Homeಮುಖಪುಟಅಧಿಕೃತ ಭಾಷಾ ನಿಯಮಗಳ ತಿದ್ದುಪಡಿ; ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿ: ಸುಪ್ರೀಂ

ಅಧಿಕೃತ ಭಾಷಾ ನಿಯಮಗಳ ತಿದ್ದುಪಡಿ; ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿ: ಸುಪ್ರೀಂ

ಭಾರತೀಯ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ 22 ಭಾಷೆಗಳನ್ನು ಉಲ್ಲೇಖಿಸಲಾಗಿದೆ, ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಿಂದಿ ಮತ್ತು ಇಂಗ್ಲಿಷ್‌ ಭಾಷೆ ಆಪ್ತವಾಗಿಲ್ಲದೇ ಇರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.‌ಎ. ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಅಧಿಕೃತ ಪ್ರಕಟಣೆಗಳನ್ನು ಸ್ಥಳೀಯ ಭಾಷೆಗಳಿಗೆ ಅನುವಾದಿಸುವಂತೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿಂಪಡೆಯಲು ಕೇಂದ್ರ ಪರಿಸರ ಸಚಿವಾಲಯಕ್ಕೆ ಗುರುವಾರ ಆದೇಶ ನೀಡಿತು.

“ಭಾರತೀಯ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ 22 ಭಾಷೆಗಳನ್ನು ಉಲ್ಲೇಖಿಸಲಾಗಿದೆ ಎಂದು ಹೇಳಿದೆ. ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಿಂದಿ ಮತ್ತು ಇಂಗ್ಲಿಷ್‌ ಭಾಷೆ ಆಪ್ತವಾಗಿಲ್ಲದೇ ಇರಬಹುದು” ಎಂದು ಮುಖ್ಯ ನ್ಯಾಯಮೂರ್ತಿ ಎ ಎಸ್ ಬೊಬ್ಡೆ ಗುರುವಾರ ಮಧ್ಯಾಹ್ನ ಕೇಂದ್ರ ಪರಿಸರ ಸಚಿವಾಲಯ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯ ವೇಳೆ ಹೇಳಿದರು.

ಕೇಂದ್ರ ಸರ್ಕಾರವು “ಅಧಿಕೃತ ಭಾಷಾ ಕಾಯ್ದೆಗೆ ತಿದ್ದುಪಡಿ ಮಾಡುವ ಬಗ್ಗೆ ಯೋಚಿಸಬೇಕು” ಎಂದು ಅವರು ಪರಿಸರ ಸಚಿವಾಲಯದ ಸಲಹೆಗಾರರಿಗೆ ತಿಳಿಸಿದರು.

ಕರಡು ಕಾನೂನನ್ನು 22 ಭಾಷೆಗಳಿಗೆ ಭಾಷಾಂತರಿಸುವ ಸಾಧ್ಯತೆಯ ಬಗ್ಗೆ, “ಅನುವಾದವು ಸುಲಭವಾದ ವಿಷಯ, ಸಂಸತ್ತಿನಲ್ಲಿಯೂ ಶೀಘ್ರ ಅನುವಾದವಿದೆ” ಎಂದು ಸಿಜೆಐ ಬೊಬ್ಡೆ ಹೇಳಿದ್ದಾರೆ.

ಈ ಹಿಂದೆ ಹಫ್‌ಪೋಸ್ಟ್ ಇಂಡಿಯಾ ವರದಿ ಮಾಡಿದಂತೆ, ಜೂನ್ 30 ರ ತೀರ್ಪಿನಲ್ಲಿ, ಸಾರ್ವಜನಿಕ ಸಮಾಲೋಚನೆಗಾಗಿ ವಿವಾದಾತ್ಮಕ ಪ್ರಸ್ತಾವಿತ ಕಾನೂನನ್ನು ಭಾಷಾಂತರಿಸಲು ದೆಹಲಿ ಹೈಕೋರ್ಟ್ ಪರಿಸರ ಸಚಿವಾಲಯಕ್ಕೆ ನಿರ್ದೇಶನ ನೀಡಿತ್ತು.

ಈ ತೀರ್ಪಿನ ವಿರುದ್ಧ ಆಗಸ್ಟ್ ಆರಂಭದಲ್ಲಿ ಸಲ್ಲಿಸಿದ ಮೇಲ್ಮನವಿಯಲ್ಲಿ, ಕೇಂದ್ರ ಪರಿಸರ ಆಡಳಿತವು ಸ್ಥಳೀಯ ಭಾರತೀಯ ಭಾಷೆಗಳಲ್ಲಿ ಎಲ್ಲಾ ಅಧಿಕೃತ ಆದೇಶಗಳನ್ನು ಭಾಷಾಂತರಿಸುವ ಜವಾಬ್ದಾರಿಯ ಕಾರಣದಿಂದಾಗಿ ಕೇಂದ್ರ ಸರ್ಕಾರದ ಆಡಳಿತದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬ ಭೀತಿಯನ್ನು ಹೆಚ್ಚಿಸಿದೆ ಎಂದು ಹೇಳಿತ್ತು.

