Homeಮುಖಪುಟಅಧಿಕೃತ ಭಾಷಾ ನಿಯಮಗಳ ತಿದ್ದುಪಡಿ; ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿ: ಸುಪ್ರೀಂ

ಅಧಿಕೃತ ಭಾಷಾ ನಿಯಮಗಳ ತಿದ್ದುಪಡಿ; ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿ: ಸುಪ್ರೀಂ

ಭಾರತೀಯ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ 22 ಭಾಷೆಗಳನ್ನು ಉಲ್ಲೇಖಿಸಲಾಗಿದೆ, ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಿಂದಿ ಮತ್ತು ಇಂಗ್ಲಿಷ್‌ ಭಾಷೆ ಆಪ್ತವಾಗಿಲ್ಲದೇ ಇರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.‌ಎ. ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಅಧಿಕೃತ ಪ್ರಕಟಣೆಗಳನ್ನು ಸ್ಥಳೀಯ ಭಾಷೆಗಳಿಗೆ ಅನುವಾದಿಸುವಂತೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿಂಪಡೆಯಲು ಕೇಂದ್ರ ಪರಿಸರ ಸಚಿವಾಲಯಕ್ಕೆ ಗುರುವಾರ ಆದೇಶ ನೀಡಿತು.

“ಭಾರತೀಯ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ 22 ಭಾಷೆಗಳನ್ನು ಉಲ್ಲೇಖಿಸಲಾಗಿದೆ ಎಂದು ಹೇಳಿದೆ. ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಿಂದಿ ಮತ್ತು ಇಂಗ್ಲಿಷ್‌ ಭಾಷೆ ಆಪ್ತವಾಗಿಲ್ಲದೇ ಇರಬಹುದು” ಎಂದು ಮುಖ್ಯ ನ್ಯಾಯಮೂರ್ತಿ ಎ ಎಸ್ ಬೊಬ್ಡೆ ಗುರುವಾರ ಮಧ್ಯಾಹ್ನ ಕೇಂದ್ರ ಪರಿಸರ ಸಚಿವಾಲಯ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯ ವೇಳೆ ಹೇಳಿದರು.

ಕೇಂದ್ರ ಸರ್ಕಾರವು “ಅಧಿಕೃತ ಭಾಷಾ ಕಾಯ್ದೆಗೆ ತಿದ್ದುಪಡಿ ಮಾಡುವ ಬಗ್ಗೆ ಯೋಚಿಸಬೇಕು” ಎಂದು ಅವರು ಪರಿಸರ ಸಚಿವಾಲಯದ ಸಲಹೆಗಾರರಿಗೆ ತಿಳಿಸಿದರು.

ಕರಡು ಕಾನೂನನ್ನು 22 ಭಾಷೆಗಳಿಗೆ ಭಾಷಾಂತರಿಸುವ ಸಾಧ್ಯತೆಯ ಬಗ್ಗೆ, “ಅನುವಾದವು ಸುಲಭವಾದ ವಿಷಯ, ಸಂಸತ್ತಿನಲ್ಲಿಯೂ ಶೀಘ್ರ ಅನುವಾದವಿದೆ” ಎಂದು ಸಿಜೆಐ ಬೊಬ್ಡೆ ಹೇಳಿದ್ದಾರೆ.

ಈ ಹಿಂದೆ ಹಫ್‌ಪೋಸ್ಟ್ ಇಂಡಿಯಾ ವರದಿ ಮಾಡಿದಂತೆ, ಜೂನ್ 30 ರ ತೀರ್ಪಿನಲ್ಲಿ, ಸಾರ್ವಜನಿಕ ಸಮಾಲೋಚನೆಗಾಗಿ ವಿವಾದಾತ್ಮಕ ಪ್ರಸ್ತಾವಿತ ಕಾನೂನನ್ನು ಭಾಷಾಂತರಿಸಲು ದೆಹಲಿ ಹೈಕೋರ್ಟ್ ಪರಿಸರ ಸಚಿವಾಲಯಕ್ಕೆ ನಿರ್ದೇಶನ ನೀಡಿತ್ತು.

ಈ ತೀರ್ಪಿನ ವಿರುದ್ಧ ಆಗಸ್ಟ್ ಆರಂಭದಲ್ಲಿ ಸಲ್ಲಿಸಿದ ಮೇಲ್ಮನವಿಯಲ್ಲಿ, ಕೇಂದ್ರ ಪರಿಸರ ಆಡಳಿತವು ಸ್ಥಳೀಯ ಭಾರತೀಯ ಭಾಷೆಗಳಲ್ಲಿ ಎಲ್ಲಾ ಅಧಿಕೃತ ಆದೇಶಗಳನ್ನು ಭಾಷಾಂತರಿಸುವ ಜವಾಬ್ದಾರಿಯ ಕಾರಣದಿಂದಾಗಿ ಕೇಂದ್ರ ಸರ್ಕಾರದ ಆಡಳಿತದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬ ಭೀತಿಯನ್ನು ಹೆಚ್ಚಿಸಿದೆ ಎಂದು ಹೇಳಿತ್ತು.

