Homeಮುಖಪುಟಅಧಿಕೃತ ಭಾಷಾ ನಿಯಮಗಳ ತಿದ್ದುಪಡಿ; ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿ: ಸುಪ್ರೀಂ

ಅಧಿಕೃತ ಭಾಷಾ ನಿಯಮಗಳ ತಿದ್ದುಪಡಿ; ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿ: ಸುಪ್ರೀಂ

ಭಾರತೀಯ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ 22 ಭಾಷೆಗಳನ್ನು ಉಲ್ಲೇಖಿಸಲಾಗಿದೆ, ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಿಂದಿ ಮತ್ತು ಇಂಗ್ಲಿಷ್‌ ಭಾಷೆ ಆಪ್ತವಾಗಿಲ್ಲದೇ ಇರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.‌ಎ. ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಅಧಿಕೃತ ಪ್ರಕಟಣೆಗಳನ್ನು ಸ್ಥಳೀಯ ಭಾಷೆಗಳಿಗೆ ಅನುವಾದಿಸುವಂತೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿಂಪಡೆಯಲು ಕೇಂದ್ರ ಪರಿಸರ ಸಚಿವಾಲಯಕ್ಕೆ ಗುರುವಾರ ಆದೇಶ ನೀಡಿತು.

“ಭಾರತೀಯ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ 22 ಭಾಷೆಗಳನ್ನು ಉಲ್ಲೇಖಿಸಲಾಗಿದೆ ಎಂದು ಹೇಳಿದೆ. ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಿಂದಿ ಮತ್ತು ಇಂಗ್ಲಿಷ್‌ ಭಾಷೆ ಆಪ್ತವಾಗಿಲ್ಲದೇ ಇರಬಹುದು” ಎಂದು ಮುಖ್ಯ ನ್ಯಾಯಮೂರ್ತಿ ಎ ಎಸ್ ಬೊಬ್ಡೆ ಗುರುವಾರ ಮಧ್ಯಾಹ್ನ ಕೇಂದ್ರ ಪರಿಸರ ಸಚಿವಾಲಯ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯ ವೇಳೆ ಹೇಳಿದರು.

ಕೇಂದ್ರ ಸರ್ಕಾರವು “ಅಧಿಕೃತ ಭಾಷಾ ಕಾಯ್ದೆಗೆ ತಿದ್ದುಪಡಿ ಮಾಡುವ ಬಗ್ಗೆ ಯೋಚಿಸಬೇಕು” ಎಂದು ಅವರು ಪರಿಸರ ಸಚಿವಾಲಯದ ಸಲಹೆಗಾರರಿಗೆ ತಿಳಿಸಿದರು.

ಕರಡು ಕಾನೂನನ್ನು 22 ಭಾಷೆಗಳಿಗೆ ಭಾಷಾಂತರಿಸುವ ಸಾಧ್ಯತೆಯ ಬಗ್ಗೆ, “ಅನುವಾದವು ಸುಲಭವಾದ ವಿಷಯ, ಸಂಸತ್ತಿನಲ್ಲಿಯೂ ಶೀಘ್ರ ಅನುವಾದವಿದೆ” ಎಂದು ಸಿಜೆಐ ಬೊಬ್ಡೆ ಹೇಳಿದ್ದಾರೆ.

ಈ ಹಿಂದೆ ಹಫ್‌ಪೋಸ್ಟ್ ಇಂಡಿಯಾ ವರದಿ ಮಾಡಿದಂತೆ, ಜೂನ್ 30 ರ ತೀರ್ಪಿನಲ್ಲಿ, ಸಾರ್ವಜನಿಕ ಸಮಾಲೋಚನೆಗಾಗಿ ವಿವಾದಾತ್ಮಕ ಪ್ರಸ್ತಾವಿತ ಕಾನೂನನ್ನು ಭಾಷಾಂತರಿಸಲು ದೆಹಲಿ ಹೈಕೋರ್ಟ್ ಪರಿಸರ ಸಚಿವಾಲಯಕ್ಕೆ ನಿರ್ದೇಶನ ನೀಡಿತ್ತು.

ಈ ತೀರ್ಪಿನ ವಿರುದ್ಧ ಆಗಸ್ಟ್ ಆರಂಭದಲ್ಲಿ ಸಲ್ಲಿಸಿದ ಮೇಲ್ಮನವಿಯಲ್ಲಿ, ಕೇಂದ್ರ ಪರಿಸರ ಆಡಳಿತವು ಸ್ಥಳೀಯ ಭಾರತೀಯ ಭಾಷೆಗಳಲ್ಲಿ ಎಲ್ಲಾ ಅಧಿಕೃತ ಆದೇಶಗಳನ್ನು ಭಾಷಾಂತರಿಸುವ ಜವಾಬ್ದಾರಿಯ ಕಾರಣದಿಂದಾಗಿ ಕೇಂದ್ರ ಸರ್ಕಾರದ ಆಡಳಿತದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬ ಭೀತಿಯನ್ನು ಹೆಚ್ಚಿಸಿದೆ ಎಂದು ಹೇಳಿತ್ತು.

