Homeಮುಖಪುಟತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

- Advertisement -
- Advertisement -

ಪ್ರಧಾನಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಎಪಿಎಂಸಿ ಕಾಯ್ದೆಯ ತಿದ್ದುಪಡಿ ನಿರ್ಧಾರಕ್ಕೆ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ತಿದ್ದುಪಡಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮುಚ್ಚಿಹೋಗಲಿವೆ. ಲಕ್ಷಾಂತರ ನೌಕರರು, ಹಮಾಲರು ಮತ್ತು ಸಣ್ಣ ಕಾರ್ಮಿಕರು ಬೀದಿಗೆ ಬೀಳಲಿದ್ದಾರೆ. ಇದು ರೈತರ ಶೋಷಣೆಗೆ ಮಾರ್ಗ ಮಾಡಿಕೊಡಲಿದೆ. ದಲ್ಲಾಳಿಗಳು ಮತ್ತು ಕಾರ್ಪೋರೇಟ್ ಕುಳಗಳ ಲಾಭಕೋರತನಕ್ಕೆ ದಾರಿಯಾಗಲಿದೆ. ಇದು ರೈತರು, ಕೃಷಿಕೂಲಿಕಾರರಿಗೆ ಮರಣಶಾಸನವಾಗಲಿದೆ ಎಂಬ ಆತಂಕ ರೈತರಿಂದ ವ್ಯಕ್ತವಾಗಿದೆ.

ರಾಜ್ಯದಲ್ಲಿ 177 ಕೃಷಿ ಉತ್ಪನ್ನ ಮಾರುಕಟ್ಟೆಗಳಿದ್ದು, ಜೊತೆ ಉಪ ಮಾರುಕಟ್ಟೆಗಳು ಕಾರ್ಯಾಚರಿಸುತ್ತಿವೆ. ಲಕ್ಷ ಲಕ್ಷ ನೌಕರರು, ಕಾರ್ಮಿಕರು, ವರ್ತಕರು ಕೆಲಸ ಮಾಡಿಕೊಂಡು ಕುಟುಂಬಗಳ ನಿರ್ವಹಣೆಗೆ ಈ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮಾರ್ಗ ಕಲ್ಪಿಸಿವೆ. ಹೇಗೋ ಜೀವನ ದೂಡುತ್ತಿರುವ ಕುಟುಂಬಗಳ ನೆಮ್ಮದಿಗೆ ಎಪಿಎಂಸಿ ತಿದ್ದುಪಡಿ ಭಂಗ ತರಲಿದೆ. ಕೇಂದ್ರ ಸಚಿವ ಸಂಪುಟ ತಿದ್ದುಪಡಿಗೆ ಒಪ್ಪಿಗೆ ನೀಡಿರುವ ಕಾಯ್ದೆಯನ್ನು ಯಥಾವತ್ ತಿದ್ದುಪಡಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಮುಂದಾಗಿದೆ. ಅದೂ ಕೂಡ ಕೊರೊನದಿಂದ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ. ರೈತ ಸಂಘಟನೆಗಳು ಮತ್ತು ರೈತರು ಪ್ರತಿಭಟನೆಗೆ ಇಳಿಯಲು ಸಾಧ್ಯವಾಗದಂಥ ಕಾಲದಲ್ಲಿ ಈ ತೀರ್ಮಾನಕ್ಕೆ ಬಂದಿರುವುದು ಹೇಡಿತನದ ಕೃತ್ಯವಾಗಿದೆ.

