Homeಮುಖಪುಟತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

- Advertisement -
- Advertisement -

ಪ್ರಧಾನಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಎಪಿಎಂಸಿ ಕಾಯ್ದೆಯ ತಿದ್ದುಪಡಿ ನಿರ್ಧಾರಕ್ಕೆ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ತಿದ್ದುಪಡಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮುಚ್ಚಿಹೋಗಲಿವೆ. ಲಕ್ಷಾಂತರ ನೌಕರರು, ಹಮಾಲರು ಮತ್ತು ಸಣ್ಣ ಕಾರ್ಮಿಕರು ಬೀದಿಗೆ ಬೀಳಲಿದ್ದಾರೆ. ಇದು ರೈತರ ಶೋಷಣೆಗೆ ಮಾರ್ಗ ಮಾಡಿಕೊಡಲಿದೆ. ದಲ್ಲಾಳಿಗಳು ಮತ್ತು ಕಾರ್ಪೋರೇಟ್ ಕುಳಗಳ ಲಾಭಕೋರತನಕ್ಕೆ ದಾರಿಯಾಗಲಿದೆ. ಇದು ರೈತರು, ಕೃಷಿಕೂಲಿಕಾರರಿಗೆ ಮರಣಶಾಸನವಾಗಲಿದೆ ಎಂಬ ಆತಂಕ ರೈತರಿಂದ ವ್ಯಕ್ತವಾಗಿದೆ.

ರಾಜ್ಯದಲ್ಲಿ 177 ಕೃಷಿ ಉತ್ಪನ್ನ ಮಾರುಕಟ್ಟೆಗಳಿದ್ದು, ಜೊತೆ ಉಪ ಮಾರುಕಟ್ಟೆಗಳು ಕಾರ್ಯಾಚರಿಸುತ್ತಿವೆ. ಲಕ್ಷ ಲಕ್ಷ ನೌಕರರು, ಕಾರ್ಮಿಕರು, ವರ್ತಕರು ಕೆಲಸ ಮಾಡಿಕೊಂಡು ಕುಟುಂಬಗಳ ನಿರ್ವಹಣೆಗೆ ಈ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮಾರ್ಗ ಕಲ್ಪಿಸಿವೆ. ಹೇಗೋ ಜೀವನ ದೂಡುತ್ತಿರುವ ಕುಟುಂಬಗಳ ನೆಮ್ಮದಿಗೆ ಎಪಿಎಂಸಿ ತಿದ್ದುಪಡಿ ಭಂಗ ತರಲಿದೆ. ಕೇಂದ್ರ ಸಚಿವ ಸಂಪುಟ ತಿದ್ದುಪಡಿಗೆ ಒಪ್ಪಿಗೆ ನೀಡಿರುವ ಕಾಯ್ದೆಯನ್ನು ಯಥಾವತ್ ತಿದ್ದುಪಡಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಮುಂದಾಗಿದೆ. ಅದೂ ಕೂಡ ಕೊರೊನದಿಂದ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ. ರೈತ ಸಂಘಟನೆಗಳು ಮತ್ತು ರೈತರು ಪ್ರತಿಭಟನೆಗೆ ಇಳಿಯಲು ಸಾಧ್ಯವಾಗದಂಥ ಕಾಲದಲ್ಲಿ ಈ ತೀರ್ಮಾನಕ್ಕೆ ಬಂದಿರುವುದು ಹೇಡಿತನದ ಕೃತ್ಯವಾಗಿದೆ.