ಜೂನ್ 30 ರ ದೆಹಲಿ ಹೈಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ, ಮೇಲ್ಮನವಿಯಲ್ಲಿ, “ಮಾನ್ಯ ನ್ಯಾಯಾಲಯವು ಈ ಆದೇಶವನ್ನು ಭಾಗಶಃ ಮಾರ್ಪಡಿಸದಿದ್ದಲ್ಲಿ, ಪರಿಣಾಮಕಾರಿ ಆಡಳಿತದ ಅಗತ್ಯತೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಅಂಗೀಕರಿಸಲಾಗುತ್ತಿದ್ದ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತ್ಯಾದಿಗಳ ಸ್ಥಳೀಯ ಭಾಷೆಗಳ ಅನುವಾದವನ್ನು ಕೋರಿ ಮುಂದಿನ ದಿನಗಳಲ್ಲಿ ಇದೇ ರೀತಿಯ ಪ್ರಕರಣಗಳನ್ನು ದಾಖಲಿಸಲು ಪ್ರಾರಂಭವಾಗುತ್ತದೆ” ಎಂದು ವಾದಿಸಿತ್ತು.

ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಪರಿಸರ ಸಚಿವಾಲಯ ಉಲ್ಲೇಖಿಸಿರುವ ಈ ವಾದಗಳು ಸುಪ್ರೀಂ ಕೋರ್ಟ್‌‌ಗೆ  ಸಮರ್ಥನೀಯವಾಗಲಿಲ್ಲ. ಆದಾಗ್ಯೂ, ಸುಪ್ರೀಂ ಕೋರ್ಟ್ ಈ ತೀರ್ಪಿನ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಲು ಸಚಿವಾಲಯಕ್ಕೆ ಸ್ವಾತಂತ್ರ್ಯವನ್ನು ನೀಡಿದೆ ಮತ್ತು ದೆಹಲಿ ಹೈಕೋರ್ಟ್ ನಿಯಮಗಳು ಪ್ರತಿಕೂಲವಾದರೆ ಪರಿಶೀಲನಾ ಅರ್ಜಿಯನ್ನು ಸುಪ್ರೀಂಗೆ ಸಲ್ಲಿಸಿ ಎಂದು ಹೇಳಿದೆ.

ಪರಿಸರ ಕರಡು ಕಾನೂನನ್ನು ಕನ್ನಡಕ್ಕೆ ಭಾಷಾಂತರಿಸಲು ಮತ್ತು ಸಾರ್ವಜನಿಕರಿಗೆ ಅವರ ಸಲಹೆಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸರಿಯಾದ ಕಾಲಾವಕಾಶವನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಕೇಳಿತ್ತು ಎಂದು ಹಫ್ಪೋಸ್ಟ್ ಇಂಡಿಯೆರ್ ವರದಿ ಮಾಡಿತ್ತು.

ಪರಿಸರ ತೆರವು ಕಾನೂನಿನ ಕರಡನ್ನು ತಮಿಳು ಭಾಷೆಗೆ ಭಾಷಾಂತರಿಸಬಹುದೇ ಎಂದು ಮದ್ರಾಸ್ ಹೈಕೋರ್ಟ್ ಪರಿಸರ ಸಚಿವಾಲಯವನ್ನು ಕೇಳಿದೆ ಎಂದೂ ಹಫ್ಪೋಸ್ಟ್ ವರದಿ ಮಾಡಿತ್ತು.

ಸುಪ್ರೀಂ ತೀರ್ಪಿನ ನಂತರ ಕೇಂದ್ರ ಪರಿಸರ ಸಚಿವಾಲಯವು ಮಾಧ್ಯಮಗಳಿಗೆ ನೀಡಿದ ಅಧಿಕೃತ ಹೇಳಿಕೆಯಲ್ಲಿ, “ಕರಡು ಪರಿಸರ ಪರಿಣಾಮಗಳ ಅಧ್ಯಯನ (ಇಐಎ) ಅಧಿಸೂಚನೆ- 2020 ಅನ್ನು ಸಂವಿಧಾನದ ಎಂಟನೇ ಅನುಸೂಚಿಯಂತೆ ಪ್ರಕಟಿಸಲು ವಿಫಲವಾದ ಕಾರಣ ಸಚಿವಾಲಯದ ವಿರುದ್ಧದ ನ್ಯಾಯಾಲಯದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ತಡೆಹಿಡಿದಿದೆ.

ಪ್ರಕಟಣೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಎಂದು ನಿಯಮಗಳು ಹೇಳುತ್ತವೆ ಎಂದು ಸಾಲಿಸಿಟರ್ ಜನರಲ್ ಹೇಳಿದ್ದಾರೆ.

ಅಧಿಕೃತ ಪ್ರಕಟಣೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಅಗತ್ಯ ಎಂದು ಹೇಳುವ ಅಧಿಕೃತ ಭಾಷೆಗಳ ನಿಯಮಗಳನ್ನು ಕೇಂದ್ರ ತಿದ್ದುಪಡಿ ಮಾಡಬೇಕೆಂದು ಸಿಜೆಐ ಸೂಚಿಸಿದೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...