Homeಮುಖಪುಟತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

- Advertisement -
- Advertisement -

ಪ್ರಧಾನಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಎಪಿಎಂಸಿ ಕಾಯ್ದೆಯ ತಿದ್ದುಪಡಿ ನಿರ್ಧಾರಕ್ಕೆ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ತಿದ್ದುಪಡಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮುಚ್ಚಿಹೋಗಲಿವೆ. ಲಕ್ಷಾಂತರ ನೌಕರರು, ಹಮಾಲರು ಮತ್ತು ಸಣ್ಣ ಕಾರ್ಮಿಕರು ಬೀದಿಗೆ ಬೀಳಲಿದ್ದಾರೆ. ಇದು ರೈತರ ಶೋಷಣೆಗೆ ಮಾರ್ಗ ಮಾಡಿಕೊಡಲಿದೆ. ದಲ್ಲಾಳಿಗಳು ಮತ್ತು ಕಾರ್ಪೋರೇಟ್ ಕುಳಗಳ ಲಾಭಕೋರತನಕ್ಕೆ ದಾರಿಯಾಗಲಿದೆ. ಇದು ರೈತರು, ಕೃಷಿಕೂಲಿಕಾರರಿಗೆ ಮರಣಶಾಸನವಾಗಲಿದೆ ಎಂಬ ಆತಂಕ ರೈತರಿಂದ ವ್ಯಕ್ತವಾಗಿದೆ.

ರಾಜ್ಯದಲ್ಲಿ 177 ಕೃಷಿ ಉತ್ಪನ್ನ ಮಾರುಕಟ್ಟೆಗಳಿದ್ದು, ಜೊತೆ ಉಪ ಮಾರುಕಟ್ಟೆಗಳು ಕಾರ್ಯಾಚರಿಸುತ್ತಿವೆ. ಲಕ್ಷ ಲಕ್ಷ ನೌಕರರು, ಕಾರ್ಮಿಕರು, ವರ್ತಕರು ಕೆಲಸ ಮಾಡಿಕೊಂಡು ಕುಟುಂಬಗಳ ನಿರ್ವಹಣೆಗೆ ಈ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮಾರ್ಗ ಕಲ್ಪಿಸಿವೆ. ಹೇಗೋ ಜೀವನ ದೂಡುತ್ತಿರುವ ಕುಟುಂಬಗಳ ನೆಮ್ಮದಿಗೆ ಎಪಿಎಂಸಿ ತಿದ್ದುಪಡಿ ಭಂಗ ತರಲಿದೆ. ಕೇಂದ್ರ ಸಚಿವ ಸಂಪುಟ ತಿದ್ದುಪಡಿಗೆ ಒಪ್ಪಿಗೆ ನೀಡಿರುವ ಕಾಯ್ದೆಯನ್ನು ಯಥಾವತ್ ತಿದ್ದುಪಡಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಮುಂದಾಗಿದೆ. ಅದೂ ಕೂಡ ಕೊರೊನದಿಂದ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ. ರೈತ ಸಂಘಟನೆಗಳು ಮತ್ತು ರೈತರು ಪ್ರತಿಭಟನೆಗೆ ಇಳಿಯಲು ಸಾಧ್ಯವಾಗದಂಥ ಕಾಲದಲ್ಲಿ ಈ ತೀರ್ಮಾನಕ್ಕೆ ಬಂದಿರುವುದು ಹೇಡಿತನದ ಕೃತ್ಯವಾಗಿದೆ.

