Homeಮುಖಪುಟತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

- Advertisement -
- Advertisement -

ಪ್ರಧಾನಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಎಪಿಎಂಸಿ ಕಾಯ್ದೆಯ ತಿದ್ದುಪಡಿ ನಿರ್ಧಾರಕ್ಕೆ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ತಿದ್ದುಪಡಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮುಚ್ಚಿಹೋಗಲಿವೆ. ಲಕ್ಷಾಂತರ ನೌಕರರು, ಹಮಾಲರು ಮತ್ತು ಸಣ್ಣ ಕಾರ್ಮಿಕರು ಬೀದಿಗೆ ಬೀಳಲಿದ್ದಾರೆ. ಇದು ರೈತರ ಶೋಷಣೆಗೆ ಮಾರ್ಗ ಮಾಡಿಕೊಡಲಿದೆ. ದಲ್ಲಾಳಿಗಳು ಮತ್ತು ಕಾರ್ಪೋರೇಟ್ ಕುಳಗಳ ಲಾಭಕೋರತನಕ್ಕೆ ದಾರಿಯಾಗಲಿದೆ. ಇದು ರೈತರು, ಕೃಷಿಕೂಲಿಕಾರರಿಗೆ ಮರಣಶಾಸನವಾಗಲಿದೆ ಎಂಬ ಆತಂಕ ರೈತರಿಂದ ವ್ಯಕ್ತವಾಗಿದೆ.

ರಾಜ್ಯದಲ್ಲಿ 177 ಕೃಷಿ ಉತ್ಪನ್ನ ಮಾರುಕಟ್ಟೆಗಳಿದ್ದು, ಜೊತೆ ಉಪ ಮಾರುಕಟ್ಟೆಗಳು ಕಾರ್ಯಾಚರಿಸುತ್ತಿವೆ. ಲಕ್ಷ ಲಕ್ಷ ನೌಕರರು, ಕಾರ್ಮಿಕರು, ವರ್ತಕರು ಕೆಲಸ ಮಾಡಿಕೊಂಡು ಕುಟುಂಬಗಳ ನಿರ್ವಹಣೆಗೆ ಈ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮಾರ್ಗ ಕಲ್ಪಿಸಿವೆ. ಹೇಗೋ ಜೀವನ ದೂಡುತ್ತಿರುವ ಕುಟುಂಬಗಳ ನೆಮ್ಮದಿಗೆ ಎಪಿಎಂಸಿ ತಿದ್ದುಪಡಿ ಭಂಗ ತರಲಿದೆ. ಕೇಂದ್ರ ಸಚಿವ ಸಂಪುಟ ತಿದ್ದುಪಡಿಗೆ ಒಪ್ಪಿಗೆ ನೀಡಿರುವ ಕಾಯ್ದೆಯನ್ನು ಯಥಾವತ್ ತಿದ್ದುಪಡಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಮುಂದಾಗಿದೆ. ಅದೂ ಕೂಡ ಕೊರೊನದಿಂದ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ. ರೈತ ಸಂಘಟನೆಗಳು ಮತ್ತು ರೈತರು ಪ್ರತಿಭಟನೆಗೆ ಇಳಿಯಲು ಸಾಧ್ಯವಾಗದಂಥ ಕಾಲದಲ್ಲಿ ಈ ತೀರ್ಮಾನಕ್ಕೆ ಬಂದಿರುವುದು ಹೇಡಿತನದ ಕೃತ್ಯವಾಗಿದೆ.