ರಾಜ್ಯದ ಕೃಷಿ ಉತ್ಪನ್ನಗಳ ಮಾರುಕಟ್ಟೆ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ 1966 ಮತ್ತು ನಿಯಮಗಳು 1968ರ ಕಲಂ 8, 66, 67 ಮತ್ತು 70 ರಂತೆ ಎಪಿಎಂಸಿಗಳ ಹೊರಗೆ ನಡೆಯುವ ಮಾರುಕಟ್ಟೆಯ ಮೇಲೆ ಎಪಿಎಂಸಿಗಳು ನಿಯಂತ್ರಣ ಹೊಂದಿವೆ. ಕಾಯ್ದೆ ತಿದ್ದುಪಡಿಯಾದರೆ ಯಾರು ಎಲ್ಲಿ ಬೇಕಾದರೂ ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ಅವಕಾಶ ಕಲ್ಪಿಸಿದೆ. ಇದು ಎಪಿಎಂಸಿಯನ್ನು ಅವಲಂಬಿಸಿರುವ ಎಲ್ಲರಿಗೂ ತೊಂದರೆಯನ್ನುಂಟು ಮಾಡಲಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾ ರೆಡ್ಡಿ “ಎಪಿಎಂಸಿ ಹೊರಗೆ ರೈತರಿಂದ ಕೃಷಿ ಉತ್ಪನ್ನವನ್ನು ಲೈಸನ್ಸ್ ಹೊಂದಿಲ್ಲದ ವ್ಯಕ್ತಿಗಳು ಖರೀದಿಸಲು ಅವಕಾಶವಿಲ್ಲ. ವರ್ತಕರು ಮನಬಂದಂತೆ ರೈತರ ಶೋಷಣೆ ನಡೆಸಲು ಹಾಗೂ ಎಪಿಎಂಸಿ ಆದಾಯ ವಂಚನೆ ಮಾಡಲು ಅವಕಾಶ ನೀಡುತ್ತಿಲ್ಲ. ಈ ನಿಯಮಗಳ ಅನ್ವಯ ನಡೆಯದಿದ್ದರೆ ಅಂತಹ ವರ್ತಕರ ಮೇಲೆ ಕಲಂ 114, 116, 117ರಡಿ ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶವಿತ್ತು. ಆದರೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದರೆ ಈ ನಿಯಮಗಳು ಇಲ್ಲದಂತಾಗಿ ಕಾರ್ಪೋರೇಟ್ ಕುಳಗಳು ಎಪಿಎಂಸಿ ಪ್ರವೇಶಿಸಲು ಅನುವು ಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಸರ್ಕಾರ ಎಪಿಎಂಸಿ ಬಲಪಡಿಸಬೇಕು. ಖಾಸಗಿ ಮಾರುಕಟ್ಟೆ ನಿಷೇಧಿಸಬೇಕು. ಇಲ್ಲದಿದ್ದರೆ ಜಂಟಿ ಚಳವಳಿಗೆ ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದುವರೆಗೆ ಮಾರುಕಟ್ಟೆಗಳಲ್ಲಿ ಸ್ಪರ್ಧೆಗೆ ಅವಕಾಶವಿತ್ತು. ರೈತರು ತಮಗೆ ಅನುಕೂಲವಾಗುವಂತಹ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಬಹುದಿತ್ತು. ಕೇಂದ್ರದ ತೀರ್ಮಾನದಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದರೆ ಕೃಷಿಲೋಕ ಕಂಗಾಲಾಗುತ್ತದೆ. ಬ್ರಿಟೀಷರ ಕಾಲದಲ್ಲಿ ನಿರ್ಮಾಣವಾದ ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದೆ. ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಸಧ್ಯದ ಮಟ್ಟಿಗೆ ಅವಕಾಶವಿದೆ. ಮುಂದಿನ ದಿನಗಳು ರೈತರಿಗೆ ಸಂಕಷ್ಟವನ್ನು ತರಲಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, “ಕೇಂದ್ರ ಮತ್ತು ರಾಜ್ಯಗಳ ತೀರ್ಮಾನ ದಲ್ಲಾಳಿ ಮತ್ತು ಟ್ರೇಡರ್ ಗಳಿಗೆ ಅನುಕೂಲ ಕಲ್ಪಿಸಲಿದೆ. ಮಾರುಕಟ್ಟೆಗಳು ಇಲ್ಲವಾಗಲಿವೆ. ರೈತರಿಗೆ ದರ ಸಿಗುವುದಿಲ್ಲ. ಬೆಂಬಲ ಬೆಲೆ ನಿಗದಿಪಡಿಸಿದರು, ಅದು ರೈತರಿಗೆ ಗಗನ ಕುಸುಮವಾಗಲಿದೆ. ಕಾರ್ಪೋರೇಟ್ ಕುಳಗಳ ಮತ್ತು ಟ್ರೇಡರ್ ಗಳು ತಮಗೆ ಇಷ್ಟ ಬಂದಂತೆ ಖರೀದಿಸಲು ಅನುವುಮಾಡಿಕೊಡಲಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಪಿತೂರಿ ನಡೆಸಲಾಗುತ್ತಿದೆ. ಟ್ರೇಡರ್, ದಲ್ಲಾಳಿ ಮತ್ತು ಕಂಪನಿಗಳಿಗೆ ಹೆಚ್ಚು ಲಾಭವಾಗುತ್ತದೆ. ರೈತರಿಗೆ ಮಾರುಕಟ್ಟೆ ಎಂಬುದು ಕನಸಾಗಲಿದೆ. ಹೊಲಗಳಿಗೆ ಹೋಗಿ ಖರೀದಿಸುವ ವ್ಯವಸ್ಥೆ ಬರಲಿದೆ. ಮಾರುಕಟ್ಟೆ ಇದ್ದರೆ ಸ್ಪರ್ಧೆ ಇರುತ್ತದೆ. ಇಲ್ಲದಿದ್ದರೆ ರೈತರು ಒಳ್ಳೆಯ ದರಕ್ಕೆ ಮಾರಾಟ ಮಾಡಲು ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ತನ್ನ ತೀರ್ಮಾನಗಳಿಂದ ಹಿಂದೆ ಸರಿಯಬೇಕು, ಇಲ್ಲದದ್ದರೆ ಹೋರಾಟ ಅನಿವಾರ್ಯ” ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೀರ್ಮಾನಗಳ ವಿರುದ್ಧ ವ್ಯಾಪಕ ವಿರೋಧ ಕಂಡು ಬಂದಿದ್ದು ಕೊರೊನ ಲಾಕ್ ಡೌನ್ ನಡುವೆಯೂ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗೆ ಮನವಿ ಪತ್ರ ಸಲ್ಲಿಸುವ ಕಾರ್ಯ ನಾಳೆಯಿಂದ ಮುಂದುವರಿಯಲಿದೆ. ಕೊರೊನ ಸಂದರ್ಭದಲ್ಲಿ ರೈತ ವಿರೋಧಿ ತೀರ್ಮಾನಗಳನ್ನು ತೆಗೆದು ಕೊಳ್ಳುತ್ತಿರುವ ಸರ್ಕಾರಗಳು ಪತನದ ಹಾದಿ ಹಿಡಿಯಲಿವೆ ಎಂಬ ಮಾತುಗಳು ಕೇಳಿಬಂದಿದೆ.


ಓದಿ: ಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು


ವಿಡಿಯೋ ನೋಡಿ: ಕರ್ನಾಟಕ ಸರ್ಕಾರ ತೆಗೆದುಕೊಂಡ ಮೂರು ಆಘಾತಕಾರಿ, ಕರ್ನಾಟಕ ವಿರೋಧಿ ತೀರ್ಮಾನಗಳು.(facebook Live)


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...