Homeಮುಖಪುಟತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

- Advertisement -
- Advertisement -

ಪ್ರಧಾನಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಎಪಿಎಂಸಿ ಕಾಯ್ದೆಯ ತಿದ್ದುಪಡಿ ನಿರ್ಧಾರಕ್ಕೆ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ತಿದ್ದುಪಡಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮುಚ್ಚಿಹೋಗಲಿವೆ. ಲಕ್ಷಾಂತರ ನೌಕರರು, ಹಮಾಲರು ಮತ್ತು ಸಣ್ಣ ಕಾರ್ಮಿಕರು ಬೀದಿಗೆ ಬೀಳಲಿದ್ದಾರೆ. ಇದು ರೈತರ ಶೋಷಣೆಗೆ ಮಾರ್ಗ ಮಾಡಿಕೊಡಲಿದೆ. ದಲ್ಲಾಳಿಗಳು ಮತ್ತು ಕಾರ್ಪೋರೇಟ್ ಕುಳಗಳ ಲಾಭಕೋರತನಕ್ಕೆ ದಾರಿಯಾಗಲಿದೆ. ಇದು ರೈತರು, ಕೃಷಿಕೂಲಿಕಾರರಿಗೆ ಮರಣಶಾಸನವಾಗಲಿದೆ ಎಂಬ ಆತಂಕ ರೈತರಿಂದ ವ್ಯಕ್ತವಾಗಿದೆ.

ರಾಜ್ಯದಲ್ಲಿ 177 ಕೃಷಿ ಉತ್ಪನ್ನ ಮಾರುಕಟ್ಟೆಗಳಿದ್ದು, ಜೊತೆ ಉಪ ಮಾರುಕಟ್ಟೆಗಳು ಕಾರ್ಯಾಚರಿಸುತ್ತಿವೆ. ಲಕ್ಷ ಲಕ್ಷ ನೌಕರರು, ಕಾರ್ಮಿಕರು, ವರ್ತಕರು ಕೆಲಸ ಮಾಡಿಕೊಂಡು ಕುಟುಂಬಗಳ ನಿರ್ವಹಣೆಗೆ ಈ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮಾರ್ಗ ಕಲ್ಪಿಸಿವೆ. ಹೇಗೋ ಜೀವನ ದೂಡುತ್ತಿರುವ ಕುಟುಂಬಗಳ ನೆಮ್ಮದಿಗೆ ಎಪಿಎಂಸಿ ತಿದ್ದುಪಡಿ ಭಂಗ ತರಲಿದೆ. ಕೇಂದ್ರ ಸಚಿವ ಸಂಪುಟ ತಿದ್ದುಪಡಿಗೆ ಒಪ್ಪಿಗೆ ನೀಡಿರುವ ಕಾಯ್ದೆಯನ್ನು ಯಥಾವತ್ ತಿದ್ದುಪಡಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಮುಂದಾಗಿದೆ. ಅದೂ ಕೂಡ ಕೊರೊನದಿಂದ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ. ರೈತ ಸಂಘಟನೆಗಳು ಮತ್ತು ರೈತರು ಪ್ರತಿಭಟನೆಗೆ ಇಳಿಯಲು ಸಾಧ್ಯವಾಗದಂಥ ಕಾಲದಲ್ಲಿ ಈ ತೀರ್ಮಾನಕ್ಕೆ ಬಂದಿರುವುದು ಹೇಡಿತನದ ಕೃತ್ಯವಾಗಿದೆ.

