Homeಮುಖಪುಟಅಧಿಕೃತ ಭಾಷಾ ನಿಯಮಗಳ ತಿದ್ದುಪಡಿ; ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿ: ಸುಪ್ರೀಂ

ಅಧಿಕೃತ ಭಾಷಾ ನಿಯಮಗಳ ತಿದ್ದುಪಡಿ; ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿ: ಸುಪ್ರೀಂ

ಭಾರತೀಯ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ 22 ಭಾಷೆಗಳನ್ನು ಉಲ್ಲೇಖಿಸಲಾಗಿದೆ, ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಿಂದಿ ಮತ್ತು ಇಂಗ್ಲಿಷ್‌ ಭಾಷೆ ಆಪ್ತವಾಗಿಲ್ಲದೇ ಇರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.‌ಎ. ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಅಧಿಕೃತ ಪ್ರಕಟಣೆಗಳನ್ನು ಸ್ಥಳೀಯ ಭಾಷೆಗಳಿಗೆ ಅನುವಾದಿಸುವಂತೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿಂಪಡೆಯಲು ಕೇಂದ್ರ ಪರಿಸರ ಸಚಿವಾಲಯಕ್ಕೆ ಗುರುವಾರ ಆದೇಶ ನೀಡಿತು.

“ಭಾರತೀಯ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ 22 ಭಾಷೆಗಳನ್ನು ಉಲ್ಲೇಖಿಸಲಾಗಿದೆ ಎಂದು ಹೇಳಿದೆ. ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಿಂದಿ ಮತ್ತು ಇಂಗ್ಲಿಷ್‌ ಭಾಷೆ ಆಪ್ತವಾಗಿಲ್ಲದೇ ಇರಬಹುದು” ಎಂದು ಮುಖ್ಯ ನ್ಯಾಯಮೂರ್ತಿ ಎ ಎಸ್ ಬೊಬ್ಡೆ ಗುರುವಾರ ಮಧ್ಯಾಹ್ನ ಕೇಂದ್ರ ಪರಿಸರ ಸಚಿವಾಲಯ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯ ವೇಳೆ ಹೇಳಿದರು.

ಕೇಂದ್ರ ಸರ್ಕಾರವು “ಅಧಿಕೃತ ಭಾಷಾ ಕಾಯ್ದೆಗೆ ತಿದ್ದುಪಡಿ ಮಾಡುವ ಬಗ್ಗೆ ಯೋಚಿಸಬೇಕು” ಎಂದು ಅವರು ಪರಿಸರ ಸಚಿವಾಲಯದ ಸಲಹೆಗಾರರಿಗೆ ತಿಳಿಸಿದರು.

ಕರಡು ಕಾನೂನನ್ನು 22 ಭಾಷೆಗಳಿಗೆ ಭಾಷಾಂತರಿಸುವ ಸಾಧ್ಯತೆಯ ಬಗ್ಗೆ, “ಅನುವಾದವು ಸುಲಭವಾದ ವಿಷಯ, ಸಂಸತ್ತಿನಲ್ಲಿಯೂ ಶೀಘ್ರ ಅನುವಾದವಿದೆ” ಎಂದು ಸಿಜೆಐ ಬೊಬ್ಡೆ ಹೇಳಿದ್ದಾರೆ.

ಈ ಹಿಂದೆ ಹಫ್‌ಪೋಸ್ಟ್ ಇಂಡಿಯಾ ವರದಿ ಮಾಡಿದಂತೆ, ಜೂನ್ 30 ರ ತೀರ್ಪಿನಲ್ಲಿ, ಸಾರ್ವಜನಿಕ ಸಮಾಲೋಚನೆಗಾಗಿ ವಿವಾದಾತ್ಮಕ ಪ್ರಸ್ತಾವಿತ ಕಾನೂನನ್ನು ಭಾಷಾಂತರಿಸಲು ದೆಹಲಿ ಹೈಕೋರ್ಟ್ ಪರಿಸರ ಸಚಿವಾಲಯಕ್ಕೆ ನಿರ್ದೇಶನ ನೀಡಿತ್ತು.

ಈ ತೀರ್ಪಿನ ವಿರುದ್ಧ ಆಗಸ್ಟ್ ಆರಂಭದಲ್ಲಿ ಸಲ್ಲಿಸಿದ ಮೇಲ್ಮನವಿಯಲ್ಲಿ, ಕೇಂದ್ರ ಪರಿಸರ ಆಡಳಿತವು ಸ್ಥಳೀಯ ಭಾರತೀಯ ಭಾಷೆಗಳಲ್ಲಿ ಎಲ್ಲಾ ಅಧಿಕೃತ ಆದೇಶಗಳನ್ನು ಭಾಷಾಂತರಿಸುವ ಜವಾಬ್ದಾರಿಯ ಕಾರಣದಿಂದಾಗಿ ಕೇಂದ್ರ ಸರ್ಕಾರದ ಆಡಳಿತದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬ ಭೀತಿಯನ್ನು ಹೆಚ್ಚಿಸಿದೆ ಎಂದು ಹೇಳಿತ್ತು.