ರಾಜ್ಯದ ಕೃಷಿ ಉತ್ಪನ್ನಗಳ ಮಾರುಕಟ್ಟೆ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ 1966 ಮತ್ತು ನಿಯಮಗಳು 1968ರ ಕಲಂ 8, 66, 67 ಮತ್ತು 70 ರಂತೆ ಎಪಿಎಂಸಿಗಳ ಹೊರಗೆ ನಡೆಯುವ ಮಾರುಕಟ್ಟೆಯ ಮೇಲೆ ಎಪಿಎಂಸಿಗಳು ನಿಯಂತ್ರಣ ಹೊಂದಿವೆ. ಕಾಯ್ದೆ ತಿದ್ದುಪಡಿಯಾದರೆ ಯಾರು ಎಲ್ಲಿ ಬೇಕಾದರೂ ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ಅವಕಾಶ ಕಲ್ಪಿಸಿದೆ. ಇದು ಎಪಿಎಂಸಿಯನ್ನು ಅವಲಂಬಿಸಿರುವ ಎಲ್ಲರಿಗೂ ತೊಂದರೆಯನ್ನುಂಟು ಮಾಡಲಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾ ರೆಡ್ಡಿ “ಎಪಿಎಂಸಿ ಹೊರಗೆ ರೈತರಿಂದ ಕೃಷಿ ಉತ್ಪನ್ನವನ್ನು ಲೈಸನ್ಸ್ ಹೊಂದಿಲ್ಲದ ವ್ಯಕ್ತಿಗಳು ಖರೀದಿಸಲು ಅವಕಾಶವಿಲ್ಲ. ವರ್ತಕರು ಮನಬಂದಂತೆ ರೈತರ ಶೋಷಣೆ ನಡೆಸಲು ಹಾಗೂ ಎಪಿಎಂಸಿ ಆದಾಯ ವಂಚನೆ ಮಾಡಲು ಅವಕಾಶ ನೀಡುತ್ತಿಲ್ಲ. ಈ ನಿಯಮಗಳ ಅನ್ವಯ ನಡೆಯದಿದ್ದರೆ ಅಂತಹ ವರ್ತಕರ ಮೇಲೆ ಕಲಂ 114, 116, 117ರಡಿ ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶವಿತ್ತು. ಆದರೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದರೆ ಈ ನಿಯಮಗಳು ಇಲ್ಲದಂತಾಗಿ ಕಾರ್ಪೋರೇಟ್ ಕುಳಗಳು ಎಪಿಎಂಸಿ ಪ್ರವೇಶಿಸಲು ಅನುವು ಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಸರ್ಕಾರ ಎಪಿಎಂಸಿ ಬಲಪಡಿಸಬೇಕು. ಖಾಸಗಿ ಮಾರುಕಟ್ಟೆ ನಿಷೇಧಿಸಬೇಕು. ಇಲ್ಲದಿದ್ದರೆ ಜಂಟಿ ಚಳವಳಿಗೆ ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದುವರೆಗೆ ಮಾರುಕಟ್ಟೆಗಳಲ್ಲಿ ಸ್ಪರ್ಧೆಗೆ ಅವಕಾಶವಿತ್ತು. ರೈತರು ತಮಗೆ ಅನುಕೂಲವಾಗುವಂತಹ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಬಹುದಿತ್ತು. ಕೇಂದ್ರದ ತೀರ್ಮಾನದಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದರೆ ಕೃಷಿಲೋಕ ಕಂಗಾಲಾಗುತ್ತದೆ. ಬ್ರಿಟೀಷರ ಕಾಲದಲ್ಲಿ ನಿರ್ಮಾಣವಾದ ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದೆ. ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಸಧ್ಯದ ಮಟ್ಟಿಗೆ ಅವಕಾಶವಿದೆ. ಮುಂದಿನ ದಿನಗಳು ರೈತರಿಗೆ ಸಂಕಷ್ಟವನ್ನು ತರಲಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, “ಕೇಂದ್ರ ಮತ್ತು ರಾಜ್ಯಗಳ ತೀರ್ಮಾನ ದಲ್ಲಾಳಿ ಮತ್ತು ಟ್ರೇಡರ್ ಗಳಿಗೆ ಅನುಕೂಲ ಕಲ್ಪಿಸಲಿದೆ. ಮಾರುಕಟ್ಟೆಗಳು ಇಲ್ಲವಾಗಲಿವೆ. ರೈತರಿಗೆ ದರ ಸಿಗುವುದಿಲ್ಲ. ಬೆಂಬಲ ಬೆಲೆ ನಿಗದಿಪಡಿಸಿದರು, ಅದು ರೈತರಿಗೆ ಗಗನ ಕುಸುಮವಾಗಲಿದೆ. ಕಾರ್ಪೋರೇಟ್ ಕುಳಗಳ ಮತ್ತು ಟ್ರೇಡರ್ ಗಳು ತಮಗೆ ಇಷ್ಟ ಬಂದಂತೆ ಖರೀದಿಸಲು ಅನುವುಮಾಡಿಕೊಡಲಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಪಿತೂರಿ ನಡೆಸಲಾಗುತ್ತಿದೆ. ಟ್ರೇಡರ್, ದಲ್ಲಾಳಿ ಮತ್ತು ಕಂಪನಿಗಳಿಗೆ ಹೆಚ್ಚು ಲಾಭವಾಗುತ್ತದೆ. ರೈತರಿಗೆ ಮಾರುಕಟ್ಟೆ ಎಂಬುದು ಕನಸಾಗಲಿದೆ. ಹೊಲಗಳಿಗೆ ಹೋಗಿ ಖರೀದಿಸುವ ವ್ಯವಸ್ಥೆ ಬರಲಿದೆ. ಮಾರುಕಟ್ಟೆ ಇದ್ದರೆ ಸ್ಪರ್ಧೆ ಇರುತ್ತದೆ. ಇಲ್ಲದಿದ್ದರೆ ರೈತರು ಒಳ್ಳೆಯ ದರಕ್ಕೆ ಮಾರಾಟ ಮಾಡಲು ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ತನ್ನ ತೀರ್ಮಾನಗಳಿಂದ ಹಿಂದೆ ಸರಿಯಬೇಕು, ಇಲ್ಲದದ್ದರೆ ಹೋರಾಟ ಅನಿವಾರ್ಯ” ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೀರ್ಮಾನಗಳ ವಿರುದ್ಧ ವ್ಯಾಪಕ ವಿರೋಧ ಕಂಡು ಬಂದಿದ್ದು ಕೊರೊನ ಲಾಕ್ ಡೌನ್ ನಡುವೆಯೂ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗೆ ಮನವಿ ಪತ್ರ ಸಲ್ಲಿಸುವ ಕಾರ್ಯ ನಾಳೆಯಿಂದ ಮುಂದುವರಿಯಲಿದೆ. ಕೊರೊನ ಸಂದರ್ಭದಲ್ಲಿ ರೈತ ವಿರೋಧಿ ತೀರ್ಮಾನಗಳನ್ನು ತೆಗೆದು ಕೊಳ್ಳುತ್ತಿರುವ ಸರ್ಕಾರಗಳು ಪತನದ ಹಾದಿ ಹಿಡಿಯಲಿವೆ ಎಂಬ ಮಾತುಗಳು ಕೇಳಿಬಂದಿದೆ.


ಓದಿ: ಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು


ವಿಡಿಯೋ ನೋಡಿ: ಕರ್ನಾಟಕ ಸರ್ಕಾರ ತೆಗೆದುಕೊಂಡ ಮೂರು ಆಘಾತಕಾರಿ, ಕರ್ನಾಟಕ ವಿರೋಧಿ ತೀರ್ಮಾನಗಳು.(facebook Live)


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...