Homeಮುಖಪುಟತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

- Advertisement -
- Advertisement -

ಪ್ರಧಾನಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಎಪಿಎಂಸಿ ಕಾಯ್ದೆಯ ತಿದ್ದುಪಡಿ ನಿರ್ಧಾರಕ್ಕೆ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ತಿದ್ದುಪಡಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮುಚ್ಚಿಹೋಗಲಿವೆ. ಲಕ್ಷಾಂತರ ನೌಕರರು, ಹಮಾಲರು ಮತ್ತು ಸಣ್ಣ ಕಾರ್ಮಿಕರು ಬೀದಿಗೆ ಬೀಳಲಿದ್ದಾರೆ. ಇದು ರೈತರ ಶೋಷಣೆಗೆ ಮಾರ್ಗ ಮಾಡಿಕೊಡಲಿದೆ. ದಲ್ಲಾಳಿಗಳು ಮತ್ತು ಕಾರ್ಪೋರೇಟ್ ಕುಳಗಳ ಲಾಭಕೋರತನಕ್ಕೆ ದಾರಿಯಾಗಲಿದೆ. ಇದು ರೈತರು, ಕೃಷಿಕೂಲಿಕಾರರಿಗೆ ಮರಣಶಾಸನವಾಗಲಿದೆ ಎಂಬ ಆತಂಕ ರೈತರಿಂದ ವ್ಯಕ್ತವಾಗಿದೆ.

ರಾಜ್ಯದಲ್ಲಿ 177 ಕೃಷಿ ಉತ್ಪನ್ನ ಮಾರುಕಟ್ಟೆಗಳಿದ್ದು, ಜೊತೆ ಉಪ ಮಾರುಕಟ್ಟೆಗಳು ಕಾರ್ಯಾಚರಿಸುತ್ತಿವೆ. ಲಕ್ಷ ಲಕ್ಷ ನೌಕರರು, ಕಾರ್ಮಿಕರು, ವರ್ತಕರು ಕೆಲಸ ಮಾಡಿಕೊಂಡು ಕುಟುಂಬಗಳ ನಿರ್ವಹಣೆಗೆ ಈ ಕೃಷಿ ಉತ್ಪನ್ನ ಮಾರುಕಟ್ಟೆಗಳು ಮಾರ್ಗ ಕಲ್ಪಿಸಿವೆ. ಹೇಗೋ ಜೀವನ ದೂಡುತ್ತಿರುವ ಕುಟುಂಬಗಳ ನೆಮ್ಮದಿಗೆ ಎಪಿಎಂಸಿ ತಿದ್ದುಪಡಿ ಭಂಗ ತರಲಿದೆ. ಕೇಂದ್ರ ಸಚಿವ ಸಂಪುಟ ತಿದ್ದುಪಡಿಗೆ ಒಪ್ಪಿಗೆ ನೀಡಿರುವ ಕಾಯ್ದೆಯನ್ನು ಯಥಾವತ್ ತಿದ್ದುಪಡಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಮುಂದಾಗಿದೆ. ಅದೂ ಕೂಡ ಕೊರೊನದಿಂದ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ. ರೈತ ಸಂಘಟನೆಗಳು ಮತ್ತು ರೈತರು ಪ್ರತಿಭಟನೆಗೆ ಇಳಿಯಲು ಸಾಧ್ಯವಾಗದಂಥ ಕಾಲದಲ್ಲಿ ಈ ತೀರ್ಮಾನಕ್ಕೆ ಬಂದಿರುವುದು ಹೇಡಿತನದ ಕೃತ್ಯವಾಗಿದೆ.