ರಾಜ್ಯದ ಕೃಷಿ ಉತ್ಪನ್ನಗಳ ಮಾರುಕಟ್ಟೆ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ 1966 ಮತ್ತು ನಿಯಮಗಳು 1968ರ ಕಲಂ 8, 66, 67 ಮತ್ತು 70 ರಂತೆ ಎಪಿಎಂಸಿಗಳ ಹೊರಗೆ ನಡೆಯುವ ಮಾರುಕಟ್ಟೆಯ ಮೇಲೆ ಎಪಿಎಂಸಿಗಳು ನಿಯಂತ್ರಣ ಹೊಂದಿವೆ. ಕಾಯ್ದೆ ತಿದ್ದುಪಡಿಯಾದರೆ ಯಾರು ಎಲ್ಲಿ ಬೇಕಾದರೂ ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ಅವಕಾಶ ಕಲ್ಪಿಸಿದೆ. ಇದು ಎಪಿಎಂಸಿಯನ್ನು ಅವಲಂಬಿಸಿರುವ ಎಲ್ಲರಿಗೂ ತೊಂದರೆಯನ್ನುಂಟು ಮಾಡಲಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾ ರೆಡ್ಡಿ “ಎಪಿಎಂಸಿ ಹೊರಗೆ ರೈತರಿಂದ ಕೃಷಿ ಉತ್ಪನ್ನವನ್ನು ಲೈಸನ್ಸ್ ಹೊಂದಿಲ್ಲದ ವ್ಯಕ್ತಿಗಳು ಖರೀದಿಸಲು ಅವಕಾಶವಿಲ್ಲ. ವರ್ತಕರು ಮನಬಂದಂತೆ ರೈತರ ಶೋಷಣೆ ನಡೆಸಲು ಹಾಗೂ ಎಪಿಎಂಸಿ ಆದಾಯ ವಂಚನೆ ಮಾಡಲು ಅವಕಾಶ ನೀಡುತ್ತಿಲ್ಲ. ಈ ನಿಯಮಗಳ ಅನ್ವಯ ನಡೆಯದಿದ್ದರೆ ಅಂತಹ ವರ್ತಕರ ಮೇಲೆ ಕಲಂ 114, 116, 117ರಡಿ ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶವಿತ್ತು. ಆದರೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದರೆ ಈ ನಿಯಮಗಳು ಇಲ್ಲದಂತಾಗಿ ಕಾರ್ಪೋರೇಟ್ ಕುಳಗಳು ಎಪಿಎಂಸಿ ಪ್ರವೇಶಿಸಲು ಅನುವು ಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಸರ್ಕಾರ ಎಪಿಎಂಸಿ ಬಲಪಡಿಸಬೇಕು. ಖಾಸಗಿ ಮಾರುಕಟ್ಟೆ ನಿಷೇಧಿಸಬೇಕು. ಇಲ್ಲದಿದ್ದರೆ ಜಂಟಿ ಚಳವಳಿಗೆ ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದುವರೆಗೆ ಮಾರುಕಟ್ಟೆಗಳಲ್ಲಿ ಸ್ಪರ್ಧೆಗೆ ಅವಕಾಶವಿತ್ತು. ರೈತರು ತಮಗೆ ಅನುಕೂಲವಾಗುವಂತಹ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಬಹುದಿತ್ತು. ಕೇಂದ್ರದ ತೀರ್ಮಾನದಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದರೆ ಕೃಷಿಲೋಕ ಕಂಗಾಲಾಗುತ್ತದೆ. ಬ್ರಿಟೀಷರ ಕಾಲದಲ್ಲಿ ನಿರ್ಮಾಣವಾದ ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದೆ. ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಸಧ್ಯದ ಮಟ್ಟಿಗೆ ಅವಕಾಶವಿದೆ. ಮುಂದಿನ ದಿನಗಳು ರೈತರಿಗೆ ಸಂಕಷ್ಟವನ್ನು ತರಲಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, “ಕೇಂದ್ರ ಮತ್ತು ರಾಜ್ಯಗಳ ತೀರ್ಮಾನ ದಲ್ಲಾಳಿ ಮತ್ತು ಟ್ರೇಡರ್ ಗಳಿಗೆ ಅನುಕೂಲ ಕಲ್ಪಿಸಲಿದೆ. ಮಾರುಕಟ್ಟೆಗಳು ಇಲ್ಲವಾಗಲಿವೆ. ರೈತರಿಗೆ ದರ ಸಿಗುವುದಿಲ್ಲ. ಬೆಂಬಲ ಬೆಲೆ ನಿಗದಿಪಡಿಸಿದರು, ಅದು ರೈತರಿಗೆ ಗಗನ ಕುಸುಮವಾಗಲಿದೆ. ಕಾರ್ಪೋರೇಟ್ ಕುಳಗಳ ಮತ್ತು ಟ್ರೇಡರ್ ಗಳು ತಮಗೆ ಇಷ್ಟ ಬಂದಂತೆ ಖರೀದಿಸಲು ಅನುವುಮಾಡಿಕೊಡಲಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಪಿತೂರಿ ನಡೆಸಲಾಗುತ್ತಿದೆ. ಟ್ರೇಡರ್, ದಲ್ಲಾಳಿ ಮತ್ತು ಕಂಪನಿಗಳಿಗೆ ಹೆಚ್ಚು ಲಾಭವಾಗುತ್ತದೆ. ರೈತರಿಗೆ ಮಾರುಕಟ್ಟೆ ಎಂಬುದು ಕನಸಾಗಲಿದೆ. ಹೊಲಗಳಿಗೆ ಹೋಗಿ ಖರೀದಿಸುವ ವ್ಯವಸ್ಥೆ ಬರಲಿದೆ. ಮಾರುಕಟ್ಟೆ ಇದ್ದರೆ ಸ್ಪರ್ಧೆ ಇರುತ್ತದೆ. ಇಲ್ಲದಿದ್ದರೆ ರೈತರು ಒಳ್ಳೆಯ ದರಕ್ಕೆ ಮಾರಾಟ ಮಾಡಲು ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ತನ್ನ ತೀರ್ಮಾನಗಳಿಂದ ಹಿಂದೆ ಸರಿಯಬೇಕು, ಇಲ್ಲದದ್ದರೆ ಹೋರಾಟ ಅನಿವಾರ್ಯ” ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೀರ್ಮಾನಗಳ ವಿರುದ್ಧ ವ್ಯಾಪಕ ವಿರೋಧ ಕಂಡು ಬಂದಿದ್ದು ಕೊರೊನ ಲಾಕ್ ಡೌನ್ ನಡುವೆಯೂ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗೆ ಮನವಿ ಪತ್ರ ಸಲ್ಲಿಸುವ ಕಾರ್ಯ ನಾಳೆಯಿಂದ ಮುಂದುವರಿಯಲಿದೆ. ಕೊರೊನ ಸಂದರ್ಭದಲ್ಲಿ ರೈತ ವಿರೋಧಿ ತೀರ್ಮಾನಗಳನ್ನು ತೆಗೆದು ಕೊಳ್ಳುತ್ತಿರುವ ಸರ್ಕಾರಗಳು ಪತನದ ಹಾದಿ ಹಿಡಿಯಲಿವೆ ಎಂಬ ಮಾತುಗಳು ಕೇಳಿಬಂದಿದೆ.


ಓದಿ: ಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು


ವಿಡಿಯೋ ನೋಡಿ: ಕರ್ನಾಟಕ ಸರ್ಕಾರ ತೆಗೆದುಕೊಂಡ ಮೂರು ಆಘಾತಕಾರಿ, ಕರ್ನಾಟಕ ವಿರೋಧಿ ತೀರ್ಮಾನಗಳು.(facebook Live)


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...