ಜೂನ್ 30 ರ ದೆಹಲಿ ಹೈಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ, ಮೇಲ್ಮನವಿಯಲ್ಲಿ, “ಮಾನ್ಯ ನ್ಯಾಯಾಲಯವು ಈ ಆದೇಶವನ್ನು ಭಾಗಶಃ ಮಾರ್ಪಡಿಸದಿದ್ದಲ್ಲಿ, ಪರಿಣಾಮಕಾರಿ ಆಡಳಿತದ ಅಗತ್ಯತೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಅಂಗೀಕರಿಸಲಾಗುತ್ತಿದ್ದ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತ್ಯಾದಿಗಳ ಸ್ಥಳೀಯ ಭಾಷೆಗಳ ಅನುವಾದವನ್ನು ಕೋರಿ ಮುಂದಿನ ದಿನಗಳಲ್ಲಿ ಇದೇ ರೀತಿಯ ಪ್ರಕರಣಗಳನ್ನು ದಾಖಲಿಸಲು ಪ್ರಾರಂಭವಾಗುತ್ತದೆ” ಎಂದು ವಾದಿಸಿತ್ತು.

ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಪರಿಸರ ಸಚಿವಾಲಯ ಉಲ್ಲೇಖಿಸಿರುವ ಈ ವಾದಗಳು ಸುಪ್ರೀಂ ಕೋರ್ಟ್‌‌ಗೆ  ಸಮರ್ಥನೀಯವಾಗಲಿಲ್ಲ. ಆದಾಗ್ಯೂ, ಸುಪ್ರೀಂ ಕೋರ್ಟ್ ಈ ತೀರ್ಪಿನ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಲು ಸಚಿವಾಲಯಕ್ಕೆ ಸ್ವಾತಂತ್ರ್ಯವನ್ನು ನೀಡಿದೆ ಮತ್ತು ದೆಹಲಿ ಹೈಕೋರ್ಟ್ ನಿಯಮಗಳು ಪ್ರತಿಕೂಲವಾದರೆ ಪರಿಶೀಲನಾ ಅರ್ಜಿಯನ್ನು ಸುಪ್ರೀಂಗೆ ಸಲ್ಲಿಸಿ ಎಂದು ಹೇಳಿದೆ.

ಪರಿಸರ ಕರಡು ಕಾನೂನನ್ನು ಕನ್ನಡಕ್ಕೆ ಭಾಷಾಂತರಿಸಲು ಮತ್ತು ಸಾರ್ವಜನಿಕರಿಗೆ ಅವರ ಸಲಹೆಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸರಿಯಾದ ಕಾಲಾವಕಾಶವನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಕೇಳಿತ್ತು ಎಂದು ಹಫ್ಪೋಸ್ಟ್ ಇಂಡಿಯೆರ್ ವರದಿ ಮಾಡಿತ್ತು.

ಪರಿಸರ ತೆರವು ಕಾನೂನಿನ ಕರಡನ್ನು ತಮಿಳು ಭಾಷೆಗೆ ಭಾಷಾಂತರಿಸಬಹುದೇ ಎಂದು ಮದ್ರಾಸ್ ಹೈಕೋರ್ಟ್ ಪರಿಸರ ಸಚಿವಾಲಯವನ್ನು ಕೇಳಿದೆ ಎಂದೂ ಹಫ್ಪೋಸ್ಟ್ ವರದಿ ಮಾಡಿತ್ತು.

ಸುಪ್ರೀಂ ತೀರ್ಪಿನ ನಂತರ ಕೇಂದ್ರ ಪರಿಸರ ಸಚಿವಾಲಯವು ಮಾಧ್ಯಮಗಳಿಗೆ ನೀಡಿದ ಅಧಿಕೃತ ಹೇಳಿಕೆಯಲ್ಲಿ, “ಕರಡು ಪರಿಸರ ಪರಿಣಾಮಗಳ ಅಧ್ಯಯನ (ಇಐಎ) ಅಧಿಸೂಚನೆ- 2020 ಅನ್ನು ಸಂವಿಧಾನದ ಎಂಟನೇ ಅನುಸೂಚಿಯಂತೆ ಪ್ರಕಟಿಸಲು ವಿಫಲವಾದ ಕಾರಣ ಸಚಿವಾಲಯದ ವಿರುದ್ಧದ ನ್ಯಾಯಾಲಯದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ತಡೆಹಿಡಿದಿದೆ.

ಪ್ರಕಟಣೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಎಂದು ನಿಯಮಗಳು ಹೇಳುತ್ತವೆ ಎಂದು ಸಾಲಿಸಿಟರ್ ಜನರಲ್ ಹೇಳಿದ್ದಾರೆ.

ಅಧಿಕೃತ ಪ್ರಕಟಣೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಅಗತ್ಯ ಎಂದು ಹೇಳುವ ಅಧಿಕೃತ ಭಾಷೆಗಳ ನಿಯಮಗಳನ್ನು ಕೇಂದ್ರ ತಿದ್ದುಪಡಿ ಮಾಡಬೇಕೆಂದು ಸಿಜೆಐ ಸೂಚಿಸಿದೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....