ಜೂನ್ 30 ರ ದೆಹಲಿ ಹೈಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ, ಮೇಲ್ಮನವಿಯಲ್ಲಿ, “ಮಾನ್ಯ ನ್ಯಾಯಾಲಯವು ಈ ಆದೇಶವನ್ನು ಭಾಗಶಃ ಮಾರ್ಪಡಿಸದಿದ್ದಲ್ಲಿ, ಪರಿಣಾಮಕಾರಿ ಆಡಳಿತದ ಅಗತ್ಯತೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಅಂಗೀಕರಿಸಲಾಗುತ್ತಿದ್ದ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತ್ಯಾದಿಗಳ ಸ್ಥಳೀಯ ಭಾಷೆಗಳ ಅನುವಾದವನ್ನು ಕೋರಿ ಮುಂದಿನ ದಿನಗಳಲ್ಲಿ ಇದೇ ರೀತಿಯ ಪ್ರಕರಣಗಳನ್ನು ದಾಖಲಿಸಲು ಪ್ರಾರಂಭವಾಗುತ್ತದೆ” ಎಂದು ವಾದಿಸಿತ್ತು.

ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಪರಿಸರ ಸಚಿವಾಲಯ ಉಲ್ಲೇಖಿಸಿರುವ ಈ ವಾದಗಳು ಸುಪ್ರೀಂ ಕೋರ್ಟ್‌‌ಗೆ  ಸಮರ್ಥನೀಯವಾಗಲಿಲ್ಲ. ಆದಾಗ್ಯೂ, ಸುಪ್ರೀಂ ಕೋರ್ಟ್ ಈ ತೀರ್ಪಿನ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಲು ಸಚಿವಾಲಯಕ್ಕೆ ಸ್ವಾತಂತ್ರ್ಯವನ್ನು ನೀಡಿದೆ ಮತ್ತು ದೆಹಲಿ ಹೈಕೋರ್ಟ್ ನಿಯಮಗಳು ಪ್ರತಿಕೂಲವಾದರೆ ಪರಿಶೀಲನಾ ಅರ್ಜಿಯನ್ನು ಸುಪ್ರೀಂಗೆ ಸಲ್ಲಿಸಿ ಎಂದು ಹೇಳಿದೆ.

ಪರಿಸರ ಕರಡು ಕಾನೂನನ್ನು ಕನ್ನಡಕ್ಕೆ ಭಾಷಾಂತರಿಸಲು ಮತ್ತು ಸಾರ್ವಜನಿಕರಿಗೆ ಅವರ ಸಲಹೆಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸರಿಯಾದ ಕಾಲಾವಕಾಶವನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಕೇಳಿತ್ತು ಎಂದು ಹಫ್ಪೋಸ್ಟ್ ಇಂಡಿಯೆರ್ ವರದಿ ಮಾಡಿತ್ತು.

ಪರಿಸರ ತೆರವು ಕಾನೂನಿನ ಕರಡನ್ನು ತಮಿಳು ಭಾಷೆಗೆ ಭಾಷಾಂತರಿಸಬಹುದೇ ಎಂದು ಮದ್ರಾಸ್ ಹೈಕೋರ್ಟ್ ಪರಿಸರ ಸಚಿವಾಲಯವನ್ನು ಕೇಳಿದೆ ಎಂದೂ ಹಫ್ಪೋಸ್ಟ್ ವರದಿ ಮಾಡಿತ್ತು.

ಸುಪ್ರೀಂ ತೀರ್ಪಿನ ನಂತರ ಕೇಂದ್ರ ಪರಿಸರ ಸಚಿವಾಲಯವು ಮಾಧ್ಯಮಗಳಿಗೆ ನೀಡಿದ ಅಧಿಕೃತ ಹೇಳಿಕೆಯಲ್ಲಿ, “ಕರಡು ಪರಿಸರ ಪರಿಣಾಮಗಳ ಅಧ್ಯಯನ (ಇಐಎ) ಅಧಿಸೂಚನೆ- 2020 ಅನ್ನು ಸಂವಿಧಾನದ ಎಂಟನೇ ಅನುಸೂಚಿಯಂತೆ ಪ್ರಕಟಿಸಲು ವಿಫಲವಾದ ಕಾರಣ ಸಚಿವಾಲಯದ ವಿರುದ್ಧದ ನ್ಯಾಯಾಲಯದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ತಡೆಹಿಡಿದಿದೆ.

ಪ್ರಕಟಣೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಎಂದು ನಿಯಮಗಳು ಹೇಳುತ್ತವೆ ಎಂದು ಸಾಲಿಸಿಟರ್ ಜನರಲ್ ಹೇಳಿದ್ದಾರೆ.

ಅಧಿಕೃತ ಪ್ರಕಟಣೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಅಗತ್ಯ ಎಂದು ಹೇಳುವ ಅಧಿಕೃತ ಭಾಷೆಗಳ ನಿಯಮಗಳನ್ನು ಕೇಂದ್ರ ತಿದ್ದುಪಡಿ ಮಾಡಬೇಕೆಂದು ಸಿಜೆಐ ಸೂಚಿಸಿದೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...