ರಾಜ್ಯದ ಕೃಷಿ ಉತ್ಪನ್ನಗಳ ಮಾರುಕಟ್ಟೆ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ 1966 ಮತ್ತು ನಿಯಮಗಳು 1968ರ ಕಲಂ 8, 66, 67 ಮತ್ತು 70 ರಂತೆ ಎಪಿಎಂಸಿಗಳ ಹೊರಗೆ ನಡೆಯುವ ಮಾರುಕಟ್ಟೆಯ ಮೇಲೆ ಎಪಿಎಂಸಿಗಳು ನಿಯಂತ್ರಣ ಹೊಂದಿವೆ. ಕಾಯ್ದೆ ತಿದ್ದುಪಡಿಯಾದರೆ ಯಾರು ಎಲ್ಲಿ ಬೇಕಾದರೂ ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ಅವಕಾಶ ಕಲ್ಪಿಸಿದೆ. ಇದು ಎಪಿಎಂಸಿಯನ್ನು ಅವಲಂಬಿಸಿರುವ ಎಲ್ಲರಿಗೂ ತೊಂದರೆಯನ್ನುಂಟು ಮಾಡಲಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾ ರೆಡ್ಡಿ “ಎಪಿಎಂಸಿ ಹೊರಗೆ ರೈತರಿಂದ ಕೃಷಿ ಉತ್ಪನ್ನವನ್ನು ಲೈಸನ್ಸ್ ಹೊಂದಿಲ್ಲದ ವ್ಯಕ್ತಿಗಳು ಖರೀದಿಸಲು ಅವಕಾಶವಿಲ್ಲ. ವರ್ತಕರು ಮನಬಂದಂತೆ ರೈತರ ಶೋಷಣೆ ನಡೆಸಲು ಹಾಗೂ ಎಪಿಎಂಸಿ ಆದಾಯ ವಂಚನೆ ಮಾಡಲು ಅವಕಾಶ ನೀಡುತ್ತಿಲ್ಲ. ಈ ನಿಯಮಗಳ ಅನ್ವಯ ನಡೆಯದಿದ್ದರೆ ಅಂತಹ ವರ್ತಕರ ಮೇಲೆ ಕಲಂ 114, 116, 117ರಡಿ ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶವಿತ್ತು. ಆದರೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದರೆ ಈ ನಿಯಮಗಳು ಇಲ್ಲದಂತಾಗಿ ಕಾರ್ಪೋರೇಟ್ ಕುಳಗಳು ಎಪಿಎಂಸಿ ಪ್ರವೇಶಿಸಲು ಅನುವು ಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಸರ್ಕಾರ ಎಪಿಎಂಸಿ ಬಲಪಡಿಸಬೇಕು. ಖಾಸಗಿ ಮಾರುಕಟ್ಟೆ ನಿಷೇಧಿಸಬೇಕು. ಇಲ್ಲದಿದ್ದರೆ ಜಂಟಿ ಚಳವಳಿಗೆ ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದುವರೆಗೆ ಮಾರುಕಟ್ಟೆಗಳಲ್ಲಿ ಸ್ಪರ್ಧೆಗೆ ಅವಕಾಶವಿತ್ತು. ರೈತರು ತಮಗೆ ಅನುಕೂಲವಾಗುವಂತಹ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಬಹುದಿತ್ತು. ಕೇಂದ್ರದ ತೀರ್ಮಾನದಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದರೆ ಕೃಷಿಲೋಕ ಕಂಗಾಲಾಗುತ್ತದೆ. ಬ್ರಿಟೀಷರ ಕಾಲದಲ್ಲಿ ನಿರ್ಮಾಣವಾದ ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದೆ. ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಸಧ್ಯದ ಮಟ್ಟಿಗೆ ಅವಕಾಶವಿದೆ. ಮುಂದಿನ ದಿನಗಳು ರೈತರಿಗೆ ಸಂಕಷ್ಟವನ್ನು ತರಲಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, “ಕೇಂದ್ರ ಮತ್ತು ರಾಜ್ಯಗಳ ತೀರ್ಮಾನ ದಲ್ಲಾಳಿ ಮತ್ತು ಟ್ರೇಡರ್ ಗಳಿಗೆ ಅನುಕೂಲ ಕಲ್ಪಿಸಲಿದೆ. ಮಾರುಕಟ್ಟೆಗಳು ಇಲ್ಲವಾಗಲಿವೆ. ರೈತರಿಗೆ ದರ ಸಿಗುವುದಿಲ್ಲ. ಬೆಂಬಲ ಬೆಲೆ ನಿಗದಿಪಡಿಸಿದರು, ಅದು ರೈತರಿಗೆ ಗಗನ ಕುಸುಮವಾಗಲಿದೆ. ಕಾರ್ಪೋರೇಟ್ ಕುಳಗಳ ಮತ್ತು ಟ್ರೇಡರ್ ಗಳು ತಮಗೆ ಇಷ್ಟ ಬಂದಂತೆ ಖರೀದಿಸಲು ಅನುವುಮಾಡಿಕೊಡಲಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಪಿತೂರಿ ನಡೆಸಲಾಗುತ್ತಿದೆ. ಟ್ರೇಡರ್, ದಲ್ಲಾಳಿ ಮತ್ತು ಕಂಪನಿಗಳಿಗೆ ಹೆಚ್ಚು ಲಾಭವಾಗುತ್ತದೆ. ರೈತರಿಗೆ ಮಾರುಕಟ್ಟೆ ಎಂಬುದು ಕನಸಾಗಲಿದೆ. ಹೊಲಗಳಿಗೆ ಹೋಗಿ ಖರೀದಿಸುವ ವ್ಯವಸ್ಥೆ ಬರಲಿದೆ. ಮಾರುಕಟ್ಟೆ ಇದ್ದರೆ ಸ್ಪರ್ಧೆ ಇರುತ್ತದೆ. ಇಲ್ಲದಿದ್ದರೆ ರೈತರು ಒಳ್ಳೆಯ ದರಕ್ಕೆ ಮಾರಾಟ ಮಾಡಲು ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ತನ್ನ ತೀರ್ಮಾನಗಳಿಂದ ಹಿಂದೆ ಸರಿಯಬೇಕು, ಇಲ್ಲದದ್ದರೆ ಹೋರಾಟ ಅನಿವಾರ್ಯ” ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೀರ್ಮಾನಗಳ ವಿರುದ್ಧ ವ್ಯಾಪಕ ವಿರೋಧ ಕಂಡು ಬಂದಿದ್ದು ಕೊರೊನ ಲಾಕ್ ಡೌನ್ ನಡುವೆಯೂ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗೆ ಮನವಿ ಪತ್ರ ಸಲ್ಲಿಸುವ ಕಾರ್ಯ ನಾಳೆಯಿಂದ ಮುಂದುವರಿಯಲಿದೆ. ಕೊರೊನ ಸಂದರ್ಭದಲ್ಲಿ ರೈತ ವಿರೋಧಿ ತೀರ್ಮಾನಗಳನ್ನು ತೆಗೆದು ಕೊಳ್ಳುತ್ತಿರುವ ಸರ್ಕಾರಗಳು ಪತನದ ಹಾದಿ ಹಿಡಿಯಲಿವೆ ಎಂಬ ಮಾತುಗಳು ಕೇಳಿಬಂದಿದೆ.


ಓದಿ: ಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು


ವಿಡಿಯೋ ನೋಡಿ: ಕರ್ನಾಟಕ ಸರ್ಕಾರ ತೆಗೆದುಕೊಂಡ ಮೂರು ಆಘಾತಕಾರಿ, ಕರ್ನಾಟಕ ವಿರೋಧಿ ತೀರ್ಮಾನಗಳು.(facebook Live)


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...