ರಾಜ್ಯದ ಕೃಷಿ ಉತ್ಪನ್ನಗಳ ಮಾರುಕಟ್ಟೆ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ 1966 ಮತ್ತು ನಿಯಮಗಳು 1968ರ ಕಲಂ 8, 66, 67 ಮತ್ತು 70 ರಂತೆ ಎಪಿಎಂಸಿಗಳ ಹೊರಗೆ ನಡೆಯುವ ಮಾರುಕಟ್ಟೆಯ ಮೇಲೆ ಎಪಿಎಂಸಿಗಳು ನಿಯಂತ್ರಣ ಹೊಂದಿವೆ. ಕಾಯ್ದೆ ತಿದ್ದುಪಡಿಯಾದರೆ ಯಾರು ಎಲ್ಲಿ ಬೇಕಾದರೂ ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ಅವಕಾಶ ಕಲ್ಪಿಸಿದೆ. ಇದು ಎಪಿಎಂಸಿಯನ್ನು ಅವಲಂಬಿಸಿರುವ ಎಲ್ಲರಿಗೂ ತೊಂದರೆಯನ್ನುಂಟು ಮಾಡಲಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾ ರೆಡ್ಡಿ “ಎಪಿಎಂಸಿ ಹೊರಗೆ ರೈತರಿಂದ ಕೃಷಿ ಉತ್ಪನ್ನವನ್ನು ಲೈಸನ್ಸ್ ಹೊಂದಿಲ್ಲದ ವ್ಯಕ್ತಿಗಳು ಖರೀದಿಸಲು ಅವಕಾಶವಿಲ್ಲ. ವರ್ತಕರು ಮನಬಂದಂತೆ ರೈತರ ಶೋಷಣೆ ನಡೆಸಲು ಹಾಗೂ ಎಪಿಎಂಸಿ ಆದಾಯ ವಂಚನೆ ಮಾಡಲು ಅವಕಾಶ ನೀಡುತ್ತಿಲ್ಲ. ಈ ನಿಯಮಗಳ ಅನ್ವಯ ನಡೆಯದಿದ್ದರೆ ಅಂತಹ ವರ್ತಕರ ಮೇಲೆ ಕಲಂ 114, 116, 117ರಡಿ ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶವಿತ್ತು. ಆದರೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದರೆ ಈ ನಿಯಮಗಳು ಇಲ್ಲದಂತಾಗಿ ಕಾರ್ಪೋರೇಟ್ ಕುಳಗಳು ಎಪಿಎಂಸಿ ಪ್ರವೇಶಿಸಲು ಅನುವು ಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಸರ್ಕಾರ ಎಪಿಎಂಸಿ ಬಲಪಡಿಸಬೇಕು. ಖಾಸಗಿ ಮಾರುಕಟ್ಟೆ ನಿಷೇಧಿಸಬೇಕು. ಇಲ್ಲದಿದ್ದರೆ ಜಂಟಿ ಚಳವಳಿಗೆ ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದುವರೆಗೆ ಮಾರುಕಟ್ಟೆಗಳಲ್ಲಿ ಸ್ಪರ್ಧೆಗೆ ಅವಕಾಶವಿತ್ತು. ರೈತರು ತಮಗೆ ಅನುಕೂಲವಾಗುವಂತಹ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಬಹುದಿತ್ತು. ಕೇಂದ್ರದ ತೀರ್ಮಾನದಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದರೆ ಕೃಷಿಲೋಕ ಕಂಗಾಲಾಗುತ್ತದೆ. ಬ್ರಿಟೀಷರ ಕಾಲದಲ್ಲಿ ನಿರ್ಮಾಣವಾದ ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದೆ. ರೈತರು ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಸಧ್ಯದ ಮಟ್ಟಿಗೆ ಅವಕಾಶವಿದೆ. ಮುಂದಿನ ದಿನಗಳು ರೈತರಿಗೆ ಸಂಕಷ್ಟವನ್ನು ತರಲಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, “ಕೇಂದ್ರ ಮತ್ತು ರಾಜ್ಯಗಳ ತೀರ್ಮಾನ ದಲ್ಲಾಳಿ ಮತ್ತು ಟ್ರೇಡರ್ ಗಳಿಗೆ ಅನುಕೂಲ ಕಲ್ಪಿಸಲಿದೆ. ಮಾರುಕಟ್ಟೆಗಳು ಇಲ್ಲವಾಗಲಿವೆ. ರೈತರಿಗೆ ದರ ಸಿಗುವುದಿಲ್ಲ. ಬೆಂಬಲ ಬೆಲೆ ನಿಗದಿಪಡಿಸಿದರು, ಅದು ರೈತರಿಗೆ ಗಗನ ಕುಸುಮವಾಗಲಿದೆ. ಕಾರ್ಪೋರೇಟ್ ಕುಳಗಳ ಮತ್ತು ಟ್ರೇಡರ್ ಗಳು ತಮಗೆ ಇಷ್ಟ ಬಂದಂತೆ ಖರೀದಿಸಲು ಅನುವುಮಾಡಿಕೊಡಲಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಪಿತೂರಿ ನಡೆಸಲಾಗುತ್ತಿದೆ. ಟ್ರೇಡರ್, ದಲ್ಲಾಳಿ ಮತ್ತು ಕಂಪನಿಗಳಿಗೆ ಹೆಚ್ಚು ಲಾಭವಾಗುತ್ತದೆ. ರೈತರಿಗೆ ಮಾರುಕಟ್ಟೆ ಎಂಬುದು ಕನಸಾಗಲಿದೆ. ಹೊಲಗಳಿಗೆ ಹೋಗಿ ಖರೀದಿಸುವ ವ್ಯವಸ್ಥೆ ಬರಲಿದೆ. ಮಾರುಕಟ್ಟೆ ಇದ್ದರೆ ಸ್ಪರ್ಧೆ ಇರುತ್ತದೆ. ಇಲ್ಲದಿದ್ದರೆ ರೈತರು ಒಳ್ಳೆಯ ದರಕ್ಕೆ ಮಾರಾಟ ಮಾಡಲು ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ತನ್ನ ತೀರ್ಮಾನಗಳಿಂದ ಹಿಂದೆ ಸರಿಯಬೇಕು, ಇಲ್ಲದದ್ದರೆ ಹೋರಾಟ ಅನಿವಾರ್ಯ” ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೀರ್ಮಾನಗಳ ವಿರುದ್ಧ ವ್ಯಾಪಕ ವಿರೋಧ ಕಂಡು ಬಂದಿದ್ದು ಕೊರೊನ ಲಾಕ್ ಡೌನ್ ನಡುವೆಯೂ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಗೆ ಮನವಿ ಪತ್ರ ಸಲ್ಲಿಸುವ ಕಾರ್ಯ ನಾಳೆಯಿಂದ ಮುಂದುವರಿಯಲಿದೆ. ಕೊರೊನ ಸಂದರ್ಭದಲ್ಲಿ ರೈತ ವಿರೋಧಿ ತೀರ್ಮಾನಗಳನ್ನು ತೆಗೆದು ಕೊಳ್ಳುತ್ತಿರುವ ಸರ್ಕಾರಗಳು ಪತನದ ಹಾದಿ ಹಿಡಿಯಲಿವೆ ಎಂಬ ಮಾತುಗಳು ಕೇಳಿಬಂದಿದೆ.


ಓದಿ: ಎಪಿಎಂಸಿ ಕಾಯ್ದೆ ತಿದ್ದುಪಡಿಯ ವಿರುದ್ಧ ಲಾಕ್‌ಡೌನ್‌ ನಡುವೆಯೇ ಬೀದಿಗಿಳಿದ ರೈತರು


ವಿಡಿಯೋ ನೋಡಿ: ಕರ್ನಾಟಕ ಸರ್ಕಾರ ತೆಗೆದುಕೊಂಡ ಮೂರು ಆಘಾತಕಾರಿ, ಕರ್ನಾಟಕ ವಿರೋಧಿ ತೀರ್ಮಾನಗಳು.(facebook Live)


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...