೆ. ಪೋಕ್ಸೊ ಕಾಯ್ದೆಯಲ್ಲಿ ಅಪ್ರಾಪ್ತ ಸಂತ್ರಸ್ತೆಯರ ವೈದ್ಯಕೀಯ ಪರೀಕ್ಷೆಯನ್ನು ಮಹಿಳಾ ವೈದ್ಯಾಧಿಕಾರಿ ಮಾತ್ರ ಮಾಡಬೇಕು ಎಂದು ಹೇಳಲಾಗಿದೆ. ಆದರೆ, ಸಿಆರ್‌ಪಿಸಿ ಮತ್ತು ಬಿಎನ್‌ಎಸ್‌ಎಸ್‌ ಸೆಕ್ಷನ್‌ಗಳಾದ 53 ಮತ್ತು 51ರಲ್ಲಿ ಮಹಿಳಾ ಸಂತ್ರಸ್ತೆಯನ್ನು ಮಹಿಳಾ ಅಧಿಕಾರಿ ಅಥವಾ ಕನಿಷ್ಠ ಮಹಿಳಾ ವೈದ್ಯಾಧಿಕಾರಿಯ ಉಸ್ತುವಾರಿಯಲ್ಲಿ ಮಾತ್ರ ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಮಹಿಳಾ ವೈದ್ಯ ಸಿಬ್ಬಂದಿ ಅಥವಾ ಅವರ ಉಸ್ತುವಾರಿಯಲ್ಲಿ ಪರೀಕ್ಷೆಗೆ ಒಳಪಪಡಿಸಬಾರದು. ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರು ಪುರುಷ ವೈದ್ಯಾಧಿಕಾರಿಗಳಿಂದ ದೈಹಿಕ ಪರೀಕ್ಷೆಗೆ ಒಳಗಾಗುವ ಮೂಲಕ ಏಕೆ ಮುಜುಗರ ಅನುಭವಿಸಬೇಕು? ಎಂದು ನ್ಯಾಯಾಲಯ ಕೇಳಿದೆ.

ಆರೋಪಿಯ ಹಕ್ಕುಗಳನ್ನು ಕಾನೂನು ರಕ್ಷಿಸುತಿದ್ದು, ಸಂತ್ರಸ್ತರ ಹಕ್ಕು ರಕ್ಷಿಸುವಲ್ಲಿ ವಿಫಲವಾಗಿದೆ. ಇದರಿಂದ ಸಾಮಾನ್ಯ ಜನರ ಮನಸ್ಸಿನಲ್ಲಿ ಆರೋಪಿಗಳ ಹಕ್ಕಿನ ಬಗ್ಗೆ ವ್ಯವಸ್ಥೆ ಹೆಚ್ಚು ಉತ್ಸುಕವಾಗಿದ್ದು, ಸಂತ್ರಸ್ತರ ಬಗ್ಗೆ ಅದೇ ನಿಲುವು ಹೊಂದಿಲ್ಲ ಎಂಬ ಭಾವನೆ ಉಂಟು ಮಾಡಬಹುದು ಎಂದು ನ್ಯಾಯಾಲಯ ಬೇಸರಿಸಿದೆ.

ಈ ನೆಲೆಯಲ್ಲಿ ಪರಿಸ್ಥಿತಿಯ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು. ಬಿಎನ್‌ಎಸ್‌ಎಸ್‌ನ ಸೆಕ್ಷನ್‌ 184ಕ್ಕೆ ತಿದ್ದುಪಡಿ ತರಬೇಕು ಎಂದು ಪೀಠ ನಿರ್ದೇಶಿಸಿದೆ.

ಇದನ್ನೂ ಓದಿ : ಅಲೋಪತಿ, ಕೊರೋನಿಲ್ ಕುರಿತ ಹೇಳಿಕೆ ತೆಗೆಯಿರಿ: ರಾಮ್‌ದೇವ್‌, ಬಾಲಕೃಷ್ಣಗೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...