Homeಮುಖಪುಟತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

- Advertisement -
- Advertisement -

ಪ್ರಧಾನಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಎಪಿಎಂಸಿ ಕಾಯ್ದೆಯ ತಿದ್ದುಪಡಿ ನಿರ್ಧಾರಕ್ಕೆ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ತಿದ್ದುಪಡಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮುಚ್ಚಿಹೋಗಲಿವೆ. ಲಕ್ಷಾಂತರ ನೌಕರರು, ಹಮಾಲರು ಮತ್ತು ಸಣ್ಣ ಕಾರ್ಮಿಕರು ಬೀದಿಗೆ ಬೀಳಲಿದ್ದಾರೆ. ಇದು ರೈತರ ಶೋಷಣೆಗೆ ಮಾರ್ಗ ಮಾಡಿಕೊಡಲಿದೆ. ದಲ್ಲಾಳಿಗಳು ಮತ್ತು ಕಾರ್ಪೋರೇಟ್ ಕುಳಗಳ ಲಾಭಕೋರತನಕ್ಕೆ ದಾರಿಯಾಗಲಿದೆ. ಇದು ರೈತರು, ಕೃಷಿಕೂಲಿಕಾರರಿಗೆ ಮರಣಶಾಸನವಾಗಲಿದೆ ಎಂಬ ಆತಂಕ ರೈತರಿಂದ ವ್ಯಕ್ತವಾಗಿದೆ.

ರಾಜ್ಯದಲ್ಲಿ 177 ಕೃಷಿ ಉತ್ಪನ್ನ ಮಾರುಕಟ್ಟೆಗಳಿದ್ದು, ಜೊತೆ ಉಪ ಮಾರುಕಟ್ಟೆಗಳು ಕಾರ್ಯಾಚರಿಸುತ್ತಿವೆ. ಲಕ್ಷ ಲಕ್ಷ ನೌಕರರು, ಕಾರ್ಮಿಕರು, ವರ್ತಕರು ಕೆಲಸ ಮಾಡಿಕೊಂಡು ಕುಟುಂಬಗಳ ನಿರ್ವಹಣೆಗೆ ಈ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮಾರ್ಗ ಕಲ್ಪಿಸಿವೆ. ಹೇಗೋ ಜೀವನ ದೂಡುತ್ತಿರುವ ಕುಟುಂಬಗಳ ನೆಮ್ಮದಿಗೆ ಎಪಿಎಂಸಿ ತಿದ್ದುಪಡಿ ಭಂಗ ತರಲಿದೆ. ಕೇಂದ್ರ ಸಚಿವ ಸಂಪುಟ ತಿದ್ದುಪಡಿಗೆ ಒಪ್ಪಿಗೆ ನೀಡಿರುವ ಕಾಯ್ದೆಯನ್ನು ಯಥಾವತ್ ತಿದ್ದುಪಡಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಮುಂದಾಗಿದೆ. ಅದೂ ಕೂಡ ಕೊರೊನದಿಂದ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ. ರೈತ ಸಂಘಟನೆಗಳು ಮತ್ತು ರೈತರು ಪ್ರತಿಭಟನೆಗೆ ಇಳಿಯಲು ಸಾಧ್ಯವಾಗದಂಥ ಕಾಲದಲ್ಲಿ ಈ ತೀರ್ಮಾನಕ್ಕೆ ಬಂದಿರುವುದು ಹೇಡಿತನದ ಕೃತ್ಯವಾಗಿದೆ.