ರಾಜ್ಯದ ಕೃಷಿ ಉತ್ಪನ್ನಗಳ ಮಾರುಕಟ್ಟೆ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ 1966 ಮತ್ತು ನಿಯಮಗಳು 1968ರ ಕಲಂ 8, 66, 67 ಮತ್ತು 70 ರಂತೆ ಎಪಿಎಂಸಿಗಳ ಹೊರಗೆ ನಡೆಯುವ ಮಾರುಕಟ್ಟೆಯ ಮೇಲೆ ಎಪಿಎಂಸಿಗಳು ನಿಯಂತ್ರಣ ಹೊಂದಿವೆ. ಕಾಯ್ದೆ ತಿದ್ದುಪಡಿಯಾದರೆ ಯಾರು ಎಲ್ಲಿ ಬೇಕಾದರೂ ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ಅವಕಾಶ ಕಲ್ಪಿಸಿದೆ. ಇದು ಎಪಿಎಂಸಿಯನ್ನು ಅವಲಂಬಿಸಿರುವ ಎಲ್ಲರಿಗೂ ತೊಂದರೆಯನ್ನುಂಟು ಮಾಡಲಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾ ರೆಡ್ಡಿ “ಎಪಿಎಂಸಿ ಹೊರಗೆ ರೈತರಿಂದ ಕೃಷಿ ಉತ್ಪನ್ನವನ್ನು ಲೈಸನ್ಸ್ ಹೊಂದಿಲ್ಲದ ವ್ಯಕ್ತಿಗಳು ಖರೀದಿಸಲು ಅವಕಾಶವಿಲ್ಲ. ವರ್ತಕರು ಮನಬಂದಂತೆ ರೈತರ ಶೋಷಣೆ ನಡೆಸಲು ಹಾಗೂ ಎಪಿಎಂಸಿ ಆದಾಯ ವಂಚನೆ ಮಾಡಲು ಅವಕಾಶ ನೀಡುತ್ತಿಲ್ಲ. ಈ ನಿಯಮಗಳ ಅನ್ವಯ ನಡೆಯದಿದ್ದರೆ ಅಂತಹ ವರ್ತಕರ ಮೇಲೆ ಕಲಂ 114, 116, 117ರಡಿ ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶವಿತ್ತು. ಆದರೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದರೆ ಈ ನಿಯಮಗಳು ಇಲ್ಲದಂತಾಗಿ ಕಾರ್ಪೋರೇಟ್ ಕುಳಗಳು ಎಪಿಎಂಸಿ ಪ್ರವೇಶಿಸಲು ಅನುವು ಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಸರ್ಕಾರ ಎಪಿಎಂಸಿ ಬಲಪಡಿಸಬೇಕು. ಖಾಸಗಿ ಮಾರುಕಟ್ಟೆ ನಿಷೇಧಿಸಬೇಕು. ಇಲ್ಲದಿದ್ದರೆ ಜಂಟಿ ಚಳವಳಿಗೆ ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದುವರೆಗೆ ಮಾರುಕಟ್ಟೆಗಳಲ್ಲಿ ಸ್ಪರ್ಧೆಗೆ ಅವಕಾಶವಿತ್ತು. ರೈತರು ತಮಗೆ ಅನುಕೂಲವಾಗುವಂತಹ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಬಹುದಿತ್ತು. ಕೇಂದ್ರದ ತೀರ್ಮಾನದಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದರೆ ಕೃಷಿಲೋಕ ಕಂಗಾಲಾಗುತ್ತದೆ. ಬ್ರಿಟೀಷರ ಕಾಲದಲ್ಲಿ ನಿರ್ಮಾಣವಾದ ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದೆ. ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಸಧ್ಯದ ಮಟ್ಟಿಗೆ ಅವಕಾಶವಿದೆ. ಮುಂದಿನ ದಿನಗಳು ರೈತರಿಗೆ ಸಂಕಷ್ಟವನ್ನು ತರಲಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, “ಕೇಂದ್ರ ಮತ್ತು ರಾಜ್ಯಗಳ ತೀರ್ಮಾನ ದಲ್ಲಾಳಿ ಮತ್ತು ಟ್ರೇಡರ್ ಗಳಿಗೆ ಅನುಕೂಲ ಕಲ್ಪಿಸಲಿದೆ. ಮಾರುಕಟ್ಟೆಗಳು ಇಲ್ಲವಾಗಲಿವೆ. ರೈತರಿಗೆ ದರ ಸಿಗುವುದಿಲ್ಲ. ಬೆಂಬಲ ಬೆಲೆ ನಿಗದಿಪಡಿಸಿದರು, ಅದು ರೈತರಿಗೆ ಗಗನ ಕುಸುಮವಾಗಲಿದೆ. ಕಾರ್ಪೋರೇಟ್ ಕುಳಗಳ ಮತ್ತು ಟ್ರೇಡರ್ ಗಳು ತಮಗೆ ಇಷ್ಟ ಬಂದಂತೆ ಖರೀದಿಸಲು ಅನುವುಮಾಡಿಕೊಡಲಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಪಿತೂರಿ ನಡೆಸಲಾಗುತ್ತಿದೆ. ಟ್ರೇಡರ್, ದಲ್ಲಾಳಿ ಮತ್ತು ಕಂಪನಿಗಳಿಗೆ ಹೆಚ್ಚು ಲಾಭವಾಗುತ್ತದೆ. ರೈತರಿಗೆ ಮಾರುಕಟ್ಟೆ ಎಂಬುದು ಕನಸಾಗಲಿದೆ. ಹೊಲಗಳಿಗೆ ಹೋಗಿ ಖರೀದಿಸುವ ವ್ಯವಸ್ಥೆ ಬರಲಿದೆ. ಮಾರುಕಟ್ಟೆ ಇದ್ದರೆ ಸ್ಪರ್ಧೆ ಇರುತ್ತದೆ. ಇಲ್ಲದಿದ್ದರೆ ರೈತರು ಒಳ್ಳೆಯ ದರಕ್ಕೆ ಮಾರಾಟ ಮಾಡಲು ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ತನ್ನ ತೀರ್ಮಾನಗಳಿಂದ ಹಿಂದೆ ಸರಿಯಬೇಕು, ಇಲ್ಲದದ್ದರೆ ಹೋರಾಟ ಅನಿವಾರ್ಯ” ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೀರ್ಮಾನಗಳ ವಿರುದ್ಧ ವ್ಯಾಪಕ ವಿರೋಧ ಕಂಡು ಬಂದಿದ್ದು ಕೊರೊನ ಲಾಕ್ ಡೌನ್ ನಡುವೆಯೂ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗೆ ಮನವಿ ಪತ್ರ ಸಲ್ಲಿಸುವ ಕಾರ್ಯ ನಾಳೆಯಿಂದ ಮುಂದುವರಿಯಲಿದೆ. ಕೊರೊನ ಸಂದರ್ಭದಲ್ಲಿ ರೈತ ವಿರೋಧಿ ತೀರ್ಮಾನಗಳನ್ನು ತೆಗೆದು ಕೊಳ್ಳುತ್ತಿರುವ ಸರ್ಕಾರಗಳು ಪತನದ ಹಾದಿ ಹಿಡಿಯಲಿವೆ ಎಂಬ ಮಾತುಗಳು ಕೇಳಿಬಂದಿದೆ.


ಓದಿ: ಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು


ವಿಡಿಯೋ ನೋಡಿ: ಕರ್ನಾಟಕ ಸರ್ಕಾರ ತೆಗೆದುಕೊಂಡ ಮೂರು ಆಘಾತಕಾರಿ, ಕರ್ನಾಟಕ ವಿರೋಧಿ ತೀರ್ಮಾನಗಳು.(facebook Live)


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...