ಜೂನ್ 30 ರ ದೆಹಲಿ ಹೈಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ, ಮೇಲ್ಮನವಿಯಲ್ಲಿ, “ಮಾನ್ಯ ನ್ಯಾಯಾಲಯವು ಈ ಆದೇಶವನ್ನು ಭಾಗಶಃ ಮಾರ್ಪಡಿಸದಿದ್ದಲ್ಲಿ, ಪರಿಣಾಮಕಾರಿ ಆಡಳಿತದ ಅಗತ್ಯತೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಅಂಗೀಕರಿಸಲಾಗುತ್ತಿದ್ದ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತ್ಯಾದಿಗಳ ಸ್ಥಳೀಯ ಭಾಷೆಗಳ ಅನುವಾದವನ್ನು ಕೋರಿ ಮುಂದಿನ ದಿನಗಳಲ್ಲಿ ಇದೇ ರೀತಿಯ ಪ್ರಕರಣಗಳನ್ನು ದಾಖಲಿಸಲು ಪ್ರಾರಂಭವಾಗುತ್ತದೆ” ಎಂದು ವಾದಿಸಿತ್ತು.

ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಪರಿಸರ ಸಚಿವಾಲಯ ಉಲ್ಲೇಖಿಸಿರುವ ಈ ವಾದಗಳು ಸುಪ್ರೀಂ ಕೋರ್ಟ್‌‌ಗೆ  ಸಮರ್ಥನೀಯವಾಗಲಿಲ್ಲ. ಆದಾಗ್ಯೂ, ಸುಪ್ರೀಂ ಕೋರ್ಟ್ ಈ ತೀರ್ಪಿನ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಲು ಸಚಿವಾಲಯಕ್ಕೆ ಸ್ವಾತಂತ್ರ್ಯವನ್ನು ನೀಡಿದೆ ಮತ್ತು ದೆಹಲಿ ಹೈಕೋರ್ಟ್ ನಿಯಮಗಳು ಪ್ರತಿಕೂಲವಾದರೆ ಪರಿಶೀಲನಾ ಅರ್ಜಿಯನ್ನು ಸುಪ್ರೀಂಗೆ ಸಲ್ಲಿಸಿ ಎಂದು ಹೇಳಿದೆ.

ಪರಿಸರ ಕರಡು ಕಾನೂನನ್ನು ಕನ್ನಡಕ್ಕೆ ಭಾಷಾಂತರಿಸಲು ಮತ್ತು ಸಾರ್ವಜನಿಕರಿಗೆ ಅವರ ಸಲಹೆಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸರಿಯಾದ ಕಾಲಾವಕಾಶವನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಕೇಳಿತ್ತು ಎಂದು ಹಫ್ಪೋಸ್ಟ್ ಇಂಡಿಯೆರ್ ವರದಿ ಮಾಡಿತ್ತು.

ಪರಿಸರ ತೆರವು ಕಾನೂನಿನ ಕರಡನ್ನು ತಮಿಳು ಭಾಷೆಗೆ ಭಾಷಾಂತರಿಸಬಹುದೇ ಎಂದು ಮದ್ರಾಸ್ ಹೈಕೋರ್ಟ್ ಪರಿಸರ ಸಚಿವಾಲಯವನ್ನು ಕೇಳಿದೆ ಎಂದೂ ಹಫ್ಪೋಸ್ಟ್ ವರದಿ ಮಾಡಿತ್ತು.

ಸುಪ್ರೀಂ ತೀರ್ಪಿನ ನಂತರ ಕೇಂದ್ರ ಪರಿಸರ ಸಚಿವಾಲಯವು ಮಾಧ್ಯಮಗಳಿಗೆ ನೀಡಿದ ಅಧಿಕೃತ ಹೇಳಿಕೆಯಲ್ಲಿ, “ಕರಡು ಪರಿಸರ ಪರಿಣಾಮಗಳ ಅಧ್ಯಯನ (ಇಐಎ) ಅಧಿಸೂಚನೆ- 2020 ಅನ್ನು ಸಂವಿಧಾನದ ಎಂಟನೇ ಅನುಸೂಚಿಯಂತೆ ಪ್ರಕಟಿಸಲು ವಿಫಲವಾದ ಕಾರಣ ಸಚಿವಾಲಯದ ವಿರುದ್ಧದ ನ್ಯಾಯಾಲಯದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ತಡೆಹಿಡಿದಿದೆ.

ಪ್ರಕಟಣೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಎಂದು ನಿಯಮಗಳು ಹೇಳುತ್ತವೆ ಎಂದು ಸಾಲಿಸಿಟರ್ ಜನರಲ್ ಹೇಳಿದ್ದಾರೆ.

ಅಧಿಕೃತ ಪ್ರಕಟಣೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಅಗತ್ಯ ಎಂದು ಹೇಳುವ ಅಧಿಕೃತ ಭಾಷೆಗಳ ನಿಯಮಗಳನ್ನು ಕೇಂದ್ರ ತಿದ್ದುಪಡಿ ಮಾಡಬೇಕೆಂದು ಸಿಜೆಐ ಸೂಚಿಸಿದೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...