ರಾಜ್ಯದ ಕೃಷಿ ಉತ್ಪನ್ನಗಳ ಮಾರುಕಟ್ಟೆ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ 1966 ಮತ್ತು ನಿಯಮಗಳು 1968ರ ಕಲಂ 8, 66, 67 ಮತ್ತು 70 ರಂತೆ ಎಪಿಎಂಸಿಗಳ ಹೊರಗೆ ನಡೆಯುವ ಮಾರುಕಟ್ಟೆಯ ಮೇಲೆ ಎಪಿಎಂಸಿಗಳು ನಿಯಂತ್ರಣ ಹೊಂದಿವೆ. ಕಾಯ್ದೆ ತಿದ್ದುಪಡಿಯಾದರೆ ಯಾರು ಎಲ್ಲಿ ಬೇಕಾದರೂ ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ಅವಕಾಶ ಕಲ್ಪಿಸಿದೆ. ಇದು ಎಪಿಎಂಸಿಯನ್ನು ಅವಲಂಬಿಸಿರುವ ಎಲ್ಲರಿಗೂ ತೊಂದರೆಯನ್ನುಂಟು ಮಾಡಲಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾ ರೆಡ್ಡಿ “ಎಪಿಎಂಸಿ ಹೊರಗೆ ರೈತರಿಂದ ಕೃಷಿ ಉತ್ಪನ್ನವನ್ನು ಲೈಸನ್ಸ್ ಹೊಂದಿಲ್ಲದ ವ್ಯಕ್ತಿಗಳು ಖರೀದಿಸಲು ಅವಕಾಶವಿಲ್ಲ. ವರ್ತಕರು ಮನಬಂದಂತೆ ರೈತರ ಶೋಷಣೆ ನಡೆಸಲು ಹಾಗೂ ಎಪಿಎಂಸಿ ಆದಾಯ ವಂಚನೆ ಮಾಡಲು ಅವಕಾಶ ನೀಡುತ್ತಿಲ್ಲ. ಈ ನಿಯಮಗಳ ಅನ್ವಯ ನಡೆಯದಿದ್ದರೆ ಅಂತಹ ವರ್ತಕರ ಮೇಲೆ ಕಲಂ 114, 116, 117ರಡಿ ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶವಿತ್ತು. ಆದರೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದರೆ ಈ ನಿಯಮಗಳು ಇಲ್ಲದಂತಾಗಿ ಕಾರ್ಪೋರೇಟ್ ಕುಳಗಳು ಎಪಿಎಂಸಿ ಪ್ರವೇಶಿಸಲು ಅನುವು ಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಸರ್ಕಾರ ಎಪಿಎಂಸಿ ಬಲಪಡಿಸಬೇಕು. ಖಾಸಗಿ ಮಾರುಕಟ್ಟೆ ನಿಷೇಧಿಸಬೇಕು. ಇಲ್ಲದಿದ್ದರೆ ಜಂಟಿ ಚಳವಳಿಗೆ ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದುವರೆಗೆ ಮಾರುಕಟ್ಟೆಗಳಲ್ಲಿ ಸ್ಪರ್ಧೆಗೆ ಅವಕಾಶವಿತ್ತು. ರೈತರು ತಮಗೆ ಅನುಕೂಲವಾಗುವಂತಹ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಬಹುದಿತ್ತು. ಕೇಂದ್ರದ ತೀರ್ಮಾನದಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದರೆ ಕೃಷಿಲೋಕ ಕಂಗಾಲಾಗುತ್ತದೆ. ಬ್ರಿಟೀಷರ ಕಾಲದಲ್ಲಿ ನಿರ್ಮಾಣವಾದ ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದೆ. ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಸಧ್ಯದ ಮಟ್ಟಿಗೆ ಅವಕಾಶವಿದೆ. ಮುಂದಿನ ದಿನಗಳು ರೈತರಿಗೆ ಸಂಕಷ್ಟವನ್ನು ತರಲಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, “ಕೇಂದ್ರ ಮತ್ತು ರಾಜ್ಯಗಳ ತೀರ್ಮಾನ ದಲ್ಲಾಳಿ ಮತ್ತು ಟ್ರೇಡರ್ ಗಳಿಗೆ ಅನುಕೂಲ ಕಲ್ಪಿಸಲಿದೆ. ಮಾರುಕಟ್ಟೆಗಳು ಇಲ್ಲವಾಗಲಿವೆ. ರೈತರಿಗೆ ದರ ಸಿಗುವುದಿಲ್ಲ. ಬೆಂಬಲ ಬೆಲೆ ನಿಗದಿಪಡಿಸಿದರು, ಅದು ರೈತರಿಗೆ ಗಗನ ಕುಸುಮವಾಗಲಿದೆ. ಕಾರ್ಪೋರೇಟ್ ಕುಳಗಳ ಮತ್ತು ಟ್ರೇಡರ್ ಗಳು ತಮಗೆ ಇಷ್ಟ ಬಂದಂತೆ ಖರೀದಿಸಲು ಅನುವುಮಾಡಿಕೊಡಲಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಪಿತೂರಿ ನಡೆಸಲಾಗುತ್ತಿದೆ. ಟ್ರೇಡರ್, ದಲ್ಲಾಳಿ ಮತ್ತು ಕಂಪನಿಗಳಿಗೆ ಹೆಚ್ಚು ಲಾಭವಾಗುತ್ತದೆ. ರೈತರಿಗೆ ಮಾರುಕಟ್ಟೆ ಎಂಬುದು ಕನಸಾಗಲಿದೆ. ಹೊಲಗಳಿಗೆ ಹೋಗಿ ಖರೀದಿಸುವ ವ್ಯವಸ್ಥೆ ಬರಲಿದೆ. ಮಾರುಕಟ್ಟೆ ಇದ್ದರೆ ಸ್ಪರ್ಧೆ ಇರುತ್ತದೆ. ಇಲ್ಲದಿದ್ದರೆ ರೈತರು ಒಳ್ಳೆಯ ದರಕ್ಕೆ ಮಾರಾಟ ಮಾಡಲು ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ತನ್ನ ತೀರ್ಮಾನಗಳಿಂದ ಹಿಂದೆ ಸರಿಯಬೇಕು, ಇಲ್ಲದದ್ದರೆ ಹೋರಾಟ ಅನಿವಾರ್ಯ” ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೀರ್ಮಾನಗಳ ವಿರುದ್ಧ ವ್ಯಾಪಕ ವಿರೋಧ ಕಂಡು ಬಂದಿದ್ದು ಕೊರೊನ ಲಾಕ್ ಡೌನ್ ನಡುವೆಯೂ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗೆ ಮನವಿ ಪತ್ರ ಸಲ್ಲಿಸುವ ಕಾರ್ಯ ನಾಳೆಯಿಂದ ಮುಂದುವರಿಯಲಿದೆ. ಕೊರೊನ ಸಂದರ್ಭದಲ್ಲಿ ರೈತ ವಿರೋಧಿ ತೀರ್ಮಾನಗಳನ್ನು ತೆಗೆದು ಕೊಳ್ಳುತ್ತಿರುವ ಸರ್ಕಾರಗಳು ಪತನದ ಹಾದಿ ಹಿಡಿಯಲಿವೆ ಎಂಬ ಮಾತುಗಳು ಕೇಳಿಬಂದಿದೆ.


ಓದಿ: ಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು


ವಿಡಿಯೋ ನೋಡಿ: ಕರ್ನಾಟಕ ಸರ್ಕಾರ ತೆಗೆದುಕೊಂಡ ಮೂರು ಆಘಾತಕಾರಿ, ಕರ್ನಾಟಕ ವಿರೋಧಿ ತೀರ್ಮಾನಗಳು.(facebook Live)


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...